Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದೆರಡು ತಿಂಗಳಿನಿಂದ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋವೊದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಕ್ಯಾಮರಾ ಓಪನ್ ಮಾಡಿಕೊಂಡು ಕೊಠಡಿಯೊಂದಕ್ಕೆ ನುಗ್ಗುತ್ತಾನೆ. ಆಗ ಅಲ್ಲಿ ಕೆಲ ವಿದ್ಯಾರ್ಥಿನಿಯರು ನಿಂತಿರುವುದು ಕಾಣುತ್ತದೆ. ಆ ವಿದ್ಯಾರ್ಥಿನಿಯರ ಪೈಕಿ ಕೆಲವರು ಹಿಜಾಬ್ ಧರಿಸಿರುವುದು ನೋಡಬಹುದು.

ವಿಡಿಯೋದಲ್ಲಿ ಮೊಬೈಲ್ ಹಿಡಿದ ವ್ಯಕ್ತಿ “ಏನು ಮಾಡುತ್ತಿದ್ದೀರಿ? ಎಂದು ತೆಲುಗು ಭಾಷೆಯಲ್ಲಿ ಕೇಳುತ್ತಾನೆ. ಅದಕ್ಕೆ ನಮಾಝ್ ಮಾಡುತ್ತೀದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸುತ್ತಾರೆ. ಆಗ ಯಾರು ಕಳಿಸಿದ್ರು? ಎಂದು ಆ ವ್ಯಕ್ತಿ ಮರುಪ್ರಶ್ನೆ ಹಾಕುತ್ತಾನೆ. ಆಗ ವಿದ್ಯಾರ್ಥಿನಿಯರು ಪ್ರಿಯಾ ಮ್ಯಾಮ್ ಎಂದು ಹೇಳಿದಂತೆ ಕೇಳಿಸುತ್ತದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ” ತೆಲಂಗಾಣದ ಶಾಲೆಯೊಂದರಲ್ಲಿ ಹಿಂದೂ ಶಾಲಾ ಬಾಲಕಿಯರನ್ನು ಮತಾಂತರ ಮಾಡಲಾಗುತ್ತಿದೆ. ಅವರಿಂದ ಶಾಲೆಯಲ್ಲೇ ನಮಾಝ್ ಮಾಡಿಸಲಾಗಿದೆ” ಎಂದು ಸುದ್ದಿ ಹಬ್ಬಿವೆ. ಅಲ್ಲದೆ, ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ.

ಪೋಸ್ಟ್‌ಗಳ ಸ್ಕ್ರೀನ್ ಶಾಟ್‌ಗಳು ಕೆಳಗಿದೆ. 

ಫ್ಯಾಕ್ಟ್‌ಚೆಕ್ : ವಿಡಿಯೋ ಗಮನಿಸಿದಾಗಲೇ ನಮಗೆ ಅದು ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗುತ್ತಿರುವುದು ಗೊತ್ತಾಗಿದೆ. ಏಕೆಂದರೆ, ಈ ವಿಡಿಯೋದಲ್ಲಿರುವ ಘಟನೆ ನಡೆದಾಗಲೇ, ಅದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ನಮಗೆ ತಿಳಿದಿದೆ.

ಅಸಲಿಗೆ, ವಿಡಿಯೋ ಹಂಚಿಕೊಂಡಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಸುಳ್ಳು ಸುದ್ದಿಯೊಂದಿಗೆ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿವೆ. ವಿಡಿಯೋದಲ್ಲಿರುವುದು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ದೃಶ್ಯವಲ್ಲ. ಅದು ಮುಸ್ಲಿಂ ವಿದ್ಯಾರ್ಥಿನಿಯರೇ ನಮಾಝ್ ಮಾಡಿರುವ ದೃಶ್ಯವಾಗಿದೆ. ಆದರೆ, ಶಾಲೆಗೆ ನುಗ್ಗಿದ ಬಜರಂಗದಳದ ಗುಂಪು ವಿದ್ಯಾರ್ಥಿನಿಯರ ನಮಾಝ್‌ಗೆ ಅಡ್ಡಿಪಡಿಸಿರುವುದು ನಿಜ.

ಈ ಘಟನೆಯ ಕುರಿತು 27 ಆಗಸ್ಟ್ 2024ರಂದು ‘ದಿ ಸಿಯಾಸತ್ ಡೈಲಿ‘ ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ” ತೆಲಂಗಾಣದಲ್ಲಿ ಶಾಲೆಯಲ್ಲಿ ನಮಾಝ್ ಮಾಡಿದ್ದಕ್ಕೆ ಬಾಲಕಿಯರಿಗೆ ಥಳಿಸಿದ ಬಜರಂಗದಳ : ಅಮ್ಜದ್ ಉಲ್ಲಾ” ಎಂದು ಶೀರ್ಷಿಕೆ ಕೊಡಲಾಗಿತ್ತು.

ವರದಿಯಲ್ಲಿ “ತೆಲಂಗಾಣದ ಶಾಲೆಯೊಂದರಲ್ಲಿ ನಮಾಝ್ ಮಾಡುತ್ತಿದ್ದ ಬಾಲಕಿಯರಿಗೆ ಬಜರಂಗದಳದವರು ಥಳಿಸಿದ್ದಾರೆ ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ವಕ್ತಾರ ಅಮ್ಜದ್ ಉಲ್ಲಾ ಖಾನ್ ಆರೋಪಿಸಿದ್ದಾರೆ” ಎಂದು ಹೇಳಲಾಗಿತ್ತು.

“ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಅಮ್ಜದ್‌ ಉಲ್ಲಾ, ಬಜರಂಗದಳದ ಸದಸ್ಯರು ವನಪರ್ತಿಯ ಚಾಣಕ್ಯ ಹೈಸ್ಕೂಲ್‌ಗೆ ನುಗ್ಗಿ ಶಾಲಾ ಅಧಿಕಾರಿಗಳ ಅನುಮತಿಯೊಂದಿಗೆ ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ” ತಿಳಿಸಲಾಗಿದೆ.

“ಆಗಸ್ಟ್ 23ರಂದು ಶುಕ್ರವಾರ ಘಟನೆ ನಡೆದಿದ್ದರೂ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಮ್ಜದ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ಈ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಮ್ಜದ್‌ ಉಲ್ಲಾ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ “ಆಗಸ್ಟ್ 27, 2024ರಂದು ಅವರು ವೈರಲ್ ವಿಡಿಯೋ ಸಹಿತ ಪೋಸ್ಟ್ ಒಂದನ್ನು ಹಾಕಿರುವುದು ಕಂಡು ಬಂದಿದೆ.

ಆ ಪೋಸ್ಟ್‌ನಲ್ಲಿ “ಆ.23 ರಂದು ಬಜರಂಗದಳದ ಕೆಲವು ಸಮಾಜ ವಿರೋಧಿಗಳು ವನಪರ್ತಿಯ ಚಾಣಕ್ಯ ಪ್ರೌಢಶಾಲೆಗೆ ನುಗ್ಗಿ ಶಾಲಾ ಅಧಿಕಾರಿಗಳಿಂದ ಅನುಮತಿ ಪಡೆದು ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರನ್ನು ಬೆದರಿಸಿ ಥಳಿಸಿದ್ದಾರೆ. ಅಲ್ಲದೆ, ಶಾಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಪರ್ಯಾಸವೆಂದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಯಾರ ಮೇಲೂ ಎಫ್‌ಐಆರ್ ದಾಖಲಾಗಿಲ್ಲ. ಆದ್ದರಿಂದ ಈ ಘಟನೆಯ ಕುರಿತು ತನಿಖೆ ನಡೆಸಿ ಬಜರಂಗದಳದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ವನಪರ್ತಿ ಎಸ್‌ಪಿಗೆ ಆದೇಶ ನೀಡಬೇಕು. ಈ ಘಟನೆ ಮುಸಲ್ಮಾನರ ಭಾವನೆಗಳನ್ನು ಘಾಸಿಗೊಳಿಸಿದ್ದು ಮಾತ್ರವಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನುಂಟು ಮಾಡಿದೆ” ಎಂದು ಅಮ್ಜದ್‌ ಉಲ್ಲಾ ಖಾನ್ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ತೆಲಂಗಾಣದ ವನಪರ್ತಿಯ ಚಾಣಕ್ಯ ಎಂಬ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಅನುಮತಿ ಪಡೆದು ಮುಸ್ಲಿಂ ಬಾಲಕಿಯರು ಒಂದು ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದರು. ಅಲ್ಲಿಗೆ ನುಗ್ಗಿದ್ದ ಬಜರಂಗದಳದವರು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ನಮಾಝ್‌ಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಲಪಂಥೀಯರು ” ತೆಲಂಗಾಣದ ಶಾಲೆಯಲ್ಲಿ ಮತಾಂತರ, ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಲಾಗಿದೆ” ಎಂದು ಸುಳ್ಳು ಮತ್ತು ಕೋಮುದ್ವೇಷದ ಸುದ್ದಿ ಹಬ್ಬಿಸಿದ್ದಾರೆ.

ಇದನ್ನೂ ಓದಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...