Homeಕರ್ನಾಟಕಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು; ಕಾರಣ ಏನು..?

- Advertisement -
- Advertisement -

ಕಾಂಗ್ರೆಸ್‌ನ ವಕ್ತಾರರಾಗಿದ್ದ ಕವಿತಾ ರೆಡ್ಡಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ. ಕೆಪಿಸಿಸಿ ‌ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ ಹಾಗೂ ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಸೇರಿದಂತೆ, ಪಕ್ಷದ ಕೆಲ ಆಂತರಿಕ ವಿಚಾರಗಳ ಬಗ್ಗೆ ಕವಿತಾ ರೆಡ್ಡಿ ಅವರು ಕೆಲ ದಿನಗಳ ಹಿಂದೆ ಬಹಿರಂಗವಾಗಿ  ತಮ್ಮ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಕವಿತಾ ರೆಡ್ಡಿ ಅವರಿಗೆ ರಾಜ್ಯ ಕಾಂಗ್ರೆಸ್‌ ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿತ್ತು. “ಕವಿತಾ ರಡ್ಡಿ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರು ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳನ್ನು ಅಮಾನತ್ತಿನಲ್ಲಿಡಲಾಗಿದೆ” ಎಂದು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್‌ ಪತ್ರದಲ್ಲಿ ಆದೇಶದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜತೆಗೆ ಮಾತನಾಡಿದ ಕವಿತಾ ರೆಡ್ಡಿ, “ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗಿನಿಂದಲೂ ನನಗೆ ಪಕ್ಷದಲ್ಲಿ ನ್ಯಾಯ ಸಿಕ್ಕಿಲ್ಲ; ನನಗೆ ಬಹಳಷ್ಟು ಅನ್ಯಾಯವಾಗಿದೆ, ಅದಕ್ಕೆ ನ್ಯಾಯ ಸಿಕ್ಕಿಲ್ಲ ಎನ್ನುವುದು ಅವರಿಗೂ ಗೊತ್ತಿದೆ. ನನಗೆ ನೋಟಿಸ್ ಯಾಕೆ ಕಳಿಸಿದ್ದಾರೆ ಎಂಬುದು ಪಕ್ಷದ ಶಿಸ್ತು ಪಾಲನಾ ಸಮಿತಿಗೆ ಗೊತ್ತಿಲ್ಲ. ನಾನು ಕಳಿಸಿರುವ 32 ಪುಟಗಳ ಸ್ಪಷ್ಟನೆಗೆ ಅವರಿಂದ ಯಾವುದೇ ಉತ್ತರ ಬಂದಿಲ್ಲ” ಎಂದರು.

“ನನಗೆ ನೋಟಿಸ್ ಕೊಟ್ಟಿರುವ ಉದ್ದೇಶ ಸ್ಪಷ್ಟವಾಗಿದೆ; ಮೊದಲೆನೆಯದಾಗಿ ನಾನು ಪರಿಶಿಷ್ಟ ಪಂಗಡದ ಹೆಣ್ಣು ಮಗಳಾದ ಭವ್ಯಾ ಸಿಂಗ್ ಪರವಾಗಿ ನಿಂತಿದ್ದು. ಮತ್ತೊಂದು, ರಾಮಲಿಂಗಾ ರೆಡ್ಡಿ ಅವರನ್ನು ವಿರೋಧಿಸಿದ್ದು. ನನ್ನ ಮೇಲಿನ ಕ್ರಮಕ್ಕೆ ಇವೇ ಪ್ರಮುಖ ಕರಾಣಗಳು. ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಕಳೆದ ಎರಡು ವರ್ಷಗಳಿಂದ ಕಾಯುತ್ತಿದ್ದಾರೆ. ‘ರಾಮಲಿಂಗಾ ರೆಡ್ಡಿ ಅವರ ಮಗಳು ಸೌಮ್ಯಾ ರೆಡ್ಡಿ ಖಿನ್ನತೆಗೆ ಒಳಗಾಗಿದ್ದಾರೆ; ಅವರು ಅದರಿಂದ ಹೊರಗಡೆ ಬರಬೇಕಾದರೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕು’ ಎಂದು ಹೇಳಿ, ತರಾತುರಿಯಲ್ಲಿ ನಿರ್ಧರಿಸಿದರೆ ನಾವು ಏನು ಮಾಡುವುದಕ್ಕೆ ಸಾಧ್ಯ” ಎಂದು ಪ್ರಶ್ನಿಸಿದರು.

ನಿಮ್ಮ ನೇರ ಆರೋಪ ಯಾರ ಮೇಲೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಪಕ್ಷದ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಇನ್ಯಾರ ಮೇಲೆ ಆರೋಪ ಮಾಡುವುದು? ರಾಮಲಿಂಗಾರೆಡ್ಡಿ ತಮಗಿರುವ ಅಧಿಕಾರ ಬಳಸಿಕೊಂಡು ಅವರ ಮಗಳನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ; ನಮ್ಮ ಹಿಂದೆ ಯಾರಿದ್ದಾರೆ? ಪಕ್ಷದ ಅಧ್ಯಕ್ಷರು ನಮ್ಮ ಪರವಾಗಿ ನಿಲ್ಲಬೇಕಿತ್ತು. ನನಗೆ ಅನ್ಯಾಯ ಆಗಿದೆ ಎಂಬುದು ಅಧ್ಯಕ್ಷರಿಗೂ ಗೊತ್ತಿದೆ” ಎಂದರು.

ಈ ಬೆಳವಣಿಗೆಯನ್ನು ಕುಟುಂಬ ರಾಜಕೀಯದ ಪರಿಣಾಮ ಎಂದು ಭಾವಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕವಿತಾ, “ಖಂಡಿತಾ.. ಕುಟುಂಬ ರಾಜಕಾರಣವಲ್ಲದೆ ಮತ್ತಿನ್ನೇನು? ನಾಲ್ಕೈದು ಜನ ಮಹಿಳಾ ಕಾರ್ಯಕರ್ತರು ಆಕಾಂಕ್ಷಿಗಳಾಗಿದ್ದರು. ಕಮಲಾಕ್ಷಿ ರಾಜಣ್ಣ, ವೀಣಾ ಕಾಶಪ್ಪನವರ್ ಅಥವಾ ಬೇರೊಬ್ಬರಿಗೆ ಕೊಟ್ಟಿದ್ದರೆ ಸಾಮಾಜಿಕ ನ್ಯಾಯ ಎಂದು ನಾವು ಒಪ್ಪಿಕೊಳ್ಳುತ್ತಿದ್ದೆವು. ಆದರೆ, ಇವರು ಕೊಟ್ಟಿರುವುದು ಯಾರಿಗೆ? ಏನೂ ಕೆಲಸ ಮಾಡದೇ ಇರುವ ರಾಮಲಿಂಗಾರೆಡ್ಡಿ ಅವರ ಮಗಳನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಪಕ್ಷದ ಯಾವಯಾವ ಹುದ್ದೆಯಲ್ಲಿ ಅವರು ಕೆಲಸ ಮಾಡಿದ್ದಾರೆ. ನನ್ನ ಜೊತೆಯಲ್ಲಿ ಸೌಮ್ಯಾ ಅವರನ್ನೂ ವಕ್ತಾರರನ್ನಾಗಿ ಮಾಡಿದ್ದರು. ಆದರೆ, ಆಕೆ ಮಾಡಿದ್ದೇನು? ಈವರೆಗೆ ಒಂದೇ ಒಂದು ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಇತ್ತೀಚೆಗಷ್ಟೇ ಅವರನ್ನು ಪ್ರಧಾನ ಕಾರ್ಯದರ್ಶಿ ಮಾಡಲಾಗಿತ್ತು; ಈಗ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಇದಕ್ಕೆಲ್ಲಾ ಅನುಸರಿಸಿದ ಮಾನದಂಡ ಯಾವುದು” ಎಂದು ಅವರು ಬೇಸರ ಹೊರಹಾಕಿದರು.

“ಪಕ್ಷದ ಕಾರ್ಯಕರ್ತೆಯಾಗಿ ನನಗೆ ಕೇಳುವ ಅಧಿಕಾರ ಇದೆ.. ಅದಕ್ಕಾಗಿ ಪ್ರಶ್ನೆ ಮಾಡುತ್ತೇನೆ. ಪಕ್ಷ ಎಲ್ಲರಿಗೂ ಸೇರಿದ್ದು; ಇಂತಹ ಒಂದು ಕಾರಣಕ್ಕೆ ನಾವು ಅವರನ್ನು (ಸೌಮ್ಯಾ ರೆಡ್ಡಿ) ಅಧ್ಯಕ್ಷರನ್ನಾಗಿ ಮಾಡುತ್ತಿದ್ದೇವೆ ಎಂದು ನಮಗೆ ಪಕ್ಷದ ಅಧ್ಯಕ್ಷರು ಕರೆದು ಹೇಳಬಹುದಿತ್ತು. ದುಡ್ಡಿನ ಕಾರಣಕ್ಕೆ, ರಾಜಕೀಯ ಕಾರಣಕ್ಕೆ ಅಥವಾ ಅವರ ಅಪ್ಪನನ್ನು ಓಲೈಕೆ ಮಾಡುವುದಕ್ಕೆ ಸ್ಥಾನ ಕೊಡುತ್ತಿದ್ದೇವೆ ಎಂದು ಹೇಳಿದ್ದಿದ್ದರೆ, ರಾಜಕಾರಣಿಯಾಗಿ ನಾನೂ ಅರ್ಥ ಮಾಡಿಕೊಳ್ಳುತ್ತಿದ್ದೆ” ಎಂದು ಅವರು ಆಕ್ರೋಶ ಹೊರಹಾಕಿದರು.

ನಿಮ್ಮ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ, “ನ್ಯಾಯ ಸಿಗದೇ ಇದ್ದರೆ ಮುಂದಿನ ನಡೆ ಏನಿರುತ್ತೆ..? ನನ್ನ ಹೋರಾಟ ಮುಂದುವರಿಯುತ್ತದೆ. ಅನ್ಯಾಯ ಮತ್ತು ಮಹಿಳಾ ಶೋಷಣೆ ವಿರುದ್ಧ ಮಾತನಾಡುವುದನ್ನು ಮುಂದುವರಿಸುತ್ತೇನೆ. ಹಲವು ದಶಕಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ಕೆಲಸ ಮಾಡಿರುವ ನಾನು ಸಿದ್ಧಾಂತದಲ್ಲಿ ಎಷ್ಟು ಕಮಿಟೆಡ್ ಎಂಬುದು ಹಲವರಿಗೆ ಗೊತ್ತಿದೆ. ನನ್ನಂತವರಿಗೆ ಇಷ್ಟು ಕಿರುಕುಳ ನೀಡುತ್ತಿದ್ದಾರೆ. ಇನ್ನು ಸಾಮಾನ್ಯ ಕಾರ್ಯಕರ್ತರಿಗೆ ಪಕ್ಷದಲ್ಲಿ ಜಾಗ ಎಲ್ಲಿ ಸಿಗುತ್ತದೆ” ಎಂದು ಕವಿತಾ ಭಾವುಕರಾದರು.

“ನನಗೆ ನ್ಯಾಯ ಸಿಗುವುದಿಲ್ಲ ಎಂಬುದು ಅವರ ನಡೆಯಿಂದಲೇ ಸ್ಪಷ್ಟವಾಗಿದೆ. ಶಿಸ್ತು ಕ್ರಮ ನನಗೆ ಮಾತ್ರ ಯಾಕೆ..? ಪಕ್ಷ ಮತ್ತು ಅಧ್ಯಕ್ಷರ ವಿರುದ್ಧ ಹಲವು ಸಚಿವರು, ಶಾಸಕರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಪಕ್ಷ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರಿಗೆಲ್ಲಾ ನೋಟಿಸ್ ನೀಡಿ ಅಮಾನತು ಮಾಡಿಲ್ಲ ಯಾಕೆ? ನಾನು ಹೆಣ್ಣು ಮಗಳು ಎಂಬ ಕಾರಣಕ್ಕೆ ಅಮಾನತು ಮಾಡಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ತಮ್ಮ ಮೇಲಿನ ಹಿಂಸಾಚಾರ, ಜಾತಿ ದೌರ್ಜನ್ಯ ಖಂಡಿಸಿ ಸಿಡಿದೆದ್ದ ಪೌರಕಾರ್ಮಿಕರು; ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...