Homeದಲಿತ್ ಫೈಲ್ಸ್ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

- Advertisement -
- Advertisement -

ದಲಿತ ಕುಟುಂಬವನ್ನು ಸಾಮಾಜಿಕ ಬಹಿಷ್ಕಾರಕ್ಕೆ ಒಳಪಡಿಸಿದ ಆರೋಪದ ಮೇಲೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಗೌಥೋಜಿಗುಡ ಗ್ರಾಮದ ಪಂಚಾಯತ್ ಸದಸ್ಯರು ಸೇರಿದಂತೆ 19 ಜನರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. 35 ವರ್ಷಗಳಿಂದ ಗ್ರಾಮದಲ್ಲಿ ವಾಸಿಸುತ್ತಿರುವ ಕುಟುಂಬವು ತಮಟೆ ಬಡಿಯುವ ಆಚರಣೆಯನ್ನು ನಿಲ್ಲಿಸಲು ನಿರ್ಧರಿಸಿತ್ತು. ಇದಕ್ಕೆ ಗ್ರಾಮದ ಹಿರಿಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 10 ರಂದು ದಲಿತ ಕುಟುಂಬದ ಮೇಲೆ ಬಹಿಷ್ಕಾರ ಜಾರಿ ಮಾಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಂಪ್ರದಾಯಿಕವಾಗಿ, ತೆಲಂಗಾಣದ ಮಾದಿಗ ಸಮುದಾಯದ ಜನರು ಅಂತ್ಯಕ್ರಿಯೆಗಳು ಮತ್ತು ಇತರ ಹಳ್ಳಿ ಹಬ್ಬಗಳಲ್ಲಿ ತಮಟೆ ಬಡಿಯುವುದನ್ನು ಮಾಡಿಕೊಂಡು ಬರುತ್ತಿದ್ದಾರೆ. ಸಾಮಾನ್ಯವಾಗಿ ಮೇಲ್ಜಾತಿ ಸಮುದಾಯಗಳು ಮುಟ್ಟದ ಸಾಂಪ್ರದಾಯಿಕ ತಮಟೆ ಬಡಿಯುವುದನ್ನು ಈ ಸಮಾರಂಭಗಳ ಅವಿಭಾಜ್ಯ ಅಂಗವೆಂದು ಪರಿಗಣಿಸಲಾಗುತ್ತದೆ. ಗ್ರಾಮೀಣ ತೆಲಂಗಾಣದ ಕೆಲವು ಭಾಗಗಳಲ್ಲಿ ಈ ಪದ್ಧತಿ ಇನ್ನೂ ಮುಂದುವರಿದಿದ್ದರೂ, ಮಾದಿಗ ಸಮುದಾಯದ ಅನೇಕರು ಈಗ ಹಳೆಯ ಆಚರಣೆಯಿಂದ ಹೊರಬರುತ್ತಿದೆ.

ಇದನ್ನೂಓದಿ: ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ

“ಅವರು ನಮ್ಮನ್ನು ಬಹಿಷ್ಕರಿಸಿದ್ದಲ್ಲದೆ, ನಮ್ಮ ಸಹವಾಸ ಮಾಡದಂತೆ ಗ್ರಾಮದ ಇತರರಿಗೆ ಎಚ್ಚರಿಕೆ ನೀಡಿದರು. ಒಂದು ವೇಳೆ ಸಹವಾಸ ಮಾಡಿದರೆ ಅವರಿಗೆ ರೂ 5,000 ದಂಡ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂಕಾಂ ಪದವಿಯನ್ನು ಹೊಂದಿರುವ, ಮೇಡ್ಚಲ್‌ನ ಪ್ರಮುಖ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಪಂಚಮಿ ಚಂದ್ರಮ್ ಆರೋಪಿಸಿದ್ದಾರೆ.

2015 ರಲ್ಲಿ ನಿಧನರಾದ ಪಂಚಮಿ ಶಂಕರಯ್ಯ ಅವರ ಪುತ್ರರಾದ ಪಂಚಮಿ ಚಂದ್ರಮ್ ಮತ್ತು ಪಂಚಮಿ ಅರ್ಜುನ್ ಅವರು ತಮಟೆ ಸಂಸ್ಕೃತಿಯಿಂದ ದೂರವಾಗಲು ಪ್ರಾರಂಭಿಸಿದ್ದರು. ಅವರ ಕುಟುಂಬದ ನಾಲ್ವರು ಹೆಣ್ಣು ಮಕ್ಕಳು ಮದುವೆಯಾಗಿ ದೂರರ ಊರಿನಲ್ಲಿ ವಾಸವಾಗಿದ್ದಾರೆ. ಪಂಚಮಿ ಅರ್ಜುನ್ ಅವರು ಜೆಎನ್‌ಟಿಯು ಹೈದರಾಬಾದ್‌ನಲ್ಲಿ ಸಾವಯವ ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಮಾಡಿದ್ದಾರೆ.

ತಮ್ಮ ಮೇಲೆ ಊರಿನ ಜನರು ಹೇರಿದ ಬಹಿಷ್ಕಾರವನ್ನು ನೆನಪಿಸಿಕೊಂಡ ಅರ್ಜುನ್, ಕುಟುಂಬವು 15 ದಿನಗಳವರೆಗೆ ನೀರಿಲ್ಲದೆ ಪರದಾಡಬೇಕಾಯಿತು. ಸ್ಥಳೀಯ ದಿನಸಿ ಅಂಗಡಿಯವರು ಪಡಿತರ ಖರೀದಿಸಲು ಕೂಡಾ ಅವಕಾಶ ನಿರಾಕರಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಜಮ್ಮು ಕಾಶ್ಮೀರ ಚುನಾವಣೆ ವೀಕ್ಷಣೆಗೆ ವಿದೇಶಿ ಪ್ರತಿನಿಧಿಗಳು | ಒಮರ್ ಅಬ್ದುಲ್ಲಾ ಆಕ್ರೋಶ

ಅರ್ಜುನ್ ಅವರ ತಾಯಿ ಪಿ ನರಸಮ್ಮ ಮಾತನಾಡಿ, “ನಾವು ದಿನಸಿ ಮತ್ತು ಅಗತ್ಯ ವಸ್ತುಗಳನ್ನು ಖರೀದಿಸಲು ಹತ್ತಿರದ ಪಟ್ಟಣಗಳಿಗೆ ಹೋಗಬೇಕಾಗಿತ್ತು. ಇದು ಕೆಟ್ಟ ವಿಚಾರ, ಕಳೆದ ಮೂರು ದಶಕಗಳಿಂದ ನಮಗೆ ತಿಳಿದಿರುವ ಪ್ರತಿಯೊಬ್ಬರೂ ನಮ್ಮೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡರು” ಎಂದು ಹೇಳಿದ್ದಾರೆ.

ಆದರೆ ಗ್ರಾಮದಲ್ಲಿ ಉದ್ವಿಗ್ನತೆಯ ನಡುವೆಯೂ ಸಹೋದರರು ತಮ್ಮ ಊರಿನಲ್ಲೆ ಉಳಿದಿದ್ದರು. “ಸಮಯದ ಜೊತೆಗೆ ನಾವು ಈ ಆಚರಣೆಯಿಂದ ದೂರ ಸರಿದಿದ್ದೇವೆ. ಯಾಕೆಂದರೆ, ತಮಟೆ ಹೊಡೆಯುವುದು ಕೀಳು ಎಂದು ನಾವು ಭಾವಿಸುತ್ತೇವೆ. ಇಂದಿನ ದಿನ ನಮಗೆ ಕಾರ್ಪೊರೇಟ್ ಜಗತ್ತಿನಲ್ಲಿ ಉದ್ಯೋಗಗಳು ಇದ್ದಾಗ, ಇದು ಅತ್ಯಂತ ಅನ್ಯಾಯದ ಕೆಲಸವಾಗಿದೆ” ಎಂದು ಅರ್ಜುನ್ ಹೇಳಿದ್ದಾರೆ. ಅರ್ಜುನ್ ಅವರು ಮೇಡ್ಚಲ್‌ನ ಕಂಪನಿಯೊಂದರಲ್ಲಿ ರಸಾಯನಶಾಸ್ತ್ರಜ್ಞನಾಗಿ ಉದ್ಯೋಗಿಯಾಗಿದ್ದಾರೆ.

ಮುದಿರಾಜ್ ಸಮುದಾಯದ ಇಬ್ಬರ ಅಂತ್ಯಕ್ರಿಯೆಗೆ ತಮಟೆ ಬಾರಿಸಲು ನಿರಾಕರಿಸಿದಾಗ ಅವರ ಮತ್ತು ಗ್ರಾಮದ ಹಿರಿಯರ ನಡುವಿನ ಸಂಬಂಧ ಹಳಸಿದ್ದು, ಅದರ ನಂತರ ಸಮುದಾಯದ ಸದಸ್ಯರು ಸೆಪ್ಟೆಂಬರ್ 10ರಂದು ಪಂಚಾಯತಿ ಕರೆದು ಬಹಿಷ್ಕಾರದ ಬಗ್ಗೆ ಚರ್ಚಿಸಿದ್ದರು’ ಎಂದು ಇಬ್ಬರು ಸಹೋದರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಸಭೆಯಲ್ಲಿ, ಹಿರಿಯರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಹೋದರರಿಬ್ಬರು ಆರೋಪಿಸಿದ್ದಾರೆ. “ನಾವು ಎಷ್ಟೇ ವಿದ್ಯಾವಂತರಾಗಿದ್ದರೂ ಅಥವಾ ಉತ್ತಮ ಉದ್ಯೋಗವನ್ನು ಹೊಂದಿದ್ದರೂ, ನಾವು ಯಾವಾಗಲೂ ಮಾದಿಗರಾಗಿ ಉಳಿಯುತ್ತೇವೆ ಮತ್ತು ಅವರ ಪಾದಗಳ ಕೆಳಗೆ ಇರಬೇಕು ಎಂದು ಅವರು ನಮಗೆ ಹೇಳಿದರು” ಎಂದು ಅರ್ಜುನ್ ಹೇಳಿದ್ದಾರೆ. ಅದೇ ದಿನ ಕುಟುಂಬವನ್ನು ಬಹಿಷ್ಕರಿಸುವ ನಿರ್ಣಯವನ್ನು ಪಂಚಾಯತ್ ಅಂಗೀಕರಿಸಿತು.

ಅಂತಿಮವಾಗಿ, ಅನ್ಯಾಯವನ್ನು ಸಹಿಸಲಾಗದ ಸಹೋದರರು ಕಳೆದ ವಾರ ಪೊಲೀಸರನ್ನು ಸಂಪರ್ಕಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

“ದೂರಿನ ನಂತರ 19  ವ್ಯಕ್ತಿಗಳನ್ನು ಬಂಧಿಸಿದ್ದೇವೆ ಮತ್ತು ಬಹಿಷ್ಕಾರವನ್ನು ಜಾರಿಗೊಳಿಸುವಲ್ಲಿ ತೊಡಗಿರುವ 14 ಜನರನ್ನು ಇನ್ನೂ ಹುಡುಕುತ್ತಿದ್ದೇವೆ. ಈ ಘಟನೆಯು ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಕಾನೂನುಬಾಹಿರವಾದ ಜಾತಿ ಆಧಾರಿತ ತಾರತಮ್ಯ ಇನ್ನೂ ಇರುವುದನ್ನು ಎತ್ತಿ ತೋರಿಸುತ್ತದೆ. ಪ್ರಕರಣದಲ್ಲಿ ನಮ್ಮ ತನಿಖೆಯು ನಡೆಯುತ್ತಿದೆ” ಎಂದು ಮನೋಹರಾಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

https://www.youtube.com/watch?v=C_rvimhI-9Q

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...