Homeಮುಖಪುಟಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ಹರಿಣಿ ಅಮರಸೂರ್ಯ | ಶ್ರೀಲಂಕಾದ ಪ್ರಧಾನಿಯಾಗಿ ಎಡಪಂಥೀಯ ನಾಯಕಿ ಪ್ರಮಾಣ ವಚನ

ಮಾನವ ಹಕ್ಕುಗಳ ಹೋರಾಟಗಾರ್ತಿ ಮತ್ತು ವಿಶ್ವವಿದ್ಯಾನಿಲಯದ ಉಪನ್ಯಾಸಕಿಯೂ ಆಗಿರುವ ಅವರು ದೇಶದ 3ನೇ ಮಹಿಳಾ ಪ್ರಧಾನ ಮಂತ್ರಿಯಾಗಿ ಹೊರಹೊಮ್ಮಿದ್ದಾರೆ

- Advertisement -
- Advertisement -

ಶ್ರಿಲಂಕಾದ ನೂತನ ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು. 2000 ರಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳಾ ನಾಯಕಿಯಾಗಿ ಹರಿಣಿ ಅವರು ಹೊರಹೊಮ್ಮಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

54 ವರ್ಷದ ಹರಿಣಿ ಅವರು ಜನತಾ ವಿಮುಕ್ತಿ ಪೆರುಮುನ (ಜೆವಿಪಿ) ನಾಯಕ, ದೇಶದ ಅಧ್ಯಕ್ಷ ಅನುರ ಕುಮಾರ ಡಿಸಾನಾಯಕೆ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಿಸಾನಾಯಕೆ ಅವರು ತಮ್ಮನ್ನು ಒಳಗೊಂಡಂತೆ ನಾಲ್ವರ ಸಂಪುಟವನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

ಹರಿಣಿ ಅವರು ನ್ಯಾಯ, ಶಿಕ್ಷಣ, ಕಾರ್ಮಿಕ, ಕೈಗಾರಿಕೆಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಮತ್ತು ಹೂಡಿಕೆ ಸಚಿವರ ಖಾತೆಗಳನ್ನು ನಿಯೋಜಿಸಲಾಗಿದೆ. ಅಧ್ಯಕ್ಷೀಯ ಚುನಾವಣೆಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ದೇಶದ ಮಾಜಿ ಪ್ರಧಾನಿ ದಿನೇಶ್ ಗುಣವರ್ಧನ ಅವರ ನಂತರ ಹರಿಣಿ ಅವರು ದೇಶದ 16ಣೇ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ಮತ್ತು ವಿಶ್ವವಿದ್ಯಾನಿಲಯದ ಉಪನ್ಯಾಸಕರಾದ ಹರಿಣಿ ಅಮರಸೂರ್ಯ ಅವರು 1994 ರಲ್ಲಿ ದಿವಂಗತ ಸಿರಿಮಾವೊ ಬಂಡಾರನಾಯಕೆ ಅವರು ಅಧಿಕಾರ ವಹಿಸಿಕೊಂಡ ನಂತರ ಶ್ರೀಲಂಕಾದ ಮೊದಲ ಮಹಿಳಾ ಪ್ರಧಾನಿ ಮತ್ತು ದೇಶದ ಇತಿಹಾಸದಲ್ಲಿ ಮೂರನೇ ಮಹಿಳಾ ಪ್ರಧಾನ ಮಂತ್ರಿಯಾಗಿದ್ದಾರೆ. ಅವರ ಜೊತೆಗೆ ಎನ್‌ಪಿಪಿ ಸಂಸದರಾದ ವಿಜಿತಾ ಹೆರಾತ್ ಮತ್ತು ಲಕ್ಷ್ಮಣ್ ನಿಪುಣರಾಚಿ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ನಂತರ 56 ವರ್ಷದ ಡಿಸಾನಾಯಕೆ ಅವರು ಭಾನುವಾರ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತೀಚೆಗಷ್ಟೇ ನಡೆದ ಶ್ರೀಲಂಕಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಂತರ ‘ಜನತಾ ವಿಮಿಕ್ತಿ ಪೆರಮುನ (ಜೆವಿಪಿ)ಯ’ ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಶ್ರೀಲಂಕಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ದಿಸಾನಾಯಕೆ, ತಮ್ಮ ಮುಂದಿರುವ ಮಹತ್ವದ ಸವಾಲುಗಳನ್ನು ಒಪ್ಪಿಕೊಂಡರು. ಬಿಕ್ಕಟ್ಟನ್ನು ನಿಭಾಯಿಸಲು ಸಾಮೂಹಿಕ ಪ್ರಯತ್ನಗಳ ಅಗತ್ಯವನ್ನು ಒತ್ತಿ ಹೇಳಿದ ಅವರು, “ಈ ಆಳವಾದ ಬಿಕ್ಕಟ್ಟನ್ನು ಸರ್ಕಾರ, ಏಕ ಪಕ್ಷ ಅಥವಾ ವ್ಯಕ್ತಿ ಮಾತ್ರ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ನಾವು ನಂಬುವುದಿಲ್ಲ” ಎಂದರು.

“ನಾನು ಮಾಂತ್ರಿಕನಲ್ಲ; ಸಾಮಾನ್ಯ ನಾಗರಿಕ ಎಂದು ನಾನು ಮೊದಲೇ ಹೇಳಿದ್ದೇನೆ. ನನಗೆ ತಿಳಿದಿರುವ ಮತ್ತು ಗೊತ್ತಿಲ್ಲದ ವಿಷಯಗಳಿವೆ. ಈ ದೇಶವನ್ನು ಮೇಲಕ್ಕೆತ್ತಲು ಜ್ಞಾನ ಮತ್ತು ಕೌಶಲ್ಯ ಹೊಂದಿರುವವರನ್ನು ಒಟ್ಟುಗೂಡಿಸುವುದು ನನ್ನ ಗುರಿಯಾಗಿದೆ” ಎಂದು ಅವರು ಹೇಳಿದರು.

ನ್ಯಾಶನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಒಕ್ಕೂಟವನ್ನು ಮುನ್ನಡೆಸುವ ಜೆವಿಪಿಯು ಕ್ರಾಂತಿಕಾರಿ ಹಿನ್ನೆಲೆ ಹೊಂದಿದೆ. 1970 ಮತ್ತು 1980 ರ ದಶಕಗಳ ಸಮಾಜವಾದಿ ಹೋರಾಟದಲ್ಲಿ ಎರಡು ವಿಫಲ ಸಶಸ್ತ್ರ ದಂಗೆಗಳನ್ನು ನಡೆಸಿತು. ಮುಂದಿನ ವರ್ಷಗಳಲ್ಲಿ, ಜೆವಿಪಿ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಪರಿವರ್ತನೆಯಾಯಿತು. ಸಾಂದರ್ಭಿಕವಾಗಿ ವಿವಿಧ ಅಧ್ಯಕ್ಷರನ್ನು ಬೆಂಬಲಿಸುವಾಗ ವಿರೋಧ ಪಕ್ಷದಲ್ಲಿ ಉಳಿಯಿತು.

ವಿಡಿಯೊ ನೋಡಿ: ಗೌರಿ ಲಂಕೇಶ್ ನೆನಪು-2024; ಕವಿತೆ ವಾಚನ : ಲಕ್ಷ್ಮಣ್ ಮಂಡಲಗೇರಾ- ರಂಗ ಕನಸು ಕಲಾ ತಂಡ ರಾಯಚೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...