HomeUncategorizedಬೀದಿ ನಾಯಿಗಳಿಗೆ ಮೈಕ್ರೋಚಿಪ್ ಅಳವಡಿಸಲು ಮುಂದಾದ ಬಿಬಿಎಂಪಿ

ಬೀದಿ ನಾಯಿಗಳಿಗೆ ಮೈಕ್ರೋಚಿಪ್ ಅಳವಡಿಸಲು ಮುಂದಾದ ಬಿಬಿಎಂಪಿ

- Advertisement -
- Advertisement -

ಬೆಂಗಳೂರಿನ ಮತ್ತಿಕೆರೆ ಮತ್ತು ಮಲ್ಲೇಶ್ವರಂ (ಬಿಬಿಎಂಪಿಯ ಪಶ್ಚಿಮ ವಲಯ)ನಲ್ಲಿ ಬೀದಿ ನಾಯಿಗಳಿಗೆ ಮೈಕ್ರೋಚಿಪ್ ಅಳವಡಿಕೆ ಯೋಜನೆಯನ್ನು ಪ್ರಾರಂಭಿಸುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಆರೋಗ್ಯ ಮತ್ತು ಪಶುಸಂಗೋಪನಾ ಇಲಾಖೆಯ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಕಿಶೋರ್ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಮೈಕ್ರೋಚಿಪ್ ತಂತ್ರಜ್ಞಾನವು ನಾಯಿ ಇರುವ ಪ್ರದೇಶ, ವ್ಯಾಕ್ಸಿನೇಷನ್ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆಯ ದಿನಾಂಕ ಮತ್ತು ಇತರ ಅಂಶಗಳಂತಹ ಮಾಹಿತಿಗಳನ್ನು ಶಾಶ್ವತವಾಗಿ ಸಂಗ್ರಹಿಸಲು ಸಹಾಯ ಮಾಡುತ್ತದೆ.

ಇದನ್ನೂಓದಿ: ಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

ಹಲವಾರು ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಈ ತಂತ್ರಜ್ಞಾನವನ್ನು ಈಗಾಗಲೇ ಅಳವಡಿಸಿಕೊಂಡಿವೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಕಾರ್ಯಗತಗೊಳಿಸಲು ಬಿಬಿಎಂಪಿ BIZ ORBIT ಸಂಸ್ಥೆಗೆ ಟೆಂಡರ್ ಅನ್ನು ನೀಡಿದೆ.

“ಮೈಕ್ರೋಚಿಪ್ ಒಂದು ಧಾನ್ಯದ ಗಾತ್ರದ ಸಾಧನವಾಗಿದ್ದು, ಇದನ್ನು ಮತ್ತಿಕೆರೆ ಮತ್ತು ಮಲ್ಲೇಶ್ವರಂನಲ್ಲಿ ತಲಾ 300 ಬೀದಿ ನಾಯಿಗಳಿಗೆ ಅಳವಡಿಸಲಾಗುವುದು. ಇದು ನಾಯಿಗಳನ್ನು ಗುರುತಿಸುವ ಶಾಶ್ವತ ವಿಧಾನವಾಗಿದೆ. 14 ದಿನಗಳ ವೀಕ್ಷಣಾ ಅವಧಿಯ ನಂತರ, ಇಡೀ ಪಾಲಿಕೆಯಾದ್ಯಂತ ಉಪಕ್ರಮವನ್ನು ವಿಸ್ತರಿಸುವ ಮೊದಲು ಪ್ರಾಯೋಗಿಕ ಯೋಜನೆಯ ಫಲಿತಾಂಶಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ” ಎಂದು ಕಿಶೋರ್ ಹೇಳಿದ್ದಾರೆ.

ಮೈಕ್ರೋಚಿಪ್ ಅನ್ನು ಬೀದಿ ನಾಯಿಗಳಿಗೆ ಆಧಾರ್ ಸಂಖ್ಯೆಗೆ ಹೋಲಿಸಿದ ಅವರು, ಇದನ್ನು ಚುಚ್ಚುಮದ್ದಿನ ಮೂಲಕ ನಿರ್ವಹಿಸಲಾಗುತ್ತದೆ ಮತ್ತು ಯಾವುದೇ ಅಡ್ಡ ಪರಿಣಾಮಗಳನ್ನು ಉಂಟುಮಾಡುವುದಿಲ್ಲ. ಇದಲ್ಲದೆ, ಇದು ಜೀವಮಾನದ ಗುರುತಿಸುವಿಕೆಯಾಗಿಯೂ ಕಾರ್ಯನಿರ್ವಹಿಸುತ್ತದೆ ಮತ್ತು ವಿಶ್ವಾದ್ಯಂತ ಬಳಸಲಾಗುವ ಅನನ್ಯ ಸಂಖ್ಯೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂಓದಿ: ಟ್ರೌಸರ್‌ ತಲುಪಿಸಲು ವಿಫಲ | ಗ್ರಾಹಕನಿಗೆ 35,000 ರೂ. ಪಾವತಿಸಲು ಡೆಕಾಥ್ಲಾನ್‌ಗೆ ಆದೇಶ

ಪಾಲಿಕೆಯ ಈ ಉಪಕ್ರಮವು ಬೀದಿನಾಯಿಗಳ ಸ್ಥಿತಿಯನ್ನು ನಿಖರವಾಗಿ ದಾಖಲಿಸುವ ಗುರಿಯನ್ನು ಹೊಂದಿದೆ ಮತ್ತು ವ್ಯಾಕ್ಸಿನೇಷನ್ ಮತ್ತು ಇತರ ವಿಚಾರಗಳು ತಪ್ಪಾಗುವುದನ್ನು ತಪ್ಪಿಸುತ್ತದೆ ಎಂದು ಅವರು ಹೇಳಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಬೀದಿ ನಾಯಿಗಳಿಗೆ ಸಮಗ್ರ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲು ಪಾಲಿಕೆ ಉದ್ದೇಶಿಸಿದೆ.

“ಪ್ರಸ್ತುತ, ಕಾರ್ಪೊರೇಷನ್‌ನ ವ್ಯಾಪ್ತಿಯಲ್ಲಿರುವ ಬಣ್ಣವನ್ನು ಬಳಸಿಕೊಂಡು ಲಸಿಕೆ ಹಾಕಿದ ಬೀದಿ ನಾಯಿಗಳನ್ನು ಗುರುತಿಸಲಾಗಿದೆ. ಇದು ಒಂದು ವಾರದೊಳಗೆ ಮಸುಕಾಗಬಹುದು. ಇದರಿಂದಾಗಿ ವ್ಯಾಕ್ಸಿನೇಷನ್ ಮಾಡಿರುವ ನಾಯಿಗಳಿಗೆ ಮತ್ತೆ ವ್ಯಾಕ್ಸಿನೇಷನ್‌ ಮಾಡುವ ಸಂಭವ ಇರುತ್ತದೆ. ಈ ತಂತ್ರಜ್ಞಾನದ ಅಳವಡಿಕೆಯಿಂದ ಈ ನ್ಯೂನತೆ ನೀಗಿಸಿ ನಾಯಿಗಳಿಗೆ ಲಸಿಕೆ ಹಾಕುವ ಬಗ್ಗೆ ನಿಖರ ಮಾಹಿತಿ ಪಡೆಯಬಹುದು” ಎಂದು ಬಿಬಿಎಂಪಿ ಪಶುಸಂಗೋಪನಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...