Homeಮುಖಪುಟಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

ಜಮ್ಮು ಕಾಶ್ಮೀರ ಬ್ಲಾಕ್ ಚುನಾವಣೆ: ಪಕ್ಷೇತರರನ್ನೂ ಮಣಿಸಲಾಗದ ಬಿಜೆಪಿ!

- Advertisement -
- Advertisement -

370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಜಮ್ಮು, ಕಾಶ್ಮೀರ, ಲಡಾಖ್‌ ಮೂರು ವಿಭಾಗಗಳ ೩೧೦   ಬ್ಲಾಕ್ ಗಳ ಅಧ್ಗಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಚಿತ್ರ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಇತಿಹಾಸದಲ್ಲೇ ಯಾವುದೇ ಒಂದು ರಾಜಕೀಯ ಪಕ್ಷಕ್ಕಿಂತ ಪಕ್ಷೇತರ ಅಭ್ಯರ್ಥಿಗಳೇ, ಹತ್ತಿರದ ಅತಿದೊಡ್ಡ ಪಕ್ಷ ಗಳಿಸಿದ ಸ್ಥಾನಗಳಿಗಿಂತ ಮೂರು ಪಟ್ಟು ಹೆಚ್ಚು ಸ್ಥಾನ ಗೆದ್ದಿರೋದು ಈ ಫಲಿತಾಂಶದ ವಿಶೇಷ. ಹೌದು, ಒಟ್ಟು 310 ಬ್ಲಾಕ್ ಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳೇ 217 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ 81 ಬ್ಲಾಕ್ ಗಳಲ್ಲಷ್ಟೇ ಜಯಗಳಿಸಿದೆ. ಅಂದಹಾಗೆ, ಜಮ್ಮು ಕಾಶ್ಮೀರದ ಜನರನ್ನು ಗೃಹಬಂಧನದಲ್ಲಿರಿಸಿ, ದೂರವಾಣಿ ಸಂಪರ್ಕವೂ ಇಲ್ಲದಂತೆ ಮಾಡಿ ಜಮ್ಮು ಕಾಶ್ಮೀರಕ್ಕಿದ್ದ ಸಾಂವಿಧಾನಿಕ 370 ಕಾಯ್ದೆಯನ್ನೇ ರದ್ದುಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸಲುವಾಗಿ ಜಮ್ಮು-ಕಾಶ್ಮೀರ ಕಣಿವೆಯ ಪ್ರಧಾನ ರಾಜಕೀಯ ಪಕ್ಷಗಳಾದ ನ್ಯಾಶನಲ್ ಕಾನ್ಫರೆನ್ಸ್ ಹಾಗೂ ಪಿಡಿಪಿ ಪಾರ್ಟಿಗಳು ಈ ಚುನಾವಣೆಯನ್ನು ಬಹಿಷ್ಕರಿಸಿದ್ದವು. ತಮ್ಮ ಅಧಿಕೃತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ.

ಅಷ್ಟಕ್ಕೂ ಇದು ಜಮ್ಮು-ಕಾಶ್ಮೀರ-ಲಡಾಖ್ ವಿಭಾಗಗಳ ಜನಸಾಮಾನ್ಯ ಮತದಾರರು ಓಟ್ ಮಾಡಿದ ಚುನಾವಣೆಯಲ್ಲ. ಜನರಿಂದ ಈ ಮೊದಲೇ ಚುನಾಯಿತರಾಗಿದ್ದ ಪಂಚಾಯಿತಿಗಳ `ಪಂಚ’ರು ಮತ್ತು `ಸರಪಂಚ’ರು ಮಾತ್ರವೇ ಮತದಾನ ಮಾಡಿದ ಚುನಾವಣೆ. ಹಾಗಾಗಿ ಶೇ.98ಕ್ಕು ಹೆಚ್ಚು ಮತದಾನ ಸಾಧ್ಯವಾಗಿತ್ತು.

ಪ್ರಮುಖ ಪಕ್ಷಗಳ ಬೈಕಾಟ್ ನ ಹೊರತಾಗಿಯೂ ಮೂರು ವಿಭಾಗಗಳ ೩೧೦ ಬ್ಲಾಕ್ ಗಳಲ್ಲಿ ಕೇವಲ 81 ಸ್ಥಾನಗಳನ್ನು ಮಾತ್ರ ಬಿಜೆಪಿ ಗಳಿಸಿಕೊಂಡಿದೆ. ಉಳಿದ 217 ಸ್ಥಾನಗಳು ಪಕ್ಷೇತರರ ಪಾಲಾಗಿವೆ. ಜಮ್ಮು ಮೂಲದ ಪ್ಯಾಂಥರ್ಸ್ ಪಾರ್ಟಿ 8 ಬ್ಲಾಕ್ ಗಳಲ್ಲಿ ಜಯ ಗಳಿಸಿದೆ. ಜಮ್ಮು ಕಾಶ್ಮೀರದ ಒಟ್ಟು 22 ಜಿಲ್ಲೆಗಳಲ್ಲಿ 19 ಜಿಲ್ಲೆಗಳಲ್ಲಿ ಪಕ್ಷೇತರರೇ ಪ್ರಾಬಲ್ಯ ಮೆರೆದಿದ್ದಾರೆ.

ಕಾಶ್ಮೀರದ 128 ಬ್ಲಾಕ್ ಗಳಲ್ಲಿ 109 ಸ್ಥಾನಗಳನ್ನು ಪಕ್ಷೇತರರು ಪಡೆದಿದ್ದಾರೆ. ಇಲ್ಲಿ ಬಿಜೆಪಿ 18 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಶ್ಮೀರ ವಿಭಾಗದ ಕುಪ್ವಾರ, ಬಂಡೀಪುರ, ಗಂಡರ್ ಬಾಲ್, ಶ್ರೀನಗರ ಕುಲ್ಗಾಮ್ ನಲ್ಲಿ ಬಿಜೆಪಿ ಶೂನ್ಯ ಫಲಿತಾಂಶ ದಾಖಲಿಸಿದೆ. ಇಲ್ಲಿಯೂ ಕೂಡ ಪಕ್ಷೇತರ ಅಭ್ಯರ್ಥಿಗಳೇ ಜಯ ಸಾಧಿಸಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯಲ್ಲಿ ಬಿಜೆಪಿ 1 ಸ್ಥಾನ ಗಳಿಸಿ ಮುಖಭಂಗ ಅನುಭವಿಸಿದೆ. ಪಕ್ಷೇತರರು 24 ಬ್ಲಾಕ್ ಗಳಲ್ಲಿ ಜಯ ದಾಖಲಿಸಿದ್ದಾರೆ. ಜಮ್ಮು-ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲ ಲಭಿಸಿಲ್ಲ.

ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ ಕಾನ್ಫರೆನ್ಸ್, ಪೀಪಲ್ ಡೆಮಾಕ್ರೆಟಿಕ್ ಪಾರ್ಟಿಯ ಯಾವುದೇ ನಾಯಕರು ಚುನಾವಣೆಯಲ್ಲಿ ಭಾಗಿಯಾಗಿರಲಿಲ್ಲ. ಅವರೆಲ್ಲರೂ ಗೃಹ ಬಂಧನದಲ್ಲಿದ್ದರು. ಹೀಗಾಗಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿರಲಿಲ್ಲ. ಕಾಂಗ್ರೆಸ್ ಕೂಡ ಕೊನೆಯ ಕ್ಷಣದಲ್ಲಿ ಚುನಾವಣೆಯಿಂದ ಹಿಂದೆ ಸರಿದಿತ್ತು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಪಕ್ಷಗಳು ಚುನಾವಣಾ ತಯಾರಿ ನಡೆಸಿರಲಿಲ್ಲ.

ಬಿಡಿಸಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ ಸ್ಪರ್ಧೆಗೆ ಇಳಿದಿತ್ತು. ಸಾಕಷ್ಟು ಚುನಾವಣಾ ತಯಾರಿ ನಡೆಸಿತ್ತು. ಪ್ರಾದೇಶಿಕ ಪಕ್ಷಗಳ ಸ್ಪರ್ಧೆಗೆ ಇಳಿಯದೇ ಇದ್ದ ನಡುವೆಯೂ ಬಿಜೆಪಿ ಸಾಕಷ್ಟು ಸ್ಥಾನಗಳನ್ನು ಗಳಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...