Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದೆರಡು ತಿಂಗಳಿನಿಂದ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋವೊದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಕ್ಯಾಮರಾ ಓಪನ್ ಮಾಡಿಕೊಂಡು ಕೊಠಡಿಯೊಂದಕ್ಕೆ ನುಗ್ಗುತ್ತಾನೆ. ಆಗ ಅಲ್ಲಿ ಕೆಲ ವಿದ್ಯಾರ್ಥಿನಿಯರು ನಿಂತಿರುವುದು ಕಾಣುತ್ತದೆ. ಆ ವಿದ್ಯಾರ್ಥಿನಿಯರ ಪೈಕಿ ಕೆಲವರು ಹಿಜಾಬ್ ಧರಿಸಿರುವುದು ನೋಡಬಹುದು.

ವಿಡಿಯೋದಲ್ಲಿ ಮೊಬೈಲ್ ಹಿಡಿದ ವ್ಯಕ್ತಿ “ಏನು ಮಾಡುತ್ತಿದ್ದೀರಿ? ಎಂದು ತೆಲುಗು ಭಾಷೆಯಲ್ಲಿ ಕೇಳುತ್ತಾನೆ. ಅದಕ್ಕೆ ನಮಾಝ್ ಮಾಡುತ್ತೀದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸುತ್ತಾರೆ. ಆಗ ಯಾರು ಕಳಿಸಿದ್ರು? ಎಂದು ಆ ವ್ಯಕ್ತಿ ಮರುಪ್ರಶ್ನೆ ಹಾಕುತ್ತಾನೆ. ಆಗ ವಿದ್ಯಾರ್ಥಿನಿಯರು ಪ್ರಿಯಾ ಮ್ಯಾಮ್ ಎಂದು ಹೇಳಿದಂತೆ ಕೇಳಿಸುತ್ತದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ” ತೆಲಂಗಾಣದ ಶಾಲೆಯೊಂದರಲ್ಲಿ ಹಿಂದೂ ಶಾಲಾ ಬಾಲಕಿಯರನ್ನು ಮತಾಂತರ ಮಾಡಲಾಗುತ್ತಿದೆ. ಅವರಿಂದ ಶಾಲೆಯಲ್ಲೇ ನಮಾಝ್ ಮಾಡಿಸಲಾಗಿದೆ” ಎಂದು ಸುದ್ದಿ ಹಬ್ಬಿವೆ. ಅಲ್ಲದೆ, ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ.

ಪೋಸ್ಟ್‌ಗಳ ಸ್ಕ್ರೀನ್ ಶಾಟ್‌ಗಳು ಕೆಳಗಿದೆ. 

ಫ್ಯಾಕ್ಟ್‌ಚೆಕ್ : ವಿಡಿಯೋ ಗಮನಿಸಿದಾಗಲೇ ನಮಗೆ ಅದು ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗುತ್ತಿರುವುದು ಗೊತ್ತಾಗಿದೆ. ಏಕೆಂದರೆ, ಈ ವಿಡಿಯೋದಲ್ಲಿರುವ ಘಟನೆ ನಡೆದಾಗಲೇ, ಅದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ನಮಗೆ ತಿಳಿದಿದೆ.

ಅಸಲಿಗೆ, ವಿಡಿಯೋ ಹಂಚಿಕೊಂಡಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಸುಳ್ಳು ಸುದ್ದಿಯೊಂದಿಗೆ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿವೆ. ವಿಡಿಯೋದಲ್ಲಿರುವುದು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ದೃಶ್ಯವಲ್ಲ. ಅದು ಮುಸ್ಲಿಂ ವಿದ್ಯಾರ್ಥಿನಿಯರೇ ನಮಾಝ್ ಮಾಡಿರುವ ದೃಶ್ಯವಾಗಿದೆ. ಆದರೆ, ಶಾಲೆಗೆ ನುಗ್ಗಿದ ಬಜರಂಗದಳದ ಗುಂಪು ವಿದ್ಯಾರ್ಥಿನಿಯರ ನಮಾಝ್‌ಗೆ ಅಡ್ಡಿಪಡಿಸಿರುವುದು ನಿಜ.

ಈ ಘಟನೆಯ ಕುರಿತು 27 ಆಗಸ್ಟ್ 2024ರಂದು ‘ದಿ ಸಿಯಾಸತ್ ಡೈಲಿ‘ ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ” ತೆಲಂಗಾಣದಲ್ಲಿ ಶಾಲೆಯಲ್ಲಿ ನಮಾಝ್ ಮಾಡಿದ್ದಕ್ಕೆ ಬಾಲಕಿಯರಿಗೆ ಥಳಿಸಿದ ಬಜರಂಗದಳ : ಅಮ್ಜದ್ ಉಲ್ಲಾ” ಎಂದು ಶೀರ್ಷಿಕೆ ಕೊಡಲಾಗಿತ್ತು.

ವರದಿಯಲ್ಲಿ “ತೆಲಂಗಾಣದ ಶಾಲೆಯೊಂದರಲ್ಲಿ ನಮಾಝ್ ಮಾಡುತ್ತಿದ್ದ ಬಾಲಕಿಯರಿಗೆ ಬಜರಂಗದಳದವರು ಥಳಿಸಿದ್ದಾರೆ ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ವಕ್ತಾರ ಅಮ್ಜದ್ ಉಲ್ಲಾ ಖಾನ್ ಆರೋಪಿಸಿದ್ದಾರೆ” ಎಂದು ಹೇಳಲಾಗಿತ್ತು.

“ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಅಮ್ಜದ್‌ ಉಲ್ಲಾ, ಬಜರಂಗದಳದ ಸದಸ್ಯರು ವನಪರ್ತಿಯ ಚಾಣಕ್ಯ ಹೈಸ್ಕೂಲ್‌ಗೆ ನುಗ್ಗಿ ಶಾಲಾ ಅಧಿಕಾರಿಗಳ ಅನುಮತಿಯೊಂದಿಗೆ ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ” ತಿಳಿಸಲಾಗಿದೆ.

“ಆಗಸ್ಟ್ 23ರಂದು ಶುಕ್ರವಾರ ಘಟನೆ ನಡೆದಿದ್ದರೂ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಮ್ಜದ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ಈ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಮ್ಜದ್‌ ಉಲ್ಲಾ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ “ಆಗಸ್ಟ್ 27, 2024ರಂದು ಅವರು ವೈರಲ್ ವಿಡಿಯೋ ಸಹಿತ ಪೋಸ್ಟ್ ಒಂದನ್ನು ಹಾಕಿರುವುದು ಕಂಡು ಬಂದಿದೆ.

ಆ ಪೋಸ್ಟ್‌ನಲ್ಲಿ “ಆ.23 ರಂದು ಬಜರಂಗದಳದ ಕೆಲವು ಸಮಾಜ ವಿರೋಧಿಗಳು ವನಪರ್ತಿಯ ಚಾಣಕ್ಯ ಪ್ರೌಢಶಾಲೆಗೆ ನುಗ್ಗಿ ಶಾಲಾ ಅಧಿಕಾರಿಗಳಿಂದ ಅನುಮತಿ ಪಡೆದು ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರನ್ನು ಬೆದರಿಸಿ ಥಳಿಸಿದ್ದಾರೆ. ಅಲ್ಲದೆ, ಶಾಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಪರ್ಯಾಸವೆಂದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಯಾರ ಮೇಲೂ ಎಫ್‌ಐಆರ್ ದಾಖಲಾಗಿಲ್ಲ. ಆದ್ದರಿಂದ ಈ ಘಟನೆಯ ಕುರಿತು ತನಿಖೆ ನಡೆಸಿ ಬಜರಂಗದಳದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ವನಪರ್ತಿ ಎಸ್‌ಪಿಗೆ ಆದೇಶ ನೀಡಬೇಕು. ಈ ಘಟನೆ ಮುಸಲ್ಮಾನರ ಭಾವನೆಗಳನ್ನು ಘಾಸಿಗೊಳಿಸಿದ್ದು ಮಾತ್ರವಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನುಂಟು ಮಾಡಿದೆ” ಎಂದು ಅಮ್ಜದ್‌ ಉಲ್ಲಾ ಖಾನ್ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ತೆಲಂಗಾಣದ ವನಪರ್ತಿಯ ಚಾಣಕ್ಯ ಎಂಬ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಅನುಮತಿ ಪಡೆದು ಮುಸ್ಲಿಂ ಬಾಲಕಿಯರು ಒಂದು ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದರು. ಅಲ್ಲಿಗೆ ನುಗ್ಗಿದ್ದ ಬಜರಂಗದಳದವರು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ನಮಾಝ್‌ಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಲಪಂಥೀಯರು ” ತೆಲಂಗಾಣದ ಶಾಲೆಯಲ್ಲಿ ಮತಾಂತರ, ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಲಾಗಿದೆ” ಎಂದು ಸುಳ್ಳು ಮತ್ತು ಕೋಮುದ್ವೇಷದ ಸುದ್ದಿ ಹಬ್ಬಿಸಿದ್ದಾರೆ.

ಇದನ್ನೂ ಓದಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...