HomeUncategorizedಚನ್ನರಾಯಪಟ್ಟಣ ರೈತ ಹೋರಾಟ | ಅಕ್ಟೋಬರ್ ಅಂತ್ಯದೊಳಗೆ ಸಮಸ್ಯೆ ಬಗೆಹರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಚನ್ನರಾಯಪಟ್ಟಣ ರೈತ ಹೋರಾಟ | ಅಕ್ಟೋಬರ್ ಅಂತ್ಯದೊಳಗೆ ಸಮಸ್ಯೆ ಬಗೆಹರಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

- Advertisement -
- Advertisement -

ಅಕ್ಟೋಬರ್ ಅಂತ್ಯದೊಳಗೆ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗಕ್ಕೆ ಸೋಮವಾರ ಭರವಸೆ ನೀಡಿದ್ದಾರೆ. ಉಸ್ತುವಾರಿ ಸಚಿವರು ಮತ್ತು ಬೃಹತ್ ಕೈಗಾರಿಕಾ ಸಚಿವರು ಸಭೆ ನಡೆಸಿ ರೈತರ ಸಮಸ್ಯೆಯನ್ನು ಬಗೆಹರಿಸುವ ತೀರ್ಮಾನಕ್ಕೆ ಬರಲಾಗುವುದು ಎಂದು ಅವರು ಹೇಳಿದ್ದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸೇರಿದ್ದ ಸಭೆಯಲ್ಲಿ ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿ.ಸಿ. ಬಯ್ಯಾರೆಡ್ಡಿ ಮಾತನಾಡಿ, “ಚನ್ನರಾಯಪಟ್ಟಣ ಹೋಬಳಿಯಲ್ಲಿ 4 ಬಾರಿ ಭೂಸ್ವಾಧೀನ ಮಾಡಿಕೊಂಡಿದ್ದು ರೈತರು ಈಗಾಗಲೇ ಬಹುಪಾಲು ಭೂಮಿ ಕಳೆದುಕೊಂಡಿದ್ದಾರೆ. ಉಳಿದಿರುವುದು ಅಲ್ಪಸ್ವಲ್ಪ ಭೂಮಿ ಮಾತ್ರ. ಈ ಭೂಮಿಯನ್ನು ಸ್ವಾದೀನ ಪ್ರಕ್ರಿಯೆಯಿಂದ ಕೈಬಿಡಲೇಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷದಲ್ಲಿ ಇದ್ದಾಗ ಧರಣಿ ಸ್ಥಳಕ್ಕೆ ಬಂದು ರೈತರ ಪರ ನಿಲ್ಲುವುದಾಗಿ ಭರವಸೆ ನೀಡಿದ್ದೀರಿ” ಎಂದು ನೆನಪು ಮಾಡಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮೂವರಿಗೆ ಜಾಮೀನು; ದರ್ಶನ್ ಅರ್ಜಿ ಸೆ.27ಕ್ಕೆ ಮುಂದೂಡಿಕೆ

ಕರ್ನಾಟಕ ರಾಜ್ಯ ರೈತಸಂಘದ ಬಡಗಲಪುರ ನಾಗೇಂದ್ರ, ಹೋರಾಟ ಸಮಿತಿಯ ಕಾರಳ್ಳಿ ಶ್ರೀನಿವಾಸ್, ಮಾರೇಗೌಡ ಕೂಡ ದ್ವನಿಗೂಡಿಸಿ, ಅದೇ ಭೂಮಿಯಲ್ಲಿ ಬೆಂಗಳೂರಿಗೆ ಬೇಕಾದ ಹಣ್ಣು ತರಕಾರಿ, ಹೂವು ಎಲ್ಲವನ್ನೂ ಬೆಳೆಯುತ್ತಿದ್ದೇವೆ. ರೈತರ ವಾಸದ ಮನೆಗಳು, ಕೋಳಿಪಾರಂ ಸೇರಿದಂತೆ ಸುಮಾರು ಆರ್ಥಿಕ ಚಟುವಟಿಕೆಗಳು ಕೂಡ ಇದೇ ಭೂಮಿಯಲ್ಲಿ ನಡೆಯುತ್ತಿವೆ. ಆದ್ದರಿಂದ ಭೂಮಿಯನ್ನು ಸ್ವಾಧೀನದಿಂದ ಕೈಬಿಟ್ಟು ರೈತರನ್ನು ರಕ್ಷಿಸಬೇಕು ಎಂದು ಹೇಳಿದರು.

ಹೋರಾಟಗಾರರ ಮಾತು ಕೇಳಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಹೌದು ನಾನು ಅಧಿಕಾರಕ್ಕೆ ಬಂದಾಗ ರೈತರ ಪರವಾರ ನಿರ್ಧಾರ ಮಾಡೋಣ ಎಂದು ಹೇಳಿದ್ದೇನೆ. ಈ ಸಭೆಯಲ್ಲಿ ತೀರ್ಮಾನಕ್ಕೆ ಬರಲು ಬೇಕಾದ ತಯಾರಿ ಇಲ್ಲವಾದ್ದರಿಂದ, ಈ ಕುರಿತು ಮಾಹಿತಿ ತರೆಸಿಕೊಂಡು ಪರಿಶೀಲಿಸಿ ಅಕ್ಟೋಬರ್‌ ತಿಂಗಳಲ್ಲಿ ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರೋಣ ಎಂದು ತಿಳಿಸಿದ್ದಾಗಿ ಹೋರಾಟಗಾರರು ತಿಳಿಸಿದ್ದಾರೆ.

ಈ ವೇಳೆ ಮುಂದಿನ ದಿನಾಂಕವನ್ನು ಇಂದೇ ನಿಗದಿಪಡಿಸಿ ಎಂದು ರೈತರು ಪಟ್ಟು ಹಿಡಿದಾಗ, ದಸರಾ ಹಬ್ಬದ ನಂತರ ತಿಂಗಳ ಕೊನೆಯೊಳಗೆ ಒಂದು ದಿನಾಂಕ ನಿಗದಿಪಡಿಸಿ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಭೆಯಲ್ಲಿ, ಕರ್ನಾಟಕ ಪ್ರಾಂತ್ಯ ರೈತಸಂಘದ ಪ್ರಭಾ ಬೆಳವಂಗಲ, ಚಂದ್ರ ತೇಜಸ್ವಿ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಂಜಪ್ಪ, ಅಶ್ವತ್ಥಪ್ಪ, ರಾಮಚಂದ್ರಪ್ಪ, ಗೋಪಿನಾಥ್ ಸೇರಿದಂತೆ ರೈತ ಮುಖಂಡರು ಭಾಗಿಯಾಗಿದ್ದರು.

ವಿಡಿಯೊ ನೋಡಿ: ನಂಗ ಜೇನು ಕುರುಬ ಮಕ್ಕಾಳು.. ದೂರಿ ದೂರಿ, ನಂಗ ಕಾಡಿನ ಅರಸಾರು.. ದೂರಿ ದೂರಿ – ಜೇನು ಕುರುಬರ ಹಾಡು ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...