Homeಮುಖಪುಟಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

ಒಡಿಶಾ| ಸೇನಾಧಿಕಾರಿಯ ಸ್ನೇಹಿತೆ ಮೇಲೆ ದೌರ್ಜನ್ಯ ಆರೋಪ : ಐವರು ಪೊಲೀಸರ ಅಮಾನತು

- Advertisement -
- Advertisement -

ಒಡಿಶಾದ ಭುವನೇಶ್ವರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಠಾಣೆಯ ಪೀಠೋಪಕರಣಗಳನ್ನು ಹಾನಿಗೊಳಿಸಿದ ಆರೋಪದ ಮೇಲೆ ಕಳೆದ ವಾರ ಬಂಧಕ್ಕೊಳಗಾಗಿ ಬುಧವಾರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸೇನಾಧಿಕಾರಿಯ ಸ್ನೇಹಿತೆ, ಇದೀಗ ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ತನ್ನ ಗೆಳೆಯನನ್ನು ಅಕ್ರಮವಾಗಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿ ಸೇರಿದಂತೆ ಐವರು ಪೊಲೀಸರನ್ನು ಶಿಸ್ತಿನ ಪ್ರಕ್ರಿಯೆಯ ಭಾಗವಾಗಿ ಅಮಾನತುಗೊಳಿಸಲಾಗಿದೆ ಎಂದು ಒಡಿಶಾ ಪೊಲೀಸರ ಉನ್ನತ ಮೂಲಗಳು ತಿಳಿಸಿದೆ.

“ಕಳೆದ ಭಾನುವಾರ ರಾತ್ರಿ 1 ಗಂಟೆಗೆ ನನ್ನ ರೆಸ್ಟೋರೆಂಟ್ ಮುಚ್ಚಿ ನಾನು ನನ್ನ ಗೆಳೆಯನ ಜೊತೆ ಮನೆ ಕಡೆಗೆ ಹೋಗುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಪುರುಷರ ತಂಡವೊಂದು ನಮ್ಮ ಮೇಲೆ ದಾಳಿ ಮಾಡಿತ್ತು. ಅವರಿಂದ ತಪ್ಪಿಸಿಕೊಂಡು, ಈ ಕುರಿತು ದೂರು ದಾಖಲಿಸಲು ಭರತ್‌ಪುರ ಪೊಲೀಸ್ ಠಾಣೆಗೆ ನಾವು ತೆರಳಿದ್ದೆವು. ನಾವು ಠಾಣೆಗೆ ತಲುಪಿದಾಗ, ಅಲ್ಲಿ ಸಿವಿಲ್ ಡ್ರೆಸ್‌ನಲ್ಲಿ ಒಬ್ಬರು ಮಹಿಳಾ ಪೇದೆ ಮಾತ್ರ ಇದ್ದರು. ಅವರು ನಮಗೆ ಸಹಾಯ ಮಾಡಲು ನಿರಾಕರಿಸಿದರು” ಎಂದು ಸೇನಾಧಿಕಾರಿಯ ಸ್ನೇಹಿತೆ ಹೇಳಿದ್ದಾರೆ.

“ಮಹಿಳಾ ಪೇದೆ ದೂರು ಸ್ವೀಕರಿಸುವ ಬದಲು ನಮಗೆ ಅಸಭ್ಯವಾಗಿ ನಿಂದಿಸಲು ಶುರು ಮಾಡಿದರು. ಈ ವೇಳೆ ಅಲ್ಲಿಗೆ ಬಂದ ಕೆಲ ಪುರುಷ ಸಿಬ್ಬಂದಿ ನನ್ನ ಗೆಳೆಯನ ಬಳಿ ಲಿಖಿತ ಹೇಳಿಕೆ ನೀಡುವಂತೆ ಸೂಚಿಸಿದರು. ಬಳಿಕ ಅವರು, ನನ್ನ ಗೆಳೆಯನನ್ನು ಸೆಲ್‌ಗೆ ಹಾಕಿದರು. ಆಗ ನಾನು ಸೇನಾಧಿಕಾರಿಯನ್ನು ಈ ರೀತಿ ಸೆಲ್‌ಗೆ ಹಾಕುವಂತಿಲ್ಲ ಎಂದು ಜೋರಾದ ಧ್ವನಿಯಲ್ಲಿ ಹೇಳಿದೆ. ಆಗ ಇಬ್ಬರು ಮಹಿಳಾ ಸಿಬ್ಬಂದಿ ನನ್ನ ಮೇಲೆ ಹಲ್ಲೆ ನಡೆಸಿದರು. ನಾನು ಅವರಿಂದ ಬಿಡಿಸಿಕೊಳ್ಳಲು ಒಬ್ಬರ ಕೈಗೆ ಕಚ್ಚಿದೆ. ಆಗ ಅವರು ಜಾಕೆಟ್‌ನಿಂದ ನನ್ನನ್ನು ಕಟ್ಟಿದಂತೆ ಮಾಡಿ ಕೋಣೆಯೊಂದರಲ್ಲಿ ಹಾಕಿದರು” ಎಂದು ಮಹಿಳೆ ಆರೋಪಿಸಿದ್ದಾರೆ.

“ಸ್ವಲ್ಪ ಸಮಯದ ನಂತರ, ಪುರುಷ ಅಧಿಕಾರಿಯೊಬ್ಬರು ಕೋಣೆಯ ಬಾಗಿಲು ತೆರೆದರು. ನನ್ನ ಸ್ತನಗಳ ಮೇಲೆ ಹಲವಾರು ಬಾರಿ ಒದ್ದರು. ಅವರು ತನ್ನ ಪ್ಯಾಂಟ್ ಬಿಚ್ಚಿದರು. ನನ್ನ ಪ್ಯಾಂಟ್ ಅನ್ನೂ ಬಲವಂತವಾಗಿ ಬಿಚ್ಚಿಸಿದರು” ಎಂದು ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಶ್ಲೀಲ ಸನ್ನೆ ಮಾಡಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಮಹಿಳೆಯ ಆರೋಪಗಳನ್ನು ನಿರಾಕರಿಸಿರುವ ಪೊಲೀಸರು, “ಕೋಲ್ಕತ್ತಾದ 22ನೇ ಸಿಖ್ ರೆಜಿಮೆಂಟ್‌ಗೆ ನಿಯೋಜಿಸಲಾಗಿರುವ ಸೇನಾಧಿಕಾರಿ ಮತ್ತು ಅವರ ಸ್ನೇಹಿತೆ ಕುಡಿದು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಪೊಲೀಸ್ ಠಾಣೆಯೊಳಗಿನ ಕಂಪ್ಯೂಟರ್ ಮತ್ತು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸೇನಾ ಅಧಿಕಾರಿಯ ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ” ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಆರೋಪ-ಪ್ರತ್ಯಾರೋಪಗಳ ನಡುವೆ, ಪೊಲೀಸ್ ಮಹಾನಿರ್ದೇಶಕ ವೈ.ಬಿ. ಖುರಾನಿಯಾ ಅವರ ನಿರ್ದೇಶನದ ಮೇರೆಗೆ ಚಂಡಕಾ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದ್ದು, ಸೆಪ್ಟೆಂಬರ್ 15ರಂದು ತಡರಾತ್ರಿ ಮನೆಗೆ ಮರಳುತ್ತಿದ್ದಾಗ ದಾರಿ ಮಧ್ಯೆ ಪುರುಷರ ಗುಂಪು ದಾಳಿ ನಡೆಸಿದೆ ಎಂಬ ಮಹಿಳೆಯ ಆರೋಪದ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಭುವನೇಶ್ವರ ನಗರದ ಸರ್ಕಾರಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಗಾಯಗಳಿಗೆ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆಯ ಬಳಿಕ ಅಳುತ್ತಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಕೆಯ ಕುತ್ತಿಗೆಯಲ್ಲಿ ಬ್ರೇಸ್ ಮತ್ತು ಕೈಯಲ್ಲಿ ಪ್ಲಾಸ್ಟರ್ ಹಾಕಿರುವುದು ಕಂಡು ಬಂದಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಈ ಘಟನೆ ಸಂಬಂಧ ಸ್ವಯಂಪ್ರೇರಿತ ತನಿಖೆ ಕೈಗೊಂಡಿದ್ದು ಪೊಲೀಸರಿಂದ ವರದಿ ಕೇಳಿದೆ. ಈ ಪ್ರಕರಣದ ತನಿಖೆಯನ್ನು ಒಡಿಶಾ ಪೊಲೀಸರ ಅಪರಾಧ ವಿಭಾಗಕ್ಕೆ ವಹಿಸಲಾಗಿದೆ.

ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಮಹಿಳೆ ಸೇನಾಧಿಕಾರಿಯ ಭಾವಿ ಪತ್ನಿ ಹಾಗೂ ನಿವೃತ್ತ ಸೇನಾಧಿಕಾರಿಯ ಮಗಳು ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ ತರಗತಿ ಡ್ರಾಪೌಟ್‌ ಆಗಿದ್ದ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...