Homeಮುಖಪುಟ"ಜಾತ್ಯತೀತತೆ ಯುರೋಪಿನದ್ದು, ಭಾರತಕ್ಕೆ ಅಗತ್ಯವಿಲ್ಲ": ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟ ತಮಿಳುನಾಡು ರಾಜ್ಯಪಾಲ

“ಜಾತ್ಯತೀತತೆ ಯುರೋಪಿನದ್ದು, ಭಾರತಕ್ಕೆ ಅಗತ್ಯವಿಲ್ಲ”: ಸಂವಿಧಾನ ವಿರೋಧಿ ಹೇಳಿಕೆ ಕೊಟ್ಟ ತಮಿಳುನಾಡು ರಾಜ್ಯಪಾಲ

- Advertisement -
- Advertisement -

“ಜಾತ್ಯತೀತತೆ ಯುರೋಪಿನ ಪರಿಕಲ್ಪನೆಯಾಗಿದ್ದು, ಅದು ಭಾರತದಲ್ಲಿ ಅಗತ್ಯವಿಲ್ಲ” ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 22ರಂದು ಕನ್ಯಾಕುಮಾರಿಯ ತಿರುವತ್ತೂರಿನ ‘ಹಿಂದೂ ಧರ್ಮ ವಿದ್ಯಾಪೀಠದ ಘಟಕೋತ್ಸವ’ದಲ್ಲಿ ಮಾತನಾಡಿದ ಅವರು, “ಒಬ್ಬರು ಅಸುರಕ್ಷಿತ ಪ್ರಧಾನಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೆಲ ವರ್ಗದ ಜನರನ್ನು ಸಮಾಧಾನಪಡಿಸುವ ಸಲುವಾಗಿ ಸಂವಿಧಾನದಲ್ಲಿ ಜಾತ್ಯತೀತತೆಯನ್ನು ಪರಿಚಯಿಸಿದರು” ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಟೀಕಿಸಿದ್ದಾರೆ.

“ಜಾತ್ಯತೀತತೆ ಎನ್ನುವುದು ಭಾರತೀಯರ ಪರಿಕಲ್ಪನೆಯಲ್ಲ, ಅದು ಯುರೋಪಿಯನ್ ಪರಿಕಲ್ಪನೆ. ಅದು ಅಲ್ಲಿಯೇ ಇರಲಿ, ಅವರು ಅದರಲ್ಲಿ ಸಂತೋಷವಾಗಿರಲಿ. ಈ ದೇಶದ ಜನರ ಮೇಲೆ ಸಾಕಷ್ಟು ವಂಚನೆಗಳನ್ನು ಮಾಡಲಾಗಿದೆ. ಅವುಗಳಲ್ಲಿ ಒಂದು ಜಾತ್ಯತೀತತೆಗೆ ತಪ್ಪು ವ್ಯಾಖ್ಯಾನ ನೀಡಲು ಪ್ರಯತ್ನಿಸಿರುವುದು” ಎಂದು ರಾಜ್ಯಪಾಲ ಹೇಳಿದ್ದಾರೆ.

“ಯುರೋಪಿನಲ್ಲಿ, ಚರ್ಚ್ ಮತ್ತು ರಾಜನ ನಡುವೆ ಜಗಳ ನಡೆದಿದ್ದರಿಂದ ಜಾತ್ಯತೀತತೆ ಬಂತು. ಅವರು ನೂರಾರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟವನ್ನು ನಿಲ್ಲಿಸಲು ಬಯಸಿದ್ದರು. ಆದ್ದರಿಂದ ಚರ್ಚ್ ಮತ್ತು ರಾಜನ ನಡುವೆ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಖಚಿತಪಡಿಸಿಕೊಳ್ಳಲು ಪ್ರತ್ಯೇಕತೆಯನ್ನು ಪ್ರತಿಪಾದಿಸಿದರು. ಭಾರತದಲ್ಲಿ ಜಾತ್ಯತೀತತೆಯ ಅಗತ್ಯವಿಲ್ಲ” ಎಂದು ರಾಜ್ಯಪಾಲ ವಿವರಿಸಿದ್ದಾರೆ.

“ಸ್ವಾತಂತ್ರ್ಯದ ಸಮಯದಲ್ಲಿ, ಸಂವಿಧಾನವನ್ನು ರಚಿಸುವಾಗ, ಜಾತ್ಯತೀತತೆ ಚರ್ಚೆಗೆ ಬಂದಿತ್ತು. ಭಾರತ ಧರ್ಮ ಕೇಂದ್ರಿತ ದೇಶವಾಗಿದೆ. ಯುರೋಪಿನಲ್ಲಿ ಕಂಡು ಬಂದಂತೆ ಯಾವುದೇ ಸಂಘರ್ಷ ನಡೆದಿಲ್ಲ ಎಂದು ಗಮನಿಸಿ ಸಂವಿಧಾನ ಸಭೆ ಅದನ್ನು ತಿರಸ್ಕರಿಸಿತು” ಎಂದು ರಾಜ್ಯಪಾಲ ಪ್ರತಿಪಾದಿಸಿದ್ದಾರೆ.

ಸಂವಿಧಾನ ಸಭೆಯ ಚರ್ಚೆಗಳನ್ನು ಉಲ್ಲೇಖಿಸಿದ ರಾಜ್ಯಪಾಲ “ಭಾರತ ಧರ್ಮದ ದೇಶ ಎಂದು ಅಲ್ಲಿ ಚರ್ಚಿಸಲಾಗಿದೆ. ಧರ್ಮದೊಂದಿಗೆ ಸಂಘರ್ಷ ಹೇಗೆ ಸಾಧ್ಯ? ಭಾರತವು ಧರ್ಮದಿಂದ ದೂರವಾಗಲು ಹೇಗೆ ಸಾಧ್ಯ? ಅದು ಸಾಧ್ಯವಿಲ್ಲ!. ಆದ್ದರಿಂದ ಅವರು ಜಾತ್ಯತೀತತೆ ಯುರೋಪಿಯನ್ ಪರಿಕಲ್ಪನೆ. ಅದು ಅಲ್ಲೇ ಇರಲಿ, ಭಾರತದಲ್ಲಿ ಜಾತ್ಯತೀತತೆಯ ಅಗತ್ಯವಿಲ್ಲ ಎಂದು ಹೇಳಿದರು ಮತ್ತು ಅದನ್ನು ಸಂವಿಧಾನದಲ್ಲಿ ಸೇರಿಸಿಲ್ಲ” ಎಂದಿದ್ದಾರೆ.

ರಾಜ್ಯಪಾಲರ ಹೇಳಿಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ‘ರಾಜ್ಯಪಾಲರು ತಮ್ಮ ಸಾಂವಿಧಾನಿಕ ಹುದ್ದೆಗೆ ಬದ್ದರಾಗಿ ಕಾರ್ಯನಿರ್ವಹಿಸಲಿ’ ಎಂದು ಹಲವರು ಹೇಳಿದ್ದಾರೆ.

“ಜಾತ್ಯತೀತತೆಯು ಭಾರತದ ಅತ್ಯಂತ ಅಗತ್ಯವಾದ ಪರಿಕಲ್ಪನೆಯಾಗಿದೆ” ಎಂದು ತಮಿಳುನಾಡಿನ ಆಡಳಿತರೂಢ ಡಿಎಂಕೆ ಹೇಳಿದೆ.

“ಸಂವಿಧಾನ 25ನೇ ವಿಧಿ ಧಾರ್ಮಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸುತ್ತದೆ. ಅದು ಅವರಿಗೆ (ರಾಜ್ಯಪಾಲರಿಗೆ) ಗೊತ್ತಿಲ್ಲ ಅನಿಸುತ್ತದೆ. ಅವರು ಹೋಗಿ ಸಂವಿಧಾನವನ್ನು ಸಂಪೂರ್ಣವಾಗಿ ಓದಲಿ. ನಮ್ಮ ಸಂವಿಧಾನದಲ್ಲಿ 22 ಭಾಷೆಗಳನ್ನು ಪಟ್ಟಿ ಮಾಡಲಾಗಿದೆ. ಹಿಂದಿ ಕೆಲ ರಾಜ್ಯಗಳಲ್ಲಿ ಮಾತನಾಡುವ ಭಾಷೆಯಾಗಿದೆ. ಉಳಿದ ರಾಜ್ಯಗಳು ಇತರ ಭಾಷೆಗಳನ್ನು ಮಾತನಾಡುತ್ತವೆ. ಅವರಿಗೆ ಭಾರತ ಅಥವಾ ಸಂವಿಧಾನ ತಿಳಿದಿಲ್ಲ” ಎಂದು ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್ ಹೇಳಿದ್ದಾರೆ.

ಸಿಪಿಐ ನಾಯಕ ಡಿ ರಾಜಾ ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದು, “ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕಿಸಲು ಜಾತ್ಯತೀತತೆಯ ಅಗತ್ಯವಿದೆ” ಎಂದಿದ್ದಾರೆ.

“ಆರ್.ಎನ್.ರವಿ ನೀಡಿರುವ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅವರಿಗೆ ಜಾತ್ಯತೀತತೆಯ ಬಗ್ಗೆ ಏನು ಗೊತ್ತು? ಅವರಿಗೆ ಭಾರತದ ಬಗ್ಗೆ ಏನು ಗೊತ್ತು? ಅವರು ರಾಜ್ಯಪಾಲರು, ಸಂವಿಧಾನಕ್ಕೆ ಬದ್ಧರಾಗಿರಬೇಕು. ಭಾರತದ ಸಂವಿಧಾನವು ಭಾರತವನ್ನು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ವ್ಯಾಖ್ಯಾನಿಸುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಧಾರ್ಮಿಕ ಪರಿಕಲ್ಪನೆಯನ್ನು ಬಲವಾಗಿ ತಿರಸ್ಕರಿಸಿದ್ದರು. ಒಂದು ವೇಳೆ ಹಿಂದೂ ರಾಷ್ಟ್ರವು ನಿಜವಾಗಿದ್ದರೆ, ಅದು ರಾಷ್ಟ್ರಕ್ಕೆ ವಿಪತ್ತು. ಜಾತ್ಯತೀತತೆ ಎಂದರೆ ಧರ್ಮ ಮತ್ತು ರಾಜಕೀಯವನ್ನು ಪ್ರತ್ಯೇಕವಾಗಿ ಇಡುವುದಾಗಿದೆ. ರಾಜಕೀಯ ಉದ್ದೇಶಕ್ಕೆ ದೇವರನ್ನು ಎಳೆದು ತರಬೇಡಿ” ಎಂದು ಡಿ ರಾಜಾ ಹೇಳಿದ್ದಾರೆ.

ತಮಿಳುನಾಡು ರಾಜ್ಯಪಾಲರು ಜಾತ್ಯತೀತತೆಯ ಬಗ್ಗೆ ಹೇಳಿಕೆ ನೀಡಿ ವಿವಾದ ಎಬ್ಬಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ “ಈ ದೇಶವನ್ನು ಒಡೆಯಲು ಮುಂದಾಗಿರುವ ಜನರು ಜಾತ್ಯತೀತತೆಯ ಬಗ್ಗೆ ವಿಕೃತ ವ್ಯಾಖ್ಯಾನ ನೀಡಿದ್ದಾರೆ” ಎಂದಿದ್ದರು.

“ನಮ್ಮ ಸಂವಿಧಾನವು ‘ಧರ್ಮ’ಕ್ಕೆ ವಿರುದ್ಧವಾಗಿಲ್ಲ. ಈ ದೇಶವನ್ನು ಒಡೆಯಲು ಬಯಸುವ ಜನರು ಜಾತ್ಯತೀತತೆಯ ವಿಕೃತ ವ್ಯಾಖ್ಯಾನವನ್ನು ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿರುವ ಜಾತ್ಯತೀತತೆಯ ನಿಜವಾದ ಅರ್ಥವನ್ನು ನಾವು ಗ್ರಹಿಸಿಕೊಳ್ಳಬೇಕು. ಹಿಂದೂ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುವವರು ಪ್ರತಿಕೂಲ ವಿದೇಶಿ ಶಕ್ತಿಗಳ ಸಹಯೋಗದೊಂದಿಗೆ ಈ ದೇಶವನ್ನು ಒಡೆಯುವ ಗುಪ್ತ ಕಾರ್ಯಸೂಚಿಯನ್ನು ಹೊಂದಿದ್ದು, ಭಾರತಕ್ಕೆ ಅಂತರ್ಗತ ಶಕ್ತಿ ಇರುವುದರಿಂದ ಅವರು ಯಶಸ್ವಿಯಾಗುವುದಿಲ್ಲ” ಎಂದು ರಾಜ್ಯಪಾಲ ರವಿ ಹೇಳಿದ್ದರು.

ಕೃಪೆ : ಟೈಮ್ಸ್ ಆಫ್ ಇಂಡಿಯಾ

ಇದನ್ನೂ ಓದಿ : ಕುಟುಂಬದಿಂದಲೇ ಅತ್ಯಾಚಾರ ಸಂತ್ರಸ್ತೆಯ ಹತ್ಯೆ : ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ವಿರುದ್ದ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...