Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ತಿರುಪತಿ ಲಡ್ಡು ವಿಚಾರಕ್ಕೆ ಹಿಂದೂಗಳನ್ನು ಅಪಹಾಸ್ಯ ಮಾಡಿದವನಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

ಫ್ಯಾಕ್ಟ್‌ಚೆಕ್ | ತಿರುಪತಿ ಲಡ್ಡು ವಿಚಾರಕ್ಕೆ ಹಿಂದೂಗಳನ್ನು ಅಪಹಾಸ್ಯ ಮಾಡಿದವನಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬಿನಾಂಶ ಪತ್ತೆಯಾಗಿದೆ ಎಂಬ ವಿಚಾರ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಆಂಧ್ರ ಪ್ರದೇಶದಲ್ಲಿ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ.

ಈ ನಡುವೆ, ಲಡ್ಡು ವಿಚಾರಕ್ಕೆ ಹಿಂದೂಗಳ ಅಪಹಾಸ್ಯ ಮಾಡಿ ಯುವಕನೋರ್ವನಿಗೆ ತಮಿಳುನಾಡಿನಲ್ಲಿ ಥಳಿಸಲಾಗಿದೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು, ಪಿಯೂಷ್ ಮಾನುಷ್ ಎಂಬಾತ “ಎಲ್ಲಾ ಹಿಂದೂಗಳಿಗೆ ಪೆರುಮಾಳ್ (ದೇವರು) ನೇರವಾಗಿಯೇ ಬೀಫ್ ಲಡ್ಡು ವಿತರಿಸಿದ್ದಾರೆ” ಎಂದು ಬರೆದುಕೊಂಡು ಹಿಂದೂಗಳನ್ನು ಅಪಹಾಸ್ಯ ಮಾಡಿದ್ದ. ಆತನಿಗೆ ತಮಿಳುನಾಡಿನ ಸೇಲಂನಲ್ಲಿ ಸರಿಯಾದ ಉತ್ತರವನ್ನೇ ಕೊಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಹಲವರು ಹಂಚಿಕೊಂಡಿರುವ ವಿಡಿಯೋದಲ್ಲಿ ನ್ಯೂಸ್‌ ಗ್ಲಿಟ್ಸ್‌ (NewsGlitz) ಸುದ್ದಿ ಸಂಸ್ಥೆಯ ಲೋಗೋ ಕಂಡು ಬಂದಿದ್ದರಿಂದ. ನ್ಯೂಸ್‌ ಗ್ಲಿಟ್ಸ್‌ನ ಯೂಟ್ಯೂಬ್‌ ಚಾನೆಲ್‌ನಲ್ಲಿ ನಾವು ವಿಡಿಯೋ ಹುಡುಕಿದ್ದೇವೆ. ಈ ವೇಳೆ ಆಗಸ್ಟ್ 28,2019ರಂದು ವೈರಲ್ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಕುರಿತು ಮಾಹಿತಿ ನೀಡಿರುವ ನ್ಯೂಸ್‌ ಗ್ಲಿಟ್ಸ್ ” ಸೇಲಂನ ಬಿಜೆಪಿ ಕಚೇರಿಯಲ್ಲಿ ಪಿಯೂಷ್ ಮಾನುಷ್ ಎಂಬಾತನಿಗೆ ಥಳಿಸಲಾಗಿದೆ. ಫೇಸ್‌ಬುಕ್‌ ಲೈವ್ ಮಾಡುತ್ತಾ ಉದ್ದೇಶಪೂರ್ವಕವಾಗಿ ಬಿಜೆಪಿ ಕಚೇರಿಗೆ ನುಗ್ಗಿದ ಆತ, ಅಲ್ಲಿ ಪ್ರಶ್ನೆಯೆತ್ತಲು ಪ್ರಾರಂಭಿಸಿದ್ದಾನೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಥಳಿಸಿದ್ದಾರೆ” ಎಂದು ವಿವರಿಸಿದೆ. ಈ ಮೂಲಕ ಯುವಕನಿಗೆ ಥಳಿಸಿರುವ ವಿಡಿಯೋ ತಿರುಪತಿ ಲಡ್ಡುಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟವಾಗಿದೆ.

ಇನ್ನು ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಪಿಯೂಷ್ ಮಾನುಷ್ ಅವರೇ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದು, “ದನದ ಮಾಂಸ ಅತ್ಯಂತ ಪ್ರಸಿದ್ಧ, ಶ್ರೀಮಂತ ಮತ್ತು ಅತ್ಯುನ್ನತ ಪೂಜ್ಯ ತಿರುಪತಿ ಬಾಲಾಜಿ ದೇವಸ್ಥಾನವನ್ನು ಪ್ರವೇಶಿಸಿದೆ. ಭಕ್ತರು, ಅರ್ಚಕರು ಮತ್ತು ಆಡಳಿತ ಮಂಡಳಿ ಎಲ್ಲವೂ ವಿಫಲವಾಗಿದೆ. ಯಾರೂ ಜವಾಬ್ದಾರಿ ತೆಗೆದುಕೊಂಡಿಲ್ಲ, ಕ್ಷಮೆಯನ್ನೂ ಕೇಳಿಲ್ಲ” ಎಂದು ಬರೆದುಕೊಂಡಿದ್ದರು.

ಒಟ್ಟಿನಲ್ಲಿ, ತಿರುಪತಿ ಲಡ್ಡು ವಿವಾದದ ನಂತರ ಹಿಂದೂಗಳ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದಕ್ಕಾಗಿ ಸಾಮಾಜಿಕ ಕಾರ್ಯಕರ್ತ ಪಿಯೂಷ್ ಮಾನುಷ್ ಅವರನ್ನು ಗುಂಪೊಂದು ಹಲ್ಲೆ ಮಾಡಿದೆ ಎಂದು ತೋರಿಸಲು 2019ರ ವಿಡಿಯೋವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...