Homeಮುಖಪುಟಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಕಣಕ್ಕಿಳಿದಿದ್ದ ಬಿಜೆಪಿ, ಶಿವಸೇನೆ ೧೫೮ ಸ್ಥಾನಗಳನ್ನು ಬಾಚಿಕೊಂಡಿವೆ. ಇತ್ತ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಮೈತ್ರಿ ೯೮ ಸ್ಥಾನಗಳನ್ನು ಗೆದ್ದಿದೆ. ಬಹುಮತ ಸಾಧಿಸಿರುವ ಬಿಜೆಪಿ ಮತ್ತು ಶಿವಸೇನೆಯಲ್ಲೀಗ ಸಿಎಂ ಹುದ್ದೆಗಾಗಿ ಜಟಾಪಟಿ ನಡೆದಿದೆ.

ಶಿವಸೇನೆ ತನ್ನ ಪತ್ರಿಕೆ ಸಾಮ್ನಾದಲ್ಲಿ ಚುನಾವಣಾ ಫಲಿತಾಂಶವನ್ನು ವಿಶ್ಲೇಷಿಸಿದೆ. ಮಹಾರಾಷ್ಟ್ರದಲ್ಲಿ ಜನಾದೇಶ ಅಧಿಕಾರದ ದುರಹಂಕಾರದಲ್ಲಿದ್ದವರಿಗೆ ಸರಿಯಾಗಿ ಏಟು ಕೊಟ್ಟಿದೆ. ’ಮಹಾ’ ಜನಾದೇಶ, ಕಾಂಗ್ರೆಸ್‌ ಚೇತರಿಕೆ ಕಂಡಿದ್ದು, ಹೆಚ್ಚು ಸುಧಾರಿಸುತ್ತಿದೆ ಎಂದು ಹೇಳುತ್ತಿದೆ. ಸಮೀಕ್ಷೆಗಿಂತ ಮತದಾರರ ಉತ್ತರ ಮುಖ್ಯ ವಿರೋಧ ಪಕ್ಷಗಳಾದ ಎನ್‌ಸಿಪಿ ಹಾಗೂ ಕಾಂಗ್ರೆಸ್‌ನತ್ತ ಒಲವು ತೋರಿದ್ದನ್ನು ಸ್ಪಷ್ಟಪಡಿಸಿವೆ. ವಿರೋಧ ಪಕ್ಷಗಳನ್ನು ರಾಜಕೀಯದಲ್ಲಿ ಸುಲಭಕ್ಕೆ ಮುಗಿಸಲು ಸಾಧ್ಯವಿಲ್ಲ ಎಂಬುದನ್ನು ಹೇಳಿವೆ ಎಂದು ಶಿವಸೇನೆ ತನ್ನ ಮಿತ್ರ ಬಿಜೆಪಿಯನ್ನು ಟೀಕಿಸಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ೨೮೮ ಕ್ಷೇತ್ರಗಳ ಪೈಕಿ ೨೦೦ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ೨೦೦ಕ್ಕೂ ಹೆಚ್ಚು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸದ ಮಾತುಗಳನ್ನಾಡಿದ್ದರು. ಆದರೆ ಮಹಾರಾಷ್ಟ್ರ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕೇವಲ ೧೫೮ ಕ್ಷೇತ್ರಗಳನ್ನು ಗೆದ್ದಿದೆ.

’೨೦೧೪ಕ್ಕಿಂತ ಈ ಬಾರಿಯ ಚುನಾವಣಾ ಫಲಿತಾಂಶ ಕಡಿಮೆ ಬಂದಿದೆ. ಇವಿಎಂ ಮತ್ತು ವಿಪಕ್ಷಗಳನ್ನು ವಿಭಜಿಸುವ ತಂತ್ರಗಳ ಮೂಲಕ ಗೆಲ್ಲುತ್ತೇವೆ ಎಂಬ ನಂಬಿಕೆಯನ್ನು, ೨೦೧೯ರ ವಿಧಾನಸಭಾ ಚುನವಣಾ ಫಲಿತಾಂಶ ಹುಸಿಗೊಳಿಸಿದೆ ಎಂಬುದಾಗಿ ಶಿವಸೇನೆ ಹೇಳಿದೆ.

’ಸರಾಸರಿ ಲೆಕ್ಕಾಚಾರ ಹಾಕಿದರೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಹಿಂದೆಂದಿಗಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆದ್ದಿವೆ. ಇದು ವಿರೋಧ ಪಕ್ಷಗಳನ್ನು ಅಷ್ಟು ಸುಲಭಕ್ಕೆ ಮುಗಿಸಲು ಸಾಧ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದೆ. ಎನ್‌ಸಿಪಿ 50 ಸ್ಥಾನಗಳ ಗಡಿ ದಾಟಿದರೆ, ನಾಯಕರಿಲ್ಲದ ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಂಡಿದೆ. ಫಲಿತಾಂಶ ಅಧಿಕಾರದ ದುರಹಂಕಾರವನ್ನು ತೋರಿಸಿದರೆ ಸೋಲೊಂದೇ ಉತ್ತರ ಎಂಬುದನ್ನು ಮತದಾರರು ತೋರಿಸಿಕೊಟ್ಟಿದ್ದಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷ ಹೇಳಿದೆ.

೨೦೧೪ರಲ್ಲಿ ಬಿಜೆಪಿ ೧೨೨ ಸ್ಥಾನ ಗೆದ್ದಿತ್ತು. ಆದರೆ ೨೦೧೯ರ ವೇಳೆಗೆ ೧೦೫ಕ್ಕೆ ಇಳಿದಿದೆ. ಶಿವಸೇನೆ ೨೦೧೪ರಲ್ಲಿ ೬೩ ಸ್ಥಾನ ಗೆದ್ದುಕೊಂಡಿತ್ತು. ಆದರೆ ಈ ಬಾರಿ ೫೬ ಸ್ಥಾನ ಗೆದ್ದಿದ್ದು, ಕಳೆದ ಬಾರಿಗಿಂತ ಕಡಿಮೆ ಸ್ಥಾನ ಗೆದ್ದಿರುವುದನ್ನು ತೋರಿಸುತ್ತಿದೆ. ೨೫ ಸ್ಥಾನಗಳನ್ನು ಇತರೆ ಪಕ್ಷದ ನಾಯಕರು ಗೆದ್ದಿದ್ದಾರೆ. ಇದೊಂದು ಎಚ್ಚರಿಕೆಯ ಕರೆಗಂಟೆಯಾಗಿದೆ. ’ನೀವು ಅಧಿಕಾರದ ದುರಂಹಕಾರ ತೋರಿಸಿದರೆ, ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ಜನ ನೀಡಿದ್ದಾರೆ’ ಎಂದು ಹೇಳಿದೆ.

ಶಿವಾಜಿ ಮಹಾರಾಜರ ಸತಾರಾದಲ್ಲಿ ಬಿಜೆಪಿ ಅಭ್ಯರ್ಥಿ ಉದಯನ್‌ರಾಜೇ ಸೋತಿದ್ದಾರೆ. ಶಿವಾಜಿ ಮಹಾರಾಜರ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದನ್ನು ಜನ ಒಪ್ಪಿಲ್ಲ. ಶಿವಾಜಿ ಹೆಸರು ಹೇಳಿಕೊಂಡು ರಾಜಕೀಯ ಮಾಡುವುದು, ಅವಕಾಶ ತೆಗೆದುಕೊಳ್ಳುವುದನ್ನು ಜನ ವಿರೋಧಿಸಿದ್ದು, ಸೋಲಿನ ಕಹಿ ಉಣಿಸಿದ್ದಾರೆ.

ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಹೆಚ್ಚಿನ ಸೀಟು ಗೆಲ್ಲಲು ಹೇಗೆ ಸಾಧ್ಯವಾಯಿತು..? ಚುನಾವಣೆ ಪೂರ್ವ ಸಮೀಕ್ಷೆಗಳ ತೀರ್ಪಿಗೆ ಮತದಾರರ ತೀರ್ಪು ವಿರುದ್ಧವಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾಕಷ್ಟು ರ್‍ಯಾಲಿಗಳನ್ನು ನಡೆಸಿದರೂ ಸತಾರಾದಲ್ಲಿ ಉದಯನ್‌ರಾಜೇ ಗೆಲ್ಲಲು ಸಾಧ್ಯವಾಗಿಲ್ಲ. ಸತಾರಾದ ಜನತೆ ಎನ್‌ಸಿಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಅಲ್ಲದೇ ಬಿಜೆಪಿ ಸಿಎಂಗಿಂತ ಶರದ್‌ ಪವಾರ್‌ ಜನಪ್ರಿಯತೆ ಹೆಚ್ಚಿದೆ ಎಂಬುದನ್ನು ಸತಾರಾ ಜನತೆ ಸಾಬೀತುಪಡಿಸಿದ್ದಾರೆ ಎಂದು ಬರೆದಿದೆ.

ಇತ್ತ ಮರಾಠಿ ಪತ್ರಿಕೆಯೊಂದು ಬಿಜೆಪಿ, ಎನ್‌ಸಿಪಿಯನ್ನು ಹಣಿಯಲು ಸಾಕಷ್ಟು ಕಸರತ್ತು ನಡೆಸಿತು. ಆದರೂ ಸಹ ಶರದ್‌ ಪವಾರ್‌ ಪಕ್ಷಕ್ಕೆ ಮುಂದೆ ಭವಿಷ್ಯವಿದೆ ಎಂಬುದನ್ನು ಮಹಾ ಜನಾದೇಶ ಎತ್ತಿ ಹಿಡಿದಿದೆ ಎಂದು ವಿಶ್ಲೇಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...