Homeಮುಖಪುಟಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದ ಬಳಿಕ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರ್ಕಾರ ಕೂಡ ಆಹಾರ ಮಳಿಗೆಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸುವಂತೆ ಬುಧವಾರ ಆದೇಶಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಮಾತನಾಡಿರುವ ಹಿಮಾಚಲದ ಲೋಕೋಪಯೋಗಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್ “ರಾಜ್ಯ ಸರ್ಕಾರ ‘ಗ್ರಾಹಕರ ಅನುಕೂಲಕ್ಕಾಗಿ’ ಈ ರೀತಿಯ ಆದೇಶ ಹೊರಡಿಸಿದೆ ಎಂದಿದ್ದಾರೆ.

“ನಾವು ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಗಳ ಸಭೆ ನಡೆಸಿದ್ದೇವೆ. ನೈರ್ಮಲ್ಯದ ಆಹಾರ ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳಲು, ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ… ವಿಶೇಷವಾಗಿ ಖಾದ್ಯ ವಸ್ತುಗಳನ್ನು ಮಾರಾಟ ಮಾಡುವವರಿಗೆ ಹೆಸರು ಪ್ರದರ್ಶಿಸಲು ನಿರ್ದೇಶಿಸಿದ್ದೇವೆ” ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.

“ಜನರು ಆಹಾರದ ನೈರ್ಮಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆ, ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸಂಬಂಧಪಟ್ಟಂತೆ ನೀತಿ ರೂಪಿಸಲು ರಚಿಸಲಾದ ಏಳು ಸದಸ್ಯರ ಸಮಿತಿಯ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

“ನಾವು ಯಾವುದೇ ರಾಜ್ಯವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಂಡಿಲ್ಲ. ಸರ್ಕಾರದ ಆದೇಶ ಎಲ್ಲಾ ಧರ್ಮೀಯರಿಗೂ ಅನ್ವಯಿಸಲಿದೆ. ಕೆಲ ದಿನಗಳಿಂದ ನಮ್ಮ ರಾಜ್ಯದಲ್ಲಿ ಅಶಾಂತಿ ಉಂಟಾಗಿದೆ” ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ. ಹೈಕೋರ್ಟ್ ಸೂಚನೆ ಮೇರೆಗೆ ಬೀದಿ ಬದಿ ವ್ಯಾಪಾರ ನೀತಿಯನ್ನು ರೂಪಿಸಲಾಗುತ್ತಿದೆ ಎಂದಿದ್ದಾರೆ.

ಉತ್ತರ ಪ್ರದೇಶ ಸರ್ಕಾರದಿಂದ ಆದೇಶ

ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಆಹಾರ ಮಳಿಗೆಗಳ ಮಾಲೀಕರು, ನಿರ್ವಾಹಕರು ತಮ್ಮ ಹೆಸರು ಪ್ರದರ್ಶಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ತಿನಿಸುಗಳಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಈ ವರ್ಷದ ಕನ್ವರ್ ಯಾತ್ರೆಯ ಸಂದರ್ಭ, ಯಾತ್ರೆ ಸಾಗುವ ಮಾರ್ಗದ ಎಲ್ಲಾ ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸುವಂತೆ ಸರ್ಕಾರ ಸೂಚಿಸಿತ್ತು. ಆದರೆ, ಇದು ಧರ್ಮದ ಆಧಾರದಲ್ಲಿ ಹೋಟೆಲ್‌ಗಳನ್ನು ಗುರುತಿಸಿ ಒಂದು ಸಮುದಾಯದ ವ್ಯಾಪಾರ ಬಹಿಷ್ಕರಿಸುವ ಹುನ್ನಾರ ಎಂದು ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು.

ಸರ್ಕಾರದ ಆದೇಶ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ತಾರತಮ್ಯವನ್ನು ಉಂಟು ಮಾಡುತ್ತದೆ ಎಂದು ಹಲವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜುಲೈ 22 ರಂದು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಉತ್ತರ ಪ್ರದೇಶದ ಸರ್ಕಾರ ಈಗ ನೀಡಿರುವ ಮತ್ತು ಮಧ್ಯ ಪ್ರದೇಶ ಸರ್ಕಾರ ಈ ಹಿಂದೆ ನೀಡಿದ್ದ ಆದೇಶದ ರೀತಿಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ಬಿಜೆಪಿಯನ್ನು ಅನುಸರಿಸಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ : ಹೋಟೆಲ್ ಮಾಲೀಕರು ಹೆಸರು ಪ್ರದರ್ಶಿಸಿ : ಮತ್ತೊಮ್ಮೆ ಆದೇಶಿಸಿದ ಯೋಗಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...