Homeಮುಖಪುಟಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

- Advertisement -
- Advertisement -

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಭಾನುವಾರ (ಸೆ.22) ಆಯ್ಕೆಯಾಗಿದ್ದಾರೆ.

ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಸ್ಸನಾಯಕೆ ಅವರು, 57,40,179 ಅಥವಾ 42.3% ಮತಗಳನ್ನು ಪಡೆದ್ದಾರೆ. ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು 45,30,902 ಅಥವಾ 32.8% ಮತಗಳ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ.

ದೇಶದ ಆರ್ಥಿಕತೆ ಕುಸಿದ ನಂತರ, ಎರಡು ವರ್ಷಗಳ ಹಿಂದೆ ಅಧಿಕಾರ ವಹಿಸಿಕೊಂಡ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಶೇ.20ಕ್ಕಿಂತ ಕಡಿಮೆ ಮತಗಳನ್ನು ಗಳಿಸಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ನೂತನ ಅಧ್ಯಕ್ಷರ ಪ್ರಮಾಣವಚನಕ್ಕೂ ಮುನ್ನ, ಇಂದು (ಸೆ.23) ಪ್ರಧಾನಿ ದಿನೇಶ್ ಗುಣವರ್ಧನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಭಾನುವಾರ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಕೊನೆಗೊಂಡಾಗ ಇಬ್ಬರು ಪ್ರಮುಖ ಅಭ್ಯರ್ಥಿಗಳಲ್ಲಿ ಯಾರೂ ಅಗತ್ಯವಿರುವ ಶೇ.50ರಷ್ಟು ಮತಗಳನ್ನು ಪಡೆದಿರಲಿಲ್ಲ. ಹಾಗಾಗಿ, ಎರಡನೇ ಸುತ್ತಿನ ಮತ ಎಣಿಕೆ ನಡೆಸಿ, ದಿಸ್ಸನಾಯಕೆ ಅವರ ಗೆಲುವನ್ನು ಘೋಷಿಸಲಾಯಿತು ಎಂದು ವರದಿಗಳು ಹೇಳಿವೆ.

ಶ್ರೀಲಂಕಾದ ಚುನಾವಣಾ ವ್ಯವಸ್ಥೆಯ ಅಡಿಯಲ್ಲಿ, ಮತದಾರರು ಮೂರು ಪ್ರಾಶಸ್ತ್ಯದ ಮತಗಳನ್ನು ಹಾಕುತ್ತಾರೆ. ಮೊದಲ ಎಣಿಕೆಯಲ್ಲಿ ಯಾವುದೇ ಅಭ್ಯರ್ಥಿಯು 50% ಮತಗಳನ್ನು ಗಳಿಸದಿದ್ದಲ್ಲಿ, ಅಗ್ರ ಎರಡು ಅಭ್ಯರ್ಥಿಗಳ ನಡುವೆ ಎರಡನೇ ಸುತ್ತಿನ ಎಣಿಕೆಯನ್ನು ನಡೆಸಲಾಗುತ್ತದೆ.

ಶನಿವಾರ (ಸೆ.21) ನಡೆದ ಚುನಾವಣೆಯಲ್ಲಿ ಶೇ.75ರಷ್ಟು ಮತದಾನವಾಗಿತ್ತು.

ತನ್ನ ಅಭೂತಪೂರ್ವ ಗೆಲುವಿನ ಕುರಿತು ಪ್ರತಿಕ್ರಿಯಿಸಿರುವ ದಿಸ್ಸನಾಯಕೆ ಅವರು “ಈ ಸಾಧನೆಯು ಯಾವುದೇ ಒಬ್ಬ ವ್ಯಕ್ತಿಯ ಕೆಲಸದ ಫಲಿತಾಂಶವಲ್ಲ. ಇದು ಲಕ್ಷಾಂತರ ಜನರ ಸಾಮೂಹಿಕ ಪ್ರಯತ್ನ. ನಿಮ್ಮ ಬದ್ಧತೆ ನಮ್ಮನ್ನು ಇಲ್ಲಿಯವರೆಗೆ ತಂದಿದೆ. ಅದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಗೆಲುವು ನಮ್ಮೆಲ್ಲರದ್ದು” ಎಂದು ಹೇಳಿದ್ದಾರೆ.

ವಿಡಿಯೋ ಹೇಳಿಕೆಯಲ್ಲಿ ನಿರ್ಗಮಿತ ಅಧ್ಯಕ್ಷ ವಿಕ್ರಮಸಿಂಘೆ ಅವರು ದಿಸ್ಸನಾಯಕೆ ಅವರನ್ನು ಅಭಿನಂದಿಸಿದ್ದು, ದೇಶದ ಆರ್ಥಿಕತೆಯನ್ನು ಅಭಿವೃದ್ದಿಪಡಿಸುವ ಪ್ರಯತ್ನಗಳನ್ನು ಅವರು ಮುಂದುವರಿಸುವ ಭರವಸೆ ವ್ಯಕ್ತಪಡಿಸಿದ್ದಾರೆ.

ದಿಸ್ಸನಾಯಕೆ ಯಾರು? 

ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಅವರ ಪಕ್ಷವು ಶ್ರೀಲಂಕಾ ಸಂಸತ್‌ನಲ್ಲಿ ಮೂರು ಸ್ಥಾನಗಳನ್ನು ಹೊಂದಿದೆ. ದಿಸ್ಸನಾಯಕೆ ಅವರು ನ್ಯಾ‍‍ಷನಲ್‌ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರೆಮುನಾ (ಜೆವಿಪಿ) ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.

ದಿಸ್ಸನಾಯಕೆ ಅವರ ಪಕ್ಷ ಸರ್ಕಾರದ ಜನರ ವಿರೋಧಿ ತೆರಿಗೆ ಮತ್ತು ಆರ್ಥಿಕ ನೀತಿಗಳ ವಿರುದ್ಧ ಹೋರಾಟ ನಡೆಸಿ ಶ್ರೀಲಂಕಾ ಜನತೆಯ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ.

2022ರಲ್ಲಿ ಶ್ರೀಲಂಕಾದಲ್ಲಿ ತೀವ್ರ ಅರ್ಥಿಕ ಬಿಕ್ಕಟ್ಟು ಉಂಟಾಗಿ ಹಣದುಬ್ಬರ ಗಗನಕ್ಕೇರಿತ್ತು. ಜನರಿಗೆ ಅಗತ್ಯ ವಸ್ತುಗಳ ಕೊರತೆ ಉಂಟಾಗಿ ಪರದಾಡುವಂತಾಗಿತ್ತು. ಆಗ ಸರ್ಕಾರದ ವಿರುದ್ದ ಹೋರಾಟ ರೂಪಿಸಿದ್ದರ ಹಿಂದೆ ದಿಸ್ಸನಾಯಕೆ ಅವರ ಪಾತ್ರ ದೊಡ್ಡದಿತ್ತು. ಅವರು ನೇರವಾಗಿ ಹೋರಾಟದ ನೇತೃತ್ವದ ವಹಿಸದಿದ್ದರೂ, ಜನರು ಹೋರಾಟ ಕೈಗೊಂಡಿದ್ದರ ಹಿಂದೆ ಅವರ ಪ್ರೇರೇಪಣೆಯಿತ್ತು ಎಂದು ವರದಿಗಳು ಹೇಳಿವೆ.

ರಾಜಪಕ್ಸೆ ಅವರ ರಾಜೀನಾಮೆಯ ನಂತರ ಉಂಟಾದ ನಾಯಕತ್ವದ ಕೊರತೆಯು ದಿಸ್ಸನಾಯಕೆಗೆ ಮತ್ತು ಅವರ ಪಕ್ಷಕ್ಕೆ ದೊಡ್ಡ ಅವಕಾಶ ಮಾಡಿ ಕೊಟ್ಟಿತು. ಭ್ರಮನಿರಸನಗೊಂಡ ನಾಗರಿಕರ ಜೊತೆ ನಿಂತ ದಿಸ್ಸನಾಯಕೆ,  ಸಾಮಾಜಿಕ ನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟ ಕೈಗೊಂಡಿದ್ದರು. ಅವೆಲ್ಲವೂ, ಈ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಗೊಂಡಂತಿದೆ.

ಇದನ್ನೂ ಓದಿ : ಜಮ್ಮು ಕಾಶ್ಮೀರ | ಅತಂತ್ರ ವಿಧಾನಸಭೆ ತಪ್ಪಿಸಲು ಕಾಂಗ್ರೆಸ್ ಜೊತೆ ಮೈತ್ರಿ: ಒಮರ್ ಅಬ್ದುಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...