Homeಮುಖಪುಟ೪೮ ಸಾವಿರ ಸಾರಿಗೆ ನೌಕರರ ನೋವನ್ನು ಅಪಹಾಸ್ಯ ಮಾಡಿದ ತೆಲಂಗಾಣ ಸಿಎಂ ಕೆಸಿಆರ್‌

೪೮ ಸಾವಿರ ಸಾರಿಗೆ ನೌಕರರ ನೋವನ್ನು ಅಪಹಾಸ್ಯ ಮಾಡಿದ ತೆಲಂಗಾಣ ಸಿಎಂ ಕೆಸಿಆರ್‌

- Advertisement -
- Advertisement -

ತೆಲಂಗಾಣದಲ್ಲಿ ಟಿಎಸ್‌ಆರ್‌ಟಿಸಿ ( ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ) ಮತ್ತು ಸರ್ಕಾರದ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಆರ್‌ಟಿಸಿ ಯನ್ನು ಸರ್ಕಾರದೊಳಗೆ ವಿಲೀನಗೊಳಿಸಬೇಕು ಮತ್ತು ಚಾಲಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ೪೮ ಸಾವಿರ ಮಂದಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ಸತತ ೨೦ ದಿನಗಳಿಂದ ಅಂದರೆ ಅಕ್ಟೋಬರ್‌ ೫ರಿಂದ ಎಲ್ಲಾ ಆರ್‌ಟಿಸಿ ಚಾಲಕರು ಬೀದಿಗಿಳಿದು ಧರಣಿ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳು ಆರ್‌ಟಿಸಿ ನಡೆಸುತ್ತಿರುವ ಹೋರಾಟಕ್ಕೆ ಸಾಥ್‌ ನೀಡಿವೆ. ಆದರೆ ಸಮಸ್ಯೆ ಆಲಿಸಿ, ಸೂಕ್ಷ್ಮವಾಗಿ ವಿಷಯವನ್ನು ಇತ್ಯರ್ಥಗೊಳಿಸಬೇಕಿದ್ದ ತೆಲಂಗಾಣ ಸಿಎಂ ಕೆ.ಸಿ.ಚಂದ್ರಶೇಖರ್‌ ರಾವ್‌ ದುರ್ವರ್ತನೆ, ಅಹಂಕಾರದ ಮಾತುಗಳನ್ನಾಡಿದ್ದಾರೆ.

ಹುಜುರ್‌ನಗರ ಉಪಚುನಾವಣೆ ಗೆಲುವಿನ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಟಿಎಸ್‌ಆರ್‌ಟಿಸಿ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಆರ್‌ಟಿಸಿ ದಿವಾಳಿಯಾಗಿದ್ದು, ಇನ್ನೇನು ಕೆಲ ದಿನಗಳಲ್ಲಿ ಮುಚ್ಚಿ ಹೋಗಲಿದೆ. ಆರ್‌ಟಿಸಿಯನ್ನು ಬಂದ್‌ ಮಾಡುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಪ್ರತಿಭಟನಾಕಾರರೇ ಇದಕ್ಕೆ ಉತ್ತಮ ಅವಕಾಶ ಒದಗಿಸಿದ್ದಾರೆ. ಇದೇ ಕೊನೆಯ ಪ್ರತಿಭಟನೆಯೊಂದಿಗೆ ಆರ್‌ಟಿಸಿ ಮುಕ್ತಿ ಹೊಂದಲಿದೆ’ ಎಂದು ಅಪಹಾಸ್ಯದ ಮಾತುಗಳನ್ನಾಡಿದ್ದಾರೆ.

ಆರ್‌ಟಿಸಿ ಮತ್ತು ವಿಪಕ್ಷಗಳ ವಿರುದ್ಧ ಕೆಸಿಆರ್‌ ವಾಗ್ದಾಳಿ ನಡೆಸಿದರು. ’ಸದ್ಯದ ಪರಿಸ್ಥಿತಿಯ ಲಾಭ ಪಡೆದು ಚಾಲಕರಿಗೆ ಪ್ರಚೋದನೆ ನೀಡಲಾಗುತ್ತಿದೆ. ವೋಟ್‌ ಬ್ಯಾಂಕ್‌ಗಾಗಿ ಇಷ್ಟೆಲ್ಲಾ ಮಾಡಲಾಗುತ್ತಿದೆ. ಟ್ರೇಡ್‌ ಯೂನಿಯನ್‌ ನಾಯಕರು, ಮುಗ್ಧ ನೌಕರರು ಮತ್ತು ಅವರ ಕುಟುಂಬದ ಜತೆ ಚೆಲ್ಲಾಟವಾಡುತ್ತಿದ್ದಾರ’ ಎಂದರು.

’ಈಗಾಗಲೇ ಆರ್ಥಿಕ ಕುಸಿತ ಉಂಟಾಗಿದೆ. ನೌಕರರಿಗೆ ನೀಡಲು ಹಣವಿಲ್ಲ. ಧರಣಿ ನಿರತರ ಸಂಬಳವನ್ನು ಕತ್ತರಿಸಲಾಗುವುದು. ಅಲ್ಲದೇ ಮುಂದೆ ಅವರನ್ನು ಬಿಡಿಸಿಕೊಂಡು ಬರಲೂ ಸಹ ಹಣವಿಲ್ಲದಂತಾಗಬಹುದು. ಹಬ್ಬದ ದಿನಗಳಲ್ಲಿ ಈ ರೀತಿ ಪ್ರತಿಭಟನೆ ನಡೆಸುತ್ತಿರುವುದರಿಂದ ಆರ್‌ಟಿಸಿ ಗೆ ೧೨೫ ರಿಂದ ೧೫೦ ಕೋಟಿ ರೂಪಾಯಿ ನಷ್ಟವಾಗಲಿದೆ’ ಎಂದು ಹೇಳಿದರು.

ಇತ್ತ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಹೋರಾಟ ನಡೆಸುತ್ತಿರುವವರಲ್ಲಿ ಇಬ್ಬರು ನೌಕರರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಸಿಆರ್‌ ಪ್ರತಿಕ್ರಿಯೆಗೆ ಟಿಎಸ್‌ಆರ್‌ಟಿಸಿ ಮತ್ತು ಜೆಎಸಿ (ಜಂಟಿ ಕ್ರಿಯಾ ಸಮಿತಿ)ಯ ಸಂಚಾಲಕ ಅಶ್ವತ್ಥಾಮ್‌ ರೆಡ್ಡಿ ತೀವ್ರ ವಿರೋಧ ವ್ಯಕ್ತಪಡಿಸಿ್ದ್ದಾರೆ. ’ಕೆಸಿಆರ್‌ ದುರ್ವರ್ತನೆ ಮಿತಿ ಮೀರಿದೆ. ಆರ್‌ಟಿಸಿ ಯಾರಪ್ಪನ ಸೊತ್ತಲ್ಲ. ಕೆಸಿಆರ್‌ ಮಾತು ಖಂಡನಾರ್ಹ ಮತ್ತು ಪ್ರತಿಭಟನಾನಿರತರಿಗೆ ನೋವುಂಟು ಮಾಡಿದೆ. ೧೯೩೨ರಿಂದ ಆರ್‌ಟಿಸಿ ಜಾರಿಯಲ್ಲಿದೆ. ಯಾರು ಕೊನೆಯಾಗುತ್ತಾರೆ ಎಂಬುದನ್ನು ಜನ ನಿರ್ಧರಿಸುತ್ತಾರೆ’  ಎಂದು ಅಶ್ವತ್ಥಾಮ್‌ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...