Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ದನಿಗೂಡಿಸಿದ ಪ್ರಧಾನಿ ಮೋದಿ!

- Advertisement -
- Advertisement -

ಸೆಪ್ಟೆಂಬರ್ 14, 2024 ರಂದು ಹರಿಯಾಣದ ಕುರುಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಗಣಪತಿಯನ್ನೂ ಜೈಲಿಗೆ ಹಾಕಲಾಗುತ್ತಿದೆ. ಗಣಪತಿಯನ್ನು ಪೊಲೀಸ್ ವ್ಯಾನಿನಲ್ಲಿಟ್ಟು ಬೀಗ ಹಾಕಿದ್ದಾರೆ. ಇಡೀ ರಾಷ್ಟ್ರ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರೆ, ವಿಘ್ನ ವಿನಾಶಕನಾದ ಗಣಪತಿಯನ್ನು ಪೂಜಿಸಲು ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಯಾವ ಹಂತಕ್ಕೂ ಹೋಗಬಹುದು” ಎಂದು ಹೇಳಿದ್ದರು.

ಸೆಪ್ಟೆಂಬರ್ 17ರಂದು ಒಡಿಶಾದ ಭುವನೇಶ್ವರದಲ್ಲಿ ಭಾಷಣ ಮಾಡುವಾಗಲೂ ಪ್ರಧಾನಿ ಈ ಮಾತುಗಳು  ಪುನರುಚ್ಚರಿಸಿದ್ದರು “ಅವರ (ಕಾಂಗ್ರೆಸ್) ಸರ್ಕಾರವು ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಗಣೇಶನ ವಿಗ್ರಹವನ್ನು ಕಂಬಿ ಹಿಂದೆ ಇರಿಸುವ ಮೂಲಕ ದೊಡ್ಡ ಅಪರಾಧ ಮಾಡಿದ್ದಾರೆ” ಎಂದಿದ್ದರು.

ಹರಿಯಾಣದಲ್ಲಿ ಪ್ರಧಾನಿ ಮೋದಿ ಹೇಳಿಕೆ ಕೊಟ್ಟಾಗ ಕರ್ನಾಟಕದಲ್ಲಿ ಗಣೇಶ ಮೂರ್ತಿಯನ್ನು ಪೊಲೀಸ್ ವ್ಯಾನ್‌ನಲ್ಲಿಟ್ಟ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಸೆಪ್ಟೆಂಬರ್ 13, 2024 ರಂದು ಎಕ್ಸ್‌ನಲ್ಲಿ ವೈರಲ್ ಫೋಟೋ ಹಂಚಿಕೊಂಡಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ “ಕಾಂಗ್ರೆಸ್ ಹಿಂದೂಗಳ ನಂಬಿಕೆಯನ್ನು ಅವಮಾನಿಸಿದೆ” ಎಂದು ಬರೆದುಕೊಂಡಿದ್ದರು.

ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ ಗಿರೀಶ್ ಭಾರದ್ವಾಜ್ (@Girishvhp) ಎಂಬವರು ಕೂಡ ಸೆ.13, 2024ರಂದು ಹಂಚಿಕೊಂಡಿದ್ದರು. ಗಿರೀಶ್ ಅವರು ತಮ್ಮ ಎಕ್ಸ್ ಬಯೋದಲ್ಲಿ ‘ಸ್ವಯಂಸೇವಕ’ ಹಾಗೂ  ವಿಶ್ವ ಹಿಂದೂ ಪರಿಷತ್‌ನೊಂದಿಗೆ ಗುರುತಿಸಿಕೊಂಡಿರುವುದಾಗಿ ಬರೆದುಕೊಂಡಿದ್ದಾರೆ. “ಭಗವಾನ್ ಗಣೇಶನನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಈ ಬಂಧನ ನಡೆದಿದೆ ಎಂದೂ ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದರು.

ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಗಿರೀಶ್ ಅವರ ಪೋಸ್ಟ್ 2 ಲಕ್ಷದ 70 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು.

ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಹಲವಾರು ಎಕ್ಸ್‌ ಬಳಕೆದಾರರು ಕೂಡ ವೈರಲ್ ಫೋಟೋ ಹಂಚಿಕೊಂಡು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಎಂದು ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (@blsantosh), ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ (@BYVijayendra), ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ (@Shehzad_Ind), ಪಕ್ಷದ ಬೆಂಗಳೂರು ಕೇಂದ್ರ ಸಂಸದ ಪಿ ಸಿ ಮೋಹನ್ (@PCMohanMP), ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (@shobabjp) ಫೋಟೋ ಹಂಚಿಕೊಂಡವರಲ್ಲಿ ಪ್ರಮುಖರು.

ಮಾಧ್ಯಮಗಳು ಕೂಡ ಘಟನೆಯ ಬಗ್ಗೆ ವರದಿ ಮಾಡಿತ್ತು. ಸುದ್ದಿ ಸಂಸ್ಥೆ ಎಎನ್‌ಐ (@ANI) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿತ್ತು.

ಸೆಪ್ಟೆಂಬರ್ 14ರಂದು ವರದಿ ಪ್ರಕಟಿಸಿದ್ದ ರಿಪಬ್ಲಿಕ್ ಟಿವಿ ಇಂಗ್ಲಿಷ್ “ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಗಣಪತಿಯನ್ನೂ ಕಂಬಿ ಹಿಂದೆ ತಳ್ಳಲಾಗಿದೆ” ಎಂಬ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿತ್ತು.

ಫ್ಯಾಕ್ಟ್‌ಚೆಕ್  : ಪ್ರಧಾನಿ ಮೋದಿ ಭಾಷಣದಲ್ಲಿ ಉಲ್ಲೇಖಿಸಿರುವ, ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಈ ಕುರಿತ ಮಾಧ್ಯಮ ವರದಿಗಳನ್ನು ಪರಿಶೀಲಿಸಿದಾಗ ” ಹಲವು ವರದಿಗಳು ನಮಗೆ ಲಭ್ಯವಾಗಿದೆ. ಈ ಪೈಕಿ ದಿ ನ್ಯೂಸ್ ಮಿನಿಟ್ ವೆಬ್‌ಸೈಟ್ “Controversy erupts in Bengaluru over Ganesha idol in police van: What really happened?” ಎಂಬ ಶೀರ್ಷಿಕೆಯ ವರದಿಯನ್ನು ನಾವು ಪರಿಶೀಲಿಸಿದ್ದೇವೆ.

ವರದಿಯಲ್ಲಿ “ಮಂಡ್ಯದ ಸೆಪ್ಟೆಂಬರ್ 11ರಂದು ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಾಟೆ ನಡೆದಿರುವುದನ್ನು ಖಂಡಿಸಿ ಸೆಪ್ಟೆಂಬರ್ 13ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ‘ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ’ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾ ನಿರತರು ಗಣೇಶ ಮೂರ್ತಿಯನ್ನು ಹೊತ್ತು ತಂದಿದ್ದರು. ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸುವಾಗ ಪೊಲೀಸರು ಗಣೇಶ ಮೂರ್ತಿಯನ್ನು ಎತ್ತಿಕೊಂಡು ಹೋಗಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಫೋಟೋ ವೈರಲ್ ಆಗಿದ್ದು, ಬಿಜೆಪಿ ನಾಯಕರು ಹಾಗೂ ಮತ್ತಿತರು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ” ಎಂದಿದೆ.

“ಹೈಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ ಸ್ವಾತಂತ್ರ್ಯ ಉದ್ಯಾನವದಲ್ಲಿ (ಫ್ರೀಡಂ ಪಾರ್ಕ್‌) ಮಾತ್ರ ಯಾವುದೇ ಪ್ರತಿಭಟನೆ ಮಾಡಬೇಕು. ಗಣೇಶ ಉತ್ಸವ ಸಮಿತಿಯವರು ನಿಯಮ ಉಲ್ಲಂಘಿಸಿ ಟೌನ್ ಹಾಲ್ ಬಳಿ ಪ್ರತಿಭಟಿಸಿದ್ದಕ್ಕೆ ಪೊಲೀಸರು ಅಡ್ಡಿಪಡಿಸಿದ್ದಾರೆ” ಎಂದೂ ವರದಿಯಲ್ಲಿ ತಿಳಿಸಲಾಗಿದೆ.

“ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 40 ಮಂದಿಯನ್ನು ಬಂಧಿಸಿದ್ದರು. ಅವರಿಂದ ವಶಪಡಿಸಿಕೊಂಡ ಗಣೇಶ ಮೂರ್ತಿಯನ್ನು ಹಲಸೂರು ಕೆರೆಯಲ್ಲಿ ವಿಸರ್ಜನೆ ಮಾಡಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ವೈರಲ್ ಫೋಟೋ ಮತ್ತು ಅದರ ಸುತ್ತಮುತ್ತ ಉಂಟಾಗಿರುವ ಗೊಂದಲದ ಕುರಿತು ಸೆಪ್ಟೆಂಬರ್ 15ರಂದು ಬೆಂಗಳೂರು ಕೇಂದ್ರೀಯ ವಿಭಾಗದ ಡಿಸಿಪಿ (@DCPCentralBCP)ಯವರ ಅಧಿಕೃತ ಎಕ್ಸ್ ಹ್ಯಾಂಡಲ್ ಸ್ಪಷ್ಟನೆ ಕೊಡಲಾಗಿತ್ತು.

“ಬೆಂಗಳೂರಿನ ಟೌನ್ ಹಾಲ್ ಬಳಿ ನಿಮಜ್ಜನಕ್ಕೆ ತೆರಳುತ್ತಿದ್ದ ಭಕ್ತರಿಂದ ಗಣೇಶ ಮೂರ್ತಿಯನ್ನು ಅಧಿಕಾರಿಗಳು ಕಸಿದುಕೊಂಡಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ಗಳ ಬಗ್ಗೆ ಸ್ಪಷ್ಟನೆ”

ಸೆಪ್ಟೆಂಬರ್ 13, 2024 ರಂದು, ಹಿಂದೂ ಗುಂಪುಗಳು ಬೆಂಗಳೂರಿನ ಟೌನ್ ಹಾಲ್‌ ಬಳಿ ನಾಗಮಂಗಲ ಗಣೇಶ ಮೆರವಣಿಗೆಯ ಘಟನೆಯನ್ನು ಖಂಡಿಸಿ, ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಪ್ರತಿಭಟಿಸಿದ್ದವು. ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಬಳಿಕ ಗಣಪತಿ ಮೂರ್ತಿಯನ್ನು ಅಧಿಕಾರಿಗಳು ವಿಧಿ ವಿಧಾನಗಳೊಂದಿಗೆ ನಿಮಜ್ಜನ ಮಾಡಿದ್ದಾರೆ” ಎಂದು ಡಿಸಿಪಿಯವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಲಾಗಿತ್ತು.

 

ಒಟ್ಟಿನಲ್ಲಿ , ನಾಗಮಂಗಲದ ಘಟನೆಯನ್ನು ಖಂಡಿಸಿ ಬೆಂಗಳೂರಿನ ಟೌನ್‌ಹಾಲ್‌ ಬಳಿ ಬೆಂಗಳೂರು ಗಣೇಶ ಉತ್ಸವ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ತಂದಿದ್ದ ಗಣೇಶ ಮೂರ್ತಿಯನ್ನು ವಶಪಡಿಸಿಕೊಂಡಿದ್ದ ಪೊಲೀಸರು, ಅದನ್ನು ಖಾಲಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಪೋಟೋವನ್ನು ಹಂಚಿಕೊಂಡ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ” ಕಾಂಗ್ರೆಸ್ ಆಡಳಿತ ಕರ್ನಾಟಕದಲ್ಲಿ ಗಣೇಶ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ಗಣೇಶ ಮೂರ್ತಿಯನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ” ಎಂದು ಸುಳ್ಳು ಸಂದೇಶ ಹಂಚಿಕೊಂಡಿದ್ದರು. ಇದನ್ನೇ ಭಾಷಣದಲ್ಲಿ ಉಲ್ಲೇಖಿಸುವ ಮೂಲಕ ಸುಳ್ಳು ಸುದ್ದಿಗೆ ಪ್ರಧಾನಿ ಧನಿಗೂಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...