Homeಕರ್ನಾಟಕಯಡಿಯೂರಪ್ಪ, ಕುಮಾರಸ್ವಾಮಿಯಿಂದ ಅಕ್ರಮ ಡಿನೋಟಿಫಿಕೇಷನ್ ಆರೋಪ : ದಾಖಲೆ ಬಿಡುಗಡೆಗೊಳಿಸಿದ ಸಚಿವರು

ಯಡಿಯೂರಪ್ಪ, ಕುಮಾರಸ್ವಾಮಿಯಿಂದ ಅಕ್ರಮ ಡಿನೋಟಿಫಿಕೇಷನ್ ಆರೋಪ : ದಾಖಲೆ ಬಿಡುಗಡೆಗೊಳಿಸಿದ ಸಚಿವರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.​​ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಇಂದು (ಸೆ.19) ದಾಖಲೆ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಚಿವರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಅವರು ಬಿಎಸ್​ವೈ ಹಾಗೂ ಹೆಚ್​ಡಿಕೆ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್​ಗೆ ಸಂಬಂಧಿಸಿದಂತೆ ಕೆಲ ದಾಖಲೆಗಳನ್ನು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, “ರಾಜ್ಯಪಾಲರು ಕೆಲ ಪ್ರಕರಣಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ತಪ್ಪು ಮಾಡಿದವರಿಗೆ ರಾಜ್ಯಪಾಲರು ರಕ್ಷಣೆ ನೀಡುತ್ತಿದ್ದಾರೆ. ಮಠದ ಹಳ್ಳಿ, ಗಂಗೇನಹಳ್ಳಿ ಬಡಾವಣೆ 7/1 ಬಿ, ಸಿ ಹಾಗೂ ಡಿ ಸರ್ವೆ ನಂಬರ್‌ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧಿನಗೊಂಡಿರುತ್ತದೆ. ಇದನ್ನು ಡಿನೋಟಿಫೈ ಮಾಡಬೇಕು ಅಂತ ಯಾರೋ ರಾಜಶೇಖರಯ್ಯ ಅನ್ನೋರು ಅರ್ಜಿ ಕೊಡ್ತಾರೆ. ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಅನ್ನುವವರು ಅರ್ಜಿ ಕೊಡ್ತಾರೆ. 22.08.2007 ರಲ್ಲಿ ಅರ್ಜಿ ಬಂದ ಅದೇ ದಿನ ಸಿಎಂ ಆಗಿದ್ದ ಹೆಚ್‌ಡಿಕೆ ಡಿನೋಟಿಫೈ ಮಾಡಲು ಸೂಚಿಸುತ್ತಾರೆ” ಎಂದು ಗಂಭೀರ ಆರೋಪ ಮಾಡಿದರು.

ಜಮೀನಿನ ಅಸಲಿ ಮಾಲೀಕರು 21 ಜನರಿದ್ದಾರೆ. 30 ವರ್ಷಗಳ ಹಿಂದೆಯೇ ಈ ಜಮೀನೂ ಭೂಸ್ವಾಧೀನ ಆಗಿತ್ತು. ಯಾವುದು ಭೂ ಸ್ವಾಧೀನ ಆಗಿತ್ತೋ, ಆ ಜಮೀನಿಗೆ ಕುಮಾರಸ್ವಾಮಿ ಅತ್ತೆ ಅನಿತಾ ಕುಮಾರಸ್ವಾಮಿ ತಾಯಿ ಜಿಪಿಎ ಮಾಡಿಕೊಳ್ಳುತ್ತಾರೆ. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಫೈಲ್ ತಿರಸ್ಕಾರ ಮಾಡುತ್ತಾರೆ. ಆದರೂ, ಅಂದಿನ ಸಿಎಂ ಕುಮಾರಸ್ವಾಮಿ ಡಿನೋಟಿಫೈ ಮಾಡುವಂತೆ ಸೂಚಿಸುತ್ತಾರೆ. ಬಳಿಕ ಸರ್ಕಾರ ಬದಲಾಗಿ ಯಡಿಯೂರಪ್ಪ ಸಿಎಂ ಆಗುತ್ತಾರೆ. ಆಗ ಮತ್ತೆ ಅದೇ ಫೈಲ್ ಸಿಎಂ ಯಡಿಯೂರಪ್ಪ ಕೈಗೆ ಬರುತ್ತದೆ. ಕಾನೂನು ಗಾಳಿಗೆ ತೂರಿ ಯಡಿಯೂರಪ್ಪ 2010 ಜೂನ್ 5ರಂದು ರಂದು ಭೂಸ್ವಾಧೀನದಿಂದ ಕೈ ಬಿಡುತ್ತಾರೆ ಎಂದು ಹೇಳಿದರು.

ಡಿ ನೋಟಿಫಿಕೇಷನ್ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವವರಿಗೆ ಶುದ್ದ ಕ್ರಯಪತ್ರ ಆಗುತ್ತದೆ . ಹೀಗೆ ಅಕ್ರಮವಾಗಿ ಡಿನೋಟಿಫೈ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ. ಇದು ವ್ಯವಸ್ಥಿತ ವಂಚನೆ ಹೌದೋ ಅಲ್ವೋ? ಇದು ನೇರವಾಗಿ ಕುಮಾರಸ್ವಾಮಿ ಆದೇಶದಿಂದಲೇ ಆಗಿದೆ. ಕುಮಾರಸ್ವಾಮಿ ಪುಟಫ್ ಮಾಡಿದ ಫೈಲ್‌ಗೆ ಯಡಿಯೂರಪ್ಪ ಸಹಿ ಮಾಡಿದ್ದಾರೆ. ಸಾರ್ವಜನಿಕ ಸ್ವತ್ತನ್ನು ತಂತ್ರಗಾರಿಕೆ ಮಾಡಿ ಲೂಟಿ ಮಾಡಿದ್ದೀರ ಕುಮಾರಸ್ವಾಮಿಯವರೇ ಎಂದು ಆರೋಪಿಸಿದರು.

ಲೋಕಾಯುಕ್ತದವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ವಿರುದ್ದ ಎಫ್​ಐಆರ್ ದಾಖಲಾಗಿ ಒಂಭತ್ತು ವರ್ಷಗಳಾಗಿದೆ. ಹೈಕೋರ್ಟ್ ತನಿಖೆಗೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೇ ಇದೆ? ಎಂದು ಪ್ರಶ್ನಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ “ಯಾವ ಜಮೀನನ್ನು ಡಿ-ನೋಟಿಫಿಕೇಷನ್ ಮಾಡಲು ಸಾಧ್ಯವೇ ಇಲ್ಲವೋ ಅದನ್ನು ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಇಬ್ಬರೂ ಸೇರಿಕೊಂಡು ಡಿ-ನೋಟಿಫೈ ಮಾಡಿದ್ದಾರೆ. ಈ ಲೂಟಿಯಲ್ಲಿ ಯಾರ್ಯಾರು ಎಷ್ಟೆಷ್ಟು ಪಾಲು ಪಡೆದಿದ್ದಾರೆ? ಇದರ ಬಗ್ಗೆ ಇಬ್ಬರೂ ಉತ್ತರ ನೀಡಬೇಕು” ಎಂದರು.

ಸಚಿವ ಸಂತೋಷ್ ಲಾಡ್ ಮಾತನಾಡಿ “ದಾಖಲೆ ಸಮೇತ ನಾವು ಮಾಡಿದ ಆರೋಪಗಳಿಗೆ ಹೆಚ್.ಡಿ ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯವರು ಉತ್ತರ ನೀಡಬೇಕು. ಡಿನೋಟಿಫಿಕೇಷನ್ ಅಕ್ರಮದ ಮುಖ್ಯ ರೂವಾರಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಯಡಿಯೂರಪ್ಪನವರು ಉತ್ತರ ಕೊಡಬೇಕು. ಮುಖ್ಯವಾಗಿ ಬಿಜೆಪಿಯವರು ನಾವು ಬಿಡುಗಡೆ ಮಾಡುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ರಾಜ್ಯಪಾಲರಿಗೆ ನೀಡಿ ಮತ್ತೊಮ್ಮೆ ತನಿಖೆಗೆ ಆದೇಶಿಸಿ ಎಂದು ಅವರಲ್ಲಿ ಮನವಿ ಮಾಡಬೇಕು. ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ತನಿಖೆ ನಡೆಸಿ ಎಂದು ರಾಜ್ಯಪಾಲರಿಗೆ ಪತ್ರ ಬರೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ : ಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...