Homeಕರ್ನಾಟಕಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

ಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

- Advertisement -
- Advertisement -

1,399 ರೂಪಾಯಿ ಮೌಲ್ಯದ ಒಂದು ಜೊತೆ ಟ್ರಕ್ಕಿಂಗ್ ಟ್ರೌಸರ್‌ ಅನ್ನು ತಲುಪಿಸಲು ವಿಫಲವಾದ ಗ್ರಾಹಕನಿಗೆ 35,000 ರೂಪಾಯಿ ಪಾವತಿಸಲು ಕರ್ನಾಟಕದ ಗ್ರಾಹಕ ನ್ಯಾಯಾಲಯವು ಕ್ರೀಡಾ ಸಲಕರಣೆಗಳ ಮಾರಾಟ ಸಂಸ್ಥೆ ಡೆಕಾಥ್ಲಾನ್‌ಗೆ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳೂರಿನ ನಿವಾಸಿ 23 ವರ್ಷದ ಮೋಹಿತ್ ಅವರು ಡೆಕಾಥ್ಲಾನ್ ಅವರು ಆರ್ಡರ್ ಮಾಡಿದ ಪ್ಯಾಂಟ್ ಅನ್ನು ತಲುಪಿಸಲು ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಸಂಪರ್ಕಿಸಿದ್ದರು.

ಕಳೆದ ವರ್ಷ ಡಿಸೆಂಬರ್ 22 ರಂದು, ಅವರು ಫೋರ್ಕ್ಲಾಜ್ ಟ್ರೆಕ್ಕಿಂಗ್ ಟ್ರೌಸರ್ MT-500 ಅನ್ನು ಖರೀದಿಸುವ ಬಗ್ಗೆ ಡೆಕಾಥ್ಲಾನ್ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದರು. ಆದರೆ ಈ ಉತ್ಪನ್ನವು ಬೆಂಗಳೂರಿನ ETA ಮಾಲ್‌ನಲ್ಲಿರುವ ಚೈನ್ಸ್ ಸ್ಟೋರ್‌ನಲ್ಲಿ ಮಾತ್ರ ಲಭ್ಯವಿದೆ ಎಂದು ತಿಳಿಸಲಾಗಿತ್ತು. ಅದೇ ವೇಳೆ ಅಧಿಕಾರಿಗಳು ಹಣವನ್ನು ಆನ್‌ಲೈನ್‌ನಲ್ಲಿ ಪಾವತಿಸುವಂತೆ ಕೇಳಿದ್ದರು ಮತ್ತು ಪ್ಯಾಂಟ್ ಅನ್ನು ಅವರ ವಿಳಾಸಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದರು.

ಅದರಂತೆ ಮೋಹಿತ್ ಆನ್‌ಲೈನ್‌ನಲ್ಲಿ 1,399 ರೂ. ಪಾವತಿಸಿದ್ದರು. ಆದರೆ ಅವರು ಆರ್ಡರ್ ಮಾಡಿದ್ದ ಟ್ರೌಸರ್‌ ಅವರಿಗೆ ತಲುಪಿರಲಿಲ್ಲ. ಈ ಬಗ್ಗೆ ಇಟಿಎ ಮಾಲ್‌ನಲ್ಲಿರುವ ಡೆಕಾಥ್ಲಾನ್ ಮಳಿಗೆಯ ಸಿಬ್ಬಂದಿಯನ್ನು ವಿಚಾರಿಸಿದಾಗ ಉತ್ಪನ್ನ ನಾಪತ್ತೆಯಾಗಿದೆ ಎಂದು ತಿಳಿಸಿದ್ದರು.

ಇದನ್ನೂಓದಿ: ಅರ್ಕಾವತಿ ಬಡಾವಣೆ | ಸಿದ್ದಾಮಯ್ಯ v/s ತಾವರ್‌ಚಂದ್‌ ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧ!

ಫೆಬ್ರವರಿ 6 ರಂದು, ಮೋಹಿತ್ ಇಟಿಎ ಮಾಲ್‌ನಲ್ಲಿರುವ ಅಂಗಡಿಗೆ ಭೇಟಿ ನೀಡಿದಾಗ, ಡೆಕಾಥ್ಲಾನ್‌ ಅವರ ಹಣವನ್ನು ಹಿಂತಿರುಗಿಸುವುದಾಗಿ ಭರವಸೆ ನೀಡಿತ್ತು. ಆದಾಗ್ಯೂ, ಫೆಬ್ರವರಿ 10 ಮತ್ತು 13 ರಂದು ಫೋನ್ ಕರೆ ಮಾಡಿ ಹಣ ವಾಪಾಸಾತಿಗೆ ವಿನಂತಿ ಮಾಡಿದ್ದರೂ, ಕಂಪೆನಿಯು ಅವರಿಗೆ ಹಣ ಮರುಪಾವತಿ ಮಾಡಿರಲಿಲ್ಲ.

ನಂತರ ಮೋಹಿತ್ ಅವರು ಏಪ್ರಿಲ್ 9 ರಂದು ಲೀಗಲ್ ನೋಟಿಸ್ ಕಳುಹಿಸಿದ್ದರು. ಈ ವೇಳೆ ಇಟಿಎ ಮಾಲ್‌ನಲ್ಲಿರುವ ಅಂಗಡಿಯನ್ನು ಮುಚ್ಚಲಾಗಿದೆ ಎಂಬ ಉತ್ತರವನ್ನು ನೀಡಲಾಗಿತ್ತು. ಅದರ ನಂತರ ಅವರು ಗ್ರಾಹಕ ನ್ಯಾಯಾಲಯಕ್ಕೆ ತೆರಳಿದ್ದರು. ಹಾಗಾಗಿ ನ್ಯಾಯಾಲಯವು ಡೆಕಾಥ್ಲಾನ್‌ಗೆ ನೋಟಿಸ್‌ಗಳನ್ನು ಕಳುಹಿಸಿತ್ತು. ಅದಾಗ್ಯೂ, ಡೆಕಾಥ್ಲಾನ್‌ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ.

ಗ್ರಾಹಕರ ನ್ಯಾಯಾಲಯದ ಮುಖ್ಯಸ್ಥ ಸೋಮಶೇಖರಪ್ಪ ಹಂದಿಗೋಳ ಅವರು ಮಂಗಳವಾರ ತಮ್ಮ ಆದೇಶದಲ್ಲಿ ಮೋಹಿತ್ ಅವರ 1399 ರೂ. ಮತ್ತು ಸೇವಾ ನ್ಯೂನತೆಗೆ 25000 ರೂ. ಮತ್ತು ವ್ಯಾಜ್ಯ ವೆಚ್ಚಕ್ಕಾಗಿ 10000 ರೂ. ಪಾವತಿಸಲು ಕಂಪನಿಗೆ ಆದೇಶಿಸಿದ್ದಾರೆ.

ವಿಡಿಯೊ ನೋಡಿ: ರೈತರ ಕರೆ ಮೇರೆಗೆ ಜಿಯೋ ಇಂದ ಪೋರ್ಟ್‌ ಆದವರೊಂದಿಗೆ ಜಿಯೋ ಕಂಪೆನಿಯವರ ಸ್ವಾರಸ್ಯಕರ ಸಂಭಾಷಣೆ ಕೇಳಿ. JioCustomerCare

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...