Homeಮುಖಪುಟಪ್ರಮುಖ ನಟರ ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ಕೇರಳದ ನಟಿ ವಿರುದ್ದವೇ ಪೋಕ್ಸೋ ಕೇಸ್!

ಪ್ರಮುಖ ನಟರ ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ಕೇರಳದ ನಟಿ ವಿರುದ್ದವೇ ಪೋಕ್ಸೋ ಕೇಸ್!

- Advertisement -
- Advertisement -

ಇತ್ತೀಚೆಗೆ ಮಲಯಾಳಂ ಸಿನಿಮಾ ರಂಗದ ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದ ಕೇರಳದ ನಟಿಯ ವಿರುದ್ದವೇ ಇದೀಗ ಪೋಕ್ಸೋ ಕೇಸ್ ದಾಖಲಾಗಿದೆ.

ನಟಿಯ ಸಂಬಂಧಿಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಮುವಟ್ಟುಪುಝ ಪೊಲೀಸರು ಸೆಪ್ಟೆಂಬರ್ 20ರಂದು ಆಕೆಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

“ನಾನು 16 ವರ್ಷದವಳಿದ್ದಾಗ ನಟಿ ನನ್ನನ್ನು ಸಿನಿಮಾ ಆಡಿಷನ್‌ಗೆಂದು ಚೆನ್ನೈಗೆ ಕರೆದೊಯ್ದು ಕೆಲ ಪುರುಷರಿಗೆ ಪರಿಚಯ ಮಾಡಿಸಿಕೊಟ್ಟಿದ್ದು. ಆಡಿಷನ್ ನಡೆಯುವಾಗ ಪುರುಷರು ನನ್ನನ್ನು ಅಸಭ್ಯವಾಗಿ ಸ್ಪರ್ಶಿಸಿದ್ದರು. ಆಗ ನಾನು ವಿರೋಧ ವ್ಯಕ್ತಪಡಿಸಿದ್ದೆ, ಅತ್ತು ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದೆ. ಆಗ ನಟಿ ‘ಅವರೊಂದಿಗೆ ಸಹಕರಿಸು’ ಎಂದು ನನಗೆ ಹೇಳಿದ್ದರು” ಎಂದು ದೂರುದಾರರು ಆರೋಪಿಸಿದ್ದಾರೆ. “ನಟಿ ಸೆಕ್ಸ್ ಟ್ರೇಡ್, ಸೆಕ್ಸ್ ರಾಕೇಟ್ ನಡೆಸುತ್ತಿದ್ದಾರೆ” ಎಂದೂ ದೂರಿನಲ್ಲಿ ಹೇಳಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ನಟಿಯ ವಿರುದ್ದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ), ಬಾಲನ್ಯಾಯ ಕಾಯ್ದೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು 354A (ಲೈಂಗಿಕ ಕಿರುಕುಳ) ಪ್ರಕರಣ ದಾಖಲಿಸಿದ್ದಾರೆ.

ಚೆನ್ನೈನಲ್ಲಿ ನೆಲೆಸಿರುವ ಆರೋಪಿ ನಟಿ, ಆಗಸ್ಟ್ ಕೊನೆಯ ವಾರದಲ್ಲಿ ಮಲಯಾಳಂ ಸಿನಿಮಾದ ನಾಲ್ವರು ನಟರು ಸೇರಿದಂತೆ ಏಳು ಮಂದಿಯ ವಿರುದ್ಧ ದೂರು ದಾಖಲಿಸಿದ್ದರು. ಆರಂಭದಲ್ಲಿ, ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ಪ್ರಾರಂಭಗೊಂಡ ಮೀ ಟೂ ಚಳವಳಿಯ ಭಾಗವಾಗಿ ಅವರು ಫೇಸ್‌ಬುಕ್ ಪೋಸ್ಟ್ ಮೂಲಕ ನಟರ ವಿರುದ್ದ ಆರೋಪಗಳನ್ನು ಮಾಡಿದ್ದರು.

ಆಗಸ್ಟ್ 27 ರಂದು ನಟರಾದ ಜಯಸೂರ್ಯ, ಇಡವೇಲ ಬಾಬು, ಮಣಿಯನ್ಪಿಳ್ಳ ರಾಜು, ಪ್ರೊಡಕ್ಷನ್ ಕಂಟ್ರೋಲರ್‌ಗಳಾದ ನೋಬಲ್ ಮತ್ತು ವಿಚು ಹಾಗೂ ನಿರ್ಮಾಪಕ ಮತ್ತು ವಕೀಲರ ಕಾಂಗ್ರೆಸ್ ಅಧ್ಯಕ್ಷ ವಿಎಸ್ ಚಂದ್ರಶೇಖರನ್ ವಿರುದ್ಧ ಕೇರಳ ಪೊಲೀಸರಿಗೆ ಪ್ರತ್ಯೇಕ ಇಮೇಲ್ ದೂರುಗಳನ್ನು ಕಳುಹಿಸಿದ್ದರು.

“ಹಲವು ವರ್ಷಗಳ ಹಿಂದೆ ನಟ ಹಾಗೂ ರಾಜಕಾರಣಿ ಮುಕೇಶ್ ನನಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಆದರೆ, ತಾನು  ಸಿನಿಮಾ ರಂಗಕ್ಕೆ ಹೊಸಬಳಾಗಿದ್ದರಿಂದ ಮತ್ತು ಪರಿಣಾಮ ಎದುರಿಸುವ ಭಯದಿಂದ ಆ ಸಮಯದಲ್ಲಿ ದೂರು ನೀಡಿರಲಿಲ್ಲ” ಎಂದಿದ್ದರು.

ತನ್ನ ವಿರುದ್ದದ ಆರೋಪಗಳನ್ನು ನಿರಾಕರಿಸಿರುವ ನಟಿ, ದೂರು ನೀಡಿರುವ ಸಂಬಂಧಿ ತನಗೆ ಸ್ವಲ್ಪ ಹಣ ಕೊಡಲು ಬಾಕಿ ಇದೆ. ಅಲ್ಲದೆ, ನಾನು ನಟರ ವಿರುದ್ದ ನೀಡಿರುವ ದೂರಿನಿಂದ ಗಮನ ಬೇರೆಡೆಗೆ ಸೆಳೆಯಲು ನನ್ನ ವಿರುದ್ದ ದೂರು ದಾಖಲಿಸಲಾಗಿದೆ ಎಂದು ಹೇಳಿದ್ದಾಗಿ ವರದಿಯಾಗಿದೆ.

ನಟಿ ಪ್ರಮುಖ ನಟರ ವಿರುದ್ದ ದೂರು ದಾಖಲಿಸಿದ್ದಾಗ ಅದು ಕೇರಳ ಮಾತ್ರವಲ್ಲದೆ ದೇಶದಾದ್ಯಂತ ಸುದ್ದಿಯಾಗಿತ್ತು. ಆದರೆ, ಈಗ ಅದೇ ನಟಿ ವಿರುದ್ದ ಪೋಕ್ಸೋ ಕೇಸ್ ದಾಖಲಾಗಿರುವುದು ಎಲ್ಲೆಡೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನೂ ಓದಿ : ದಾವುದ್ ಇಬ್ರಾಹಿಂ ಜೊತೆ ಲಿಂಕ್ ಎಂದ ಎಎನ್‌ಐ | ಸುಳ್ಳು ಸುದ್ದಿಗೆ ಕ್ಷಮೆಯಾಚಿಸಲು ಸಲ್ಮಾನ್ ಖಾನ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...