HomeಚಳವಳಿFree Palestine | ಹೆಜ್ಬುಲ್ಲಾ - ಇಸ್ರೇಲ್ ಸಂಘರ್ಷ ಉಲ್ಬಣ

Free Palestine | ಹೆಜ್ಬುಲ್ಲಾ – ಇಸ್ರೇಲ್ ಸಂಘರ್ಷ ಉಲ್ಬಣ

- Advertisement -
- Advertisement -

ಪ್ಯಾಲೆಸ್ತೀನ್ ಪರವಾಗಿ ಇಸ್ರೇಲ್ ವಿರುದ್ಧ ಕಾದಾಡುತ್ತಿರುವ ಹೆಜ್ಬುಲ್ಲಾ ಬಂಡುಕೋರರು ಗಡಿಯಾಚೆಗಿನ ದಾಳಿಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲ್ ನಮ್ಮನ್ನು ಬೆದರಿಸುವ ಯಾರಿಗಾದರೂ ‘ಹೊಡೆದುರುಳಿಸುತ್ತೇವೆ’ ಎಂದು ಹೇಳಿದೆ. ಸಂಭಾವ್ಯ ಯುದ್ಧದಿಂದ ಸಂಪೂರ್ಣವಾಗಿ ಹಿಂದೆ ಸರಿಯಲು ಅಂತರಾಷ್ಟ್ರೀಯ ಸಮುದಾಯದಗಳು ಕರೆ ನೀಡುತ್ತಿದ್ದರೂ ಇತ್ತಂಡಗಳು ಅದನ್ನು ಕಡೆಗಣಿಸಿವೆ. Free Palestine 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಸ್ರೇಲ್‌ನೊಂದಿಗಿನ ಸಂಘರ್ಷದಲ್ಲಿ ನಾವು “ಹೊಸ ಹಂತ”ವನ್ನು ಪ್ರವೇಶಿಸಿದ್ದೇವೆ ಎಂದು ಹಿಜ್ಬುಲ್ಲಾದ ಉಪ ಮುಖ್ಯಸ್ಥ ನಯಿಮ್ ಕಾಸ್ಸೆಮ್ ಪ್ರತಿಭಟನಾ ಸಂದೇಶವನ್ನು ನೀಡಿದ್ದಾರೆ. ಉತ್ತರ ಲೆಬನಾನ್‌ನ ಹಿಜ್ಬುಲ್ಲಾ ಭದ್ರಕೋಟೆಗಳನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್ ನಡೆಸಿದ ವ್ಯಾಪಕ ಹಾನಿ ಮತ್ತು ಹಲವಾರು ಸಾವುನೋವುಗಳಿಗೆ ಪ್ರತಿಭಟನೆಯಾಗಿ ಕಾಸ್ಸೆಮ್ ಈ ಸಂದೇಶ ನೀಡಿದ್ದಾರೆ.

ಇದನ್ನೂಓದಿ: ಗುಜರಾತ್‌: ಲೈಂಗಿಕ ದೌರ್ಜನ್ಯ ವಿರೋಧಿಸಿದ ಶಾಲಾ ವಿದ್ಯಾರ್ಥಿನಿ ಹತ್ಯೆ, ಪ್ರಾಂಶುಪಾಲನ ಬಂಧನ

ಇದಕ್ಕೆ ಪ್ರತಿಕ್ರಿಯಿಸಿರುವ ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ತಮ್ಮ ಉತ್ತರದ ನಿವಾಸಿಗಳ ಭದ್ರತೆಯನ್ನು ಖಾತ್ರಿಪಡಿಸುವ ಇಸ್ರೇಲ್‌ನ ಬದ್ಧತೆಯನ್ನು ಪುನರುಚ್ಚರಿಸಿದದ್ದಾರೆ. “ಇಸ್ರೇಲ್‌ನ ಉತ್ತರದ ಸಮುದಾಯಗಳು ಅವರ ಮನೆಗಳಿಗೆ ಸುರಕ್ಷಿತವಾಗಿ ಹಿಂದಿರುಗಿಸುವ ಹಂತವನ್ನು ತಲುಪುವವರೆಗೆ ನಾವು ಮಿಲಿಟರಿ ಕ್ರಮಗಳು ಮುಂದುವರೆಯುತ್ತವೆ” ಎಂದು ಹೇಳಿದ್ದಾರೆ.

ಆರ್ಮಿ ಚೀಫ್ ಲೆಫ್ಟಿನೆಂಟ್ ಜನರಲ್ ಹರ್ಜಿ ಹಲೆವಿ ಮನಾತನಾಡಿ, ತನ್ನ ನಾಗರಿಕರನ್ನು ಬೆದರಿಸುವ ಯಾರಿಗಾದರೂ ಇಸ್ರೇಲ್ ಹೊಡೆದುರುಳಿಸುತ್ತದೆ ಎಂದು ಹೇಳಿದ್ದಾರೆ. ಈ ನಡುವೆ ಇಸ್ರೇಲ್‌ನ ಅತಿದೊಡ್ಡ ಮಿತ್ರರಾಷ್ಟ್ರವಾದ ಅಮೆರಿಕ ಸಂಯಮ ಪಾಲಿಸುವಂತೆ ಒತ್ತಾಯಿಸಿದೆ. ಮಿಲಿಟರಿ ಸಂಘರ್ಷವು ಇಸ್ರೇಲ್‌ನ ಹಿತಾಸಕ್ತಿಗೆ ಉತ್ತಮವಲ್ಲ ಮತ್ತು ಈ ಸಂಘರ್ಷವನ್ನು ತಡೆಯಲು ಅಮೆರಿಕ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಅಧ್ಯಕ್ಷ ಜೋ ಬಿಡೆನ್ ಒತ್ತಿ ಹೇಳಿದ್ದಾರೆ. Free Palestine 

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕೂಡಾ ತೀವ್ರ ಕಳವಳಗಳ ವ್ಯಕ್ತಪಡಿಸಿದ್ದು, ನಡೆಯುತ್ತಿರುವ ಗಾಜಾ ಸಂಘರ್ಷದ ಮಧ್ಯೆ ಲೆಬನಾನ್ ಕೂಡಾ “ಮತ್ತೊಂದು ಗಾಜಾ” ಆಗುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂಓದಿ: FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಕಳೆದ ವಾರ ಹೆಜ್ಬೊಲ್ಲಾಹ್ ರಾಕೆಟ್‌ಗಳ ಸುರಿಮಳೆಯನ್ನು ಉಡಾಯಿಸಿದ್ದು, ಅದು ಇಸ್ರೇಲ್‌ನ ಅತಿದೊಡ್ಡ ಉತ್ತರದ ನಗರವಾದ ಹೈಫಾ ಬಳಿಯ ಕಿರ್ಯಾತ್ ಬಿಯಾಲಿಕ್ ಅನ್ನು ತಲುಪಿ ಅಲ್ಲಿನ ಮೂಲಸೌಕರ್ಯವನ್ನು ಹಾನಿಗೊಳಿಸಿತು ಎಂದು ವರದಿಯಾಗಿದೆ. ಅಲ್ಲದೆ ದಾಳಿಯು ಮತ್ತಷ್ಟು ಉಲ್ಬಣಗೊಳ್ಳುವ ಭಯವನ್ನು ಹುಟ್ಟುಹಾಕಿದೆ.

ಇದಕ್ಕೆ ಪ್ರತೀಕಾರವಾಗಿ, ಇಸ್ರೇಲ್ ದಕ್ಷಿಣ ಲೆಬನಾನ್‌ನ ವಾಯುನೆಲೆ ಮತ್ತು ಮಿಲಿಟರಿ ಉತ್ಪಾದನಾ ಸೌಲಭ್ಯಗಳನ್ನು ಒಳಗೊಂಡಂತೆ ಹೆಜ್ಬೊಲ್ಲಾ ಗುರಿಗಳನ್ನು ಹೊಡೆದುರುಳಿಸಿದೆ. ಸ್ಪೋಟದ ಹಿನ್ನಲೆ ಇಸ್ರೇಲ್‌ನ ನಾಗರಿಕ ರಕ್ಷಣಾ ಸಂಸ್ಥೆಯು ಉತ್ತರದ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದೆ.

ಲೆಬನಾನ್‌ನ ಆರೋಗ್ಯ ಸಚಿವಾಲಯವು ದಕ್ಷಿಣ ಪ್ರದೇಶಗಳಲ್ಲಿ ಇಸ್ರೇಲಿ ದಾಳಿಯಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಆದರೆ ಹಿಜ್ಬುಲ್ಲಾ ತನ್ನ ಇಬ್ಬರು ಹೋರಾಟಗಾರರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಲೆಬನಾನ್‌ನಿಂದ ರಾತ್ರಿಯಿಡೀ 150 ರಾಕೆಟ್‌ಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ತನ್ನ ಭೂಪ್ರದೇಶಕ್ಕೆ ಹಾರಿಸಲಾಗಿದೆ ಎಂದು ಇಸ್ರೇಲಿ ಸೇನೆಯು ವರದಿ ಮಾಡಿದೆ.

ಇದನ್ನೂಓದಿ: ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್, ನೋಡುವುದು ಅಪರಾಧ; ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಇಸ್ರೇಲ್‌ ಇತ್ತೀಚೆಗೆ ವೈಮಾನಿಕ ದಾಳಿ ನಡೆಸಿ ಬೈರುತ್‌ನ ಜನನಿಬಿಡ ಪ್ರದೇಶವಾದ ದಹಿಯೆ ಅಕ್ಕಪಕ್ಕದ ಮೇಲೆ ದಾಳಿ ನಡೆಸಿ ಹಿಜ್ಬುಲ್ಲಾದ ರಾದ್ವಾನ್ ಫೋರ್ಸ್‌ನ ಮುಖ್ಯಸ್ಥ ಇಬ್ರಾಹಿಂ ಅಕಿಲ್‌ನನ್ನು ಕೊಂದು ಹಾಕಿತ್ತು. ಇದರ ನಂತರ ಹೆಜ್ಬುಲ್ಲಾಹ್ ಇಸ್ರೇಲ್ ಮೇಲೆ ದಾಳಿ ಮಾಡಿದೆ.

ಈ ನಡುವೆ ಕತಾರ್, ಈಜಿಪ್ಟ್ ಮತ್ತು ಅಮೆರಿಕ ನೇತೃತ್ವದ ಮಧ್ಯಸ್ಥಿಕೆ ಪ್ರಯತ್ನಗಳ ಹೊರತಾಗಿಯೂ, ಸಂಘರ್ಷವು ಕಡಿಮೆಯಾಗುವ ಯಾವುದೇ ಲಕ್ಷಣವನ್ನು ಕಾಣುತ್ತಿಲ್ಲ. ಕದನ ವಿರಾಮಕ್ಕಾಗಿ ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸುಗಮಗೊಳಿಸುವ ಪ್ರಯತ್ನಗಳು ಸ್ಥಗಿತಗೊಂಡಿವೆ.

ವಿಡಿಯೊ ನೋಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...