Homeಕರ್ನಾಟಕಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ...

ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ ಬೈರೇಗೌಡ ಆರೋಪ

- Advertisement -
- Advertisement -

“ಬೆಂಗಳೂರು ಗಂಗೇನಹಳ್ಳಿ ಬಡಾವಣೆ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಸರ್ಕಾರಿ ಜಮೀನನ್ನು ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಜಂಟಿಯಾಗಿ, ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿ ಕುಮಾರಸ್ವಾಮಿ ಅವರ ಬಾಮೈದನ ಹೆಸರಲ್ಲಿ ನೋಂದಣಿ ಮಾಡಿದ್ದಾರೆ” ಎಂದು ಆರೋಪಿಸಿರುವ  ಕಾಂಗ್ರೆಸ್ ಸಚಿವರು, ಸುದ್ದಿಗೋ‍ಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬೆಂಗಳೂರು ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1976 ರಲ್ಲೆ ಭೂ ಸ್ವಾಧೀನ ಮಾಡಿಕೊಂಡಿದೆ. 1976 ರಲ್ಲಿ ಆರಂಭವಾದ ಭೂ ಸ್ವಾಧೀನ ಪ್ರಕ್ರಿಯೆ 1978ರಲ್ಲಿ ಮುಗಿದಿದೆ. ಆದರೆ, ಎಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತನಗೆ ಸಂಬಂಧವೇ ಇಲ್ಲದ ಈ ಪ್ರಕರಣದಲ್ಲಿ ಅತ್ಯುತ್ಸಾಹ ತೋರಿದ್ದು ಏಕೆ” ಎಂದು ಕೃಷ್ಣ ಬೈರೇಗೌಡ ಕಟುವಾಗಿ ಪ್ರಶ್ನಿಸಿದರು.

“ಈ ಮೂಲಕ ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆಯಿಂದ ವ್ಯವಸ್ಥಿತವಾಗಿ ಲೂಟಿ ಮಾಡಿದ್ದಾರೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಕ್ತ ದಾಖಲೆಗಳ ಸಮೇತ ಆಕ್ರೋಶ ಹೊರಹಾಕಿದರು.

“ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವರು 1978ರಲ್ಲಿ ಭೂ ಸ್ವಾಧೀನಗೊಂಡ ಜಮೀನಿಗೆ ಡಿನೋಟಿಫೈ ಮಾಡಲು 2007ರಲ್ಲಿ ಸಿಎಂ ಕುಮಾರಸ್ವಾಮಿಯವರಿಗೆ ಅರ್ಜಿ ಹಾಕಿದ್ದಾರೆ. ಅಸಲಿಗೆ ರಾಜಶೇಖರಯ್ಯನಿಗೂ ಜಮೀನಿಗೂ ಸಂಬಂಧವೇ ಇಲ್ಲ. ಈತ ಯಾರು ಅಂತ ಈವರೆಗೆ ಗೊತ್ತಿಲ್ಲ. ಆದರೆ, ಈ ಅರ್ಜಿ ಬಂದ ಕೂಡಲೇ ಕುಮಾರಸ್ವಾಮಿಯವರು ಅದೇ ದಿನ ಅಧಿಕಾರಿಗಳಿಗೆ ಪತ್ರ ಬರೆದು ಈ ಅರ್ಜಿ ಮೇಲೆ ಕ್ರಮ ಕೈಗೊಳ್ಳಲು ಸೂಚಿಸುತ್ತಾರೆ” ಎಂದು ದಾಖಲೆ ಬಿಡುಗಡೆ ಮಾಡಿದರು.

“ಆದರೆ, ಅಧಿಕಾರಿಗಳು 1976ರಲ್ಲಿ ಆರಂಭಗೊಂಡ ಈ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆ 1978 ರಲ್ಲಿ ಮುಗಿದಿದೆ. ಹೀಗಾಗಿ ಭೂಸ್ವಾಧೀನ ಮಾಡಲು ಬರಲ್ಲ ಎಂದು ಸ್ಪಷ್ಟವಾಗಿ ಉತ್ತರಿಸಿದ್ದರು. ಆದರೂ, ಈ ವಿಚಾರವನ್ನು ಕೈಬಿಡದ ಕುಮಾರಸ್ವಾಮಿಯವರು ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಕಾನೂನು ಪ್ರಕಾರ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

“ಇದೇ ಸಂದರ್ಭದಲ್ಲಿ ಈ ಜಮೀನಿನ ಅಸಲಿ ಮಾಲೀಕರಾದ 21 ಜನರ ಜೊತೆ ಕುಮಾರಸ್ವಾಮಿಯವರ ಅತ್ತೆಯವರು ಜಿಪಿಎ ಮಾಡಿಕೊಳ್ತಾರೆ. ಇದಾದ ಮೇಲೆ ಅಧಿಕಾರ ಹೊಂದಾಣಿಕೆ ಸಮಸ್ಯೆಯಿಂದ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರೆ. ಆನಂತರ ಯಡಿಯೂರಪ್ಪನವರು ಸಿಎಂ ಆಗ್ತಾರೆ. ಆದರೆ, ಅಲ್ಲಿಯವರೆಗೆ ಹಾವು ಮುಂಗಸಿಯಂತೆ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದರೂ ಸಹ ಇದೇ ಅರ್ಜಿ ಮೇಲೆ ಕ್ರಮವಹಿಸಲು ಯಡಿಯೂರಪ್ಪನವರು ಅಧಿಕಾರಿಗಳಿಗೆ ಸೂಚಿಸಿದ್ದು ಏಕೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ಅಂದಿನ ಸಿಎಂ ಯಡಿಯೂರಪ್ಪನವರ ಸೂಚನೆಗೆ ಸ್ಪಷ್ಟವಾಗಿ ಉತ್ತರಿಸಿದ್ದ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿರಾಮಲಿಂಗಂ “ಗಂಗೇನಹಳ್ಳಿ ಬಡಾವಣೆಯ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು16/2 ಅನ್ವಯ ಈಗಾಗಲೇ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಹೀಗಾಗಿ ಡಿನೋಟಿಫೈ ಮಾಡಲು ಸಾಧ್ಯವಿಲ್ಲ ಎಂದು ಬರೆದಿದ್ದರು. ಆದರೆ, ಯಡಿಯೂರಪ್ಪನವರು ಪ್ರಧಾನ ಕಾರ್ಯದರ್ಶಿಗಳ ಅಭಿಪ್ರಾಯ ಗಾಳಿಗೆ ತೂರಿ ಸಂಬಂಧಿತ ಫೈಲ್ ಮೇಲೆ ಭೂಸ್ವಾಧೀನ ಕೈಬಿಡಲು ಆದೇಶಿಸಿದೆ ಎಂದು ಬರೆದಿದ್ದಾರೆ. 1978 ರಲ್ಲಿ ಭೂ ಸ್ವಾಧೀನ ಆಗಿರುವ ಜಮೀನಿಗೆ 2009-10 ರಲ್ಲಿ ಡಿನೋಟಿಫೈ ಮಾಡಿದ್ದಾರೆ” ಎಂದು ದಾಖಲೆಗಳ ಸಮೇತ ಅವರು ಆರೋಪಿಸಿದರು.

“ಇದು ಕಾಕತಾಳೀಯ ಅಂತಿರೋ ವ್ಯವಸ್ಥಿತ, ಪ್ರಾಯೋಜಿತ ಆಲೋಚಿತ ಅಕ್ರಮ ಅಂತಿರೋ ದರೋಡೆ ಅಂತಿರೋ, ಒಟ್ಟಾರೆ 1 ಎಕರೆ 11 ಗುಂಟೆ ಜಮೀನನ್ನು ಯಡಿಯೂರಪ್ಪ ಅವರನ್ನು ಉಪಯೋಗಿಸಿಕೊಂಡು ಡಿನೋಟಿಫೈ ಮಾಡಿಕೊಳ್ಳಲಾಗುತ್ತೆ. ಯಾರ ಜಮೀನಿಗೆ ಡಿನೋಟಿಫೈ ಆಗಿತ್ತು ಆತ ಸತ್ತೇ ಹೋಗಿದ್ದ, ಮೃತಪಟ್ಟವನ ಹೆಸರಿಗೆ ಡಿನೋಟಿಫೈ ಮಾಡಿದ್ದಾರೆ. ಸತ್ತೋದವನಿಂದ ಕುಮಾರಸ್ವಾಮಿಯವರ ಅತ್ತೆ ಹೆಸರಿಗೆ ಜಿಪಿಎ ಮಾಡಲಾಗಿದೆ. ಅವರಿಂದ ಕುಮಾರಸ್ವಾಮಿ ಅವರ ಬಾಮೈದನಿಗೆ ನೋಂದಣಿ ಮಾಡಿಕೊಡಲಾಗಿದೆ. ನೂರಾರು ಕೋಟಿ ಮೌಲ್ಯ ಇರುವ ಬಡವರಿಗೆ ನಿವೇಶನಗಳನ್ನು ಕಲ್ಪಿಸಬೇಕಾದ ಸ್ವತ್ತು, ಸರ್ಕಾರ ಭೂ ಸ್ವಾಧೀನ ಮಾಡಿ ಮುಗಿಸಿದ್ದ ಜಮೀನು ಹೀಗೆ ಅಕ್ರಮವಾಗಿ ಇಬ್ಬರು ಮಾಜಿ ಸಿಎಂಗಳ ಜಂಟಿ ಕಾರ್ಯಾಚರಣೆಯಿಂದ ಕಬಳಿಕೆಯಾಗಿದೆ” ಎಂದು ಆರೋಪಿಸಿದರು.

“ಸರ್ಕಾರದ ಆದೇಶದ ಪ್ರತಿಯ ಮೇಲೆ ಅಂದಿನ ಸಿಎಂ ಯಡಿಯೂರಪ್ಪ ಅವರ ಕೈ ಬರಹ ಸ್ಪಷ್ಟವಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದೇಶಿಸಿದ್ದನ್ನು ಯಡಿಯೂರಪ್ಪ ಡಿನೋಟಿಫೈ ಮಾಡಿದ್ದಾರೆ. ಜಮೀನು ಕುಮಾರಸ್ವಾಮಿ ಅವರ ಬಾಮೈದನ ಪಾಲಾಗಿದೆ. ಈ ಇಬ್ಬರೂ ಸೇರಿ ಬಡವರ ಆಸ್ತಿ ಲಪಟಾಯಿಸಿರುವುದು ಕರ್ನಾಟಕದ ಜನರಗೆ ಮಾಡಿದ ಅನ್ಯಾಯ ಮೋಸ ಅಲ್ವ? ಇದು ವ್ಯವಸ್ಥಿತ ವಂಚನೆ ಹೌದ ಅಲ್ವ? ಇದು ಸಾರ್ವಜನಿಕರ ಸ್ವತ್ತನ್ನು ಪೂರ್ವಾಲೋಚನೆ ಮಾಡಿ ತಂತ್ರಗಾರಿಕೆ ಮಾಡಿ ವ್ಯವಸ್ಥಿತವಾಗಿ ಲೂಟಿ ಮಾಡಿರುವ ಪ್ರಕರಣ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

“ಈ ಪ್ರಕರಣದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯನ್ನು ವಜಾ ಮಾಡುವಂತೆ ಯಡಿಯೂರಪ್ಪನವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟಿನಲ್ಲಿ ಅಪೀಲು ವಜಾ ಆಗಿ ₹25,000 ದಂಡ ಹಾಕಿದ್ದಾರೆ. ಹೀಗಾಗಿ ಲೋಕಾಯುಕ್ತ ತತಕ್ಷಣ ಈ ಪ್ರಕರಣದ ತನಿಖೆ ಪೂರೈಸಿ ಈ ಬಗ್ಗೆ ವರದಿ ನೀಡಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಉಪಸ್ಥಿತರಿದ್ದರು.

ಇದನ್ನೂ ಓದಿ; ಯಡಿಯೂರಪ್ಪ, ಕುಮಾರಸ್ವಾಮಿ ಜಂಟಿ ಹಗರಣ ಆರೋಪ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ನಿವೃತ್ತ ಐಎಎಸ್ ಅಧಿಕಾರಿ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...