HomeUncategorizedಬಿಲ್ಕಿಸ್ ಬಾನೋ ಪ್ರಕರಣದ ಆದೇಶದಲ್ಲಿ ಗುಜರಾತ್ ಸರ್ಕಾರ ವಿರುದ್ಧದ ಟೀಕೆ ತೆಗೆದುಹಾಕಲ್ಲ ಎಂದ ಸುಪ್ರೀಂ ಕೋರ್ಟ್!

ಬಿಲ್ಕಿಸ್ ಬಾನೋ ಪ್ರಕರಣದ ಆದೇಶದಲ್ಲಿ ಗುಜರಾತ್ ಸರ್ಕಾರ ವಿರುದ್ಧದ ಟೀಕೆ ತೆಗೆದುಹಾಕಲ್ಲ ಎಂದ ಸುಪ್ರೀಂ ಕೋರ್ಟ್!

- Advertisement -
- Advertisement -

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದ ಆದೇಶದಲ್ಲಿ ಮಾಡಲಾದ ಗುಜರಾತ್ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದ್ದು, ರಾಜ್ಯದ ಬಿಜೆಪಿ ಸರ್ಕಾರ ತೀವ್ರ ಮುಖಭಂಗ ಅನುಭಿಸಿದೆ. ”ರಾಜ್ಯ ಸರ್ಕಾರವು ಒಪ್ಪಂದ ಮಾಡಿಕೊಂಡಂತೆ ವರ್ತಿಸಿದೆ ಮತ್ತು ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂಬ ಹೇಳಿಕೆ ಸೇರಿದಂತೆ ಕೆಲವು ತೀಕ್ಷ್ಣ ಹೇಳಿಕೆಯನ್ನು ಸುಪ್ರಿಂಕೋರ್ಟ್ ಆದೇಶದಲ್ಲಿ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂತಹ ಕೆಲವು ಹೇಳಿಕೆಗಳನ್ನು ತೆಗೆದು ಹಾಕುವಂತೆ ಕೇಳಿಕೊಂಡಿದ್ದ ಗುಜರಾತ್ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್‌ನ ಈ ಹೇಳಿಕೆ ಸೂಕ್ತವಲ್ಲ ಮತ್ತು ಪ್ರಕರಣದ ದಾಖಲೆಗೆ ವಿರುದ್ಧವಾಗಿದೆ ಮತ್ತು ಅರ್ಜಿದಾರರ ವಿರುದ್ಧ ಪಕ್ಷಪಾತ ಮಾಡುತ್ತದೆ ಎಂದು ಸರ್ಕಾರ ವಾದಿಸಿತ್ತು.

ಇದನ್ನೂಓದಿ: ಸಿಬಿಐಗೆ ನೀಡಿದ್ದ ‘ಸಾಮಾನ್ಯ ಒಪ್ಪಿಗೆ’ ಹಿಂಪಡೆದ ಕರ್ನಾಟಕ : ಇದೇ ರೀತಿಯ ನಿರ್ಧಾರ ಕೈಗೊಂಡ ಇತರ ರಾಜ್ಯಗಳು ಯಾವುವು?

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರವೆಸಗಿ ಅವರ ಕುಟುಂಬವನ್ನು ಕೊಂದ ಅಪರಾಧಿಗಳಾದ 11 ಮಂದಿಯ ಅಕಾಲಿಕ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ವೇಳೆ ಗುಜರಾತ್‌ನ ಬಿಜೆಪಿ ಸರ್ಕಾರವು ಆದೇಶದಲ್ಲಿ ಇರುವ ತನ್ನ ವಿರುದ್ಧದ ಕೆಲವು ಟೀಕೆಗಳನ್ನು ತೆಗೆದುಹಾಕುವಂತೆ ಮನವಿ ಮಾಡಿತ್ತು.

ಸರ್ಕಾರದ ಮನವಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಒಪ್ಪದೆ ನಿರಾಕರಿಸಿದೆ. “ಪರಿಶೀಲನಾ ಅರ್ಜಿಗಳು, ಸುಪ್ರಿಂಕೋರ್ಟ್‌ನ ಆದೇಶ ಮತ್ತು ಅದಕ್ಕೆ ಲಗತ್ತಿಸಲಾದ ಪೇಪರ್‌ಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದು, ದಾಖಲೆಯಲ್ಲಿ ಯಾವುದೇ ದೋಷವಿಲ್ಲ ಅಥವಾ ಪರಿಶೀಲನಾ ಅರ್ಜಿಗೆ ಅರ್ಹತೆ ಇಲ್ಲ” ಎಂದು ಪೀಠ ಹೇಳಿದೆ.

ಬಿಲ್ಕೀಸ್ ಬಾನೋ ಅತ್ಯಾಚಾರ ಪ್ರಕರಣದ ಇಬ್ಬರು ಅಪರಾಧಿಗಳಾದ ರಾಧೇಶ್ಯಾಮ್ ಭಗವಾನದಾಸ್ ಮತ್ತು ರಾಜುಭಾಯ್ ಬಾಬುಲಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಗಳನ್ನು ಜುಲೈನಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

“ಉತ್ತಮ ನಡವಳಿಕೆ”ಗಾಗಿ ಗುಜರಾತ್ ಸರ್ಕಾರದಿಂದ ಬಿಡುಗಡೆಯಾದ 11 ಮಂದಿ ಜೈಲಿಗೆ ಮರಳಬೇಕೆಂದು ಜನವರಿಯಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ. ಅಪರಾಧಿಗಳನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ” ಎಂದು ದೇಶದಾದ್ಯಂತ ತೀವ್ರ ಆಕ್ರೋಶ ಉಂಟುಮಾಡಿದ ಸರ್ಕಾರದ ನಿರ್ಧಾರದ ಕುರಿತು ನೀಡಿದ್ದ ಮಹತ್ವದ ಆದೇಶದಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಜೊತೆಗೆ ಅಂತಹ ಆದೇಶವನ್ನು ಜಾರಿಗೊಳಿಸಿದ್ದಕ್ಕಾಗಿ ಗುಜರಾತ್ ಸರ್ಕಾರವನ್ನು ತೀವ್ರವಾಗಿ ಖಂಡಿಸಿತ್ತು.

ಇದನ್ನೂಓದಿ:  ಲೈಂಗಿಕ ದೌರ್ಜನ್ಯ; ಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಸಮಾವೇಶದಲ್ಲಿ ಕೃತ್ಯದ ಬಗ್ಗೆ ಹೇಳಿಕೊಂಡ ಅಪ್ರಾಪ್ತ ಬಾಲಕಿ

ಅಪರಾಧಿಗಳನ್ನು ವಿಚಾರಣೆ ಮಾಡಿದ ರಾಜ್ಯ ಸರ್ಕಾರಕ್ಕೆ ಮಾತ್ರ ಬಿಡುಗಡೆ ಮಾಡು ಅಧಿಕಾರ ಇದೆ ಎಂದು ಸುಪ್ರಿಂಕೋರ್ಟ್ ಹೇಳಿತ್ತು. ಬಿಲ್ಕೀಸ್ ಬಾನೋ ಅವರ ಅತ್ಯಾಚಾರ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ ವಿಚಾರಣೆ ಮಾಡಿತ್ತು. “ಗುಜರಾತ್ ಸರ್ಕಾರವು ಅಧಿಕಾರವನ್ನು ಚಲಾಯಿಸುವುದು ಅಧಿಕಾರವನ್ನು ಕಿತ್ತುಕೊಳ್ಳುವ ಮತ್ತು ಅಧಿಕಾರದ ದುರುಪಯೋಗದ ನಿದರ್ಶನವಾಗಿದೆ” ಎಂದು ನ್ಯಾಯಾಲಯ ಹೇಳಿತ್ತು. “ಅಪರಾಧಿಗಳು ಮೋಸದ ಮಾರ್ಗಗಳ ಮೂಲಕ ಸರ್ಕಾರದ ಆದೇಶವನ್ನು ಪಡೆದಿದ್ದಾರೆ” ಎಂದು ನ್ಯಾಯಾಲಯ ಹೇಳಿದ್ದು, ಗುಜರಾತ್ ಸರ್ಕಾರವು 2022 ರ ಆದೇಶವನ್ನು ಮರುಪರಿಶೀಲಿಸಬೇಕು ಎಂದು ತಿಳಿಸಿತ್ತು.

ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ ಅಪರಾಧಿಗಳಿಗೆ ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಿದ ನಂತರ ಅವರನ್ನು ಜೈಲಿನ ಆವರಣದಲ್ಲಿ ಮಹಿಳೆಯರು ಸೇರಿದಂತೆ ಬಿಜೆಪಿ ಬೆಂಬಲಿಗರ ಗುಂಪು ಆರತಿ ಬೆಳಗಿ, ಹೂವುನ ಹಾರ ಹಾಕಿ ಮತ್ತು ಸಿಹಿ ತಿಂಡಿಗಳು ನೀಡಿ ಸ್ವಾಗತಿಸಿದ್ದರು. ಅಲ್ಲದೆ ನಂತರದ ದಿನಗಳಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರೊಂದಿಗೆ ಅವರು ವೇದಿಕೆ ಹಂಚಿಕೊಂಡಿದ್ದು ಕೂಡಾ ವರದಿಯಾಗಿತ್ತು. ಜೊತೆಗೆ ಚುನಾವಣಾ ಪ್ರಚಾರದಲ್ಲೂ ಭಾಗವಹಿಸಿದ್ದರು. ಕಂಡುಬಂದಿತು.

ಗುಜರಾತ್ ಗಲಭೆ ವೇಳೆ 21 ವರ್ಷದ ಬಿಲ್ಕಿಸ್ ಬಾನೊ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ತಮ್ಮ ಮನೆ ಕಳೆದುಕೊಂಡು ಪರಾರಿಯಾಗುತ್ತಿದ್ದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ದುಷ್ಕರ್ಮಿಗಳು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ, ಅವರ ಮೂರು ವರ್ಷದ ಮಗಳನ್ನು ನೆಲಕ್ಕೆ ಬಡಿದುಕೊಳ್ಳಲಾಗಿತ್ತು. ನಂತರ ಅವರ ಕುಟುಂಬದ ಇತರ 6 ಜನರನ್ನು ಕೊಲೆ ಮಾಡಲಾಗಿತ್ತು. ಬಿಲ್ಕೀಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ದುಷ್ಕರ್ಮಿಗಳು ಅವರು ಕೂಡಾ ಸಾವಿಗೀಡಾಗಿದ್ದಾರೆ ಎಂದು ಭಾವಿಸಿ ಅಲ್ಲಿಂದ ತೆರಳಿದ್ದರು.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...