Homeಕರ್ನಾಟಕನ್ಯಾಯಾಧೀಶರ ಹೇಳಿಕೆ ವೈರಲ್ : ಅನುಮತಿ ಇಲ್ಲದೆ ಕಲಾಪದ ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ

ನ್ಯಾಯಾಧೀಶರ ಹೇಳಿಕೆ ವೈರಲ್ : ಅನುಮತಿ ಇಲ್ಲದೆ ಕಲಾಪದ ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ

- Advertisement -
- Advertisement -

ನ್ಯಾಯಾಲಯದ ಕಲಾಪದ ಕೆಲವು ವಿಡಿಯೋಗಳು ವೈರಲ್‌ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌, ಪೂರ್ವಾನುಮತಿ ಪಡೆಯದೆ ವಿಡಿಯೋ ರೆಕಾರ್ಡಿಂಗ್‌, ಹಂಚಿಕೆ ಮಾಡದಂತೆ ವೀಕ್ಷಕರಿಗೆ ಎಚ್ಚರಿಸಿದೆ. ಅಲ್ಲದೆ, ಲೈವ್‌ ಸ್ಟ್ರೀಮಿಂಗ್‌ಗೂ ಮುನ್ನ ಸಂದೇಶ ಹಾಕಲಾರಂಭಿಸಿದೆ.

ಕರ್ನಾಟಕ ಹೈಕೋರ್ಟ್‌ 2022ರ ಜನವರಿ 1ರಿಂದ “ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರಪ್ರಸಾರ (ಲೈವ್‌ಸ್ಟ್ರೀಮ್‌) ಮತ್ತು ರೆಕಾರ್ಡಿಂಗ್‌ ನಿಯಮಗಳು 2021” ಅನ್ನು ಜಾರಿಗೊಳಿಸಿದೆ. ಇದರನ್ವಯ ಲೈವ್‌ ಸ್ಟ್ರೀಮಿಂಗ್‌ ಹಾಗೂ ರೆಕಾರ್ಡಿಂಗ್‌ ನಿಯಮಗಳನ್ನು ಸೂಚಿಸಲಾಗಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಈ ಸಂಬಂಧದ ನೋಟಿಸ್‌ ಅನ್ನು ಪ್ರತಿಯೊಂದು ಕೋರ್ಟ್‌ ಹಾಲ್‌ಗಳ ವಿಡಿಯೋ ಕಾನ್ಫರೆನ್ಸ್‌ ಪರದೆಯ ಮೇಲೆ ಕಲಾಪ ಆರಂಭಕ್ಕೂ ಮುನ್ನ ಮತ್ತು ಮಧ್ಯಾಹ್ನ ಭೋಜನದ ವೇಳೆಯಲ್ಲಿ ಪ್ರಸಾರ ಮಾಡಲಾಗಿದೆ.

“ಅನುಮತಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆ ಹೊರತುಪಡಿಸಿ, ಯಾವುದೇ ವ್ಯಕ್ತಿ ಅಥವಾ ಸಂಸ್ಥೆ (ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಜಾಲತಾಣಗಳು) ಕಲಾಪದ ಲೈವ್‌ ಸ್ಟ್ರೀಮಿಂಗ್‌ ಅಥವಾ ಹೈಕೋರ್ಟ್‌ ಯೂಟ್ಯೂಬ್‌ ಚಾನಲ್‌ನಲ್ಲಿನ ವಿಡಿಯೋಗಳನ್ನು ರೆಕಾರ್ಡ್‌ ಮಾಡುವುದಾಗಲಿ, ಪ್ರಸರಣ ಮಾಡುವುದಾಗಲಿ ಮಾಡುವಂತಿಲ್ಲ” ಎಂದು ಸಂದೇಶದಲ್ಲಿ ಹೇಳಲಾಗಿದೆ. ಈ ನಿರ್ಬಂಧವು ಎಲ್ಲಾ ಸಂದೇಶ ಅಪ್ಲಿಕೇಶನ್‌ಗಳಿಗೂ ಅನ್ವಯಿಸಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪೂರ್ವಾನುಮತಿ ಪಡೆಯದೇ ಲೈವ್‌ ಸ್ಟ್ರೀಮಿಂಗ್‌ನ ಮರು ಪ್ರಸಾರ, ವರ್ಗಾವಣೆ, ಅಪ್ಲೋಡ್ ಮಾಡುವುದು, ಪೋಸ್ಟ್‌ ಮಾಡುವುದು, ಮಾರ್ಪಾಡು ಮಾಡುವುದು ಪ್ರಸಾರ ಅಥವಾ ಮರು ಪ್ರಸಾರವನ್ನು ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ಕಲಾಪವನ್ನು ರೆಕಾರ್ಡ್‌ ಮಾಡಲು ಅಥವಾ ಅದರ ನಿರೂಪಣೆಗೆ ಯಾವುದೇ ವ್ಯಕ್ತಿಗೆ ಅನುಮತಿ ನೀಡಲಾಗಿಲ್ಲ. ನ್ಯಾಯಾಲಯದ ನಿಯಮ ಉಲ್ಲಂಘಿಸಿದ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಾನೂನಿನಡಿ ಕ್ರಮಕೈಗೊಳ್ಳಲಾಗುತ್ತದೆ. ನ್ಯಾಯಾಲಯದ ಕಲಾಪದ ರೆಕಾರ್ಡಿಂಗ್‌ ಮತ್ತು ಆರ್ಕೈವ್‌ ದತ್ತಾಂಶದ ಮೇಲೆ ನ್ಯಾಯಾಲಯಕ್ಕೆ ವಿಶೇಷ ಹಕ್ಕುಸ್ವಾಮ್ಯವಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಹೈಕೋರ್ಟ್‌ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ ಮತ್ತು ಮಹಿಳಾ ವಕೀಲೆಯೊಬ್ಬರಿಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ  ವಿಡಿಯೋ ಕ್ಲಿಪ್‌ಗಳು ಎಲ್ಲೆಡೆ ವೈರಲ್ ಆದ ಬಳಿಕ, ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ ಹೇರಿದೆ.

ಇದನ್ನೂ ಓದಿ : ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್ & ಕುಮಾರಸ್ವಾಮಿ ಕುಮ್ಮಕ್ಕು ಇದೆಯೆ? – ಸಚಿವ ಭೈರೆಗೌಡ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...