Homeಮುಖಪುಟ'ಲಾಪತಾ ಲೇಡಿಸ್' | ಆಸ್ಕರ್ 2025 ಅಂಗಳಕ್ಕೆ ಕಿರಣ್ ರಾವ್ ನಿರ್ದೇಶನದ ಚಿತ್ರ

‘ಲಾಪತಾ ಲೇಡಿಸ್’ | ಆಸ್ಕರ್ 2025 ಅಂಗಳಕ್ಕೆ ಕಿರಣ್ ರಾವ್ ನಿರ್ದೇಶನದ ಚಿತ್ರ

- Advertisement -
- Advertisement -

ಸೂಕ್ಷ್ಮವಾದ ವಿಚಾರಗಳನ್ನು ಸರಳವಾಗಿ ಹೇಳುವ ಮೂಲಕ ಪ್ರೇಕ್ಷಕರ ಹೃದಯವನ್ನು ಗೆದ್ದ ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡಿಸ್’ ಪ್ರತಿಷ್ಠಿತ ಆಸ್ಕರ್‌ ಸ್ಪರ್ಧೆಗೆ ಆಯ್ಕೆಯಾಗಿದೆ. ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಆಸ್ಕರ್ 2025 ಗೆ ಭಾರತದ ಅಧಿಕೃತ ಪ್ರವೇಶ ಎಂದು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಾನು ಬರುವಾ ನೇತೃತ್ವದ ಆಯ್ಕೆ ಸಮಿತಿಯು ಆಯ್ಕೆ ಪಟ್ಟಿಯಲ್ಲಿ ಇದ್ದ ‘ಅನಿಮಲ್’ ಮತ್ತು ‘ಆಟ್ಟಂ’ ನಂತಹ 29 ಪ್ರತಿಸ್ಪರ್ಧಿಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರವನ್ನು ಆಸ್ಕರ್‌ ಅಂಗಳದಲ್ಲಿ ಇಟ್ಟಿದೆ. ತಮ್ಮ ಚಿತ್ರವು ಆಸ್ಕರ್‌ಗೆ ಆಯ್ಕೆಯಾಗಿರುವ ಬಗ್ಗೆ ಪಿಟಿಐಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕಿ ಕಿರಣ್ ರಾವ್ ಅವರು, ಬಹುದಿನದ ಕನಸು ನನಸಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

‘ಲಾಪತಾ ಲೇಡಿಸ್’

ಕಿರಣ್ ರಾವ್ ಅವರು ನಿರ್ದೇಶಿಸಿರುವ ಈ ಚಿತ್ರವನ್ನು ಅವರ ಮಾಜಿ ಪತಿ, ಸೂಪರ್‌ಸ್ಟಾರ್ ಅಮೀರ್ ಖಾನ್ ಅವರು ನಿರ್ಮಿಸಿದ್ದಾರೆ. ಚಿತ್ರವು ಭಾರತದ ಗ್ರಾಮೀಣ ಭಾಗದಲ್ಲಿ ಇರುವ ಪುರುಷಪ್ರಧಾನ ಸಮಾಜದ ಕತೆಯನ್ನು ಹೇಳುತ್ತದೆ. ಸ್ತ್ರೀ ಸಬಲೀಕರಣದ ಕುರಿತು ಹೃದಯಸ್ಪರ್ಶಿ ಸಂದೇಶವನ್ನು ನೀಡುವ ಚಿತ್ರವನ್ನು ನವಿರಾಗಿ ನಿರೂಪಿಸಲಾಗಿದೆ. ಕೃತಿಯು ಆರ್ಟ್‌ ಮಾದರಿಯಲ್ಲಿದ್ದರೂ ಕಮರ್ಶಿಯಲ್ ಆಗಿ ಗೆದ್ದಿದೆ.

ಇದನ್ನೂಓದಿ: ‘ನನ್ನ ಪರಿಸ್ಥಿತಿ ರಾಮನ ಅನುಪಸ್ಥಿತಿಯ ಭರತನಂತಿದೆ..’ ಎಂದ ದೆಹಲಿ ನೂತನ ಮುಖ್ಯಮಂತ್ರಿ ಅತಿಶಿ

ಈಗಷ್ಟೆ ಮದುವೆ ಮುಗಿಸಿದ ಜೋಡಿಗಳು ರೈಲಿನಲ್ಲಿ ಪ್ರಯಾಣಿಸುತ್ತದೆ. ಆದರೆ ರೈಲು ತುಂಬಾ ನವವಿವಾಹಿತರ ಹಲವು ಜೋಡಿಗಳು ತುಂಬಿದ್ದು, ಆಕಸ್ಮಿಕವಾಗಿ ನಾಯಕ ತನ್ನ ವಧುವಿನ ಬದಲಿಗೆ ಬೇರೊಂದು ವಧುವನ್ನು ತನ್ನ ಜೊತೆಗೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿಂದ ಚಿತ್ರವೂ ಗ್ರಾಮೀಣ ಭಾರತದ ಅದರಲ್ಲೂ ಉತ್ತರ ಭಾರತದ ಪರಿಸ್ಥಿತಿಯನ್ನು ಚಿತ್ರವೂ ಒಂದೊಂದಾಗಿ ಮುಂದಿಡುತ್ತಾ ಹೋಗುತ್ತದೆ.

ಈ ಹಿಂದೆ ಚಿತ್ರ 48 ನೇ ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (TIFF) ಪ್ರದರ್ಶಿಸಲಾಯಿತು. ಬಿಡುಗಡೆಯ ನಂತರ, ತನ್ನ ಚಿತ್ರಕಥೆ ಮತ್ತು ಪ್ರಮುಖ ಪಾತ್ರದಾರಿಗಳ ನಟನೆಗೆ ವಿಮರ್ಶಕರಿಂದ ಭಾರಿ ಮೆಚ್ಚುಗೆಯ ವಿಮರ್ಶೆಗಳನ್ನು ಗಳಿಸಿತ್ತು. ಏಪ್ರಿಲ್ 26 ರಂದು ಚಿತ್ರವು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಗೊಂಡಿದೆ. ಅಲ್ಲಿ ಚಿತ್ರವನ್ನು ವೀಕ್ಷಿಸಬಹುದಾಗಿದೆ.

ಚಿತ್ರದಲ್ಲಿ ಸ್ಪರ್ಶ ಶ್ರೀವಾಸ್ತವ ಜೊತೆಗೆ ನಿತಾಂಶಿ ಗೋಯೆಲ್, ಪ್ರತಿಭಾ ರಂತ, ಛಾಯಾ ಕದಮ್ ಮತ್ತು ರವಿ ಕಿಶನ್ ನಟಿಸಿದ್ದಾರೆ. ಬಿಪ್ಲಬ್ ಗೋಸ್ವಾಮಿ ಅವರ ‘ಟೂ ಬ್ರೈಡ್ಸ್’ ಚಿತ್ರಕಥೆಯನ್ನು ಆಧರಿಸಿದೆ.

ವಿಡಿಯೊ ನೋಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...