Homeಮುಖಪುಟಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದ ಬಳಿಕ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರ್ಕಾರ ಕೂಡ ಆಹಾರ ಮಳಿಗೆಗಳು ತಮ್ಮ ಮಾಲೀಕರು ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸುವಂತೆ ಬುಧವಾರ ಆದೇಶಿಸಿದೆ ಎಂದು ವರದಿಯಾಗಿದೆ.

ಈ ಕುರಿತು ಮಾತನಾಡಿರುವ ಹಿಮಾಚಲದ ಲೋಕೋಪಯೋಗಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್ “ರಾಜ್ಯ ಸರ್ಕಾರ ‘ಗ್ರಾಹಕರ ಅನುಕೂಲಕ್ಕಾಗಿ’ ಈ ರೀತಿಯ ಆದೇಶ ಹೊರಡಿಸಿದೆ ಎಂದಿದ್ದಾರೆ.

“ನಾವು ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಗಳ ಸಭೆ ನಡೆಸಿದ್ದೇವೆ. ನೈರ್ಮಲ್ಯದ ಆಹಾರ ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳಲು, ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ… ವಿಶೇಷವಾಗಿ ಖಾದ್ಯ ವಸ್ತುಗಳನ್ನು ಮಾರಾಟ ಮಾಡುವವರಿಗೆ ಹೆಸರು ಪ್ರದರ್ಶಿಸಲು ನಿರ್ದೇಶಿಸಿದ್ದೇವೆ” ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.

“ಜನರು ಆಹಾರದ ನೈರ್ಮಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹಿನ್ನೆಲೆ, ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸಂಬಂಧಪಟ್ಟಂತೆ ನೀತಿ ರೂಪಿಸಲು ರಚಿಸಲಾದ ಏಳು ಸದಸ್ಯರ ಸಮಿತಿಯ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

“ನಾವು ಯಾವುದೇ ರಾಜ್ಯವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಂಡಿಲ್ಲ. ಸರ್ಕಾರದ ಆದೇಶ ಎಲ್ಲಾ ಧರ್ಮೀಯರಿಗೂ ಅನ್ವಯಿಸಲಿದೆ. ಕೆಲ ದಿನಗಳಿಂದ ನಮ್ಮ ರಾಜ್ಯದಲ್ಲಿ ಅಶಾಂತಿ ಉಂಟಾಗಿದೆ” ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ. ಹೈಕೋರ್ಟ್ ಸೂಚನೆ ಮೇರೆಗೆ ಬೀದಿ ಬದಿ ವ್ಯಾಪಾರ ನೀತಿಯನ್ನು ರೂಪಿಸಲಾಗುತ್ತಿದೆ ಎಂದಿದ್ದಾರೆ.

ಉತ್ತರ ಪ್ರದೇಶ ಸರ್ಕಾರದಿಂದ ಆದೇಶ

ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಆಹಾರ ಮಳಿಗೆಗಳ ಮಾಲೀಕರು, ನಿರ್ವಾಹಕರು ತಮ್ಮ ಹೆಸರು ಪ್ರದರ್ಶಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ತಿನಿಸುಗಳಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಈ ವರ್ಷದ ಕನ್ವರ್ ಯಾತ್ರೆಯ ಸಂದರ್ಭ, ಯಾತ್ರೆ ಸಾಗುವ ಮಾರ್ಗದ ಎಲ್ಲಾ ಅಂಗಡಿ, ಹೋಟೆಲ್ ಮಾಲೀಕರು ತಮ್ಮ ಮತ್ತು ಸಿಬ್ಬಂದಿಯ ಹೆಸರು ಪ್ರದರ್ಶಿಸುವಂತೆ ಸರ್ಕಾರ ಸೂಚಿಸಿತ್ತು. ಆದರೆ, ಇದು ಧರ್ಮದ ಆಧಾರದಲ್ಲಿ ಹೋಟೆಲ್‌ಗಳನ್ನು ಗುರುತಿಸಿ ಒಂದು ಸಮುದಾಯದ ವ್ಯಾಪಾರ ಬಹಿಷ್ಕರಿಸುವ ಹುನ್ನಾರ ಎಂದು ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು.

ಸರ್ಕಾರದ ಆದೇಶ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ತಾರತಮ್ಯವನ್ನು ಉಂಟು ಮಾಡುತ್ತದೆ ಎಂದು ಹಲವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜುಲೈ 22 ರಂದು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಉತ್ತರ ಪ್ರದೇಶದ ಸರ್ಕಾರ ಈಗ ನೀಡಿರುವ ಮತ್ತು ಮಧ್ಯ ಪ್ರದೇಶ ಸರ್ಕಾರ ಈ ಹಿಂದೆ ನೀಡಿದ್ದ ಆದೇಶದ ರೀತಿಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ಬಿಜೆಪಿಯನ್ನು ಅನುಸರಿಸಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ : ಹೋಟೆಲ್ ಮಾಲೀಕರು ಹೆಸರು ಪ್ರದರ್ಶಿಸಿ : ಮತ್ತೊಮ್ಮೆ ಆದೇಶಿಸಿದ ಯೋಗಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...