Homeಮುಖಪುಟಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

ಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

- Advertisement -
- Advertisement -

ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 2023 ರಿಂದ ಜೈಲಿನಲ್ಲಿರುವ ತಮಿಳುನಾಡಿನ ಮಾಜಿ ವಿದ್ಯುತ್ ಸಚಿವ ವಿ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್, ಅವರ ಆರೋಗ್ಯವನ್ನು ಉಲ್ಲೇಖಿಸಿ ಜಾಮೀನು ಅರ್ಜಿಯ ವಾದ ಆಲಿಸಲು ನಿರಾಕರಿಸಿತು. ಅವರ ವಾದಗಳಿಂದ ನಾವು ತೃಪ್ತಿ ಹೊಂದಿಲ್ಲ, ಅವರ ಸ್ಥಿತಿಯನ್ನು ಔಷಧಿಗಳಿಂದ ಗುಣಪಡಿಸಬಹುದು ಎಂದು ಹೇಳಿತ್ತು.

ಬಾಲಾಜಿ ಅವರು 2011-2016 ರ ಹಿಂದಿನ ಜಯಲಲಿತಾ ಅವರ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದಾಗ ಮನಿ-ಲಾಂಡರಿಂಗ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರು ಡಿಸೆಂಬರ್ 2018 ರಲ್ಲಿ ಪಕ್ಷದ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರ ಸಮ್ಮುಖದಲ್ಲಿ ಪ್ರಸ್ತುತ ಆಡಳಿತ ಪಕ್ಷವಾದ ಡಿಎಂಕೆಗೆ ಸೇರಿ ಸಚಿವರಾಗಿದ್ದರು.

ಬಾಲಾಜಿ ಅವರ ಜಾಮೀನು ಅರ್ಜಿಗಳನ್ನು ಫೆಬ್ರವರಿಯಲ್ಲಿ ಮದ್ರಾಸ್ ಹೈಕೋರ್ಟ್ ಎರಡು ಬಾರಿ ವಜಾಗೊಳಿಸಿತು. ಮೂರು ಬಾರಿ ವಿಚಾರಣಾ ನ್ಯಾಯಾಲಯವು ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ಸರ್ವೋಚ್ಚ ನ್ಯಾಯಾಲಯವು ಪರಿಹಾರ ನೀಡಿದ ನಂತರ ಮಾತನಾಡಿದ ಅವರ ವಕೀಲ ಎನ್‌ಆರ್ ಇಳಂಗೊ, “ಪೂರ್ವಭಾವಿ ಅಪರಾಧ ಮತ್ತು ಪಿಎಂಎಲ್‌ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ಪ್ರಕರಣದಲ್ಲಿ ವಿಚಾರಣೆಯನ್ನು ನಡೆಸುವಲ್ಲಿ ದೀರ್ಘ ವಿಳಂಬ ಇರಬಹುದು” ಎಂದರು.

“ಕೆಲವು ಷರತ್ತುಗಳ ಮೇಲೆ ಜಾಮೀನು ನೀಡಲಾಗಿದೆ, ಅವರು ವಾರಕ್ಕೆ ಎರಡು ಬಾರಿ ಅಧಿಕಾರಿಗಳ ಮುಂದೆ ಹಾಜರಾಗಬೇಕು, ಸಾಕ್ಷ್ಯ ಅಥವಾ ಸಾಕ್ಷಿಗಳನ್ನು ಹಾಳು ಮಾಡಬಾರದು ಮತ್ತು ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು” ಎಂದು ವಕೀಲರು ಮಾಹಿತಿ ನೀಡಿದ್ದಾರೆ.

ಬಾಲಾಜಿ ಅವರ ಬಿಡುಗಡೆಯನ್ನು ಅವರ ಬೆಂಬಲಿಗರು ಮತ್ತು ಡಿಎಂಕೆ ಪಕ್ಷದ ಕಾರ್ಯಕರ್ತರು ಪಟಾಕಿ ಸಂಭ್ರಮಿಸಿದ್ದಾರೆ. ಪಕ್ಷದ ಧ್ವಜಗಳನ್ನು ಬೀಸಿ, ಅವರ ಹೆಸರಿನಲ್ಲಿ ಘೋಷಣೆಗಳನ್ನು ಕೂಗಿದರು.

ಈಗ ಅವರನ್ನು ತಮಿಳುನಾಡು ಸಚಿವ ಸಂಪುಟಕ್ಕೆ ಮರುಸೇರ್ಪಡೆ ಮಾಡಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಬೆಂಬಲದ ಸೂಚಕವಾಗಿ ಸ್ಟಾಲಿನ್ ಅವರು ಬಾಲಾಜಿ ಅವರನ್ನು ಸಂಪುಟದಲ್ಲಿ ಉಳಿಸಿಕೊಂಡಿದ್ದರು. ಆದರೆ, ಅದು ರಾಜ್ಯಪಾಲ ಆರ್‌ಎನ್ ರವಿ ಅವರೊಂದಿಗೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ರಾಜಕೀಯ ಒತ್ತಾಯಗಳು ಸಾರ್ವಜನಿಕ ನೈತಿಕತೆಯನ್ನು ಮೀರಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ ನಂತರ ಅವರು ಫೆಬ್ರವರಿಯಲ್ಲಿ ರಾಜೀನಾಮೆ ನೀಡಿದರು.

ಕಳೆದ ವರ್ಷ, ಗಂಟೆಗಳ ವಿಚಾರಣೆಯ ನಂತರ ಅವರನ್ನು ಅವರನ್ನು ಬಂಧಿಸಲಾಯಿತು; ಜಾರಿ ನಿರ್ದೇಶನಾಲಯವು ಅವರನ್ನು ವಶಕ್ಕೆ ತೆಗೆದುಕೊಂಡಿತ್ತು. ಕೆಲವೇ ಗಂಟೆಗಳ ಬಳಿಕ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಚೆನ್ನೈ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್‌ ಚಿಕಿತ್ಸೆಗೆ ಒಳಗಾಗಿದ್ದರು.

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಾಲಾಜಿ ತಮ್ಮ ಅಳಲು ತೋಡಿಕೊಂಡರು. ಆಂಬ್ಯುಲೆನ್ಸ್‌ನಲ್ಲಿ ಮತ್ತು ನಂತರ ಆಸ್ಪತ್ರೆಯಲ್ಲಿ ಅವರು ಅಳುತ್ತಿರುವ ದೃಶ್ಯಗಳು ವ್ಯಾಪಕವಾಗಿ ವೈರಲ್ ಆಗಿತ್ತು. ಅವರ ಹಲವಾರು ಡಿಎಂಕೆ ಸಹೋದ್ಯೋಗಿಗಳು ಬೆಂಬಲವಾಗಿ ಮಾತನಾಡಿದರು, ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಫೆಡರಲ್ ಏಜೆನ್ಸಿಯನ್ನು ದೂಷಿಸಿದರು.

ಇದನ್ನೂ ಓದಿ; ಇಸ್ರೇಲ್ ವಾಯುದಾಳಿ: ಲೆಬನಾನ್‌ ಪ್ರಯಾಣ ತಪ್ಪಿಸುವಂತೆ ಭಾರತೀಯ ರಾಯಭಾರ ಕಚೇರಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...