Homeಫ್ಯಾಕ್ಟ್‌ಚೆಕ್FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

- Advertisement -
- Advertisement -

“ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರು ಅಂತಾ ಇತಿಹಾಸದಲ್ಲಿ ಬರೆಯಲಾಗಿತ್ತು!! ಆದ್ರೆ ಅಲ್ಲಿ ಇರುವ ಕಬ್ಬಿಣದ ಕಂಬದ ಮೇಲೆ ಯಾರ ಹೆಸರಿದೆ ಎಂದೂ ಸ್ವಲ್ಪ ಜೂಮ್ ಮಾಡಿ ನೋಡಿದರೆ ನೈಜ ಸತ್ಯ ಸಂಗತಿ ತಿಳಿಯಲಿದೆ. ಇದು 1500 ವರ್ಷಗಳ ಹಿಂದಿನ ವರಾಹಮಿಹಿರನ ಕಾಲದ ವಿಷ್ಣು ಸ್ಥಂಭ.. ನಮ್ಮ ದೇಶದ ಇತಿಹಾಸವನ್ನು ಬರೆದ ಇತಿಹಾಸ ತಜ್ಞರ ಕಣ್ಣುಗಳಿಗೆ ಇದು ಕಾಣಲಿಲ್ಲ ಕಣ್ಣು ಕುರುಡಾಗುವಷ್ಟು ಮೊಘಲರು ಎಂಜಲು ತಿನ್ನಿಸಿರಬೇಕು ಡೋಂಗಿ ಇತಿಹಾಸ ತಜ್ಞರಿಗೆ ಯಾರೋ ಸ್ಥಾಪಿಸಿದ ಪರಂಪರೆಯನ್ನು ತಮ್ಮದು ಎಂದೂ ಇಲ್ಲಿವರೆಗೆ ಹೇಳಿಕೊಂಡ ನಕಲಿಗಳಿಗೆ ನಾಚಿಕೆಯಾಗಬೇಕು” ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಜೊತೆಗೆ, ಕುತುಬ್ ಮಿನಾರ್ ಪ್ರದೇಶದಲ್ಲಿ ಇರುವ ಕಬ್ಬಿಣದ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆ ಇದರಿಂದ ಸತ್ಯ ತಿಳಿಯುತ್ತದೆ ಎಂದು ಪ್ರತಿಪಾದಿಸಿದ ಕಂಬವೊಂದರ ಫೋಟೋ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ, ವೈರಲ್ ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ಫೋಟೋವನ್ನು  ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ, ಹಲವು ವೆಬ್‌ಸೈಟ್‌ಗಳಲ್ಲಿ ಆ ಫೋಟೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಈ ಪೈಕಿ ಫ್ಲಿಕ್ಕರ್‌ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 19, 2009ರಂದು ಡೇವಿಡ್ ರಾಸ್‌ ಎಂಬವರು ಅಪ್ಲೋಡ್ ಮಾಡಿರುವ ಫೋಟೋವನ್ನು ಪರಿಶೀಲಿಸಿದಾಗ ಐರನ್‌ ಪಿಲ್ಲರ್ ಭರತ್‌ಪುರ ಫೋರ್ಟ್, ಭರತ್‌ಪುರ ಇಂಡಿಯಾ ಎಂದು ಬರೆದಿರುವುದು ಕಂಡು ಬಂದಿದೆ. ಆ ಫೋಟೋ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಫೋಟೋವನ್ನು ಹೋಲಿಕೆ ಮಾಡಿ ನೋಡಿದಾಗ ಅವೆರಡು ಒಂದೇ ಫೋಟೋ ಎಂದು ಗೊತ್ತಾಗಿದೆ.

ಹಿಸ್ಟರಿ ಎನ್ಸೈಕ್ಲೋಪೀಡಿಯಾ ಎಂಬ ಎಕ್ಸ್‌ ಖಾತೆಯಲ್ಲೂ ನವೆಂಬರ್ 3, 2021ರಂದು ಹಾಕಿರುವ ಪೋಸ್ಟ್‌ನಲ್ಲಿ ವೈರಲ್ ಫೋಟೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ಅದರಲ್ಲಿ “ರಾಜಸ್ಥಾನದ ಭರತ್‌ಪುರ ಕೋಟೆಯಲ್ಲಿ (ಕಬ್ಬಿಣದ ಕೋಟೆ) ಕಬ್ಬಿಣದ ಕಂಬವನ್ನು ಭರತ್‌ಪುರದ ಜಾಟ್ ಆಡಳಿತಗಾರರು ನಿರ್ಮಿಸಿದ್ದಾರೆ. ಮಹಾರಾಜ ಸೂರಜ್ ಮಾಲ್ (1707-1763) ರ ಅಡಿಯಲ್ಲಿ ಜಾಟ್ ಸಾಮ್ರಾಜ್ಯವು ತನ್ನ ಉತ್ತುಂಗವನ್ನು ತಲುಪಿತ್ತು. ಅವರು ಸಾಮ್ರಾಜ್ಯದಾದ್ಯಂತ ಹಲವಾರು ಕೋಟೆಗಳು ಮತ್ತು ಅರಮನೆಗಳನ್ನು ನಿರ್ಮಿಸಿದರು. ಈ ಪೈಕಿ ಲೋಹಗಢ್ ಕೋಟೆಯು ಪ್ರಬಲವಾಗಿದೆ” ಎಂದು ಬರೆಯಲಾಗಿದೆ.

ಡಿಸೆಂಬರ್ 25, 2021ರಂದು  ದೈನಿಕ್‌ ಭಾಸ್ಕರ್  ಮಾಡಿರುವ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ವೈರಲ್ ಫೋಟೋದಲ್ಲಿರುವ ಲೋಹಸ್ತಂಭದಲ್ಲಿ ಬರೆದಿರುವ ರಾಜರ ಹೆಸರುಗಳ ಬಗ್ಗೆಯೂ ವಿವರಗಳನ್ನು ನೀಡಲಾಗಿದೆ.

ಭರತ್‌ಪುರದ ಲೋಹಸ್ತಂಭದ ಬಗ್ಗೆ ನವೆಂಬರ್ 26, 2018ರಂದು  ನೇಹಾ ವಿಡಿಯೋ ಫಿಲ್ಮ್ ಪ್ರೊಡಕ್ಷನ್ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ.  ಅದರಲ್ಲಿ “ಜವಾಹರ್ ಬುರ್ಜ್ ಭರತ್‌ಪುರವನ್ನು ಮಹಾರಾಜ ಸೂರಜ್ ಮಾಲ್ ನಿರ್ಮಿಸಿದನು. ಆದರೆ, ಅದರ ಮೇಲಿನ ರಚನೆಗಳನ್ನು ಮಹಾರಾಜ ಜವಾಹರ್ ಸಿಂಗ್ ಅವರು ದೆಹಲಿಯ ವಿಜಯದ ಸ್ಮಾರಕದಲ್ಲಿ ರಚಿಸಿದರು” ಎಂದು ವಿವರಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲ ಎಂದು ರಾಜಸ್ಥಾನದ ಕಬ್ಬಿಣದ ಕಂಬದ ಫೋಟೊವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ ವೈರಲ್ ಫೋಟೊದಲ್ಲಿರುವ ಸ್ತಂಭವು ಕುತುಬ್ ಮಿನಾರ್ ಅಲ್ಲ, ಅದು ರಾಜಸ್ಥಾನದ ಭರತ್‌ಪುರದ ಜವಾಹರ್ ಭುರ್ಜ್ ಎಂಬ ಲೋಹಸ್ತಂಭದ್ದಾಗಿದೆ. ಹಾಗಾಗಿ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...