Homeಕರ್ನಾಟಕಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ತಡೆಗೆ ಮಾರ್ಗಸೂಚಿ | ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ತಡೆಗೆ ಮಾರ್ಗಸೂಚಿ | ಸರ್ಕಾರ ನಿರ್ಧಾರ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆಯಂತಹ ದುಷ್ಕೃತ್ಯಗಳನ್ನು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರವು SOP (ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್)ಗಳನ್ನು ಕರಡು ಮಾಡಲು ಸಮಿತಿ ರಚನೆಗೆ ನಿರ್ಧರಿಸಿದೆ ಎಂದು ವರದಿಯಾಗಿದೆ. ರಾಜ್ಯದಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷೆಯ ವೇಳೆ ನಕಲು ಮಾಡುವ ದುಷ್ಕೃತ್ಯಕ್ಕೆ ಸಂಬಂಧಿಸಿ ಆತ್ಮಹತ್ಯೆ ಘಟನೆಗಳು ನಡೆದ ಕಾರಣಕ್ಕೆ ಸರ್ಕಾರ ಈ ನಿರ್ಧಾಕ್ಕೆ ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷವಾಗಿ ಪಿಇಎಸ್ ವಿಶ್ವವಿದ್ಯಾಲಯದ 19 ವರ್ಷದ ಬಿ ಟೆಕ್ ವಿದ್ಯಾರ್ಥಿ, ಆದಿತ್ಯ ಪ್ರಭು ಅವರ ಸಾವಿನ ಹಿನ್ನಲೆ ಈ ನಿರ್ಧಾರ ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜುಲೈ 2023 ರಲ್ಲಿ ನಡೆದ ಸೆಮಿಸ್ಟರ್ ಪರೀಕ್ಷೆಯ ವೇಳೆ ಆದಿತ್ಯ ಪ್ರಭು “ನಕಲು” ಮಾಡುವ ವೇಳೆ ಸಿಕ್ಕಿಬಿದ್ದಿದ್ದು, ನಂತರ ಕಾಲೇಜಿನ ಕಟ್ಟಡದಿಂದ ಹಾರಿ ಜೀವ ಕಳೆದುಕೊಂಡಿದ್ದರು. ಅವರ ಪೋಷಕರು ಕಾಲೇಜಿನ ಮ್ಯಾನೇಜ್‌ಮೆಂಟ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು, ವಿದ್ಯಾರ್ಥಿಗೆ ಮಾನಸಿಕ ಕಿರುಕುಳ ನೀಡಲಾಗಿತ್ತು ಎಂಬ ಆರೋಪವನ್ನು ಮಾಡಿದ್ದರು.

ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, SOP ಕರಡು ಸಮಿತಿಯಲ್ಲಿ ಮನಶ್ಶಾಸ್ತ್ರಜ್ಞರು ಮತ್ತು ಉಪಕುಲಪತಿಗಳು ಇರುತ್ತಾರೆ. ಅವರು ಖಾಸಗಿ ಸಂಸ್ಥೆಗಳು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವ ಎಸ್‌ಒಪಿಗಳ ಕರಡನ್ನು ರಚಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸತ್ತವರ ಹೆಸರಲ್ಲಿ ಡಿನೋಟಿಫೈ ಮಾಡಿದ ಬಿಎಸ್‌ವೈ-ಎಚ್‌ಡಿಕೆ, ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ ಜಮೀನಿನ ವ್ಯವಸ್ಥಿತ ಲೂಟಿ: ಕೃಷ್ಣ ಬೈರೇಗೌಡ ಆರೋಪ

“ಎಸ್‌ಒಪಿಗಳನ್ನು ಮಾನವೀಯತೆಯ ಆಧಾರದ ಮೇಲೆ ರಚಿಸಲಾಗುವುದು ಮತ್ತು ವಿದ್ಯಾರ್ಥಿಗಳು ದುಷ್ಕೃತ್ಯದ ಸಮಯದಲ್ಲಿ ಸಿಕ್ಕಿಬಿದ್ದಾಗ ಅವರೊಂದಿಗೆ ಹೇಗೆ ವ್ಯವಹರಿಸಬೇಕು ಎಂಬುದರ ಕುರಿತು ನಿರ್ವಹಣೆಗೆ ಮಾರ್ಗದರ್ಶನ ನೀಡುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಆತ್ಮಹತ್ಯೆ ಪ್ರವೃತ್ತಿಯನ್ನು ಹೊಂದಿರುವುದಿಲ್ಲ. ನಕಲು ನಡೆದಿದೆಯೇ ಎಂಬುದನ್ನು ಮೊದಲು ತನಿಖೆ ಮಾಡುವುದು ಮೂಲಭೂತ ವಿಷಯ. ತನಿಖೆ ವೇಳೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು” ಎಂದು ಸುಧಾಕರ್ ಹೇಳಿದ್ದಾರೆ.

“ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ SOP ಗಳನ್ನು ರಚಿಸಲಾಗುವುದು. ಅವರಿಗೆ ಬೆದರಿಕೆ ಇರುವಂತೆ ಇರಬಾರದು. ಇದು ವಿದ್ಯಾರ್ಥಿಗಳಲ್ಲಿ ನೆಮ್ಮದಿಯ ಭಾವನೆ ಮೂಡಿಸಬೇಕು” ಎಂದು ಸಚಿವ ತಿಳಿಸಿದರು.

ಆದಿತ್ಯ ಪ್ರಭು ಅವರ ಸಾವಿನ ನಂತರ ರಾಜ್ಯ ಸರ್ಕಾರ ರಚಿಸಿದ್ದ 11 ಸದಸ್ಯರ ತಜ್ಞರ ಸಮಿತಿಯ ವರದಿಯನ್ನು ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತು ಪರಿಗಣಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಜಯಕರ್ ಎಸ್.ಎಂ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ವರದಿಯು ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಸರಣಿ ಬದಲಾವಣೆಗಳನ್ನು ಶಿಫಾರಸು ಮಾಡಿದೆ.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...