Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ದನಿಗೂಡಿಸಿದ ಪ್ರಧಾನಿ ಮೋದಿ!

- Advertisement -
- Advertisement -

ಸೆಪ್ಟೆಂಬರ್ 14, 2024 ರಂದು ಹರಿಯಾಣದ ಕುರುಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಗಣಪತಿಯನ್ನೂ ಜೈಲಿಗೆ ಹಾಕಲಾಗುತ್ತಿದೆ. ಗಣಪತಿಯನ್ನು ಪೊಲೀಸ್ ವ್ಯಾನಿನಲ್ಲಿಟ್ಟು ಬೀಗ ಹಾಕಿದ್ದಾರೆ. ಇಡೀ ರಾಷ್ಟ್ರ ಗಣೇಶ ಉತ್ಸವವನ್ನು ಆಚರಿಸುತ್ತಿದ್ದರೆ, ವಿಘ್ನ ವಿನಾಶಕನಾದ ಗಣಪತಿಯನ್ನು ಪೂಜಿಸಲು ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಯಾವ ಹಂತಕ್ಕೂ ಹೋಗಬಹುದು” ಎಂದು ಹೇಳಿದ್ದರು.

ಸೆಪ್ಟೆಂಬರ್ 17ರಂದು ಒಡಿಶಾದ ಭುವನೇಶ್ವರದಲ್ಲಿ ಭಾಷಣ ಮಾಡುವಾಗಲೂ ಪ್ರಧಾನಿ ಈ ಮಾತುಗಳು  ಪುನರುಚ್ಚರಿಸಿದ್ದರು “ಅವರ (ಕಾಂಗ್ರೆಸ್) ಸರ್ಕಾರವು ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಗಣೇಶನ ವಿಗ್ರಹವನ್ನು ಕಂಬಿ ಹಿಂದೆ ಇರಿಸುವ ಮೂಲಕ ದೊಡ್ಡ ಅಪರಾಧ ಮಾಡಿದ್ದಾರೆ” ಎಂದಿದ್ದರು.

ಹರಿಯಾಣದಲ್ಲಿ ಪ್ರಧಾನಿ ಮೋದಿ ಹೇಳಿಕೆ ಕೊಟ್ಟಾಗ ಕರ್ನಾಟಕದಲ್ಲಿ ಗಣೇಶ ಮೂರ್ತಿಯನ್ನು ಪೊಲೀಸ್ ವ್ಯಾನ್‌ನಲ್ಲಿಟ್ಟ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಸೆಪ್ಟೆಂಬರ್ 13, 2024 ರಂದು ಎಕ್ಸ್‌ನಲ್ಲಿ ವೈರಲ್ ಫೋಟೋ ಹಂಚಿಕೊಂಡಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ “ಕಾಂಗ್ರೆಸ್ ಹಿಂದೂಗಳ ನಂಬಿಕೆಯನ್ನು ಅವಮಾನಿಸಿದೆ” ಎಂದು ಬರೆದುಕೊಂಡಿದ್ದರು.

ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ ಗಿರೀಶ್ ಭಾರದ್ವಾಜ್ (@Girishvhp) ಎಂಬವರು ಕೂಡ ಸೆ.13, 2024ರಂದು ಹಂಚಿಕೊಂಡಿದ್ದರು. ಗಿರೀಶ್ ಅವರು ತಮ್ಮ ಎಕ್ಸ್ ಬಯೋದಲ್ಲಿ ‘ಸ್ವಯಂಸೇವಕ’ ಹಾಗೂ  ವಿಶ್ವ ಹಿಂದೂ ಪರಿಷತ್‌ನೊಂದಿಗೆ ಗುರುತಿಸಿಕೊಂಡಿರುವುದಾಗಿ ಬರೆದುಕೊಂಡಿದ್ದಾರೆ. “ಭಗವಾನ್ ಗಣೇಶನನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಈ ಬಂಧನ ನಡೆದಿದೆ ಎಂದೂ ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದರು.

ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಗಿರೀಶ್ ಅವರ ಪೋಸ್ಟ್ 2 ಲಕ್ಷದ 70 ಸಾವಿರ ವೀಕ್ಷಣೆಗಳನ್ನು ಪಡೆದಿತ್ತು.

ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಹಲವಾರು ಎಕ್ಸ್‌ ಬಳಕೆದಾರರು ಕೂಡ ವೈರಲ್ ಫೋಟೋ ಹಂಚಿಕೊಂಡು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಎಂದು ಟೀಕಿಸಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (@blsantosh), ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ (@BYVijayendra), ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ (@Shehzad_Ind), ಪಕ್ಷದ ಬೆಂಗಳೂರು ಕೇಂದ್ರ ಸಂಸದ ಪಿ ಸಿ ಮೋಹನ್ (@PCMohanMP), ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ (@shobabjp) ಫೋಟೋ ಹಂಚಿಕೊಂಡವರಲ್ಲಿ ಪ್ರಮುಖರು.

ಮಾಧ್ಯಮಗಳು ಕೂಡ ಘಟನೆಯ ಬಗ್ಗೆ ವರದಿ ಮಾಡಿತ್ತು. ಸುದ್ದಿ ಸಂಸ್ಥೆ ಎಎನ್‌ಐ (@ANI) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿತ್ತು.

ಸೆಪ್ಟೆಂಬರ್ 14ರಂದು ವರದಿ ಪ್ರಕಟಿಸಿದ್ದ ರಿಪಬ್ಲಿಕ್ ಟಿವಿ ಇಂಗ್ಲಿಷ್ “ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಗಣಪತಿಯನ್ನೂ ಕಂಬಿ ಹಿಂದೆ ತಳ್ಳಲಾಗಿದೆ” ಎಂಬ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿತ್ತು.

ಫ್ಯಾಕ್ಟ್‌ಚೆಕ್  : ಪ್ರಧಾನಿ ಮೋದಿ ಭಾಷಣದಲ್ಲಿ ಉಲ್ಲೇಖಿಸಿರುವ, ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಈ ಕುರಿತ ಮಾಧ್ಯಮ ವರದಿಗಳನ್ನು ಪರಿಶೀಲಿಸಿದಾಗ ” ಹಲವು ವರದಿಗಳು ನಮಗೆ ಲಭ್ಯವಾಗಿದೆ. ಈ ಪೈಕಿ ದಿ ನ್ಯೂಸ್ ಮಿನಿಟ್ ವೆಬ್‌ಸೈಟ್ “Controversy erupts in Bengaluru over Ganesha idol in police van: What really happened?” ಎಂಬ ಶೀರ್ಷಿಕೆಯ ವರದಿಯನ್ನು ನಾವು ಪರಿಶೀಲಿಸಿದ್ದೇವೆ.

ವರದಿಯಲ್ಲಿ “ಮಂಡ್ಯದ ಸೆಪ್ಟೆಂಬರ್ 11ರಂದು ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಾಟೆ ನಡೆದಿರುವುದನ್ನು ಖಂಡಿಸಿ ಸೆಪ್ಟೆಂಬರ್ 13ರಂದು ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ‘ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ’ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾ ನಿರತರು ಗಣೇಶ ಮೂರ್ತಿಯನ್ನು ಹೊತ್ತು ತಂದಿದ್ದರು. ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸುವಾಗ ಪೊಲೀಸರು ಗಣೇಶ ಮೂರ್ತಿಯನ್ನು ಎತ್ತಿಕೊಂಡು ಹೋಗಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಫೋಟೋ ವೈರಲ್ ಆಗಿದ್ದು, ಬಿಜೆಪಿ ನಾಯಕರು ಹಾಗೂ ಮತ್ತಿತರು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ” ಎಂದಿದೆ.

“ಹೈಕೋರ್ಟ್ ಆದೇಶದಂತೆ ಬೆಂಗಳೂರು ನಗರದಲ್ಲಿ ಸ್ವಾತಂತ್ರ್ಯ ಉದ್ಯಾನವದಲ್ಲಿ (ಫ್ರೀಡಂ ಪಾರ್ಕ್‌) ಮಾತ್ರ ಯಾವುದೇ ಪ್ರತಿಭಟನೆ ಮಾಡಬೇಕು. ಗಣೇಶ ಉತ್ಸವ ಸಮಿತಿಯವರು ನಿಯಮ ಉಲ್ಲಂಘಿಸಿ ಟೌನ್ ಹಾಲ್ ಬಳಿ ಪ್ರತಿಭಟಿಸಿದ್ದಕ್ಕೆ ಪೊಲೀಸರು ಅಡ್ಡಿಪಡಿಸಿದ್ದಾರೆ” ಎಂದೂ ವರದಿಯಲ್ಲಿ ತಿಳಿಸಲಾಗಿದೆ.

“ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 40 ಮಂದಿಯನ್ನು ಬಂಧಿಸಿದ್ದರು. ಅವರಿಂದ ವಶಪಡಿಸಿಕೊಂಡ ಗಣೇಶ ಮೂರ್ತಿಯನ್ನು ಹಲಸೂರು ಕೆರೆಯಲ್ಲಿ ವಿಸರ್ಜನೆ ಮಾಡಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ವೈರಲ್ ಫೋಟೋ ಮತ್ತು ಅದರ ಸುತ್ತಮುತ್ತ ಉಂಟಾಗಿರುವ ಗೊಂದಲದ ಕುರಿತು ಸೆಪ್ಟೆಂಬರ್ 15ರಂದು ಬೆಂಗಳೂರು ಕೇಂದ್ರೀಯ ವಿಭಾಗದ ಡಿಸಿಪಿ (@DCPCentralBCP)ಯವರ ಅಧಿಕೃತ ಎಕ್ಸ್ ಹ್ಯಾಂಡಲ್ ಸ್ಪಷ್ಟನೆ ಕೊಡಲಾಗಿತ್ತು.

“ಬೆಂಗಳೂರಿನ ಟೌನ್ ಹಾಲ್ ಬಳಿ ನಿಮಜ್ಜನಕ್ಕೆ ತೆರಳುತ್ತಿದ್ದ ಭಕ್ತರಿಂದ ಗಣೇಶ ಮೂರ್ತಿಯನ್ನು ಅಧಿಕಾರಿಗಳು ಕಸಿದುಕೊಂಡಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ಗಳ ಬಗ್ಗೆ ಸ್ಪಷ್ಟನೆ”

ಸೆಪ್ಟೆಂಬರ್ 13, 2024 ರಂದು, ಹಿಂದೂ ಗುಂಪುಗಳು ಬೆಂಗಳೂರಿನ ಟೌನ್ ಹಾಲ್‌ ಬಳಿ ನಾಗಮಂಗಲ ಗಣೇಶ ಮೆರವಣಿಗೆಯ ಘಟನೆಯನ್ನು ಖಂಡಿಸಿ, ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಪ್ರತಿಭಟಿಸಿದ್ದವು. ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಬಳಿಕ ಗಣಪತಿ ಮೂರ್ತಿಯನ್ನು ಅಧಿಕಾರಿಗಳು ವಿಧಿ ವಿಧಾನಗಳೊಂದಿಗೆ ನಿಮಜ್ಜನ ಮಾಡಿದ್ದಾರೆ” ಎಂದು ಡಿಸಿಪಿಯವರ ಎಕ್ಸ್‌ ಹ್ಯಾಂಡಲ್‌ನಲ್ಲಿ ಹೇಳಲಾಗಿತ್ತು.

 

ಒಟ್ಟಿನಲ್ಲಿ , ನಾಗಮಂಗಲದ ಘಟನೆಯನ್ನು ಖಂಡಿಸಿ ಬೆಂಗಳೂರಿನ ಟೌನ್‌ಹಾಲ್‌ ಬಳಿ ಬೆಂಗಳೂರು ಗಣೇಶ ಉತ್ಸವ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ತಂದಿದ್ದ ಗಣೇಶ ಮೂರ್ತಿಯನ್ನು ವಶಪಡಿಸಿಕೊಂಡಿದ್ದ ಪೊಲೀಸರು, ಅದನ್ನು ಖಾಲಿ ಪೊಲೀಸ್ ವ್ಯಾನ್‌ನಲ್ಲಿಟ್ಟಿದ್ದರು. ಈ ಕುರಿತ ಪೋಟೋವನ್ನು ಹಂಚಿಕೊಂಡ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ” ಕಾಂಗ್ರೆಸ್ ಆಡಳಿತ ಕರ್ನಾಟಕದಲ್ಲಿ ಗಣೇಶ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ಗಣೇಶ ಮೂರ್ತಿಯನ್ನು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ” ಎಂದು ಸುಳ್ಳು ಸಂದೇಶ ಹಂಚಿಕೊಂಡಿದ್ದರು. ಇದನ್ನೇ ಭಾಷಣದಲ್ಲಿ ಉಲ್ಲೇಖಿಸುವ ಮೂಲಕ ಸುಳ್ಳು ಸುದ್ದಿಗೆ ಪ್ರಧಾನಿ ಧನಿಗೂಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...