Homeಕರ್ನಾಟಕದಿನೇಶ್‌ ಪತ್ನಿ ಮುಸ್ಲಿಂ ಆದ ಮಾತ್ರಕ್ಕೆ ಅವರ ಮನೆಯನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ? ಯತ್ನಾಳ್‌ಗೆ ಹೈಕೋರ್ಟ್‌...

ದಿನೇಶ್‌ ಪತ್ನಿ ಮುಸ್ಲಿಂ ಆದ ಮಾತ್ರಕ್ಕೆ ಅವರ ಮನೆಯನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ? ಯತ್ನಾಳ್‌ಗೆ ಹೈಕೋರ್ಟ್‌ ತರಾಟೆ

- Advertisement -
- Advertisement -

“ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ” ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗದುಕೊಂಡಿದೆ ಎಂದು ವರದಿಯಾಗಿದೆ.

ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ರಾವ್ (ತಬಸ್ಸುಂ ರಾವ್) ಅವರು ಹೂಡಿರುವ ಮಾನನಷ್ಟ ಮೊಕದ್ದಮೆಗೆ ತಡೆಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಯತ್ನಾಳ್ ವಿರುದ್ದ ಕಿಡಿಕಾರಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ವಿಚಾರಣೆ ಆರಂಭವಾಗುತ್ತಿದ್ದಂತೆ ಯತ್ನಾಳ್ ಅವರಿಗೆ ಪ್ರಶ್ನೆಯೆತ್ತಿದ್ದ ನ್ಯಾಯಮೂರ್ತಿ, “ಯತ್ನಾಳ್ ಅವರೇ ಇದೆಲ್ಲ ನಿಮಗೆ ಏಕೆ ಬೇಕು? ಪಾಕಿಸ್ತಾನ ಇದೆ ಎಂದರೆ ಏನರ್ಥ? ನೀವ್ಯಾಕೆ ಹೇಳಿಕೆ ಕೊಡಬೇಕು? ಅದರಿಂದ ನಿಮಗೇನು ಸಿಗುತ್ತದೆ? ನಾನು ಪ್ರತಿ ಬಾರಿ ಹೇಳುತ್ತಿದ್ದೇನೆ, ಕೆಸರೆರಚಾಟ ನಿಲ್ಲಬೇಕು” ಎಂದಿದ್ದಾರೆ.

“ಯಾರದ್ದೋ ಪತ್ನಿ ಮುಸ್ಲಿಂ ಎಂದ ಮಾತ್ರಕ್ಕೆ ಅರ್ಧ ಪಾಕಿಸ್ತಾನ ಎನ್ನಬಹುದೇ? ಏನದು? ಇದು ಮಾತನಾಡುವ ರೀತಿಯಲ್ಲ. ಇದು ಸರಿಯಲ್ಲ. ನೀವು ವೈಯಕ್ತಿಕ ಹೇಳಿಕೆ ಏಕೆ ನೀಡುತ್ತೀರಿ? ನಾನು ಇದಕ್ಕೆ ತಡೆ ನೀಡುವುದಿಲ್ಲ. ನೀವು ಎಲ್ಲರನ್ನೂ ಹಾಗೆ ವ್ಯಾಖ್ಯಾನಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾಗಿದ್ದ ತಬು ರಾವ್‌ ಪರ ವಕೀಲರಾದ ಎಸ್‌ ಎ ಅಹ್ಮದ್‌ ಮತ್ತು ಸೂರ್ಯ ಮುಕುಂದರಾಜ್‌ ಅವರು “ಅರ್ಜಿದಾರರು ರಾಜಕೀಯದಲ್ಲಿಲ್ಲ. ಆದರೂ, ಈ ರೀತಿಯ ಹೇಳಿಕೆ ನೀಡಲಾಗಿದೆ”ಎಂದಿದ್ದಾರೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ದಿನೇಶ್‌ ಹೇಳಿಕೆಗೆ ಪ್ರತಿಯಾಗಿ ಹೇಳಿಕೆ ನೀಡಲಾಗಿದೆಯಷ್ಟೆ. ಮಾರನೆಯ ದಿನ ಸ್ಪಷ್ಟನೆಯನ್ನೂ ನೀಡಲಾಗಿದೆ. ಉದ್ದೇಶ ಪೂರ್ವಕವಾಗಿ ಆ ಹೇಳಿಕೆ ನೀಡಿಲ್ಲ. ನಾಳೆಗೆ ವಿಚಾರಣಾಧೀನ ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಅದಕ್ಕೆ ತಡೆ ನೀಡಬೇಕು” ಎಂದು ಕೋರಿದ್ದಾರೆ.

ತಡೆ ನೀಡಲು ನಿರಾಕರಿಸಿದ ನ್ಯಾಯಾಧೀಶರು, ತಬು ರಾವ್ ಪರ ವಕೀಲ ಎಸ್‌ ಎ ಅಹ್ಮದ್‌ ಅವರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿದ್ದಾರೆ.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ಎನ್‌ಐಎ ತಂಡ ವಿಚಾರಣೆಗೆ ಒಳಪಡಿಸಿದೆ ಎಂದು ಏಪ್ರಿಲ್ 5, 2024ರಂದು ವರದಿಯಾಗಿತ್ತು.

ಈ ಬೆನ್ನಲ್ಲೇ ಎಕ್ಸ್ ಮೂಲಕ ಪ್ರತಿಕ್ರಿಯಿಸಿದ್ದ ಸಚಿವ ದಿನೇಶ್ ಗುಂಡೂರಾವ್, “ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು ಎನ್‌ಐಎ ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು” ಎಂದಿದ್ದರು.

ಈ ಕುರಿತು ಮಾಧ್ಯವರ ಪ್ರಶ್ನೆಗೆ ಉತ್ತರಿಸಿದ್ದ ಯತ್ನಾಳ್ “ಹೆಚ್ಚು ಕಡಿಮೆ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶದ ವಿರುದ್ದ ಹೇಳಿಕೆ ಕೊಡುವುದು ಗುಂಡೂರಾವ್‌ಗೆ ಚಟ ಆಗಿಬಿಟ್ಟಿದೆ” ಎಂದಿದ್ದರು.

ಯತ್ನಾಳ್ ಹೇಳಿಕೆ ತಿರುಗೇಟು ನೀಡಿದ್ದ ದಿನೇಶ್ ಗುಂಡೂರಾವ್ ಪತ್ನಿ ತಬು ರಾವ್ “ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಯತ್ನಾಳ್ ಅವರ ಹೇಳಿಕೆಯು ಅವಹೇಳನಕಾರಿ ಮತ್ತು ಮಾನಹಾನಿಕರವಾಗಿದೆ. ನಾನು ಮುಸಲ್ಮಾನಳಾಗಿ ಹುಟ್ಟಿರಬಹುದು. ಹಾಗಂತ ನನ್ನ ಭಾರತೀಯತೆಯನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಭಾರತೀಯ ಚುನಾವಣಾ ಆಯೋಗ ಈ ಸಂಬಂಧ ಕ್ರಮ ಕೈಗೊಳ್ಳಲಿದೆಯಾ? ಪ್ರಧಾನಿ ಮೋದಿ, ಜೆಪಿ ನಡ್ಡಾ ಅವರು ಈ ವಾಡಿಕೆಯ ತಪ್ಪಿತಸ್ಥನ ವಿರುದ್ದ ಕ್ರಮ ಕೈಗೊಳ್ಳುತ್ತಾರಾ? ಎಂದು ಪ್ರಶ್ನಿಸಿದ್ದರು. ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಎಕ್ಸ್ ಪೋಸ್ಟ್ ಟ್ಯಾಗ್ ಮಾಡಿದ್ದರು.

ತಬುರಾವ್ ಅವರ ದೂರು ಪರಿಗಣಿಸಿದ್ದ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಆದೇಶಿಸಿತ್ತು.

ಇದನ್ನೂ ಓದಿ : ಬೆಂಗಳೂರಿನ ಮುಸ್ಲಿಂ ಬಾಹುಳ್ಯದ ಪ್ರದೇಶವನ್ನು ‘ಪಾಕಿಸ್ತಾನ’ ಎಂದ ಹೈಕೋರ್ಟ್ ನ್ಯಾಯಾಧೀಶ : ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...