Homeಫ್ಯಾಕ್ಟ್‌ಚೆಕ್FACT CHECK : CPI(M) ನಾಯಕ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ನರೇ? ವೈರಲ್ ಫೋಟೋದ ಸತ್ಯಾಸತ್ಯತೆ ಏನು?

FACT CHECK : CPI(M) ನಾಯಕ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ನರೇ? ವೈರಲ್ ಫೋಟೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಸೆಪ್ಟೆಂಬರ್ 12 ರಂದು ತನ್ನ 72ನೇ ವಯಸ್ಸಿನಲ್ಲಿ ನಿಧನರಾದರು. ಅವರ ನಿಧನದ ನಂತರ, ಪಾರ್ಥಿವ ಶರೀರವನ್ನು ದೆಹಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಗೆ ‘ಶವಪೆಟ್ಟಿಗೆ’ಯಲ್ಲಿ ಕೊಂಡೊಯ್ಯಲಾಗಿತ್ತು. ವಿವಿಯ ವಿದ್ಯಾರ್ಥಿಗಳು ಮಾರ್ಕ್ಸ್‌ವಾದಿ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದ್ದರು.

ಈ ಕುರಿತ ಫೋಟೋವನ್ನು ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳಲಾಗಿತ್ತು. ಫೋಟೋ ಗಮನಿಸಿದ ಅನೇಕ ಬಲಪಂಥೀಯರು ಸೀತಾರಾಂ ಯೆಚೂರಿ ಕ್ರೈಸ್ತ ಧರ್ಮದವರು, ರಾಜಕೀಯ ಜೀವನದಲ್ಲಿ ಹಿಂದೂ ಹೆಸರಿಟ್ಟುಕೊಂಡು ಹಿಂದೂಗಳಿಗೆ ವಂಚನೆ ಮಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ಸದಾ ಸುಳ್ಳು ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್ ಬಳಕೆದಾರ ರಿಶಿ ಬಾಗ್ರೀ ಸೆಪ್ಟೆಂಬರ್ 14ರಂದು ಜೆಎನ್‌ಎಸ್‌ಯು ಪೋಸ್ಟ್‌ಗೆ ಪ್ರತಿಕ್ರಿಯಿಸಿ “ಹಾಗಾದರೆ ಸೀತಾರಾಮ್ ಯೆಚೂರಿ ಅವರು ಕ್ರಿಶ್ಚಿಯನ್. ಅವರು ಹಿಂದೂ ಧರ್ಮವನ್ನು ಏಕೆ ದ್ವೇಷಿಸುತ್ತಿದ್ದರು ಎಂಬುದರಲ್ಲಿ ಆಶ್ಚರ್ಯವಿಲ್ಲ. ಅಂದಹಾಗೆ, ಅವರು ತಮ್ಮ ಸಕ್ರಿಯ ರಾಜಕೀಯ ಜೀವನದಲ್ಲಿ ತಮ್ಮ ಧಾರ್ಮಿಕ ಗುರುತನ್ನು ಏಕೆ ಮರೆ ಮಾಚುತ್ತಿದ್ದರು?” ಎಂದು ಬರೆದುಕೊಂಡಿದ್ದರು.

ಸೀತಾರಾಂ ಯೆಚೂರಿ ಅವರಿಗೆ ಜೆಎನ್‌ಯುನಲ್ಲಿ ಗೌರವ ಸಲ್ಲಿಸಿದ್ದ ಫೋಟೋವನ್ನು ಸೆ.14ರಂದು ಎಕ್ಸ್ ಹಂಚಿಕೊಂಡಿದ್ದ ಮತ್ತೊಂದು ಬಲಪಂಥೀಯ ಎಕ್ಸ್ ಖಾತೆ ಓಕ್‌ಫ್ಲಿಕ್ಸ್ (@wokeflix) “ಹೆಸರು: ಸೀತಾರಾಮ್ ಯೆಚೂರಿ, ಧರ್ಮ: ಕ್ರಿಶ್ಚಿಯನ್ : ಇಷ್ಟು ದಿನ ಅಕ್ಕಿ ಮೂಟೆಯಾಗಿ ತನ್ನ ಹಿಂದೂ ಹೆಸರಿನಿಂದ ಎಷ್ಟು ಜನರನ್ನು ಮೂರ್ಖರನ್ನಾಗಿಸಿದ್ದಾನೆ ಎಂದು ಊಹಿಸಿಕೊಳ್ಳಿ” ಎಂದು ಬರೆದುಕೊಂಡಿತ್ತು.

ಇವಿಷ್ಟೇ ಅಲ್ಲದೆ, ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ಸೀತಾರಾಂ ಯೆಚೂರಿ ಕ್ರೈಸ್ತ ಧರ್ಮದವರು ಎಂದು ಪ್ರತಿಪಾದಿಸಿ ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಸೀತಾರಾಂ ಯೆಚೂರಿ ಯಾವ ಧರ್ಮದವರು? ಅವರ ಕೌಟುಂಬಿಕ ಹಿನ್ನೆಲೆ ಏನು? ಎಂಬುವುದರ ಬಗ್ಗೆ 2017ರಲ್ಲಿ ರಾಜ್ಯಸಭೆಯಲ್ಲಿ ಮಾಡಿದ ವಿದಾಯ ಭಾಷಣದಲ್ಲಿ ಸ್ವತಃ ಯೆಚೂರಿ ಅವರೇ ವಿವರಿಸಿದ್ದಾರೆ. ಅವರ ಭಾಷಣವನ್ನು ಕೆಳಗೆ ಅಕ್ಷರ ರೂಪದಲ್ಲಿ ಕೊಡಲಾಗಿದೆ.

“ಈಗ ಚೆನ್ನೈ ಎಂದು ಕರೆಯಲ್ಪಡುವ ಮದ್ರಾಸ್‌ನ ಜನರಲ್ ಆಸ್ಪತ್ರೆಯಲ್ಲಿ ತೆಲುಗು ಮಾತನಾಡುವ ಬ್ರಾಹ್ಮಣ ಕುಟುಂಬದಲ್ಲಿ ನಾನು ಜನಿಸಿದೆ. ನನ್ನ ಅಜ್ಜ ನ್ಯಾಯಾಧೀಶರು…ಗುಂಟೂರಿಗೆ ಹೋಗಬೇಕಾಗಿತ್ತು. 1954ರಲ್ಲಿ ನಾವು ಅಲ್ಲಿಗೆ ಸ್ಥಳಾಂತರಗೊಂಡೆವು. ನಾನು 1952ರಲ್ಲಿ ಜನಿಸಿದೆ. 1956ರಲ್ಲಿ ನಾವು ಹೈದರಾಬಾದ್‌ಗೆ ಸ್ಥಳಾಂತರಗೊಂಡೆವು. ಸ್ವಾತಂತ್ರ್ಯ ದೊರೆತ ಆರಂಭದಲ್ಲಿ ನಾನು ಹೈದರಾಬಾದ್‌ನ ನಿಝಾಮರ ಆಡಳಿತಡಿ ಇಸ್ಲಾಮಿಕ್ ಸಂಸ್ಕೃತಿಯಲ್ಲಿ ನನ್ನ ಶಾಲಾ ಶಿಕ್ಷಣ ಪಡೆದೆ. ನಂತರ ನಾನು ದೆಹಲಿಗೆ ಬಂದೆ, ಇಲ್ಲಿ ಓದಿದೆ. ನಾನು ಒಬ್ಬರು ವ್ಯಕ್ತಿಯನ್ನು ಮದುವೆಯಾಗಿದ್ದೇನೆ. ಆಕೆಯ ತಂದೆ ಇಸ್ಲಾಮಿಕ್ ಸೂಫಿ ಪಂಥದವರು ಮತ್ತು ಅವರ ಉಪನಾಮ ಚಿಸ್ತಿ… ಆಕೆಯ ತಾಯಿ ರಜಪೂತ ಸಮುದಾಯದವರು. 8ನೇ ಶತಮಾನದಲ್ಲಿ ವಲಸೆ ಬಂದ ಮೈಸೂರಿನ ರಜಪೂತರು. ನಾವೀಗ 21ನೇ ಶತಮಾನದಲ್ಲಿದ್ದೇವೆ. ನಾನು ಈ ಮಹಿಳೆಯನ್ನು ಮದುವೆಯಾಗಿರುವ ದಕ್ಷಿಣ ಭಾರತದ ಬ್ರಾಹ್ಮಣ ಕುಟುಂಬದಿಂದ ಬಂದವನು. ಹಾಗಾಗಿ, ನನ್ನ ಮಗನನ್ನು ಏನೆಂದು ಕರೆಯುತ್ತಾರೆ ಸರ್?. ನನ್ನ ಮಗನನ್ನು ಭಾರತೀಯ ಎನ್ನುವುದಕ್ಕಿಂತ ಹೆಚ್ಚಾಗಿ ಹೇಳಲು ಸಾಧ್ಯವೇ ಇಲ್ಲ. ಇದು ನಮ್ಮ ದೇಶ. ಇದು ನನ್ನ ಉದಾಹರಣೆ, ಇಂತಹ ಎಷ್ಟು ಜನರಿದ್ದಾರೆ ನೋಡಿ.”

2017ರಲ್ಲಿ ಆಗಿನ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ನೀಡಿದ ಹೇಳಿಕೆಯನ್ನು ಟೀಕಿಸಿದ್ದ ಯೆಚೂರಿ ಅವರು ‘ನಾನು ನಾಸ್ತಿಕ’ ಎಂದು ಎಕ್ಸ್‌ನಲ್ಲಿ ತಿಳಿಸಿದ್ದರು.

ಸೀತಾರಾಮ್ ಯೆಚೂರಿ ಕ್ರೈಸ್ತ ಧರ್ಮದವರು ಎಂಬ ವಾದದ ಕುರಿತು ಖ್ಯಾತ ಫ್ಯಾಕ್ಟ್ ಚೆಕ್ ಸಂಸ್ಥೆ ಆಲ್ಟ್ ನ್ಯೂಸ್ ಸಿಪಿಐ(ಎಂ) ಪಶ್ಚಿಮ ಬಂಗಾಳ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಅವರಿಂದ ಪ್ರತಿಕ್ರಿಯೆ ಕೇಳಿದೆ. “ಈ ವೇಳೆ ಮಾತನಾಡಿದ ಸಲೀಂ ಅವರು “ನವ ಭಾರತ’ದ ವಿಷಕಾರಿ ಸಾಮಾಜಿಕ-ರಾಜಕೀಯ ವಾತಾವರಣದಲ್ಲಿ, ಎಲ್ಲವನ್ನೂ ಧರ್ಮದೊಂದಿಗೆ ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಸಾಂಪ್ರದಾಯಿಕವಾಗಿ, ಧಾರ್ಮಿಕ ನಂಬಿಕೆಗಳನ್ನು ಮಾನವ ಮತ್ತು ವೈಯಕ್ತಿಕ  ಹಾಗೂ ಪೂಜಕ ಮತ್ತು ಪೂಜಿಸಲ್ಪಡುವುದರ ನಡುವಿನ ಸಂಬಂಧ ಎಂದು ಪರಿಗಣಿಸಲಾಗುತ್ತದೆ. ಕಾಮ್ರೇಡ್ ಸೀತಾರಾಂ ಯೆಚೂರಿ ಅವರೇ ತಮ್ಮ ರಾಜ್ಯಸಭಾ ಭಾಷಣದಲ್ಲಿ ತಮ್ಮ ಕೌಟುಂಬಿಕ ಹಿನ್ನೆಲೆ ವಿವರಿಸಿದ್ದಾರೆ. ಇನ್ನು ಕ್ರೈಸ್ತರ ರೀತಿಯ ಶವಪೆಟ್ಟಿಗೆ ಬಳಸಿದ್ದರ ಬಗ್ಗೆ ಪ್ರಶ್ನೆ ಎತ್ತಲಾಗಿದೆ. ಸಂಕುಚಿತ ನಂಬಿಕೆಗಳ ಆಧಾರದ ಮೇಲೆ ಎಲ್ಲವನ್ನೂ ವಿಭಜಿಸಲು ಬಯಸುವವರನ್ನು ಹೊರತು, ಶವ ಪೆಟ್ಟಿಗೆಗೆ ಯಾವುದೇ ನಿರ್ದಿಷ್ಟ ಧರ್ಮವಿಲ್ಲ” ಎಂದು ಹೇಳಿದ್ದಾರೆ.

ಸೀತಾರಾಂ ಯೆಚೂರಿಗೆ ಶವಪೆಟ್ಟಿಗೆ ಬಳಸಿದ್ದು ಏಕೆ?

ದೆಹಲಿ ಏಮ್ಸ್‌ನ ಮಾಧ್ಯಮ ಉಸ್ತುವಾರಿ ಮತ್ತು ಪ್ರಾಧ್ಯಾಪಕಿ ಡಾ. ರಿಮಾ ದಾದಾ ಅವರ ಪ್ರಕಾರ, ಸೀತಾರಾಂ ಯೆಚೂರಿ ಅವರ ಕುಟುಂಬವು ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಿದೆ. ಹಾಗಾಗಿ, ದೇಹವನ್ನು ರಕ್ಷಿಸಿಡಬೇಕಾದ ಅಗತ್ಯವಿದೆ. ಬೋಧನಾ ಉದ್ದೇಶಗಳಿಗಾಗಿ ಸಂರಕ್ಷಿಸಿಡಲು ಕೆಲ ಚುಚ್ಚು ಮದ್ದುಗಳನ್ನು ದೇಹಕ್ಕೆ ಚುಚ್ಚಲಾಗುತ್ತದೆ. ಹಾಗಾಗಿ, ದೇಹವನ್ನು ಶವಪೆಟ್ಟಿಗೆಯಲ್ಲಿ ಇಡಲಾಗಿತ್ತು ಎಂದು ತಿಳಿಸಿದ್ದಾರೆ. ಯೆಚೂರಿ ಅವರ ಕುಟುಂಬದ ನಿರ್ಧಾರವನ್ನು ರಿಮಾ ಅವರು ಶ್ಲಾಘಿಸಿದ್ದಾರೆ.

‘ದಿ ಹಿಂದೂ ಪತ್ರಿಕೆ’ಯ ವರದಿಯೊಂದರ ಪ್ರಕಾರ, ಸೀತಾರಾಂ ಯೆಚೂರಿ ಅವರ ದೇಹವನ್ನು ಎಮ್ಸ್‌ಗೆ ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಿದ್ದರಿಂದ ಯಾವುದೇ ಅಂತಿಮ ವಿಧಿಗಳನ್ನು ನಡೆಸಿಲ್ಲ. ಅವರ ಮರಣದ ಒಂದು ದಿನದ ನಂತರ, ದೇಹವನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಮತ್ತು ನಂತರ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತ್ತು. ಸೆಪ್ಟೆಂಬರ್ 14, ಶನಿವಾರದಂದು ದೇಹವನ್ನು ದೆಹಲಿಯ ಎಕೆಜಿ ಭವನದಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ತರಲಾಗಿತ್ತು.

ಒಟ್ಟಿನಲ್ಲಿ ಶವ ಪೆಟ್ಟಿಗೆ ಬಳಸಿದ್ದ ಕಾರಣಕ್ಕೆ ಬಲಪಂಥೀಯರು ಸೀತಾರಾಂ ಯೆಚೂರಿ ಕ್ರೈಸ್ತರು ಎಂದು ಸುದ್ದಿ ಹಬ್ಬಿಸಿದ್ದರು. ಅಸಲಿಗೆ ಯೆಚೂರಿ ಯಾವುದೇ ಧರ್ಮದ ಅನುಯಾಯಿ ಎಂದು ಗುರುತಿಸಿಕೊಂಡಿರಲಿಲ್ಲ. ಅವರೇ ಹೇಳಿದಂತೆ, ಯೆಚೂರಿ ಹುಟ್ಟಿದ್ದು ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ. ಆದರೆ, ಅವರು ಧರ್ಮದಲ್ಲಿ ಗುರುತಿಸಿಕೊಂಡಿರಲಿಲ್ಲ. ಅವರು ಸತ್ತಾಗ ಯಾವುದೇ ಧರ್ಮದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ಮಾಡಿಲ್ಲ. ದೇಹವನ್ನು ದೆಹಲಿಯ ಏಮ್ಸ್ ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ದಾನ ಮಾಡಲಾಗಿದೆ.

ಇದನ್ನೂ ಓದಿ | FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...