Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

- Advertisement -
- Advertisement -

ಬಾಪು’ತಿರುಪತಿ ದೇವಸ್ಥಾನಕ್ಕೆ ದೇಸಿ ತುಪ್ಪ ಪೂರೈಸಿದ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಮಾಲೀಕರು’ ಎಂಬ ಬರಹದೊಂದಿಗೆ ಪಾಕಿಸ್ತಾನ ಮತ್ತು ಮುಸ್ಲಿಮರ ಹೆಸರಿನ ಪಟ್ಟಿಯಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇತ್ತಿಚೆಗೆ ತೀವ್ರ ವಿವಾದವಾಗಿದ್ದ ತಿರುಪತಿ ಲಡ್ಡು ವಿಚಾರವಾಗಿ ಈ ಚಿತ್ರ ಕೋಮುದ್ವೇಷ ಹರಡಲು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಾನುಗೌರಿ ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಿರುಪತಿ ಲಡ್ಡುವಿಗೆ ಬಳಸಿದ ತುಪ್ಪದಲ್ಲಿ ದನ, ಹಂದಿಯ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ವರದಿಯಾದ ಹಿನ್ನಲೆಯಲ್ಲಿ, ಅದನ್ನು ತಿರುಪತಿ ದೇವಸ್ಥಾನಕ್ಕೆ ಪೂರೈಸಿದ್ದು ಮುಸ್ಲಿಮರು ಅದರಲ್ಲೂ ಪಾಕಿಸ್ತಾನಿ ಮುಸ್ಲಿಮರು ಎಂಬಂತೆ ಬಿಂಬಿಸಿ ಈ ವೈರಲ್ ಚಿತ್ರ ಹರಿದಾಡುತ್ತಿವೆ. ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಪ್‌ಗಳಲ್ಲಿ ಹರಿದಾಡುತ್ತಿವೆ. ಅವುಗಳ ಕೆಲವು ಆರ್ಕೈವ್‌ಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಇದೇ ಚಿತ್ರ ಹಾಗೂ ಬರಹ ಇಂಗ್ಲಿಷ್‌ನಲ್ಲೂ ಹರಿದಾಡುತ್ತಿವೆ. ಅವುಗಳನ್ನು ಇಲ್ಲಿ ಮತ್ತು  ಇಲ್ಲಿ ನೋಡಬಹುದಾಗಿದೆ. ಇದನ್ನೂಓದಿ: FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಫ್ಯಾಕ್ಟ್‌ಚೆಕ್, ತಿರುಪತಿ ದೇವಸ್ಥಾನ, ತುಪ್ಪ ಪೂರೈಸು, ಪಾಕಿಸ್ತಾನಿ ಮುಸ್ಲಿಂ, Factcheck, Tirupati Temple, Ghee Supply, Pakistani Muslim,
ಜೈ ಬಿಜೆಪಿ, ಜೈ ಮೋದಿ ಎಂಬ ಶಿವಮೊಗ್ಗ ಮೂಲದ ವಾಟ್ಸಪ್‌ ಗ್ರೂಪ್‌ನಲ್ಲಿ ಈ ಮಾಹಿತಿ ಹಂಚಲಾಗಿದೆ.

ಫ್ಯಾಕ್ಟ್‌ಚೆಕ್ ನಾನುಗೌರಿ ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ವೈರಲ್ ಚಿತ್ರದಲ್ಲಿ ಇರುವ ವ್ಯಕ್ತಿಗಳು ಪಾಕಿಸ್ತಾನಿ ಮೂಲದ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಕಂಪೆನಿಯ ಉದ್ಯೋಗಿಗಳಾಗಿದ್ದಾರೆ. ಈ ಕಂಪನಿ ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಕೆಯನ್ನು ಮಾಡುತ್ತಿಲ್ಲ. ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸುವುದು ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪೆನಿಯಾಗಿದೆ.

ಹೆಸರುಗಳಲ್ಲಿನ ಸಾಮ್ಯತೆಗಳನ್ನು ಬಳಸಿಕೊಂಡು ಬಿಜೆಪಿ ಪರವಿರುವ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲಕ್ಕೀಡು ಮಾಡುವಂತೆ ಕೋಮುದ್ವೇಷ ಹರಡುತ್ತಿದ್ದಾರೆ.

ವೈರಲ್ ಚಿತ್ರದಲ್ಲಿರುವ ಪಾಕಿಸ್ತಾನಿ ಮೂಲದ ಕಂಪನಿ ಎ.ಆರ್ ಫುಡ್ಸ್ (ಪ್ರೈ) ಲಿಮಿಟೆಡ್ ಮತ್ತು ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಿದ ಆರೋಪದ ತಮಿಳುನಾಡು ಮೂಲದ ಕಂಪೆನಿಯಾದ ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಒಂದೇ ರೀತಿಯ ಹೆಸರಿನ ಕಂಪೆನಿಯಾದರೂ ಅವು ಬೇರೆ ಬೇರೆ ಕಂಪೆನಿಗಳಾಗಿವೆ.

ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಮಸಾಲೆ ಕಂಪನಿಯಾಗಿದ್ದು, ಅದನ್ನು 1970 ರಲ್ಲಿ ಪಾಕಿಸ್ತಾನದಲ್ಲಿ ಸ್ಥಾಪಿಸಲಾಯಿತು. ಆದರೆ ಎ.ಆರ್. ಡೈರಿ ಉತ್ಪನ್ನಗಳನ್ನು ಉತ್ಪಾದಿಸುವ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಅನ್ನು ಭಾರತದಲ್ಲಿ 1995 ರಲ್ಲಿ ಸ್ಥಾಪಿಸಲಾಯಿತು. ಇದನ್ನೂಓದಿ: FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ಪಾಕಿಸ್ತಾನಿ ಕಂಪನಿ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್

ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ “ಫೂಲ್” ಬ್ರಾಂಡ್ ಆಹಾರ ವಸ್ತುಗಳನ್ನು ತಯಾರಿಸುತ್ತದೆ. ಈ ಕಂಪೆನಿಯು ಪ್ಯಾಕೇಜ್ ಮಾಡಿದ ಮಸಾಲೆಗಳನ್ನು ಮಾರಾಟ ಮಾಡುತ್ತದೆ. ವಿವರಗಳನ್ನು ಅವರ ವೆಬ್‌ಸೈಟ್‌ನಲ್ಲಿ ಕಾಣಬಹುದು (arfoods.com.pk). ಜೊತೆಗೆ “.pk” ಡೊಮೇನ್ ವೆಬ್‌ಸೈಟ್ ಇದು ಪಾಕಿಸ್ತಾನದಲ್ಲಿ ನೋಂದಾಯಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ.

ಎ.ಆರ್ ಫುಡ್ಸ್ (ಪ್ರೈ) ಲಿಮಿಟೆಡ್‌ನ ಲಿಂಕ್ಡ್‌ಇನ್ ಪ್ರೊಫೈಲ್‌ನ ರಿವೀವ್‌ ಕಂಪೆನಿಯು ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಇರುವುದನ್ನು ಖಚಿತಪಡಿಸುತ್ತದೆ. ಕಂಪನಿಯ ಲಿಂಕ್ಡ್‌ಇನ್ ಪೇಜ್‌ನಲ್ಲಿ ವೈರಲ್ ಚಿತ್ರದಲ್ಲಿ ಪಟ್ಟಿ ಮಾಡಲಾದ ಐದು ಉದ್ಯೋಗಿಗಳಲ್ಲಿ ನಾಲ್ಕು ಉದ್ಯೋಗಿಗಳ ಹೆಸರುಗಳು, ಫೋಟೋಗಳು ಮತ್ತು ಉದ್ಯೋಗ ಶೀರ್ಷಿಕೆಗಳು ಹೊಂದಾಣಿಕೆಯಾಗುತ್ತವೆ.

ಗೌಪ್ಯತೆ ಸೆಟ್ಟಿಂಗ್‌ಗಳ ಕಾರಣದಿಂದ ಐದನೇ ವ್ಯಕ್ತಿಯ ‘ಲಿಯೋನಿಡಾಸ್ ಶೇಖ್’ ಅವರ ಪ್ರೊಫೈಲ್ ಅನ್ನು ವೀಕ್ಷಿಸಲು ಸಾಧ್ಯವಾಗದಿದ್ದರೂ, ಅವರು “A.R ಫುಡ್ಸ್ (ಪ್ರೈ) ಲಿಮಿಟೆಡ್‌ನಲ್ಲಿ ವೇರ್‌ಹೌಸ್ ಆಪರೇಷನ್ಸ್ ಮ್ಯಾನೇಜರ್” ಎಂದು ತಿಳಿದುಬರುತ್ತದೆ. ಹಾಗಾಗಿ ಈ ವೈರಲ್ ಚಿತ್ರವನ್ನು ಈ ಪಾಕಿಸ್ತಾನಿ ಕಂಪನಿಯ ಉದ್ಯೋಗಿಗಳ ಲಿಂಕ್ಡ್‌ಇನ್ ಖಾತೆಗಳಿಂದ ಪಡೆಯಲಾಗಿದೆ ಎಂಬುದು ಸ್ಪಷ್ಟವಾಗಿದೆ.

ಇದಲ್ಲದೆ, ವೈರಲ್ ಚಿತ್ರ ಮತ್ತು ಮೂಲ ಪ್ರೊಫೈಲ್‌ಗಳು ಈ ವ್ಯಕ್ತಿಗಳ ಸ್ಥಳ ಪಾಕಿಸ್ತಾನ ಎಂದು ಸ್ಪಷ್ಟವಾಗಿ ಹೇಳುತ್ತದೆ. ಇದನ್ನೂಓದಿ: FACT CHECK : ಭಾರತೀಯ ಸೈನಿಕರಿಗೆ ಸಿಕ್ಕಿಬಿದ್ದ ಜಿಹಾದಿಗಳು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ

ಫ್ಯಾಕ್ಟ್‌ಚೆಕ್, ತಿರುಪತಿ ದೇವಸ್ಥಾನ, ತುಪ್ಪ ಪೂರೈಸು, ಪಾಕಿಸ್ತಾನಿ ಮುಸ್ಲಿಂ, Factcheck, Tirupati Temple, Ghee Supply, Pakistani Muslim,ಭಾರತೀಯ ಕಂಪನಿ ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್

ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ತಮಿಳುನಾಡು ಮೂಲದ ಡೈರಿ ಕಂಪನಿಯಾಗಿದ್ದು ಅದು ರಾಜ್ ಮಿಲ್ಕ್ ಬ್ರಾಂಡ್ ಅನ್ನು ಮಾರಾಟ ಮಾಡುತ್ತದೆ. ಈ ಸಂಸ್ಥೆಯ ನಿರ್ದೇಶಕರು ರಾಜಶೇಖರನ್ ಸೂರ್ಯಪ್ರಭ, ರಾಜು ರಾಜಶೇಖರನ್ ಮತ್ತು ಶ್ರೀನಿವಾಸಲುನಾಯ್ಡು ರಾಮಚಂದ್ರನ್ ಶ್ರೀನಿವಾಸನ್ ಎಂಬವರಾಗಿದ್ದಾರೆ. ಕಂಪನಿಯು ತಮಿಳುನಾಡಿನ ದಿಂಡಿಗಲ್‌ನಲ್ಲಿ ನೋಂದಾಯಿಸಲ್ಪಟ್ಟಿದೆ ಮತ್ತು ಅದರ ಸ್ಥಳವು ಗೂಗಲ್ ನಕ್ಷೆಗಳಲ್ಲಿ ನೋಡಬಹುದಾಗಿದೆ.

ಅದಾಗ್ಯೂ, ಕಂಪನಿಯು ತನ್ನ ಉತ್ಪನ್ನಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿದೆ ಎಂಬ ಆರೋಪವನ್ನು ನಿರಾಕರಿಸಿದೆ. ಅದಾಗ್ಯೂ, ರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಎ.ಆರ್. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಅನ್ನು ಹೆಚ್ಚು ಕಲಬೆರಕೆ ತುಪ್ಪವನ್ನು ಪೂರೈಸುವುದಕ್ಕಾಗಿ ಕಪ್ಪುಪಟ್ಟಿಗೆ ಸೇರಿಸಲಾಗಿದ್ದು, ಕಂಪನಿಯು ಶೋಕಾಸ್ ನೋಟಿಸ್‌ಗೆ ತೃಪ್ತಿಕರ ಪ್ರತಿಕ್ರಿಯೆಯನ್ನು ನೀಡಲು ವಿಫಲವಾದರೆ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸಬೇಕಾಗುತ್ತದೆ.

ಒಟ್ಟನಲ್ಲಿ ಹೇಳಬಹುದಾದರೆ ವೈರಲ್ ಸ್ಕ್ರೀನ್‌ಶಾಟ್‌ನಲ್ಲಿ ಕಾಣಿಸಿಕೊಂಡಿರುವ ಪಾಕಿಸ್ತಾನಿ ಕಂಪನಿಯು ತಿರುಪತಿ ದೇವಸ್ಥಾನದ ಲಡ್ಡುಗಳಿಗೆ ತುಪ್ಪ ಪೂರೈಸುತ್ತಿಲ್ಲ. ಅದು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಎ.ಆರ್. ಫುಡ್ಸ್ (ಪ್ರೈ) ಲಿಮಿಟೆಡ್ ಎಂಬ ಮಸಾಲೆ ಪದಾರ್ಥಗಳ ಕಂಪೆನಿಯಾಗಿದೆ. ಆದರೆ ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ತಮಿಳುನಾಡು ಮೂಲದ A.R. ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪೆನಿಯಾಗಿದೆ. ಇದರ ಮಾಲಿಕರು ಹಿಂದೂಗಳಾಗಿದ್ದಾರೆ. ಅದು ಕಲಬೆರಕೆ ತುಪ್ಪವನ್ನು ಸರಬರಾಜು ಮಾಡುವ ಆರೋಪ ಎದುರಿಸುತ್ತಿದೆ.

ವಿಡಿಯೊ ನೋಡಿ: ಅಂಗನವಾಡಿ ನೌಕರರೆಂದರೆ ತಾತ್ಸಾರವೇಕೆ? ನಮ್ಮನ್ನು ಖಾಯಂ ಮಾಡಿ. ನಮ್ಮ ಅಳಲನ್ನು ಕೇಳಿ ಮುಖ್ಯಮಂತ್ರಿಗಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...