Homeಅಂತರಾಷ್ಟ್ರೀಯಶ್ರೀಲಂಕಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಅನುರಾ ಕುಮಾರ ದಿಸ್ಸನಾಯಕೆ

ಶ್ರೀಲಂಕಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಅನುರಾ ಕುಮಾರ ದಿಸ್ಸನಾಯಕೆ

- Advertisement -
- Advertisement -

ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಂತರ ‘ಜನತಾ ವಿಮಿಕ್ತಿ ಪೆರಮುನ (ಜೆವಿಪಿ)ಯ’ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಶ್ರೀಲಂಕಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ದಿಸಾನಾಯಕೆ, ತಮ್ಮ ಮುಂದಿರುವ ಮಹತ್ವದ ಸವಾಲುಗಳನ್ನು ಒಪ್ಪಿಕೊಂಡರು. ಬಿಕ್ಕಟ್ಟನ್ನು ನಿಭಾಯಿಸಲು ಸಾಮೂಹಿಕ ಪ್ರಯತ್ನಗಳ ಅಗತ್ಯವನ್ನು ಒತ್ತಿ ಹೇಳಿದ ಅವರು, “ಈ ಆಳವಾದ ಬಿಕ್ಕಟ್ಟನ್ನು ಸರ್ಕಾರ, ಏಕ ಪಕ್ಷ ಅಥವಾ ವ್ಯಕ್ತಿ ಮಾತ್ರ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ನಾವು ನಂಬುವುದಿಲ್ಲ” ಎಂದರು.

“ನಾನು ಮಾಂತ್ರಿಕನಲ್ಲ; ಸಾಮಾನ್ಯ ನಾಗರಿಕ ಎಂದು ನಾನು ಮೊದಲೇ ಹೇಳಿದ್ದೇನೆ. ನನಗೆ ತಿಳಿದಿರುವ ಮತ್ತು ಗೊತ್ತಿಲ್ಲದ ವಿಷಯಗಳಿವೆ. ಈ ದೇಶವನ್ನು ಮೇಲಕ್ಕೆತ್ತಲು ಜ್ಞಾನ ಮತ್ತು ಕೌಶಲ್ಯ ಹೊಂದಿರುವವರನ್ನು ಒಟ್ಟುಗೂಡಿಸುವುದು ನನ್ನ ಗುರಿಯಾಗಿದೆ” ಎಂದು ಅವರು ಹೇಳಿದರು.

“ನಾನು ಇದನ್ನು ಸಾಧಿಸಲು ಬದ್ಧನಾಗಿದ್ದೇನೆ; ರಾಜಕೀಯ ವ್ಯವಸ್ಥೆಯಲ್ಲಿ ಜನರ ಗೌರವ ಮತ್ತು ನಂಬಿಕೆಯನ್ನು ಮರಳಿ ಪಡೆಯಲು ನಾವು ಎಲ್ಲವನ್ನೂ ಮಾಡುತ್ತೇವೆ.. ನಾವು ಪ್ರಜಾಪ್ರಭುತ್ವವನ್ನು ಬಲಪಡಿಸಬೇಕಾಗಿದೆ. ಪ್ರಜಾಪ್ರಭುತ್ವವನ್ನು ಕಾಪಾಡಲು ನನ್ನ ಕೈಲಾದಷ್ಟು ಮಾಡುವುದಾಗಿ ನಾನು ಪ್ರತಿಜ್ಞೆ ಮಾಡುತ್ತೇನೆ” ಎಂದು ಅವರು ಹೇಳಿದರು.

55 ವರ್ಷದ ದಿಸ್ಸನಾಯಕೆ ಅವರು 36 ಅಭ್ಯರ್ಥಿಗಳೊಂದಿಗೆ 4,530,902 ಮತಗಳನ್ನು ಗಳಿಸಿದ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರನ್ನು ಸೋಲಿಸಿದರು. ಅವರು ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ, ಪ್ರಧಾನ ಮಂತ್ರಿ ಸ್ಥಾನಕ್ಕೆ ದಿನೇಶ್ ಗುಣವರ್ಧನರ ರಾಜೀನಾಮೆ ನೀಡಬೇಕಾಯಿತು. ಹೊಸ ಪ್ರಧಾನ ಮಂತ್ರಿ ಮತ್ತು ಕ್ಯಾಬಿನೆಟ್ ಅನ್ನು ನೇಮಿಸಲು ದಿಸ್ಸನಾಯಕೆ ಅವರಿಗೆ ಈ ಚುನಾವಣಾ ಫಲಿತಾಂಶ ಅವಕಾಶ ಮಾಡಿಕೊಟ್ಟಿದೆ.

ನ್ಯಾಶನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟವನ್ನು ಮುನ್ನಡೆಸುವ ಜೆವಿಪಿಯು ಕ್ರಾಂತಿಕಾರಿ ಹಿನ್ನೆಲೆ ಹೊಂದಿದೆ. 1970 ಮತ್ತು 1980 ರ ದಶಕಗಳ ಸಮಾಜವಾದಿ ಹೋರಾಟದಲ್ಲಿ ಎರಡು ವಿಫಲ ಸಶಸ್ತ್ರ ದಂಗೆಗಳನ್ನು ನಡೆಸಿತು. ಮುಂದಿನ ವರ್ಷಗಳಲ್ಲಿ, ಜೆವಿಪಿ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಪರಿವರ್ತನೆಯಾಯಿತು. ಸಾಂದರ್ಭಿಕವಾಗಿ ವಿವಿಧ ಅಧ್ಯಕ್ಷರನ್ನು ಬೆಂಬಲಿಸುವಾಗ ವಿರೋಧ ಪಕ್ಷದಲ್ಲಿ ಉಳಿಯಿತು.

ಅಧ್ಯಕ್ಷರಾಗಿ, ದಿಸಾನಾಯಕೆ ಅವರು ದೇಶದ ತೀವ್ರ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವ ಕೆಲಸವನ್ನು ಎದುರಿಸುತ್ತಾರೆ. ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌)ನ $3 ಶತಕೋಟಿ ಪರಿಹಾರ ಒಪ್ಪಂದದ ಅಡಿಯಲ್ಲಿ ಅವರ ಹಿಂದಿನ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಪರಿಚಯಿಸಿದ ಕಠಿಣ ಕ್ರಮಗಳನ್ನು ಪರಿಹರಿಸುವುದು ಅವರ ತಕ್ಷಣದ ಸವಾಲುಗಳಲ್ಲಿ ಒಂದಾಗಿದೆ. ವಿಕ್ರಮಸಿಂಘೆ ಅವರು ಒಪ್ಪಂದದಲ್ಲಿ ಯಾವುದೇ ಬದಲಾವಣೆಗಳು ಹೆಚ್ಚು ಅಗತ್ಯವಿರುವ ಹಣಕಾಸಿನ ನೆರವು ವಿಳಂಬವಾಗಬಹುದು ಎಂದು ಎಚ್ಚರಿಸಿದ್ದಾರೆ.

ಅಭಿನಂದಿಸಿದ ಮೋದಿ

ನೂತನವಾಗಿ ಆಯ್ಕೆಯಾದ ಸ್ರೀಲಂಕಾ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. “ನಮ್ಮ ಜನರು ಮತ್ತು ಇಡೀ ಪ್ರದೇಶದ ಪ್ರಯೋಜನಕ್ಕಾಗಿ ನಮ್ಮ ಬಹುಮುಖಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಮೋದಿ ಹೇಳಿದ್ದಾರೆ.

ಭಾರತದ ನೆರೆಹೊರೆಯ ಮೊದಲ ನೀತಿ ಮತ್ತು ವಿಷನ್ ಸಾಗರ್‌ಗೆ ಶ್ರೀಲಂಕಾ “ವಿಶೇಷ ಸ್ಥಾನ” ವನ್ನು ಹೊಂದಿದೆ ಎಂದು ಪ್ರಧಾನಿ ಹೇಳಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ ದಿಸ್ಸನಾಯಕೆ, “ನಮ್ಮ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವ ನಿಮ್ಮ ಬದ್ಧತೆಯನ್ನು ನಾನು ಹಂಚಿಕೊಳ್ಳುತ್ತೇನೆ. ನಮ್ಮ ಜನರು ಮತ್ತು ಇಡೀ ಪ್ರದೇಶದ ಪ್ರಯೋಜನಕ್ಕಾಗಿ ಸಹಕಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಟ್ಟಾಗಿ ನಾವು ಕೆಲಸ ಮಾಡಬಹುದು” ಎಂದು ಹೇಳಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಿಸ್ಸನಾಯಕೆ ಅವರಿಗೆ ಅಭಿನಂದನೆ ಸಲ್ಲಿಸಿದರು. “ನಮ್ಮ ದೇಶಗಳು ಪರಸ್ಪರ ಬೆಳವಣಿಗೆ ಮತ್ತು ಪ್ರಗತಿಗೆ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿ” ಎಂದು ಹೇಳಿದರು.

ಇದನ್ನೂ ಓದಿ; ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...