Homeನ್ಯಾಯ ಪಥ'ದೇಶವಿರೋಧಿ' ಪ್ರಕರಣ ಎಂಬ ನಾಚಿಕೆಗೇಡು! : ಡಿ.ಉಮಾಪತಿ

‘ದೇಶವಿರೋಧಿ’ ಪ್ರಕರಣ ಎಂಬ ನಾಚಿಕೆಗೇಡು! : ಡಿ.ಉಮಾಪತಿ

- Advertisement -
- Advertisement -

ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು,
ಬದುಕು ಬೆಳಗುವ ದೀಪದಂತಿರಲಿ ಹೇ ದೇವದೇವ
ಕಳೆದು ಹೋಗಲಿ ಇಳೆಯ ಕತ್ತಲೆ,
ಹೊಳೆದು ಬೆಳಗಲಿ ಎಲ್ಲ ತಾವುಗಳು
ನನ್ನ ಕಾಂತಿಯಿಂದ.
ಸುಮಕುಸುಮಗಳು ಉದ್ಯಾನವ ಸಿಂಗರಿಸಿದಂತೆ
ಸೊಗಸಿಬಿಡಲೇ ನಾನೆನ್ನ ತಾಯ್ನೆಲವ ತಬ್ಬಿ ಹಬ್ಬಿ..
ಎನ್ನ ಜೀವದುಸಿರು ನೀನಾಗು ಎಲೆ ದೇವ,
ತಿಳಿವಿನ ದೀಪಕ್ಕೆಳೆಸುವ ಪತಂಗ ನಾನು
ಎನ್ನ ಇರವಿನ ಧ್ಯೇಯವಾಗಿಸು,
ವೃದ್ಧರು ದುಃಖಿತರು, ದೀನದರಿದ್ರರ ಸೇವೆಯನು.
ಹಿಡಿದೆತ್ತು ಅಂತರ್ಯಾಮಿಯೇ ನನ್ನನು ಜಗದ ಕೇಡಿನಿಂದ
ಉದ್ಧರಿಸು ಮುನ್ನಡೆಸು ಸಚ್ಚಾರಿತ್ರ್ಯದೆಡೆಗೆ

ಈ ಗೀತೆಯನ್ನು ಓದಿ, ಇದರ ಉರ್ದು ಮೂಲದ ಗಾಯನವನ್ನು ಆಲಿಸಿದ ನನಗೆ ಆಚಾರ್ಯ ಬಿ.ಎಂ.ಶ್ರೀ. ಅವರ ಇಂಗ್ಲಿಷ್ ಗೀತಗಳು ಸಂಗ್ರಹದ ಪ್ರಸಿದ್ಧ ಪದ್ಯ ‘ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಸೆನ್ನನು’ ನೆನಪಾಯಿತು. ಬಿ.ಎಂ.ಶ್ರೀ ಅವರ ಸೊಗಸಿನ ಅನುವಾದದ ಮಹಿಮೆ. ಮೂಲ ಕನ್ನಡದ್ದೇ ಎನ್ನುವಷ್ಟರಮಟ್ಟಿಗೆ ಈ ಗೀತೆ ಕನ್ನಡಿಗರಲ್ಲಿ ಜನಪ್ರಿಯ. ರತ್ನಮಾಲಾ ಪ್ರಕಾಶ್ ಅವರ ಸಿರಿಕಂಠದಲ್ಲಿ ಈ ಗೀತೆಯನ್ನು ಕೇಳಿ ಧ್ಯಾನಸ್ಥ ಸ್ಥಿತಿಗೆ ಜಾರದ ಮನಸುಗಳೇ ಇರಲಾರವು. ಇಂಗ್ಲೆಂಡಿನ ಕ್ರೈಸ್ತ ಸಂತ ಜಾನ್ ಹೆನ್ರಿ ನ್ಯೂಮನ್ 1833ರಲ್ಲಿ ರಚಿಸಿದ್ದ ಪ್ರಾರ್ಥನಾ ಗೀತೆಯಿದು ಎಂಬ ಸಂಗತಿ ಈಗಲೂ ಬಹಳಷ್ಟು ಜನಕ್ಕೆ ತಿಳಿದಿಲ್ಲ. ಭಾರತವೂ ಸೇರಿದಂತೆ ವಿಶ್ವದಾದ್ಯಂತ ಇಗರ್ಜಿಗಳಲ್ಲಿ ಇಂದಿಗೂ ಈ ಇಂಗ್ಲಿಷ್ ಗೀತೆಯನ್ನು ಹಾಡಲಾಗುತ್ತದೆ.

ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು… ಎಂಬ ಪದ್ಯದ ಉರ್ದು ಮೂಲ ಹೀಗಿದೆ-

‘ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ/ ಝಿಂದಗೀ ಶಂಮಾ ಕೀ ಸೂರತ್ ಹೋ ಖುದಾಯಾ ಮೇರೀ/ ದೂರ್ ದುನಿಯಾ ಕಾ ಮೇರೇ ದಮ್ ಸೇ ಅಂಧೇರಾ ಹೋ ಜಾಯೇ/ ಹರ್ ಜಗಾಹ ಮೇರೀ ಚಮಕನೇ ಸೇ ಉಜಾಲಾ ಹೋ ಜಾಯೇ/ ಹೋ ಮೇರೇ ದಮ್ ಸೇ ಯೂಂ ಹೀ ಮೇರೆ ವತನ್ ಕೀ ಝೀನತ್/ ಜಿಸ್ ತರಾಹ್ ಫೂಲ್ ಸೇ ಹೋತೀ ಹೈ ಚಮನ್ ಕೀ ಝೀನತ್/ ಝಿಂದಗೀ ಹೋ ಮೇರೀ ಪರವಾನೇ ಕೀ ಸೂರತ್ ಯಾರಬ್/ ಇಲ್ಮ್ ಕೀ ಶಂಮಾ ಸೇ ಹೋ ಮುಝಕೋ ಮೊಹೋಬ್ಬತ್ ಯಾರಬ್/ ಹೋ ಮೇರಾ ಕಾಮ್ ಗರೀಬೋಂ ಕೀ ಹಿಮಾಯತ್ ಕರನಾ/ ದರದಮಂದೋ ಸೇ ಝೀಂಫೋ ಸೇ ಮೊಹೊಬ್ಬತ್ ಕರನಾ/ ಮೇರೇ ಅಲ್ಲಾಹ ಬುರಾಯೀ ಸೇ ಬಚಾನಾ ಮುಝಕೋ/ ನೇಕ ಜೋ ರಾಹ ಉಸೀ ಪೆ ಚಲಾನಾ ಮುಝಕೋ/ ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ’

ಈ ಉರ್ದು ಗೀತೆಯನ್ನು ನನ್ನ ತಿಳಿವಳಿಕೆಗೆ ನಿಲುಕಿದ ಕನ್ನಡಕ್ಕೆ ತರ್ಜುಮೆ ಮಾಡಿ ಇಲ್ಲಿ ಓದುಗರ ಮುಂದೆ ಇರಿಸಿದ್ದೇನೆ. ಹೆಚ್ಚು ಬಲ್ಲವರು ಇನ್ನಷ್ಟು ಸೊಗಸಾಗಿ ಅನುವಾದ ಮಾಡಿಕೊಳ್ಳಬಹುದು.

ಈಗಲೂ ದೇಶದ ಲಕ್ಷಾಂತರ ಶಾಲೆಗಳಲ್ಲಿ ದಿನನಿತ್ಯ ಮತ್ತು ಸ್ವಾತಂತ್ರ್ಯೋತ್ಸವ ದಿನ ಹಾಗೂ ಗಣರಾಜ್ಯೋತ್ಸವದಂದು ಮೊಳಗುವ ಇನ್ನೊಂದು ಸುಂದರ ದೇಶಭಕ್ತಿ ಗೀತೆಯಿದೆ. ಅದು ‘ಸಾರೇ ಜಹಾಂ ಸೇ ಅಚ್ಛಾ ಹಿಂದೂಸ್ತಾನ ಹಮಾರಾ….’

ಈ ಗೀತೆಯ ಬರೆದ ಕವಿಯೇ ‘ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ’ (ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು…’) ಎಂಬ ಗೀತೆಯನ್ನೂ ಬರೆದಿದ್ದಾನೆ.

ಆತನ ಹೆಸರು ಅಲ್ಲಾಮ ಇಕ್ಬಾಲ್. 1902ರಲ್ಲಿ ಈ ಗೀತೆಯನ್ನು ಆತ ಬರೆದಿದ್ದ. ಸಾರೇ ಜಹಾಂ ಸೇ ಅಚ್ಛಾ ಬರೆದದ್ದು ಎರಡು ವರ್ಷಗಳ ನಂತರ 1904ರಲ್ಲಿ. ಹಿಂದೂಸ್ತಾನಿ ಬಚ್ಚೋಂ ಕಾ ಖೋಮಿ ಗೀತ್ ನ್ನು ಬರೆದದ್ದು 1905ರಲ್ಲಿ. ಈ ಕಾಲಘಟ್ಟದಲ್ಲಿ ಆತ ಅಪ್ಪಟ ಭಾರತೀಯ ರಾಷ್ಟ್ರವಾದಿಯಾಗಿದ್ದ. ಆನಂತರ ಆತ ಪ್ರತ್ಯೇಕ ಪಾಕಿಸ್ತಾನ ಬೇಡಿಕೆಯ ಹೋರಾಟದ ಮುಂಚೂಣಿಯಲ್ಲಿದ್ದ ಮತ್ತು ಪಾಕಿಸ್ತಾನದ ರಾಷ್ಟ್ರಕವಿ ಎನಿಸಿಕೊಂಡದ್ದು ಹೌದು. ಆದರೆ ಲಬ್ ಪೇ ಆತೀ…ಗೀತೆಯಲ್ಲಿ ಬರುವ ‘ವತನ್’ (ಜನ್ಮಭೂಮಿ) ಪದವು ಭಾರತವನ್ನೇ ಉದ್ದೇಶಿಸಿದ್ದು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ನಾವು ಇಂದಿಗೂ ಮನದುಂಬಿ ಹಾಡುವ ಸಾರೇ ಜಹಾಂ ಸೇ ಅಚ್ಛಾ ಗೀತೆಯನ್ನು ಆತ ರಚಿಸಿದ್ದು ಲಬ್ ಪೇ ಆತೀ ಬರೆದ ಎರಡು ವರ್ಷಗಳ ನಂತರ ಎಂಬುದನ್ನು ಗಮನಿಸಬೇಕು.

ಯಾವ ಕೋನದಿಂದ ನೋಡಿದರೂ ಲಬ್ ಪೇ ಆತೀ ಹೈ ದುವಾ….ಧಾರ್ಮಿಕ ಗೀತೆ ಅಥವಾ ಮುಸ್ಲಿಂ ಪ್ರಾರ್ಥನೆ ಅಲ್ಲ. ಸಾರೇ ಜಹಾಂ ಸೇ ಅಚ್ಛಾ ಹಿಂದೂಸ್ತಾನ್ ಹಮಾರಾ…ಮುಸ್ಲಿಂ ಪ್ರಾರ್ಥನೆಯೆಂದು ಹೇಳುವುದು ಎಷ್ಟು ವಿಕೃತವೋ, ಲಬ್ ಪೇ ಆತೀ ಹೈ ದುವಾ…ಕ್ಕೆ ಮುಸ್ಲಿಂ ಪ್ರಾರ್ಥನೆಯ ಬಣ್ಣ ಹಚ್ಚುವುದೂ ಅಷ್ಟೇ ವಿಕೃತ ಆದೀತು.

ಇಷ್ಟೆಲ್ಲವನ್ನೂ ಇಲ್ಲಿ ಪ್ರಸ್ತಾಪಿಸಿದ ಹಿನ್ನೆಲೆ ಉತ್ತರಪ್ರದೇಶದ ಪೀಲೀಭೀತ್ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರ ಅಮಾನತು ಪ್ರಕರಣ. ಮುಖ್ಯೋಪಾಧ್ಯಾಯ ಫುರ್ಖಾನ್ ಅಲಿ ಅವರು ಶಾಲೆಯಲ್ಲಿ ಮದರಸಾದ ಪ್ರಾರ್ಥನೆಯನ್ನು ಮಕ್ಕಳಿಂದ ಹಾಡಿಸುತ್ತಿದ್ದಾರೆ ಎಂಬುದಾಗಿ ವಿಶ್ವಹಿಂದು ಪರಿಷತ್ ಆರೋಪ ಮಾಡಿತ್ತು. ಅಲಿ ಅವರಿಂದ ವಿವರಣೆಯನ್ನೂ ಪಡೆಯದೆ ಜಿಲ್ಲಾಡಳಿತ ಆತನನ್ನು ಅಕ್ಟೋಬರ್ 14ರಂದು ಅಮಾನತಿನಲ್ಲಿ ಇರಿಸಿತು. ಲಬ್ ಪೇ ಆತೀ ಹೈ ದುವಾ ಗೀತೆಯು ಮದರಸಾ ಪ್ರಾರ್ಥನೆ, ಅದನ್ನು ಹಾಡಿಸುವುದು ದೇಶವಿರೋಧದ ಕೃತ್ಯ ಎಂದು ವಿ.ಹಿಂ.ಪ. ದೂರು ನೀಡಿತ್ತು.

ಪೀಲೀಭೀತ್ ಜಿಲ್ಲೆಯ ಈ ಶಾಲೆಯ ಮಕ್ಕಳು ನಿತ್ಯವೂ ರಾಷ್ಟ್ರಗೀತೆಯನ್ನು ಹಾಡುತ್ತಿದ್ದಾರೆ ಮತ್ತು ಸರಸ್ವತಿ ವಂದನಾ ವನ್ನೂ ವಾಚಿಸುತ್ತಿದ್ದಾರೆ, ವೋ ಶಕ್ತಿ ಹಮೇಂ ದೋ ದಯಾನಿಧೀ ಗೀತೆಯನ್ನೂ ಹಾಡುತ್ತಿದ್ದಾರೆ.

ತಮ್ಮ ಮುಖ್ಯೋಪಾಧ್ಯಾಯರನ್ನು ಈ ಶಾಲೆಯ ಮಕ್ಕಳು ಬಹುವಾಗಿ ಪ್ರೀತಿಸುತ್ತಿದ್ದರು. ಯಾಕೆಂದರೆ ಆತನೂ ಮಕ್ಕಳನ್ನು ಅಕ್ಕರೆಯಿಂದ ಕಾಣುತ್ತಿದ್ದರು. ತಮ್ಮ ಸಂಬಳದ ಹಣ ಖರ್ಚು ಮಾಡಿ ಶಾಲೆಯ ಅಭಿವೃದ್ಧಿ ಮಾಡಿದ್ದರು. ಮಧ್ಯಾಹ್ನದ ಬಿಸಿಯೂಟದ ತರಕಾರಿಗೆ ತಾವೇ ಹಣ ನೀಡುತ್ತಿದ್ದರು. ಹೀಗಾಗಿ ತಮ್ಮ ಅಚ್ಚುಮೆಚ್ಚಿನ ಮೇಷ್ಟ್ರನ್ನು ಅಮಾನತಿನಲ್ಲಿ ಇರಿಸಿರುವ ಕ್ರಮವನ್ನು ಮಕ್ಕಳು ಪ್ರತಿಭಟಿಸಿದ್ದಾರೆ. ಕಳೆದ ಶುಕ್ರವಾರ ಶಾಲಾಮೈದಾನದಲ್ಲಿ ಸೇರಿದ್ದ ಮಕ್ಕಳು ಸಾಲುಗಳಲ್ಲಿ ನಿಂತು ಕೂಗಿದ ಘೋಷಣೆ- ದೇಶದ ರಕ್ಷಣೆ ಯಾರು ಮಾಡ್ತಾರೆ? ನಾವು ಮಾಡ್ತೇವೆ. ಹೇಗೆ ಮಾಡ್ತೇವೆ? ತನುವಿನಿಂದ ಮಾಡ್ತೇವೆ, ಮನಸಿನಿಂದ ಮಾಡ್ತೇವೆ, ಧನದಿಂದ ಮಾಡ್ತೇವೆ.

ಹತ್ತು ನಿಮಿಷ ಘೋಷಣೆ ಕೂಗಿ ಮನೆಯತ್ತ ಹೊರಟವು ಮಕ್ಕಳು. ತಮ್ಮ ಮೇಷ್ಟ್ರು ವಾಪಸು ಬರುವವರೆಗೆ ತಾವೂ ಶಾಲೆಗೆ ಬರುವುದಿಲ್ಲ ಎಂದವು. ಲಬ್ ಪೇ ಆತೀ ಹೈ ಗೀತೆಯನ್ನು ಹಾಡುವಂತೆ ಮತ್ತು ಹಾಡಿಸುವಂತೆ ನಾವೇ ಮೇಷ್ಟ್ರನ್ನ ಕೇಳಿಕೊಂಡೆವು. ದಿನ ಬಿಟ್ಟು ದಿನ ಹಾಡಲು ಅವರು ನಮಗೆ ಅನುಮತಿ ಕೊಟ್ಟರು ಎಂದು ಮಕ್ಕಳು ತಿಳಿಸಿವೆ. ಹಾಜರಾತಿ 150ರಿಂದ ಐದು ಹತ್ತಕ್ಕೆ ತಗ್ಗಿದೆ.

ತನ್ನ ತಪ್ಪಿನ ಅರಿವಾದಂತಿರುವ ಸರ್ಕಾರ ಬಿದ್ದರೂ ಮೀಸೆ ಮಣ್ಣಾಗದು ಎಂಬಂತೆ ಅಲಿಯ ಅಮಾನತನ್ನು ಮಾನವೀಯತೆಯ ಆಧಾರದ ಮೇಲೆ ರದ್ದು ಮಾಡಲಾಗಿದೆ ಎಂದಿದೆ. ಆದರೆ ಅವರನ್ನು ಬೇರೆ ಶಾಲೆಗೆ ವರ್ಗ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...