Homeಮುಖಪುಟಲೆಬನಾನ್‌ ಮೇಲೆ ಇಸ್ರೇಲ್ ವೈಮಾನಿಕ ದಾಳಿ | 492 ಜನರು ಸಾವು ; ಸಾವಿರಕ್ಕೂ ಅಧಿಕ...

ಲೆಬನಾನ್‌ ಮೇಲೆ ಇಸ್ರೇಲ್ ವೈಮಾನಿಕ ದಾಳಿ | 492 ಜನರು ಸಾವು ; ಸಾವಿರಕ್ಕೂ ಅಧಿಕ ಮಂದಿಗೆ ಗಾಯ

- Advertisement -
- Advertisement -

ಲೆಬನಾನ್‌ನಲ್ಲಿ ಹೆಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಸೋಮವಾರ (ಸೆ.23) ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ 492 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ಹೇಳಿದ್ದು, ಕಳೆದ 20 ವರ್ಷಗಳ ಸಂಘರ್ಷದಲ್ಲಿ ಅತಿ ದೊಡ್ಡ ದಾಳಿ ಇದು ಎಂದು ತಿಳಿಸಿದೆ.

ಈ ಸುದ್ದಿ ಬರೆಯುವ ಹೊತ್ತಿಗೆ (ಸೆ.24, ಬೆಳಿಗ್ಗೆ 8 ಗಂಟೆ) 492 ಜನರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ವರದಿ ಮಾಡಿತ್ತು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಸತ್ತವರಲ್ಲಿ 35 ಮಕ್ಕಳು ಮತ್ತು 58 ಮಹಿಳೆಯರು ಸೇರಿದ್ದಾರೆ. ದಾಳಿಯಲ್ಲಿ 1,645 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಸತ್ತವರಲ್ಲಿ ಎಷ್ಟು ಮಂದಿ ನಾಗರಿಕರು, ಎಷ್ಟು ಮಂದಿ ಯೋಧರಿದ್ದಾರೆ ಎಂಬ ಮಾಹಿತಿ ದೊರೆತಿಲ್ಲ.

ದಾಳಿಯ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್, 2006ರ ಯುದ್ಧದ ನಂತರ ಸಶಸ್ತ್ರ ಗುಂಪು ಹೆಜ್ಬುಲ್ಲಾ ನಿರ್ಮಿಸಿದ ಮೂಲಸೌಕರ್ಯಗಳನ್ನು ನಾಶಪಡಿಸಲು, ಅದರ 1,300 ತಾಣಗಳನ್ನು ಗುರಿಯಾಗಿಸಲಾಗಿದೆ ಎಂದು ಹೇಳಿದೆ. ಆದ್ದರಿಂದ, ಸಾವಿರಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದಿವೆ ಎಂದು ಬಿಬಿಸಿ ವರದಿ ಹೇಳಿದೆ.

ದಾಳಿಗೆ ಪ್ರತಿರೋಧವಾಗಿ ಉತ್ತರ ಇಸ್ರೇಲ್‌ಗೆ ಹೆಜ್ಬುಲ್ಲಾ 200ಕ್ಕೂ ಹೆಚ್ಚು ರಾಕೆಟ್‌ಗಳನ್ನು
ಉಡಾಯಿಸಿದೆ. ಇದರಿಂದ ಇಬ್ಬರು ಗಾಯಗೊಂಡಿದ್ದಾರೆ.

ಎರಡೂ ಕಡೆಯವರು ಸಂಪೂರ್ಣ ಯುದ್ದೋತ್ಸಾಹದಲ್ಲಿರುವುದರಿಂದ ಆತಂಕ ವ್ಯಕ್ತಪಡಿಸಿರುವ ವಿಶ್ವದ ಪ್ರಮುಖ ರಾಷ್ಟ್ರಗಳು ಮತ್ತು ನಾಯಕರು, ಸಂಯಮ ಪಾಲಿಸುವಂತೆ ಆಗ್ರಹಿಸಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಉಲ್ಬಣಗೊಳ್ಳುತ್ತಿರುವ ಯುದ್ಧ ಪರಿಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, “ಲೆಬನಾನ್ ಮತ್ತೊಂದು ಗಾಝಾ ಅಗುವುದನ್ನು ಬಯಸುವುದಿಲ್ಲ” ಎಂದಿದ್ದಾರೆ.

“ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ವಿಶ್ವ ನಾಯಕರ ಸಭೆಗೆ ಮುಂಚಿತವಾಗಿ ಸಂಘರ್ಷ ಹೆಚ್ಚುತ್ತಿರುವುದು ಅತ್ಯಂತ ಅಪಾಯಕಾರಿ ಮತ್ತು ಆತಂಕಕಾರಿ. ನಾವು ಬಹುತೇಕ ಪೂರ್ಣ ಪ್ರಮಾಣದ ಯುದ್ಧದಲ್ಲಿದ್ದೇವೆ” ಎಂದು ಯುರೋಪಿಯನ್ ಒಕ್ಕೂಟದ ವಿದೇಶಾಂಗ ವ್ಯವಹಾರಗಳ ಮುಖ್ಯಸ್ಥ ಜೋಸೆಪ್ ಬೊರೆಲ್ ಹೇಳಿದ್ದಾರೆ.

“ಜನರು ಸುರಕ್ಷಿತವಾಗಿ ಮನೆಗೆ ಮರಳಲು ಅನುವು ಮಾಡಿಕೊಡುವ ರೀತಿಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಪೆಂಟಗನ್ ಸಣ್ಣಮಟ್ಟದ ಹೆಚ್ಚುವರಿ ಪಡೆಗಳನ್ನು ಮಧ್ಯಪ್ರಾಚ್ಯಕ್ಕೆ ಕಳುಹಿಸಲಿದೆ” ಎಂದು ಯುಎಸ್ ಅಧ್ಯಕ್ಷ ಜೋ ಬೈಡೆನ್‌ ತಿಳಿಸಿದ್ದಾರೆ.

ಇಸ್ರೇಲ್ ಗಾಝಾ ಮೇಲೆ ಆಕ್ರಮಣ ನಡೆಸುತ್ತಿರುವ ನಡುವೆಯೇ, ಕಳೆದ ಒಂದು ವರ್ಷದಿಂದ ನಿರಂತರವಾಗಿ ಇಸ್ರೇಲ್ ಮತ್ತು ಹೆಜ್ಬುಲ್ಲಾ ನಡುವೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿತ್ತು. ಅದೀಗ ಲೆಬನಾನ್‌ ದೇಶದೊಳಗೆ ವ್ಯಾಪಿಸಿದ್ದು, ಗಾಝದಲ್ಲಿ ಇಸ್ರೇಲ್ ನಡೆಸಿರುವ ಆಕ್ರಮಣ ಮತ್ತು ನರಮೇಧ ಮತ್ತೊಂದು ರಾಷ್ಟ್ರಕ್ಕೆ ವ್ಯಾಪಿಸುವ ಆತಂಕ ಎದುರಾಗಿದೆ.

ಗಾಝಾದಲ್ಲಿ ಕದನ ವಿರಾಮ ಘೋಷಸುವವರೆಗೆ ನಾವು ಹಮಾಸ್ ಬೆಂಬಲಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಹೆಜ್ಬುಲ್ಲಾ ಹೇಳಿದೆ. ಹೆಜ್ಬುಲ್ಲಾ ಮತ್ತು ಹಮಾಸ್ ಎರಡೂ ಗುಂಪುಗಳು ಇರಾನ್‌ನ ಬೆಂಬಲಿತವಾಗಿದೆ. ಇಸ್ರೇಲ್, ಯುಕೆ ಮತ್ತು ಇತರ ಕೆಲ ದೇಶಗಳು ಈ ಎರಡೂ ಗುಂಪುಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿ, ತಮ್ಮ ರಾಷ್ಟ್ರಗಳಲ್ಲಿ ನಿಷೇಧಿಸಿದೆ.

ಇದನ್ನೂ ಓದಿ : ಬೆಂಗಳೂರು : IIScಯಲ್ಲಿ ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...

‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು...

ಬಾಂಗ್ಲಾದೇಶ| ಗ್ಯಾರೇಜ್ ಒಳಗೆ ಮಲಗಿದ್ದ ಹಿಂದೂ ಯುವಕ ಜೀವಂತ ದಹನ

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನರಸಿಂಗ್ಡಿಯಲ್ಲಿ ಗ್ಯಾರೇಜ್ ಒಳಗೆ ಮಲಗಿದ್ದ 23 ವರ್ಷದ ಹಿಂದೂ ವ್ಯಕ್ತಿ ಜೀವಂತವಾಗಿ ದಹನಗೊಂಡ ಘಟನೆ ನಡೆದಿದ್ದು, ಈ ಘಟನೆಯು ರಾಷ್ಟ್ರೀಯ ಚುನಾವಣೆಗೂ ಮುನ್ನ...

ಚುನಾವಣಾ ಆಯೋಗ ನಿರಂತರ ಒತ್ತಡ ಎದುರಿಸುತ್ತಿದೆ, ಅದರ ಸ್ವಾತಂತ್ರ್ಯ ರಕ್ಷಿಸಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ಇತ್ತೀಚಿನ ದಿನಗಳಲ್ಲಿ, ಚುನಾವಣಾ ಆಯೋಗದಂತಹ ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿವೆ. ಆದ್ದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುವಂತೆ ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು 'ನಮ್ಮ ಜವಾಬ್ದಾರಿ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ ‘ಮತ ಕಳ್ಳತನ’ಕ್ಕೆ ಎಸ್‌ಐಆರ್‌ ಬಳಕೆ: ರಾಹುಲ್ ಗಾಂಧಿ

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಕುರಿತ ತಮ್ಮ ವಾಗ್ದಾಳಿಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರಗೊಳಿಸಿದ್ದಾರೆ. ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ...

ಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್ ಭುಯಾನ್

ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಹೈಕೋರ್ಟ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಪ್ರಸ್ತಾವನೆ ಮಾರ್ಪಡಿಸಿದ ಕೊಲಿಜಿಯಂನ ಇತ್ತೀಚಿನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಪ್ರಶ್ನಿಸಿದ್ದು, "ನ್ಯಾಯಾಧೀಶರ ವರ್ಗಾವಣೆ ಮತ್ತು ನೇಮಕಾತಿ...

ತಮಿಳುನಾಡಿನಲ್ಲಿ ಎಂದೆಂದಿಗೂ ಹಿಂದಿಗೆ ಸ್ಥಾನವಿಲ್ಲ: ಮುಖ್ಯಮಂತ್ರಿ ಸ್ಟಾಲಿನ್

ಹಿಂದಿ ವಿರೋಧಿ ಆಂದೋಲನದ ಸಮಯದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ರಾಜ್ಯದ ಹುತಾತ್ಮರನ್ನು ಡಿಎಂಕೆ ಅಧ್ಯಕ್ಷ ಮತ್ತು ತನಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಇಂದು ಶ್ಲಾಘಿಸಿದರು. ನಮ್ಮಲ್ಲಿ ಹಿಂದಿ ಭಾಷೆಗೆ ಶಾಶ್ವತವಾಗಿ...

ಒಡಿಶಾ : ಗಣರಾಜ್ಯೋತ್ಸವ ದಿನ ಮಾಂಸ, ಮೊಟ್ಟೆ, ಮೀನು ಮಾರಾಟ ನಿಷೇಧಿಸಿದ ಜಿಲ್ಲಾಡಳಿತ!

ಗಣರಾಜ್ಯೋತ್ಸವದಂದು ಜಿಲ್ಲೆಯಾದ್ಯಂತ ಮಾಂಸಾಹಾರಿ ವಸ್ತುಗಳ ಮಾರಾಟವನ್ನು ನಿಷೇಧಿಸಿ ಒಡಿಶಾದ ಕೊರಾಪುಟ್ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜನವರಿ 26, ಗಣರಾಜ್ಯೋತ್ಸವದಂದು ಮಾಂಸ, ಕೋಳಿ, ಮೊಟ್ಟೆ, ಮೀನು ಮತ್ತು ಇತರ ಮಾಂಸಾಹಾರಿ ವಸ್ತುಗಳ...

ಮೋದಿ ಸ್ವಾಗತಿಸುವ ಫ್ಲೆಕ್ಸ್ ಬೋರ್ಡ್‌; ದಂಡ ವಿಧಿಸಿದ ಬಿಜೆಪಿ ಆಡಳಿತದ ತಿರುವನಂತಪುರಂ ಮಹಾನಗರ ಪಾಲಿಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದಂತೆ ನಗರದಲ್ಲಿನ ಪಾದಚಾರಿ ಮಾರ್ಗಗಳಲ್ಲಿ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದಕ್ಕಾಗಿ ಬಿಜೆಪಿ ಆಡಳಿತವಿರುವ ತಿರುವನಂತಪುರಂ ಮಹಾನಗರ ಪಾಲಿಕೆ ತನ್ನದೇ ಪಕ್ಷಕ್ಕೆ ದಂಡ ವಿಧಿಸಿದೆ. ಪೊಲೀಸ್ ಠಾಣೆಯಲ್ಲಿ ದೂರು...

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ...