Homeಕರ್ನಾಟಕ'ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ..'; ಹೈಕೋರ್ಟ್‌ ತೀರ್ಪಿನ ಕುರಿತು ಸಿಎಂ ಪ್ರತಿಕ್ರಿಯೆ

‘ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ..’; ಹೈಕೋರ್ಟ್‌ ತೀರ್ಪಿನ ಕುರಿತು ಸಿಎಂ ಪ್ರತಿಕ್ರಿಯೆ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ತಮ್ಮ ಪತ್ನಿ ಹೆಸರಿಗೆ ನಿವೇಶನಗಳನ್ನು ಮಂಜೂರು ಮಾಡಿಸಿದ ಆರೋಪದ ಮೇಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ವಜಾ ಇಂದು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, “ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ” ಎಂದಿದ್ದಾರೆ.

“ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು” ಎಂದು ಅವರು ವಿವರಿಸಿದ್ದಾರೆ.

“ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ” ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ” ಎಂದಿದ್ದಾರೆ.

“ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.
ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ” ಎಂದು ಹೇಳಿದರು.

“ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ. ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ” ಎಂದು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.
ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ” ಎಂದು ಅವರು ವಾಗ್ದಾಳಿ ನಡೆಸಿದರು.

“ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ಮುಡಾ ಪ್ರಕರಣ: ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌, ಸಿದ್ದರಾಮಯ್ಯ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...