Homeಫ್ಯಾಕ್ಟ್‌ಚೆಕ್FACT CHECK : ಮೀಸಲಾತಿ ರದ್ದು ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಹೇಳಿದ್ರಾ?

FACT CHECK : ಮೀಸಲಾತಿ ರದ್ದು ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಹೇಳಿದ್ರಾ?

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮೀಸಲಾತಿಯನ್ನು (ಜಾತಿ ಆಧಾರಿತ) ಕೊನೆಗೊಳಿಸುವ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಪಾದಿಸಿ ಹಿಂದಿ ಪತ್ರಿಕೆಯೊಂದರ ಫೋಟೋವನ್ನು ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಂಡಿದ್ದಾರೆ.

ಸೆಪ್ಟೆಂಬರ್ 20ರಂದು S4 (@samyak_samaj)ಎಂಬ ಎಕ್ಸ್ ಖಾತೆಯಲ್ಲಿ ಫೋಟೋ ಹಂಚಿಕೊಂಡು ” ದೇಶದಲ್ಲಿ ಅಶಾಂತಿಗೆ ಕಾಂಗ್ರೆಸ್‌ ಪಕ್ಷವೇ ಮೂಲ ಕಾರಣ. ಕಾಂಗ್ರೆಸ್ ಉಳಿದರೆ ಮೀಸಲಾತಿ ಮೇಲಿನ ದಾಳಿ ಮುಂದುವರಿಯಲಿದೆ. ಕಾಂಗ್ರೆಸ್ ನಾಶವಾದರೆ ಮೀಸಲಾತಿ ಉಳಿಯಲಿದೆ” ಎಂದು ಬರೆದುಕೊಳ್ಳಲಾಗಿತ್ತು.

ಸೆ.20ರಂದು ಅಮರ್ ವರ್ಮಾ (@AmarVarma_)ಎಂಬ ಎಕ್ಸ್ ಖಾತೆಯಲ್ಲೂ ಅದೇ ಫೋಟೋ ಹಂಚಿಕೊಂಡು ” ಡಾ.ಬಿಆರ್ ಅಂಬೇಡ್ಕರ್ ಅವರು ಹೇಳಿದ್ದು ಸರಿ ಇದೆ. ಕಾಂಗ್ರೆಸ್ ದಲಿತ ವಿರೋಧಿಯಾಗಿದೆ. ಅದು ಭಾರತದಲ್ಲಿ ಮೀಸಲಾತಿಯನ್ನು ಕೊನೆಗೊಳಿಸಲು ಬಯಸುತ್ತದೆ. ಕಾಂಗ್ರೆಸ್‌ನ ಪ್ರಮುಖ ನಾಯಕನೇ ಈ ಬಗ್ಗೆ ಹೇಳಿದ್ದಾರೆ” ಎಂದು ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಹಲವರು ಹಂಚಿಕೊಂಡಿರುವ ದಿನಪತ್ರಿಕೆ ಫೋಟೋದಲ್ಲಿ, ಆ ಪತ್ರಿಕೆಯ ಹೆಸರು ‘ಆಪ್ಕಿ ಆವಾಝ್’ ಎಂದಿರುವುದು ಗಮನಿಸಿದ ನಾವು, ಆ ಪತ್ರಿಕೆ ಬಗ್ಗೆ ಇಂಟರ್‌ನೆಟ್‌ನಲ್ಲಿ ಹುಡುಕಾಡಿದ್ದೇವೆ. ಆ ಹೆಸರಿನ ಯಾವುದೇ ವಿಶ್ವಾಸಾರ್ಹ ಪತ್ರಿಕೆ ನಮಗೆ ಕಂಡು ಬಂದಿಲ್ಲ.

ಇನ್ನು ಕೆ.ಸಿ ವೇಣುಗೋಪಾಲ್ ಅವರು ಮೀಸಲಾತಿ ಕೊನೆಗೊಳಿಸುವ ಹೇಳಿಕೆ ನೀಡಿದ್ದು ನಿಜವೇ? ಎಂದು ಮಾಧ್ಯಮ ವರದಿಗಳನ್ನೂ ನಾವು ಹುಡುಕಿದ್ದೇವೆ. ಈ ವೇಳೆ ಯಾವುದೇ ಮುಖ್ಯವಾಹಿನಿ, ವಿಶ್ವಾಸಾರ್ಹ ಮಾಧ್ಯಮಗಳು ಆ ಕುರಿತು ವರದಿ ಮಾಡಿರುವುದು ಲಭ್ಯವಾಗಿಲ್ಲ. ಕೆ.ಸಿ ವೇಣುಗೋಪಾಲ್ ಕಾಂಗ್ರೆಸ್‌ನ ಪ್ರಮುಖ ನಾಯಕ ಹಾಗೂ ದೇಶದ ಪ್ರಸಿದ್ದ ರಾಜಕಾರಣಿಗಳಲ್ಲಿ ಒಬ್ಬರಾಗಿರುವುದರಿಂದ ಅವರು ಮೀಸಲಾತಿ ವಿರುದ್ದ ಹೇಳಿಕೆ ಕೊಟ್ಟಿದ್ದರೆ ಅದು ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುತ್ತಿತ್ತು.

ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದ ವೇಳೆ, ಅಲ್ಲಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ “ದೇಶದಲ್ಲಿ ಸಮಾನತೆ ಸಾರ್ವತ್ರಿಕವಾದಾಗ ನಾವು ಮೀಸಲಾತಿ ಕೊನೆಗೊಳಿಸುವ ಬಗ್ಗೆ ಯೋಚಿಸುತ್ತೇವೆ” ಎಂದಿದ್ದರು. ಆ ಹೇಳಿಕೆಯನ್ನು ತಪ್ಪಾಗಿ ಪ್ರಚಾರಪಡಿಸಿದ ಬಿಜೆಪಿಗರು, ರಾಹುಲ್ ಗಾಂಧಿ ಮೀಸಲಾತಿ ವಿರುದ್ದ ಹೇಳಿಕೆ ನೀಡಿದ್ದಾರೆ ಎಂದಿದ್ದರು. ಆಗ ಕೆ.ಸಿ ವೇಣುಗೋಪಾಲ್ ರಾಹುಲ್ ಗಾಂಧಿ ಪರ ಹೇಳಿಕೆ ಕೊಟ್ಟಿದ್ದರು. ಬಿಜೆಪಿಗರ ವಿರುದ್ದ ಕಿಡಿಕಾರಿದ್ದರು. ಈ ಕುರಿತು ಎಬಿಪಿ ಲೈವ್ ಪ್ರಕಟಿಸಿದ್ದ ವರದಿ ಇಲ್ಲಿದೆ.

ಲಭ್ಯ ಮಾಹಿತಿಗಳನ್ನು ಆಧರಿಸಿ ನಾವು ನಡೆಸಿ ಪರಿಶೀಲನೆಯಲ್ಲಿ ಕೆ.ಸಿ ವೇಣುಗೋಪಾಲ್ ಮೀಸಲಾತಿ ವಿರುದ್ದ ಹೇಳಿಕೆ ನೀಡಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿರುವ ಪತ್ರಿಕೆಯ ಫೋಟೋ ನಕಲಿ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...