Homeಕರ್ನಾಟಕತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ...

ತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

- Advertisement -
- Advertisement -

ತಮ್ಮ ಮೇಲಿನ ಹಿಂಸಾಚಾರ, ಜಾತಿ ಹಾಗೂ ಲಿಂಗಾಧಾರಿತ ದೌರ್ಜನ್ಯ ಖಂಡಿಸಿ ಮಹಿಳಾ ಪೌರಕಾರ್ಮಿಕರು ಸಿಡಿದೆದ್ದಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿ, “ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದರೂ ಸಹ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ” ಎಂದು ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಿಬಿಎಂಪಿ ಪೌರಕಾರ್ಮಿಕರ ಸಂಘವು ಖಂಡಿಸಿದೆ.

“2024ರ ಸೆಪ್ಟೆಂಬರ್ 11ರಂದು 72ನೇ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಜನ ಮಹಿಳಾ ಪೌರಕಾರ್ಮಿಕರ ಮೇಲೆ ಸ್ಥಳೀಯರು ಭೀಕರವಾಗಿ ಹಲ್ಲೆ ಮಾಡಿ, ಸ್ಥಳೀಯ ನಿವಾಸಿಯಾದ ಚಂದ್ರು ಮತ್ತು ಅವರ ತಾಯಿ ಜಾತಿ ನಿಂದನೆ ಮಾಡಿ ಥಳಿಸಿದ್ದಾರೆ” ಎಂದು ಮಹಿಳಾ ಪೌಕಾರ್ಮಿಕರು ದೂರು ದಾಖಲಿಸಿದ್ದಾರೆ.

ಆರೋಪಿಗಳು ಜಾತಿ ಹೆಸರಿಡಿದು ಹಿಡಿದು ನಿಂದಿಸಿದ್ದೂ ಅಲ್ಲದೆ, ದೈಹಿಕವಾಗಿ ದೌರ್ಜನ್ಯ ನಡೆಸಿದ್ದಾರೆ. ಈ ಘಟನೆಯನ್ನು ಫೋನಿನಲ್ಲಿ ರೆಕಾರ್ಡ್ ಮಾಡುತ್ತಿದ್ದ ಮತ್ತೊಬ್ಬಾಕೆ ಪೌರಕಾರ್ಮಿಕರ ಮೇಲೆ ದೈಹಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಫೋನನ್ನು ಒಡೆದುಹಾಕಿದ್ದಾರೆ. ಇತರೆ ಪೌರಕಾರ್ಮಿಕರನ್ನೂ ಅವರು ತಳಿಸಿದ್ದು ಅವರಿಗೂ ಗಾಯಗಳಾಗಿವೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪೌರಕಾರ್ಮಿಕರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದರೂ ಸಹ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ; ಸ್ಥಳೀಯರ ಹಿಂಸಾಚಾರ ಹಾಗೂ ಘಟನೆ ಕುರಿತ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ವಿರೋಧಿಸಿ ಪೌರಕಾರ್ಮಿಕರ ಸಂಘವು ಇಂದು ಪ್ರತಿಭಟನೆ ನಡೆಸಿದರು.

“ಪೌರಕಾರ್ಮಿಕರ ಕೆಲಸದ ಪರಿಸ್ಥಿತಿಯನ್ನು ಈ ಘಟನೆಯು ಎತ್ತಿತೋರಿಸುತ್ತದೆ. ಅವರ ಜಾತಿ, ಲಿಂಗ ಮತ್ತು ವರ್ಗದ ಮೇರೆಗೆ ಅವರುಗಳು ದಿನನಿತ್ಯ ಮುಪ್ಪಟ್ಟು ಶೋಷಣೆಯನ್ನು ಅನುಭವಿಸುತ್ತಾರೆ. ಸಾರ್ವಜನಿಕ ಅರೋಗ್ಯ ಸೇವೆಯಲ್ಲಿ ಅವರು ಅಗತ್ಯ ಸೇವೆ ಒದಗಿಸುತ್ತಿದ್ದರೂ ಸಹ, ತಾರತಮ್ಯ ಮತ್ತು ಹಿಂಸೆ ಇವರಿಗೆ ಮೀರಿದ್ದಲ್ಲ. ಇದನ್ನು ತುರ್ತಾಗಿ ಸರಿಪಡಿಸುವ ಅವಕ್ಷ್ಯಕತೆ ಇದೆ” ಎಂದು ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷರಾದ ನಿರ್ಮಲಾ ಅವರು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದರು.

ಘಟನೆಯಲ್ಲಿ ನೊಂದ ಪೌರಕಾರ್ಮಿಕರಾದ ಲಕ್ಷ್ಮಿ ಅವರು ಮಾತನಾಡಿ, “ಈ ಘಟಬೆಯು ನಮ್ಮ ಘನತೆಗೆ ಕುಂದುಂಟಾಗಿದೆ, ಅಧಿಕಾರಿಗಳು ಯಾವುದೇ ರೀತಿಯ ಜವಾಬ್ದಾರಿ ವಹಿಸಿರುವುದಿಲ್ಲ” ಎಂದು ಬೇಸರ ಹೊರಹಾಕಿದರು. “ಸಾರ್ವಜನಿಕವಾಗಿ ನನ್ನ ಘನತೆಗೆ ಧಕ್ಕೆಯನ್ನುಂಟು ಮಾಡಲಾಗಿದೆ. ಹೀಗಿದ್ದರೂ ಸಹ ಅಧಿಕಾರಿಗಳು ಯಾವುದೇ ರೀತಿ ಕ್ರಮ ಜರುಗಿಸದ ಕಾರಣ ನಮ್ಮಂತಹ ಕಾರ್ಮಿಕರ ಕುರಿತು ಅಧಿಕಾರಿಗಳಿಗಿರುವ ನಿರ್ಲಕ್ಷ್ಯವನ್ನು ಮತ್ತೆ ತೋರಿಸುತ್ತಿದ್ದಾರೆ” ಎಂದು ಹೇಳಿದರು.

ಇದೇ ಘಟನೆಯಲ್ಲಿ ಗಾಯಗೊಂಡಿರುವ ಮತ್ತೊಬ್ಬ ಪೌರಕಾರ್ಮಿಕರಾದ ಮುನಿರತ್ನ ಅವರು, “ನಮಗೆ ನ್ಯಾಯ ದೊರಕಬಾರದೇ? ನಾವು ದಲಿತ ಸಮುದಾಯದವರು ಮತ್ತು ಬಡ ಜನರು ಎಂದು ನಿರ್ಲಕ್ಷ್ಯ ತೋರಲಾಗುತ್ತಿದೆಯೇ? ನಮಗೂ ಸಮಾನವಾದ ನ್ಯಾಯ ದೊರಕಬೇಕು” ಎಂದರು.

“ಇದೊಂದೇ ಘಟನೆಯಲ್ಲ. ನಾವು ದಿನನಿತ್ಯ ಅಸ್ಪೃಶ್ಯತೆಯನ್ನು ಅನುಭವಿಸುತ್ತೇವೆ. ಮನೆಗಳ ಗೇಟ್ ಗಳನ್ನು ನಾವು ಮುಟ್ಟಬಾರದು, ನಾವು ಕುಡಿಯಲು ನೀರು ಕೇಳಿದಾಗ ಬಾತ್ರೂಮ್ ಚೊಂಬಿನಲ್ಲಿ ನೀರು ಕೊಡುತ್ತಾರೆ. ಈ ರೀತಿಯಲ್ಲಿ ನಾವು ತಾರತಮ್ಯ ಅನುಭವಿಸುತ್ತೇವೆ” ಎಂದು ಪೌರಕಾರ್ಮಿಕರಾದ ರಂಗಮ್ಮ ಹೇಳಿದರು.

“ಈ ಘಟನೆಯು ಬಿಬಿಎಂಪಿಯಲ್ಲಿರುವ ಆಳವಾದ ಮತ್ತು ವ್ಯವಸ್ಥಿತವಾದ ಸಮಸ್ಯೆಯನ್ನು ಎತ್ತಿತೋರಿಸುತ್ತದೆ. ದಲಿತ ಪೌರಕಾರ್ಮಿಕರ, ಅದರಲ್ಲೂ ಮಹಿಳಾ ಕಾರ್ಮಿಕರ, ಶೋಷಣೆಯುಕ್ತ ಕೆಲಸದ ವಾತಾವರಣ ಯಾವ ರೀತಿಯಲ್ಲಿ ಪ್ರತಿಪಾದಿಸಲಾಗುತ್ತಿದೆ ಮತ್ತು ಹೇಗೆ ಇದ್ದಕ್ಕಿದ್ದಂತೆ ಕೆಲಸದಿಂದ ವಜಾಗೊಳಿಸುವ ವ್ಯವಸ್ಥೆಯನ್ನು ನಡೆಸಲಾಗುತ್ತಿದೆ ಎಂದು ತೋರಿಸುತ್ತದೆ. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವು ಈ ಕೂಡಲೇ ಎಲ್ಲ ಪೌರಕಾರ್ಮಿಕರಿಗೆ ನ್ಯಾಯಯುತ ಮತ್ತು ಘನತೆಯುಕ್ತ ಕೆಲಸದ ವಾತಾವರಣವನ್ನು ರೂಪಿಸಬೇಕು” ಎಂದು ಎಐಸಿಸಿಟಿಯು ರಾಜ್ಯ ಕಾರ್ಯದರ್ಶಿ ಅಪ್ಪಣ್ಣ ಹೇಳಿದರು.

ಪೌರಕಾರ್ಮಿಕರ ಆಗ್ರಹಗಳೇನು?

ಬ್ಯಾಡರಹಳ್ಳಿ ಪೊಲೀಸರು ಶೀಘ್ರ ಕ್ರಮ ಕೈಗೊಂಡು ಆರೋಪಿಗಳನ್ನು ತಡಮಾಡದೆ ಬಂಧಿಸಬೇಕು. ಅನ್ಯಾಯವಾಗಿ ಹಲ್ಲೆ ಹಾಗೂ ದೌರ್ಜನ್ಯಕ್ಕೆ ಒಳಗಾದ ಪೌರಕಾರ್ಮಿಕರಿಗೆ ತಲಾ ₹10 ಲಕ್ಷ ಪರಿಹಾರ ದೊರಕಿಸಿಕೊಡಬೇಕು. ಪೌರಕಾರ್ಮಿಕರು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಅವರ ಸುರಕ್ಷತೆ ಮತ್ತು ಘನತೆಯನ್ನು ಖಾತ್ರಿಪಡಿಸುವುದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಬೇಕು ಎಂದು ಪೌರಕಾರ್ಮಿಕರ ಸಂಘ ಆಗ್ರಹಿಸಿದೆ.

“ಸಾರ್ವಜನಿಕರಿಂದ ಇಂತಹ ಹಿಂಸಾತ್ಮಕ ದಾಳಿಗಳು ಮತ್ತು ಕಿರುಕುಳದಿಂದ ಪೌರ ಕಾರ್ಮಿಕರನ್ನು ರಕ್ಷಿಸುವುದು ಬಿಬಿಎಪಿಯ ಆದ್ಯ ಕರ್ತವ್ಯವಾಗಬೇಕು. ಈ ಘಟನೆಯ ಬಗ್ಗೆ ಚರ್ಚಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಾದ ಕ್ರಮಗಳನ್ನು ರೂಪಿಸಲು ನಮ್ಮ ಸಂಘಟನೆಯೊಂದಿಗೆ ತುರ್ತು ಸಭೆ ಕರೆಯಬೇಕು. ಬಿಬಿಎಂಪಿ, ಸರ್ಕಾರ ಈ ಘಟನೆಯ ಗಂಭೀರತೆಯನ್ನು ಪರಿಗಣಿಸಬೇಕು ಮತ್ತು ಸಾರ್ವಜನಿಕ ಆರೋಗ್ಯ ಮೂಲಸೌಕರ್ಯದ ಅತ್ಯಗತ್ಯ ಭಾಗವಾಗಿರುವ ಪೌರಕಾರ್ಮಿಕರನ್ನು ರಕ್ಷಿಸಲು ತ್ವರಿತವಾಗಿ ಕಾರ್ಯನಿರ್ವಹಿಸಬೇಕು” ಎಂದು ಸಂಘವು ಒತ್ತಾಯಿಸಿದೆ.

ಇದನ್ನೂ ಓದಿ; ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್ (75) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...