HomeUncategorizedಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ : ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ : ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

- Advertisement -
- Advertisement -

ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆರಂಭಿಕ ಮುನ್ನಡೆ ಗಳಿಸಿದ್ದಾರೆ.

ದಿಸ್ಸನಾಯಕೆ ಅವರು ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರೆಮುನಾ (ಜೆವಿಪಿ) ಪಕ್ಷದಿಂದ ಕಣಕ್ಕಿಳಿದಿದ್ದಾರೆ.

ಶ್ರೀಲಂಕಾದ ಚುನಾವಣಾ ಆಯೋಗದ ಪ್ರಕಾರ ಇದುವರೆಗೆ ಎಣಿಕೆಯಾದ ಮತಗಳಲ್ಲಿ ಶೇ. 53 ರಷ್ಟನ್ನು ದಿಸ್ಸನಾಯಕೆ ಪಡೆದುಕೊಂಡಿದ್ದು, ಮುನ್ನಡೆಯಲ್ಲಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಪ್ರತಿಪಕ್ಷದ ನಾಯಕ ಸಜಿತ್ ಪ್ರೇಮದಾಸ ಶೇ. 22ರಷ್ಟು ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದರೆ, ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮೂರನೇ ಸ್ಥಾನದಲ್ಲಿದ್ದಾರೆ.

ಚುನಾವಣಾ ಆಯೋಗದ ಪ್ರಕಾರ, ಅರ್ಹ 17 ಮಿಲಿಯನ್ ಜನರಲ್ಲಿ ಸುಮಾರು 75 ಪ್ರತಿಶತದಷ್ಟು ಜನರು ಶನಿವಾರ ನಡೆದ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ.

55 ವರ್ಷದ ದಿಸ್ಸನಾಯಕೆ ಅವರ ಪಕ್ಷವು ಶ್ರೀಲಂಕಾ ಸಂಸತ್‌ನಲ್ಲಿ ಮೂರು ಸ್ಥಾನಗಳನ್ನು ಹೊಂದಿದೆ. ಭ್ರಷ್ಟಾಚಾರ ವಿರೋಧಿ ಕಠಿಣ ಕ್ರಮಗಳು ಮತ್ತು ಜನಸ್ನೇಹಿ ನೀತಿಗಳನ್ನು ರೂಪಿಸುವುದಾಗಿ ದಿಸ್ಸನಾಯಕೆ ಚುನಾವಣೆ ಪ್ರಚಾರದ ವೇಳೆ ಭರವಸೆ ನೀಡಿದ್ದಾರೆ.

ದಿಸ್ಸನಾಯಕೆ ಅವರ ಪಕ್ಷ ಸರ್ಕಾರದ ಜನರ ವಿರೋಧಿ ತೆರಿಗೆ ಮತ್ತು ಆರ್ಥಿಕ ನೀತಿಗಳ ವಿರುದ್ಧ ಹೋರಾಟ ನಡೆಸಿ ಶ್ರೀಲಂಕಾ ಜನತೆಯ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ.

2022ರಲ್ಲಿ ಶ್ರೀಲಂಕಾದಲ್ಲಿ ತೀವ್ರ ಅರ್ಥಿಕ ಬಿಕ್ಕಟ್ಟು ಉಂಟಾಗಿ ಹಣದುಬ್ಬರ ಗಗನಕ್ಕೇರಿತ್ತು. ಜನರಿಗೆ ಅಗತ್ಯ ವಸ್ತುಗಳ ಕೊರತೆ ಉಂಟಾಗಿ ಪರದಾಡುವಂತಾಗಿತ್ತು. ಆಗ ಸರ್ಕಾರದ ವಿರುದ್ದ ಹೋರಾಟ ರೂಪಿಸಿದ್ದರ ಹಿಂದೆ ದಿಸ್ಸನಾಯಕೆ ಅವರ ಪಾತ್ರ ದೊಡ್ಡದಿತ್ತು. ಅವರು ನೇರವಾಗಿ ದಂಗೆಯೇಳದಿದ್ದರೂ, ಜನರು ಹೋರಾಟ ಕೈಗೊಂಡಿದ್ದರ ಹಿಂದೆ ಅವರ ಪ್ರೇರೇಪಣೆಯಿತ್ತು ಎಂದು ವರದಿಗಳು ಹೇಳಿವೆ.

ರಾಜಪಕ್ಸೆ ಅವರ ರಾಜೀನಾಮೆಯ ನಂತರ ಉಂಟಾದ ನಾಯಕತ್ವದ ಕೊರತೆಯು ದಿಸ್ಸನಾಯಕೆಗೆ ಮತ್ತು ಅವರ ಪಕ್ಷಕ್ಕೆ ದೊಡ್ಡ ಅವಕಾಶ ಮಾಡಿ ಕೊಟ್ಟಿತು. ಭ್ರಮನಿರಸನಗೊಂಡ ನಾಗರಿಕರ ಜೊತೆ ನಿಂತ ದಿಸ್ಸನಾಯಕೆ,  ಸಾಮಾಜಿಕ ನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟ ಕೈಗೊಂಡಿದ್ದರು. ಅವೆಲ್ಲವೂ, ಈ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಗೊಂಡಿರುವ ಲಕ್ಷಣ ಕಾಣುತ್ತಿದೆ.

2022ರಲ್ಲಿ ಬೃಹತ್ ಪ್ರತಿಭಟನೆ ನಡೆದು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರನ್ನು ಪದಚ್ಯುತಗೊಳಿಸಿದ ನಂತರ, ಮೊದಲ ಬಾರಿಗೆ ದ್ವೀಪ ರಾಷ್ಟ್ರದಲ್ಲಿ ಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ : ಲೆಬನಾನ್ ಪೇಜರ್ ಸ್ಫೋಟಕ್ಕೆ ಸಂಬಂಧಿಸಿದಂತೆ ವಯನಾಡಿನ ಮಲಯಾಳಿ ಯುವಕನ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...