Homeಮುಖಪುಟಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

ಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

- Advertisement -
- Advertisement -

370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಜಮ್ಮು, ಕಾಶ್ಮೀರ, ಲಡಾಖ್‌ ಮೂರು ವಿಭಾಗಗಳ ೩೧೦   ಬ್ಲಾಕ್ ಗಳ ಅಧ್ಗಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಚಿತ್ರ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಇತಿಹಾಸದಲ್ಲೇ ಯಾವುದೇ ಒಂದು ರಾಜಕೀಯ ಪಕ್ಷಕ್ಕಿಂತ ಪಕ್ಷೇತರ ಅಭ್ಯರ್ಥಿಗಳೇ, ಹತ್ತಿರದ ಅತಿದೊಡ್ಡ ಪಕ್ಷ ಗಳಿಸಿದ ಸ್ಥಾನಗಳಿಗಿಂತ ಮೂರು ಪಟ್ಟು ಹೆಚ್ಚು ಸ್ಥಾನ ಗೆದ್ದಿರೋದು ಈ ಫಲಿತಾಂಶದ ವಿಶೇಷ. ಹೌದು, ಒಟ್ಟು 310 ಬ್ಲಾಕ್ ಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳೇ 217 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ 81 ಬ್ಲಾಕ್ ಗಳಲ್ಲಷ್ಟೇ ಜಯಗಳಿಸಿದೆ. ಅಂದಹಾಗೆ, ಜಮ್ಮು ಕಾಶ್ಮೀರದ ಜನರನ್ನು ಗೃಹಬಂಧನದಲ್ಲಿರಿಸಿ, ದೂರವಾಣಿ ಸಂಪರ್ಕವೂ ಇಲ್ಲದಂತೆ ಮಾಡಿ ಜಮ್ಮು ಕಾಶ್ಮೀರಕ್ಕಿದ್ದ ಸಾಂವಿಧಾನಿಕ 370 ಕಾಯ್ದೆಯನ್ನೇ ರದ್ದುಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸಲುವಾಗಿ ಜಮ್ಮು-ಕಾಶ್ಮೀರ ಕಣಿವೆಯ ಪ್ರಧಾನ ರಾಜಕೀಯ ಪಕ್ಷಗಳಾದ ನ್ಯಾಶನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ ಪಾರ್ಟಿಗಳು ಈ ಚುನಾವಣೆಯನ್ನು ಬಹಿಷ್ಕರಿಸಿದ್ದವು. ತಮ್ಮ ಅಧಿಕೃತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ.

ಅಷ್ಟಕ್ಕೂ ಇದು ಜಮ್ಮು-ಕಾಶ್ಮೀರ-ಲಡಾಖ್ ವಿಭಾಗಗಳ ಜನಸಾಮಾನ್ಯ ಮತದಾರರು ಓಟ್ ಮಾಡಿದ ಚುನಾವಣೆಯಲ್ಲ. ಜನರಿಂದ ಈ ಮೊದಲೇ ಚುನಾಯಿತರಾಗಿದ್ದ ಪಂಚಾಯಿತಿಗಳ `ಪಂಚ’ರು ಮತ್ತು `ಸರಪಂಚ’ರು ಮಾತ್ರವೇ ಮತದಾನ ಮಾಡಿದ ಚುನಾವಣೆ. ಹಾಗಾಗಿ ಶೇ.98ಕ್ಕು ಹೆಚ್ಚು ಮತದಾನ ಸಾಧ್ಯವಾಗಿತ್ತು.

ಪ್ರಮುಖ ಪಕ್ಷಗಳ ಬೈಕಾಟ್ ನ ಹೊರತಾಗಿಯೂ ಮೂರು ವಿಭಾಗಗಳ ೩೧೦ ಬ್ಲಾಕ್ ಗಳಲ್ಲಿ ಕೇವಲ 81 ಸ್ಥಾನಗಳನ್ನು ಮಾತ್ರ ಬಿಜೆಪಿ ಗಳಿಸಿಕೊಂಡಿದೆ. ಉಳಿದ 217 ಸ್ಥಾನಗಳು ಪಕ್ಷೇತರರ ಪಾಲಾಗಿವೆ. ಜಮ್ಮು ಮೂಲದ ಪ್ಯಾಂಥರ್ಸ್ ಪಾರ್ಟಿ 8 ಬ್ಲಾಕ್ ಗಳಲ್ಲಿ ಜಯ ಗಳಿಸಿದೆ. ಜಮ್ಮು ಕಾಶ್ಮೀರದ ಒಟ್ಟು 22 ಜಿಲ್ಲೆಗಳಲ್ಲಿ 19 ಜಿಲ್ಲೆಗಳಲ್ಲಿ ಪಕ್ಷೇತರರೇ ಪ್ರಾಬಲ್ಯ ಮೆರೆದಿದ್ದಾರೆ.

ಕಾಶ್ಮೀರದ 128 ಬ್ಲಾಕ್ ಗಳಲ್ಲಿ 109 ಸ್ಥಾನಗಳನ್ನು ಪಕ್ಷೇತರರು ಪಡೆದಿದ್ದಾರೆ. ಇಲ್ಲಿ ಬಿಜೆಪಿ 18 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಶ್ಮೀರ ವಿಭಾಗದ ಕುಪ್ವಾರ, ಬಂಡೀಪುರ, ಗಂಡರ್ ಬಾಲ್, ಶ್ರೀನಗರ ಕುಲ್ಗಾಮ್ ನಲ್ಲಿ ಬಿಜೆಪಿ ಶೂನ್ಯ ಫಲಿತಾಂಶ ದಾಖಲಿಸಿದೆ. ಇಲ್ಲಿಯೂ ಕೂಡ ಪಕ್ಷೇತರ ಅಭ್ಯರ್ಥಿಗಳೇ ಜಯ ಸಾಧಿಸಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯಲ್ಲಿ ಬಿಜೆಪಿ 1 ಸ್ಥಾನ ಗಳಿಸಿ ಮುಖಭಂಗ ಅನುಭವಿಸಿದೆ. ಪಕ್ಷೇತರರು 24 ಬ್ಲಾಕ್ ಗಳಲ್ಲಿ ಜಯ ದಾಖಲಿಸಿದ್ದಾರೆ. ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲ ಲಭಿಸಿಲ್ಲ.

ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ ಕಾನ್ಫರೆನ್ಸ್, ಪೀಪಲ್ ಡೆಮಾಕ್ರೆಟಿಕ್ ಪಾರ್ಟಿಯ ಯಾವುದೇ ನಾಯಕರು ಚುನಾವಣೆಯಲ್ಲಿ ಭಾಗಿಯಾಗಿರಲಿಲ್ಲ. ಅವರೆಲ್ಲರೂ ಗೃಹ ಬಂಧನದಲ್ಲಿದ್ದರು. ಹೀಗಾಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿರಲಿಲ್ಲ. ಕಾಂಗ್ರೆಸ್ ಕೂಡ ಕೊನೆಯ ಕ್ಷಣದಲ್ಲಿ ಚುನಾವಣೆಯಿಂದ ಹಿಂದೆ ಸರಿದಿತ್ತು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಪಕ್ಷಗಳು ಚುನಾವಣಾ ತಯಾರಿ ನಡೆಸಿರಲಿಲ್ಲ.

ಬಿಡಿಸಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ ಸ್ಪರ್ಧೆಗೆ ಇಳಿದಿತ್ತು. ಸಾಕಷ್ಟು ಚುನಾವಣಾ ತಯಾರಿ ನಡೆಸಿತ್ತು. ಪ್ರಾದೇಶಿಕ ಪಕ್ಷಗಳ ಸ್ಪರ್ಧೆಗೆ ಇಳಿಯದೇ ಇದ್ದ ನಡುವೆಯೂ ಬಿಜೆಪಿ ಸಾಕಷ್ಟು ಸ್ಥಾನಗಳನ್ನು ಗಳಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...