Homeಚಳವಳಿಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?...

ಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?…

- Advertisement -
- Advertisement -

ಪತ್ರಿಕೆಯಲ್ಲಿ ಈ ದಿನ ಅಥವಾ ವಾರ ನೀವು ಯಾವುದರ ಮೇಲೆ ಕೇಂದ್ರೀಕರಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸುವುದು ಈ ಕಾಲದಲ್ಲಿ ಅಷ್ಟು ಸುಲಭವಲ್ಲ. ಏಕೆಂದರೆ ನಿಮ್ಮ ಗಮನ ಅಸಲೀ ಸಮಸ್ಯೆಯ ಮೇಲೆ ಹೋಗದಂತೆ ಮಾಡಲೆಂದೇ ಕೆಲವು ವಾಗ್ವಾದಗಳನ್ನು ತೇಲಿಬಿಟ್ಟಿರಬಹುದೆಂಬ ಅನುಮಾನ ಬಂದಿರುತ್ತದೆ. ಕೆಲವೊಮ್ಮೆ ಅವು ಕೇವಲ ವಾಗ್ವಾದಗಳಾಗಿರುವುದಿಲ್ಲ; ಯಾರದ್ದೋ ಬದುಕಿನ ಅತ್ಯಂತ ಜ್ವಲಂತ ಸಮಸ್ಯೆಯಾಗಿರುತ್ತದೆ. ಉದಾಹರಣೆಗೆ ಕಾಶ್ಮೀರ, ಎನ್‍ಆರ್‍ಸಿ ಇತ್ಯಾದಿ. ಕೆಲವು ಸಾರಿ ಅದು ಯಾರ ಬದುಕಿನ ತಕ್ಷಣದ ಕಾಡುವ ಸಮಸ್ಯೆಯೂ ಆಗಿರುವುದಿಲ್ಲ; ಆದರೆ ನಮ್ಮ ಇತಿಹಾಸದಲ್ಲಿ ಅಡಗಿರುವ ಸತ್ಯಗಳನ್ನು ಬುಡಮೇಲು ಮಾಡುವ ಕೆಲಸ ನಡೆದಿರುತ್ತದೆ. ಸಾವರ್ಕರ್‌ಗೆ ಭಾರತರತ್ನ ನೀಡುತ್ತೇವೆನ್ನುವುದನ್ನು ಬಿಜೆಪಿ ಪಕ್ಷವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಅದಕ್ಕೆ ನಿದರ್ಶನ.

ಅಸಲೀ ಸಮಸ್ಯೆ ಮತ್ತು ಹೊಸದಾಗಿ ಸೃಷ್ಟಿಸಿದ ಇಶ್ಯೂ ಎರಡನ್ನೂ ಆಯ್ದುಕೊಂಡು, ಅವುಗಳನ್ನು ಸತ್ಯದ ಮುಖಾಂತರ ಎದುರಿಸಬೇಕಾದ್ದು ನಮ್ಮ ಜವಾಬ್ದಾರಿ. ಆದರೆ, ಎರಡರಲ್ಲಿ ಒಂದನ್ನು ಮಾತ್ರ ಆಯ್ದುಕೊಳ್ಳುವಂತೆ ಪರಿಸ್ಥಿತಿ ದೂಡುತ್ತದೆ. ಇದು ರಾಜಕೀಯ ಕಾರ್ಯಕರ್ತರಿಗೆ ಮಾತ್ರವಲ್ಲದೇ, ನಮ್ಮಂತಹ ಪತ್ರಿಕೆಗಳಿಗೂ ಇರುವ ಸಂದಿಗ್ಧ.

ದೇಶದ ಸಾರ್ವಭೌಮತೆಯನ್ನು ಮತ್ತಷ್ಟು ಕಿತ್ತುಕೊಳ್ಳುವ ಆರ್‍ಸಿಇಪಿ ಒಪ್ಪಂದದ ಕುರಿತು ರೈತಸಂಘಗಳು ಪ್ರತಿಭಟಿಸುತ್ತಿರುವಾಗ ಅದಕ್ಕೆ ಇಂಬು ಕೊಡುವುದು ನಮ್ಮ ಕರ್ತವ್ಯ; ಕರ್ನಾಟಕದ ಬರ-ನೆರೆ ಸಂಕಷ್ಟಕ್ಕೆ ಪರಿಹಾರವಾಗಿ 1 ಲಕ್ಷ ಕೋಟಿ ಪ್ಯಾಕೇಜ್‍ಅನ್ನು ರೈತರು ಕೇಳುತ್ತಿರುವಾಗಲೇ, ಮತ್ತೊಂದು ಮಳೆ ಇಡೀ ರಾಜ್ಯವನ್ನು ಆವರಿಸಿದೆ. ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಅಪ್ಪಳಿಸಿದೆ. ಬಿಎಸ್‍ಎನ್‍ಎಲ್‍ಅನ್ನು ಮುಳುಗಿಸುವ ಕಾಂಗ್ರೆಸ್‍ನ ಹಳೆಯ ಪ್ಲಾನ್‍ಅನ್ನು ಬಿಜೆಪಿ ಯಶಸ್ವಿ ಮಾಡುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಹೀಗಿರುವಾಗ ಸಿ.ಟಿ.ರವಿಯ ಮನೆಹಾಳ ಮಾತು, ಸಾವರ್ಕರ್‍ಗೆ ಭಾರತರತ್ನ ಇತ್ಯಾದಿಗಳು ನಮ್ಮನ್ನು ಬೇರೆ ಕಡೆಗೆ ಎಳೆಯುತ್ತವೆ. ಅದನ್ನು ಮುಗಿಸಿ ಬರುವ ಹೊತ್ತಿಗೆ ಬಿಎಸ್‍ಎನ್‍ಎಲ್ ಮುಳುಗಿ ರೈಲ್ವೇ ಖಾಸಗೀಕರಣದ ಮಾತು ನಡೆಯುತ್ತಿರುತ್ತದೆ. ಅದರ ಬಗ್ಗೆ ಮಾತು ಆಡುವುದು ಸಾಧ್ಯವೇ ಆಗದಂತೆ ದೇಶದ ಪ್ರಮುಖ ಸ್ಥಾನದಲ್ಲಿರುವ ವ್ಯಕ್ತಿ ‘ಗೋಡ್ಸೆ ದೇಶಭಕ್ತ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ’ ಎಂದು ಹೇಳುವ ಸಾಧ್ಯತೆ ಇರುತ್ತದೆ.

ಆ ವಾರ ನಿಮಗೆ ಲಭ್ಯವಿರುವ ಮೂರು ಪುಟಗಳಲ್ಲಿ ಗೋಡ್ಸೆಯ ಕುರಿತು ಎಷ್ಟು ಮಾತನಾಡುವಿರಿ, ರೈಲ್ವೇ ಖಾಸಗೀಕರಣದ ಕುರಿತು ಏನು ಹೇಳುವಿರಿ ಎಂಬ ಸಂದಿಗ್ಧ ಎದುರಾಗುತ್ತದೆ. ಇಂತಹ ಸಂದಿಗ್ಧದಿಂದ ಹೊರಬರುವುದು ಸಾಧ್ಯವಿಲ್ಲವೇ? ಸಂತ್ರಸ್ತರು, ಕಾಳಜಿಯುಳ್ಳವರು, ಪ್ರಜಾತಂತ್ರವಾದಿಗಳೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಅನಿಸಿಕೆ ಹೇಳಿ, ಟ್ವಿಟ್ಟರ್ ಟ್ರೆಂಡ್ ಮಾಡಿಬಿಟ್ಟರೆ ಸಾಕೇ?

ಖಂಡಿತಾ ಸಾಲದು. ಬೀದಿಯಲ್ಲಿ ಸಂತ್ರಸ್ತರು ಒಟ್ಟುಗೂಡಿ ಶಕ್ತಿಯುತವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಡುವುದು, ಬುದ್ಧಿಜೀವಿಗಳು ಸರಿಯಾದ ಹತಾರಗಳೊಂದಿಗೆ ತಮ್ಮದೇ ಆದ ಮಾಧ್ಯಮಗಳನ್ನು ಹುಡುಕಿಕೊಂಡು ವಾಗ್ವಾದಕ್ಕಿಳಿಯುವುದು ಎರಡೂ ಆಗಬೇಕು. ಮಾಧ್ಯಮವು ಇವೆರಡಕ್ಕೂ ಸೂಕ್ತ ಅವಕಾಶ ಕಲ್ಪಿಸಿ ಅದನ್ನು ವ್ಯಾಪಕಗೊಳಿಸಬೇಕು; ಅಧಿಕಾರಸ್ಥರ ಮೇಲೆ ಒತ್ತಡ ತರಬೇಕು. ಆಗ ಪರಿಣಾಮ ಕಾಣತೊಡಗುತ್ತದೆ. ಆದರೆ, ಇಂದಿನ ಮಾಧ್ಯಮ ಇವೆರಡನ್ನೂ (ಬೀದಿಯಲ್ಲಿನ ಭಿನ್ನಮತ ಮತ್ತು ಬುದ್ಧಿಜೀವಿಗಳ ಅಭಿಮತ) ದಿಕ್ಕೆಡಿಸುವ ಕೆಲಸ ಮಾಡುತ್ತಿದೆ. ಅದರ ಫಲವಾಗಿ ಎಲ್ಲವೂ ದುರ್ಬಲವಾಗಿಬಿಟ್ಟಿವೆ. ಹಾಗಾದರೆ ದಾರಿಯೇನು? ದಾರಿಯಿಷ್ಟೇ; ಇವು ಮೂರೂ ಅಭಿನ್ನವಾಗಿ ಜೊತೆಗೂಡುವುದು. ಜೊತೆಗೂಡಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು. ಮಿಕ್ಕೆರಡು ವಲಯಗಳು ಜೊತೆಗೂಡಿ ಮಾಧ್ಯಮವನ್ನು ಕಟ್ಟಿ ನಿಲ್ಲಿಸಬೇಕು. ಅದು ಮಾತ್ರವೇ ದಾರಿ.

ನ್ಯಾಯಪಥ ಮತ್ತು ನಮ್ಮ ವೆಬ್‍ಸೈಟ್‍ಗಳು ಮಾಡಹೊರಟಿರುವುದು ಅದನ್ನೇ. ಇದನ್ನೇ ಈ ವಾರದಲ್ಲಿ ನಡೆಯಲಿರುವ ಜಿಲ್ಲಾ ಸಭೆಗಳಲ್ಲೂ ಚರ್ಚಿಸಲಾಗುವುದು. ಹೊಸ ರೀತಿಯ ಮಾಧ್ಯಮವು ಬೀದಿಯಲ್ಲಿರುವ ಜನತೆ ಮತ್ತು ಹೊಸಕಾಲದ ಬುದ್ಧಿಜೀವಿಗಳನ್ನು ಬೆಸೆಯುತ್ತಾ, ಅವೆರಡರಿಂದ ಪ್ರತ್ಯೇಕವಾಗುಳಿಯದೇ ತಾನೂ ಜೊತೆಗೂಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...