Homeಕರ್ನಾಟಕಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ 2024ರ ದಸರಾ ಉದ್ಘಾಟನೆ - ಸಿದ್ದರಾಮಯ್ಯ ಘೋಷಣೆ

ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ 2024ರ ದಸರಾ ಉದ್ಘಾಟನೆ – ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು 2024ರ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರು ಮೈಸೂರಿನಲ್ಲಿ ಹೇಳಿದ್ದಾರೆ. ಜಿಲ್ಲಾಡಳಿತ, ಮೈಸೂರು ಉಸ್ತುವಾರಿ ಸಚಿವರು ಅವರಿಗೆ ಆಹ್ವಾನ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ,”ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡಿ ತೀರ್ಮಾನಿಸುತ್ತೇವೆ.” ಎಂದು ಹೇಳಿದ್ದಾರೆ.

ಅಲ್ಲದೆ, ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. “ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

“ಈ ಬಾರಿ ರಾಜ್ಯದಲ್ಲಿ 60,000 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ. ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಸಮಾಜದ ಶಾಂತಿಗೆ ಭಂಗವುಂಟುಮಾಡುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆಗೆ ಆದೇಶವಾಗಿದೆ, ಆದರೆ 2021 ಲೋಕಾಯುಕ್ತದವರು ತನಿಖೆ ಮಾಡಿಲ್ಲ. ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ನಮ್ಮ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ, ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

“ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆ. ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡುತ್ತಿಲ್ಲ. ಕುಮಾರಸ್ವಾಮಿಯವರು ಹಿಟ್ ಎಂಡ್ ರನ್ ಗಿರಾಕಿ, ಅವರು ತಮ್ಮ ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಡಿಯೊ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...