Homeಕರ್ನಾಟಕಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್

ಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್

- Advertisement -
- Advertisement -

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮುಗಲಭೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇಬ್ಬರೂ ನಾಯಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಾಗಮಂಗಲ ಟೌನ್ ಪೊಲೀಸ್ ಠಾಣೆಯ ಗುಪ್ತಚರ ವಿಭಾಗದ ಪೊಲೀಸ್ ಅಧಿಕಾರಿ ಎಂ ರಮೇಶ ಅವರು ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 11 ರಂದು ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕೋಮುಗಲಭೆ ಭುಗಿಲೆದ್ದ ನಂತರ ಆರೋಪಿಗಳ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು “ಅಶಾಂತಿಯನ್ನು ಪ್ರಚೋದಿಸುವ” ಗುರಿಯನ್ನು ಹೊಂದಿವೆ ಎಂದು ಅವರು ಹೇಳಿದ್ದಾರೆ.

ಸಚಿವೆ ಶೋಭಾ ಅವರು ಸೆಪ್ಟೆಂಬರ್ 13 ರಂದು ತಮ್ಮ ಎಕ್ಸ್ ಖಾತೆಯಲ್ಲಿ ತಪ್ಪುದಾರಿಗೆಳೆಯುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಶೋಭಾ ಬೇರೆ ಫೋಟೋಗಳನ್ನು ಪೋಸ್ಟ್ ಮಾಡಿ, ಅದು ನಾಗಮಂಗಲದ ಚಿತ್ರ ಎಂದು ಪ್ರತಿಪಾದಿಸಿದ್ದಾರೆ ಎಂದು ಎಫ್‌ಐಆರ್ ಹೇಳುತ್ತದೆ.

ಪೊಲೀಸ್ ಅಧಿಕಾರಿಯೊಬ್ಬರು ಗಣೇಶನ ವಿಗ್ರಹವನ್ನು ತಬ್ಬಿಕೊಂಡಿರುವ ಚಿತ್ರಗಳನ್ನು ಹಂಚಿ, ವಿಗ್ರಹವನ್ನು “ಬಂಧಿಸಲಾಗಿದೆ” ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ನಾಗಮಂಗಲದ “ಘಟನೆಗಳ ಸುಳ್ಳು ನಿರೂಪಣೆಯನ್ನು ಪ್ರಸ್ತುತಪಡಿಸಿ ಸಾಮಾಜಿಕ ಅಶಾಂತಿಯನ್ನು ಪ್ರಚೋದಿಸಲು” ಪೋಸ್ಟ್ ಪ್ರಯತ್ನಿಸಿದೆ ಎಂದು ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ.

ಇದನ್ನೂಓದಿ: ದಿನೇಶ್‌ ಪತ್ನಿ ಮುಸ್ಲಿಂ ಆದ ಮಾತ್ರಕ್ಕೆ ಅವರ ಮನೆಯನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ? ಯತ್ನಾಳ್‌ಗೆ ಹೈಕೋರ್ಟ್‌ ತರಾಟೆ

ಆರ್ ಅಶೋಕ ಅವರು X ನಲ್ಲಿ ಸಂಬಂಧವಿಲ್ಲದ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ ಎಂಬ ಆರೋಪಿಸಲಾಗಿದೆ. ತಪ್ಪಾದ ವಿಡಯೊ ಹಾಕಿ ನಾಗಮಂಗಲ ಗಣೇಶ ವಿಸರ್ಜನೆಯ ಮೆರವಣಿಗೆಯ ಹಿಂಸಾಚಾರ ಎಂದು ಬಿಂಬಿಸಲಾಗಿದೆ. ಆದರೆ ಈ ದೃಶ್ಯಾವಳಿಗಳು ಸೆಪ್ಟೆಂಬರ್ 11 ರಂದು ಪಟ್ಟಣದಲ್ಲಿ ನಡೆದ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿಲ್ಲ ಎಂದು ಎಫ್‌ಐಆರ್ ಹೇಳಿದೆ. ಅಶೋಕ ಅವರ ಪೋಸ್ಟ್‌ಗಳು, ಹಿಂಸಾಚಾರದ ಘಟನೆಗಳು ದೊಡ್ಡ ಕೋಮು ಪಿತೂರಿಯ ಭಾಗವಾಗಿದೆ ಎಂದು ಸೂಚಿಸುವ ಮೂಲಕ ಮತ್ತಷ್ಟು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಗುರಿಯನ್ನು ಹೊಂದಿದ್ದವು ಎಂದು ಆರೋಪಿಸಲಾಗಿದೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂಸಾಚಾರದ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರ್‌. ಅಶೋಕ ಹೇಳಿಕೊಂಡಿದ್ದು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೀಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಈ ಘಟನೆಗಳ ಹಿಂದೆ ನಿಷೇಧಿತ ಸಂಘಟನೆಗಳ ಕೈವಾಡವಿದ್ದು, ಕೋಮುಗಲಭೆಗೆ ಮತ್ತಷ್ಟು ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದರು. ಪ್ರಚೋದನಕಾರಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸೆಪ್ಟೆಂಬರ್ 12 ರ ಬುಧವಾರ ರಾತ್ರಿ ಗಣೇಶ ಚತುರ್ಥಿ ಮೆರವಣಿಗೆ ವೇಳೆ ಮಸೀದಿ ಬಳಿ ಸಾಗುತ್ತಿದ್ದಾಗ ಕೋಮು ಘರ್ಷಣೆ ಸಂಭವಿಸಿದೆ. ಈ ವೇಳೆ ಕಿಡಿಗೇಡಿಗಳು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯು ನಾಗಮಂಗಲ ಟೌನ್ ಬಳಿ ಮೈಸೂರು ರಸ್ತೆ ಬಳಿ ಸಾಗುತ್ತಿದ್ದಾಗ ಘರ್ಷಣೆ ಸಂಭವಿಸಿತ್ತು.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...