Homeಕರ್ನಾಟಕ'ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ..'; ಹೈಕೋರ್ಟ್‌ ತೀರ್ಪಿನ ಕುರಿತು ಸಿಎಂ ಪ್ರತಿಕ್ರಿಯೆ

‘ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ..’; ಹೈಕೋರ್ಟ್‌ ತೀರ್ಪಿನ ಕುರಿತು ಸಿಎಂ ಪ್ರತಿಕ್ರಿಯೆ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ತಮ್ಮ ಪತ್ನಿ ಹೆಸರಿಗೆ ನಿವೇಶನಗಳನ್ನು ಮಂಜೂರು ಮಾಡಿಸಿದ ಆರೋಪದ ಮೇಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ವಜಾ ಇಂದು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, “ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ” ಎಂದಿದ್ದಾರೆ.

“ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು” ಎಂದು ಅವರು ವಿವರಿಸಿದ್ದಾರೆ.

“ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ” ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ” ಎಂದಿದ್ದಾರೆ.

“ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.
ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ” ಎಂದು ಹೇಳಿದರು.

“ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ. ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ” ಎಂದು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.
ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ” ಎಂದು ಅವರು ವಾಗ್ದಾಳಿ ನಡೆಸಿದರು.

“ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ಮುಡಾ ಪ್ರಕರಣ: ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌, ಸಿದ್ದರಾಮಯ್ಯ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...