HomeಚಳವಳಿFree Palestine | ಹೆಜ್ಬುಲ್ಲಾ - ಇಸ್ರೇಲ್ ಸಂಘರ್ಷ ಉಲ್ಬಣ

Free Palestine | ಹೆಜ್ಬುಲ್ಲಾ – ಇಸ್ರೇಲ್ ಸಂಘರ್ಷ ಉಲ್ಬಣ

- Advertisement -
- Advertisement -

ಪ್ಯಾಲೆಸ್ತೀನ್ ಪರವಾಗಿ ಇಸ್ರೇಲ್ ವಿರುದ್ಧ ಕಾದಾಡುತ್ತಿರುವ ಹೆಜ್ಬುಲ್ಲಾ ಬಂಡುಕೋರರು ಗಡಿಯಾಚೆಗಿನ ದಾಳಿಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲ್ ನಮ್ಮನ್ನು ಬೆದರಿಸುವ ಯಾರಿಗಾದರೂ ‘ಹೊಡೆದುರುಳಿಸುತ್ತೇವೆ’ ಎಂದು ಹೇಳಿದೆ. ಸಂಭಾವ್ಯ ಯುದ್ಧದಿಂದ ಸಂಪೂರ್ಣವಾಗಿ ಹಿಂದೆ ಸರಿಯಲು ಅಂತರಾಷ್ಟ್ರೀಯ ಸಮುದಾಯದಗಳು ಕರೆ ನೀಡುತ್ತಿದ್ದರೂ ಇತ್ತಂಡಗಳು ಅದನ್ನು ಕಡೆಗಣಿಸಿವೆ. Free Palestine 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಸ್ರೇಲ್‌ನೊಂದಿಗಿನ ಸಂಘರ್ಷದಲ್ಲಿ ನಾವು “ಹೊಸ ಹಂತ”ವನ್ನು ಪ್ರವೇಶಿಸಿದ್ದೇವೆ ಎಂದು ಹಿಜ್ಬುಲ್ಲಾದ ಉಪ ಮುಖ್ಯಸ್ಥ ನಯಿಮ್ ಕಾಸ್ಸೆಮ್ ಪ್ರತಿಭಟನಾ ಸಂದೇಶವನ್ನು ನೀಡಿದ್ದಾರೆ. ಉತ್ತರ ಲೆಬನಾನ್‌ನ ಹಿಜ್ಬುಲ್ಲಾ ಭದ್ರಕೋಟೆಗಳನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್ ನಡೆಸಿದ ವ್ಯಾಪಕ ಹಾನಿ ಮತ್ತು ಹಲವಾರು ಸಾವುನೋವುಗಳಿಗೆ ಪ್ರತಿಭಟನೆಯಾಗಿ ಕಾಸ್ಸೆಮ್ ಈ ಸಂದೇಶ ನೀಡಿದ್ದಾರೆ.

ಇದನ್ನೂಓದಿ: ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ತಮ್ಮ ಉತ್ತರದ ನಿವಾಸಿಗಳ ಭದ್ರತೆಯನ್ನು ಖಾತ್ರಿಪಡಿಸುವ ಇಸ್ರೇಲ್‌ನ ಬದ್ಧತೆಯನ್ನು ಪುನರುಚ್ಚರಿಸಿದದ್ದಾರೆ. “ಇಸ್ರೇಲ್‌ನ ಉತ್ತರದ ಸಮುದಾಯಗಳು ಅವರ ಮನೆಗಳಿಗೆ ಸುರಕ್ಷಿತವಾಗಿ ಹಿಂದಿರುಗಿಸುವ ಹಂತವನ್ನು ತಲುಪುವವರೆಗೆ ನಾವು ಮಿಲಿಟರಿ ಕ್ರಮಗಳು ಮುಂದುವರೆಯುತ್ತವೆ” ಎಂದು ಹೇಳಿದ್ದಾರೆ.

ಆರ್ಮಿ ಚೀಫ್ ಲೆಫ್ಟಿನೆಂಟ್ ಜನರಲ್ ಹರ್ಜಿ ಹಲೆವಿ ಮನಾತನಾಡಿ, ತನ್ನ ನಾಗರಿಕರನ್ನು ಬೆದರಿಸುವ ಯಾರಿಗಾದರೂ ಇಸ್ರೇಲ್ ಹೊಡೆದುರುಳಿಸುತ್ತದೆ ಎಂದು ಹೇಳಿದ್ದಾರೆ. ಈ ನಡುವೆ ಇಸ್ರೇಲ್‌ನ ಅತಿದೊಡ್ಡ ಮಿತ್ರರಾಷ್ಟ್ರವಾದ ಅಮೆರಿಕ ಸಂಯಮ ಪಾಲಿಸುವಂತೆ ಒತ್ತಾಯಿಸಿದೆ. ಮಿಲಿಟರಿ ಸಂಘರ್ಷವು ಇಸ್ರೇಲ್‌ನ ಹಿತಾಸಕ್ತಿಗೆ ಉತ್ತಮವಲ್ಲ ಮತ್ತು ಈ ಸಂಘರ್ಷವನ್ನು ತಡೆಯಲು ಅಮೆರಿಕ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಅಧ್ಯಕ್ಷ ಜೋ ಬಿಡೆನ್ ಒತ್ತಿ ಹೇಳಿದ್ದಾರೆ. Free Palestine 

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕೂಡಾ ತೀವ್ರ ಕಳವಳಗಳ ವ್ಯಕ್ತಪಡಿಸಿದ್ದು, ನಡೆಯುತ್ತಿರುವ ಗಾಜಾ ಸಂಘರ್ಷದ ಮಧ್ಯೆ ಲೆಬನಾನ್ ಕೂಡಾ “ಮತ್ತೊಂದು ಗಾಜಾ” ಆಗುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂಓದಿ: FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಕಳೆದ ವಾರ ಹೆಜ್ಬೊಲ್ಲಾಹ್ ರಾಕೆಟ್‌ಗಳ ಸುರಿಮಳೆಯನ್ನು ಉಡಾಯಿಸಿದ್ದು, ಅದು ಇಸ್ರೇಲ್‌ನ ಅತಿದೊಡ್ಡ ಉತ್ತರದ ನಗರವಾದ ಹೈಫಾ ಬಳಿಯ ಕಿರ್ಯಾತ್ ಬಿಯಾಲಿಕ್ ಅನ್ನು ತಲುಪಿ ಅಲ್ಲಿನ ಮೂಲಸೌಕರ್ಯವನ್ನು ಹಾನಿಗೊಳಿಸಿತು ಎಂದು ವರದಿಯಾಗಿದೆ. ಅಲ್ಲದೆ ದಾಳಿಯು ಮತ್ತಷ್ಟು ಉಲ್ಬಣಗೊಳ್ಳುವ ಭಯವನ್ನು ಹುಟ್ಟುಹಾಕಿದೆ.

ಇದಕ್ಕೆ ಪ್ರತೀಕಾರವಾಗಿ, ಇಸ್ರೇಲ್ ದಕ್ಷಿಣ ಲೆಬನಾನ್‌ನ ವಾಯುನೆಲೆ ಮತ್ತು ಮಿಲಿಟರಿ ಉತ್ಪಾದನಾ ಸೌಲಭ್ಯಗಳನ್ನು ಒಳಗೊಂಡಂತೆ ಹೆಜ್ಬೊಲ್ಲಾ ಗುರಿಗಳನ್ನು ಹೊಡೆದುರುಳಿಸಿದೆ. ಸ್ಪೋಟದ ಹಿನ್ನಲೆ ಇಸ್ರೇಲ್‌ನ ನಾಗರಿಕ ರಕ್ಷಣಾ ಸಂಸ್ಥೆಯು ಉತ್ತರದ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದೆ.

ಲೆಬನಾನ್‌ನ ಆರೋಗ್ಯ ಸಚಿವಾಲಯವು ದಕ್ಷಿಣ ಪ್ರದೇಶಗಳಲ್ಲಿ ಇಸ್ರೇಲಿ ದಾಳಿಯಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಆದರೆ ಹಿಜ್ಬುಲ್ಲಾ ತನ್ನ ಇಬ್ಬರು ಹೋರಾಟಗಾರರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಲೆಬನಾನ್‌ನಿಂದ ರಾತ್ರಿಯಿಡೀ 150 ರಾಕೆಟ್‌ಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ತನ್ನ ಭೂಪ್ರದೇಶಕ್ಕೆ ಹಾರಿಸಲಾಗಿದೆ ಎಂದು ಇಸ್ರೇಲಿ ಸೇನೆಯು ವರದಿ ಮಾಡಿದೆ.

ಇದನ್ನೂಓದಿ: ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್, ನೋಡುವುದು ಅಪರಾಧ; ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಇಸ್ರೇಲ್‌ ಇತ್ತೀಚೆಗೆ ವೈಮಾನಿಕ ದಾಳಿ ನಡೆಸಿ ಬೈರುತ್‌ನ ಜನನಿಬಿಡ ಪ್ರದೇಶವಾದ ದಹಿಯೆ ಅಕ್ಕಪಕ್ಕದ ಮೇಲೆ ದಾಳಿ ನಡೆಸಿ ಹಿಜ್ಬುಲ್ಲಾದ ರಾದ್ವಾನ್ ಫೋರ್ಸ್‌ನ ಮುಖ್ಯಸ್ಥ ಇಬ್ರಾಹಿಂ ಅಕಿಲ್‌ನನ್ನು ಕೊಂದು ಹಾಕಿತ್ತು. ಇದರ ನಂತರ ಹೆಜ್ಬುಲ್ಲಾಹ್ ಇಸ್ರೇಲ್ ಮೇಲೆ ದಾಳಿ ಮಾಡಿದೆ.

ಈ ನಡುವೆ ಕತಾರ್, ಈಜಿಪ್ಟ್ ಮತ್ತು ಅಮೆರಿಕ ನೇತೃತ್ವದ ಮಧ್ಯಸ್ಥಿಕೆ ಪ್ರಯತ್ನಗಳ ಹೊರತಾಗಿಯೂ, ಸಂಘರ್ಷವು ಕಡಿಮೆಯಾಗುವ ಯಾವುದೇ ಲಕ್ಷಣವನ್ನು ಕಾಣುತ್ತಿಲ್ಲ. ಕದನ ವಿರಾಮಕ್ಕಾಗಿ ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸುಗಮಗೊಳಿಸುವ ಪ್ರಯತ್ನಗಳು ಸ್ಥಗಿತಗೊಂಡಿವೆ.

ವಿಡಿಯೊ ನೋಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...