Homeಮುಖಪುಟಅಲ್-ಜಝೀರಾ ಕಚೇರಿಗೆ ದಾಳಿ ನಡೆಸಿದ ಇಸ್ರೇಲಿ ಪಡೆ : 45 ದಿನಗಳೊಳಗೆ ಮುಚ್ಚುವಂತೆ ಆದೇಶ

ಅಲ್-ಜಝೀರಾ ಕಚೇರಿಗೆ ದಾಳಿ ನಡೆಸಿದ ಇಸ್ರೇಲಿ ಪಡೆ : 45 ದಿನಗಳೊಳಗೆ ಮುಚ್ಚುವಂತೆ ಆದೇಶ

- Advertisement -
- Advertisement -

ಕತಾರ್ ಮೂಲದ ಖ್ಯಾತ ಸುದ್ದಿ ನೆಟ್‌ವರ್ಕ್ ಅಲ್-ಜಝೀರಾದ ವೆಸ್ಟ್ ಬ್ಯಾಂಕ್‌ನ ರಾಮಲ್ಲಾಹ್ ನಗರದಲ್ಲಿರುವ ಕಚೇರಿ ಮೇಲೆ ಭಾನುವಾರ ದಾಳಿ ನಡೆಸಿರುವ ಇಸ್ರೇಲಿ ಪಡೆಗಳು, ಮುಂದಿನ 45 ದಿನಗಳೊಳಗೆ ಕಚೇರಿ ಮುಚ್ಚುವಂತೆ ಆದೇಶಿಸಿರುವುದಾಗಿ ವರದಿಯಾಗಿದೆ.

ಸುದ್ದಿ ಸಂಸ್ಥೆ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದಾಗಿ ಆರೋಪಿಸಿ ಮುಚ್ಚಲು ಆದೇಶಿಸಿದ್ದಾರೆ ಎಂದು ಅಲ್-ಜಝೀರಾದ ವೆಸ್ಟ್ ಬ್ಯಾಂಕ್ ಬ್ಯೂರೋ ಮುಖ್ಯಸ್ಥ ವಾಲಿದ್ ಅಲ್-ಒಮರಿ ತಿಳಿಸಿದ್ದಾರೆ.

ಮುಂದಿನ 45 ದಿನಗಳೊಳಗೆ ಕಚೇರಿ ಮುಚ್ಚಲು ನ್ಯಾಯಾಲಯದ ಆದೇಶವಿದೆ. ತಾವು ತಕ್ಷಣ ಕ್ಯಾಮರಾ ಸೇರಿದಂತೆ ಎಲ್ಲಾ ವಸ್ತುಗಳನ್ನು ತೆಗೆದುಕೊಂಡು ಇಲ್ಲಿಂದ ತೆರಳಬೇಕು ಎಂದು ಇಸ್ರೇಲಿ ಪಡೆಗಳು ವಾಲಿದ್ ಒಮರಿ ಅವರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.

ಇಸ್ರೇಲಿ ಪಡೆಗಳು ನಮ್ಮ ಕ್ಯಾಮರಾಗಳನ್ನು ವಶಪಡಿಸಿಕೊಂಡಿವೆ ಎಂದು ಅಲ್-ಜಝೀರಾ ವರದಿಗಾರ ಜಿವಾರಾ ಬುಡೆರಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅಲ್‌-ಜಝೀರಾ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಚೇರಿ ಮುಂಭಾಗದಲ್ಲಿದ್ದ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್ ಅವರ ಫೋಟೋಗಳನ್ನು ಇಸ್ರೇಲಿ ಪಡೆಗಳು ಹರಿದು ಹಾಕುವುದನ್ನು ನೋಡಬಹುದು.

ಮೇ 2022ರಲ್ಲಿ ವೆಸ್ಟ್ ಬ್ಯಾಂಕ್‌ನ ಜೆನಿನ್‌ನಲ್ಲಿ ಇಸ್ರೇಲಿ ದಾಳಿಯನ್ನು ಸುದ್ದಿ ಮಾಡುವಾಗ ಅಕ್ಲೆಹ್ ಅವರ ತಲೆಗೆ ಗುಂಡು ಹಾರಿಸಲಾಗಿತ್ತು. ಅವರು ಸಾವನ್ನಪ್ಪಿದ್ದರು.

ಈ ಹಿಂದೆ ಇಸ್ರೇಲ್ ರಾಜಧಾನಿ ಟೆಲ್‌ ಅವೀವ್‌ನಲ್ಲಿದ್ದ ಅಲ್‌-ಜಝೀರಾದ ಕಚೇರಿಯನ್ನೂ ಅಲ್ಲಿನ ಸರ್ಕಾರ ಮುಚ್ಚಿಸಿದೆ. ಈ ಸಂಬಂಧ ಇಸ್ರೇಲ್ ಸಂಸತ್‌ನಲ್ಲಿ ನಿರ್ಣಯವನ್ನೂ ಅಂಗೀಕರಿಸಲಾಗಿದೆ.

ಗಾಝಾ ಮೇಲೆ ಇಸ್ರೇಲ್ ಆಕ್ರಮಣ ಆರಂಭಿಸಿ ಮುಂದಿನ ಅಕ್ಟೋಬರ್‌ಗೆ 1 ವರ್ಷ ಪೂರ್ಣಗೊಳ್ಳಲಿದೆ. ಈ ಅವಧಿಯಲ್ಲಿ ಇಸ್ರೇಲ್ ದಾಳಿಗೆ ಗಾಝಾದ 40 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿದ್ದಾರೆ. ಇಸ್ರೇಲ್ ಇನ್ನೂ ಕೂಡ ಆಕ್ರಮಣ ಮುಂದುವರಿಸುವುದಾಗಿ ಹೇಳಿದೆ. ವಿಶ್ವಸಂಸ್ಥೆಯ ಹಲವು ನಿರ್ಣಯಗಳು, ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶ ಮತ್ತು ಅನೇಕ ರಾಷ್ಟ್ರಗಳ ಕದನ ವಿರಾಮ ಆಗ್ರಹವನ್ನು ಲೆಕ್ಕಿಸದೆ ಇಸ್ರೇಲ್ ಜನರ ಹತ್ಯೆಯನ್ನು ಮುಂದುವರೆಸಿದೆ.

ಇದನ್ನೂ ಓದಿ : ದಾವುದ್ ಇಬ್ರಾಹಿಂ ಜೊತೆ ಲಿಂಕ್ ಎಂದ ಎಎನ್‌ಐ | ಸುಳ್ಳು ಸುದ್ದಿಗೆ ಕ್ಷಮೆಯಾಚಿಸಲು ಸಲ್ಮಾನ್ ಖಾನ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...