Homeದಲಿತ್ ಫೈಲ್ಸ್ಬಿಹಾರ | 100 ದಲಿತರ ಮನೆಗಳಿಗೆ ಬೆಂಕಿ; ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬಿಹಾರ | 100 ದಲಿತರ ಮನೆಗಳಿಗೆ ಬೆಂಕಿ; ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ಬಿಹಾರ: ನವಾಡ ಜಿಲ್ಲೆಯಲ್ಲಿ ಸುಮಾರು 100 ದಲಿತರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಪೊಲೀಸರು 21 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಬುಧವಾರ ಸಂಜೆ ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾಂಝಿ ತೋಲಾ ಎಂಬಲ್ಲಿ ನಡೆದಿದ್ದು, ಇದಕ್ಕೆ ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಗೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 7.30 ರ ಸುಮಾರಿಗೆ ಮಾಂಝಿ ಟೋಲಾದಲ್ಲಿ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಕರೆ ಬಂದಿತು. ಪೊಲೀಸರು ತಕ್ಷಣ ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ತೆರಳಿ ಸ್ವಲ್ಪ ಸಮಯದಲ್ಲಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ವರದಿಯಾಗಿದೆ.

ಇದನ್ನೂಓದಿ: ಆಂಬ್ಯುಲೆನ್ಸ್ ಇಲ್ಲದೆ ತಂದೆಯ ಶವ ಬೈಕ್‌ನಲ್ಲೆ ಕೊಂಡೊಯ್ದ ಮಕ್ಕಳು | ಯುಪಿ ಅಲ್ಲ, ಕರ್ನಾಟಕ!

ಜನರ ಗುಂಪು ಮನೆಗಳನ್ನು ಸುಟ್ಟು ಹಾಕಲು ಪ್ರಾರಂಭಿಸಿದ್ದು, ಸಂಜೆ 7 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಎಸ್ಪಿ ಅಭಿನವ್ ಧಿಮಾನ್ ಅವರು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾಗಿ ವರದಿಗಳು ಹೇಳಿವೆ. “ಘಟನೆಗೆ ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಮನೆಗಳಿಗೆ ಬೆಂಕಿ ಹಚ್ಚುವಾಗ ಗಾಳಿಯಲ್ಲಿ ಗುಂಡು ಹಾರಿಸಲಾಯಿತು ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಮತ್ತು ಯಾವುದೇ ಹಿಂಸಾಚಾರ ನಡೆಯದಂತೆ ತಡೆಯಲು ಹೆಚ್ಚಿನ ಪೊಲೀಸ್ ತುಕಡಿಯನ್ನು ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ಧೀಮಾನ್ ಹೇಳಿದ್ದಾರೆ.

ನವಾಡದಲ್ಲಿ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ ಬಿಹಾರದ ಎನ್‌ಡಿಎ ಸರಕಾರವನ್ನು ಗುರುವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಇದು ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಜಂಗಲ್ ರಾಜ್‌ಗೆ ಮತ್ತೊಂದು ಪುರಾವೆ ಇದಾಗಿದೆ. ದಲಿತರು ಮತ್ತು ವಂಚಿತರ ಬಗ್ಗೆ ಸರ್ಕಾರ “ಅತ್ಯಂತ ಅಸಡ್ಡೆ”ಯಿಂದ ವರ್ತಿಸುತ್ತಿದೆ ಎಂದು ಹೇಳಿದೆ.

ನವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರು 80ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಿದ್ದು, ಆದರೆ ಪೊಲೀಸರು 21 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂಓದಿ: ಆರ್ ಜಿ ಕರ್ ಬಿಕ್ಕಟ್ಟು | 2ನೇ ಸುತ್ತಿನ ಮಾತುಕತೆ ಬಳಿಕವೂ ಮುಷ್ಕರ ಮುಂದುವರಿಕೆ!

ಬಿಹಾರದ ನಾವಡಾದಲ್ಲಿ ಮಹಾದಲಿತ್ ತೋಲಾ ಮೇಲೆ ಗೂಂಡಾಗಳ ಭಯೋತ್ಪಾದನೆ ಎನ್‌ಡಿಎ ಡಬಲ್ ಎಂಜಿನ್ ಸರ್ಕಾರದ ಜಂಗಲ್ ರಾಜ್‌ಗೆ ಮತ್ತೊಂದು ಪುರಾವೆಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 100 ದಲಿತರ ಮನೆಗಳಿಗೆ ಬೆಂಕಿ ಹಚ್ಚಿ, ಗುಂಡು ಹಾರಿಸಿ, ರಾತ್ರಿಯ ಕತ್ತಲಲ್ಲಿ ಬಡ ಕುಟುಂಬಗಳ ಎಲ್ಲವನ್ನೂ ಕಿತ್ತುಕೊಂಡಿರುವುದು ಖಂಡನೀಯ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

ದಲಿತರ ಬಗ್ಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ “ಅತ್ಯಂತ ಅಸಡ್ಡೆ” ಮತ್ತು ವಂಚಿತ ಸಮುದಾಯದ ಬಗ್ಗೆ “ನಿರ್ಲಕ್ಷ್ಯ” ತೋರುವುದು ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಪ್ರೋತ್ಸಾಹಿಸುತ್ತಿರುವುದು ಈಗ ಉತ್ತುಂಗದಲ್ಲಿದೆ ಎಂದು ಅವರು ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಎಂದಿನಂತೆ ಮೌನವಾಗಿದ್ದು, ನಿತೀರ್‌ ಕುಮಾರ್ ಅಧಿಕಾರದ ದುರಾಸೆಯಲ್ಲಿ ನಿರಾತಂಕರಾಗಿದ್ದಾರೆ. ಎನ್‌ಡಿಎ ಮಿತ್ರಪಕ್ಷಗಳು ಮೌನವಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಹಾರದ ನವಾಡದಲ್ಲಿ 80ಕ್ಕೂ ಹೆಚ್ಚು ಮಹಾದಲಿತರ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಅತ್ಯಂತ ಭಯಾನಕ ಮತ್ತು ಖಂಡನೀಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. “ಡಜನ್ ಗಟ್ಟಲೆ ಸುತ್ತು ಗುಂಡು ಹಾರಿಸಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಭಯೋತ್ಪಾದನೆ ಸೃಷ್ಟಿಸುವುದು ಮತ್ತು ಜನರನ್ನು ನಿರಾಶ್ರಿತರನ್ನಾಗಿ ಮಾಡುವುದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂಬುದನ್ನು ತೋರಿಸುತ್ತದೆ” ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

ವಿಡಿಯೊ ನೋಡಿ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಾಮಕುಮಾರ್ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...