HomeUncategorizedಬಿಲ್ಕಿಸ್ ಬಾನೋ ಪ್ರಕರಣದ ಆದೇಶದಲ್ಲಿ ಗುಜರಾತ್ ಸರ್ಕಾರ ವಿರುದ್ಧದ ಟೀಕೆ ತೆಗೆದುಹಾಕಲ್ಲ ಎಂದ ಸುಪ್ರೀಂ ಕೋರ್ಟ್!

ಬಿಲ್ಕಿಸ್ ಬಾನೋ ಪ್ರಕರಣದ ಆದೇಶದಲ್ಲಿ ಗುಜರಾತ್ ಸರ್ಕಾರ ವಿರುದ್ಧದ ಟೀಕೆ ತೆಗೆದುಹಾಕಲ್ಲ ಎಂದ ಸುಪ್ರೀಂ ಕೋರ್ಟ್!

- Advertisement -
- Advertisement -

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದ ಆದೇಶದಲ್ಲಿ ಮಾಡಲಾದ ಗುಜರಾತ್ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದ್ದು, ರಾಜ್ಯದ ಬಿಜೆಪಿ ಸರ್ಕಾರ ತೀವ್ರ ಮುಖಭಂಗ ಅನುಭಿಸಿದೆ. ”ರಾಜ್ಯ ಸರ್ಕಾರವು ಒಪ್ಪಂದ ಮಾಡಿಕೊಂಡಂತೆ ವರ್ತಿಸಿದೆ ಮತ್ತು ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂಬ ಹೇಳಿಕೆ ಸೇರಿದಂತೆ ಕೆಲವು ತೀಕ್ಷ್ಣ ಹೇಳಿಕೆಯನ್ನು ಸುಪ್ರಿಂಕೋರ್ಟ್ ಆದೇಶದಲ್ಲಿ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂತಹ ಕೆಲವು ಹೇಳಿಕೆಗಳನ್ನು ತೆಗೆದು ಹಾಕುವಂತೆ ಕೇಳಿಕೊಂಡಿದ್ದ ಗುಜರಾತ್ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್‌ನ ಈ ಹೇಳಿಕೆ ಸೂಕ್ತವಲ್ಲ ಮತ್ತು ಪ್ರಕರಣದ ದಾಖಲೆಗೆ ವಿರುದ್ಧವಾಗಿದೆ ಮತ್ತು ಅರ್ಜಿದಾರರ ವಿರುದ್ಧ ಪಕ್ಷಪಾತ ಮಾಡುತ್ತದೆ ಎಂದು ಸರ್ಕಾರ ವಾದಿಸಿತ್ತು.

ಇದನ್ನೂಓದಿ: ಸಿಬಿಐಗೆ ನೀಡಿದ್ದ ‘ಸಾಮಾನ್ಯ ಒಪ್ಪಿಗೆ’ ಹಿಂಪಡೆದ ಕರ್ನಾಟಕ : ಇದೇ ರೀತಿಯ ನಿರ್ಧಾರ ಕೈಗೊಂಡ ಇತರ ರಾಜ್ಯಗಳು ಯಾವುವು?

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರವೆಸಗಿ ಅವರ ಕುಟುಂಬವನ್ನು ಕೊಂದ ಅಪರಾಧಿಗಳಾದ 11 ಮಂದಿಯ ಅಕಾಲಿಕ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ವೇಳೆ ಗುಜರಾತ್‌ನ ಬಿಜೆಪಿ ಸರ್ಕಾರವು ಆದೇಶದಲ್ಲಿ ಇರುವ ತನ್ನ ವಿರುದ್ಧದ ಕೆಲವು ಟೀಕೆಗಳನ್ನು ತೆಗೆದುಹಾಕುವಂತೆ ಮನವಿ ಮಾಡಿತ್ತು.

ಸರ್ಕಾರದ ಮನವಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಒಪ್ಪದೆ ನಿರಾಕರಿಸಿದೆ. “ಪರಿಶೀಲನಾ ಅರ್ಜಿಗಳು, ಸುಪ್ರಿಂಕೋರ್ಟ್‌ನ ಆದೇಶ ಮತ್ತು ಅದಕ್ಕೆ ಲಗತ್ತಿಸಲಾದ ಪೇಪರ್‌ಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದು, ದಾಖಲೆಯಲ್ಲಿ ಯಾವುದೇ ದೋಷವಿಲ್ಲ ಅಥವಾ ಪರಿಶೀಲನಾ ಅರ್ಜಿಗೆ ಅರ್ಹತೆ ಇಲ್ಲ” ಎಂದು ಪೀಠ ಹೇಳಿದೆ.

ಬಿಲ್ಕೀಸ್ ಬಾನೋ ಅತ್ಯಾಚಾರ ಪ್ರಕರಣದ ಇಬ್ಬರು ಅಪರಾಧಿಗಳಾದ ರಾಧೇಶ್ಯಾಮ್ ಭಗವಾನದಾಸ್ ಮತ್ತು ರಾಜುಭಾಯ್ ಬಾಬುಲಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಗಳನ್ನು ಜುಲೈನಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

“ಉತ್ತಮ ನಡವಳಿಕೆ”ಗಾಗಿ ಗುಜರಾತ್ ಸರ್ಕಾರದಿಂದ ಬಿಡುಗಡೆಯಾದ 11 ಮಂದಿ ಜೈಲಿಗೆ ಮರಳಬೇಕೆಂದು ಜನವರಿಯಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ. ಅಪರಾಧಿಗಳನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ” ಎಂದು ದೇಶದಾದ್ಯಂತ ತೀವ್ರ ಆಕ್ರೋಶ ಉಂಟುಮಾಡಿದ ಸರ್ಕಾರದ ನಿರ್ಧಾರದ ಕುರಿತು ನೀಡಿದ್ದ ಮಹತ್ವದ ಆದೇಶದಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಜೊತೆಗೆ ಅಂತಹ ಆದೇಶವನ್ನು ಜಾರಿಗೊಳಿಸಿದ್ದಕ್ಕಾಗಿ ಗುಜರಾತ್ ಸರ್ಕಾರವನ್ನು ತೀವ್ರವಾಗಿ ಖಂಡಿಸಿತ್ತು.

ಇದನ್ನೂಓದಿ:  ಲೈಂಗಿಕ ದೌರ್ಜನ್ಯ; ಶಾಲೆಯಲ್ಲಿ ಆಯೋಜಿಸಿದ್ದ ಜಾಗೃತಿ ಸಮಾವೇಶದಲ್ಲಿ ಕೃತ್ಯದ ಬಗ್ಗೆ ಹೇಳಿಕೊಂಡ ಅಪ್ರಾಪ್ತ ಬಾಲಕಿ

ಅಪರಾಧಿಗಳನ್ನು ವಿಚಾರಣೆ ಮಾಡಿದ ರಾಜ್ಯ ಸರ್ಕಾರಕ್ಕೆ ಮಾತ್ರ ಬಿಡುಗಡೆ ಮಾಡು ಅಧಿಕಾರ ಇದೆ ಎಂದು ಸುಪ್ರಿಂಕೋರ್ಟ್ ಹೇಳಿತ್ತು. ಬಿಲ್ಕೀಸ್ ಬಾನೋ ಅವರ ಅತ್ಯಾಚಾರ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ ವಿಚಾರಣೆ ಮಾಡಿತ್ತು. “ಗುಜರಾತ್ ಸರ್ಕಾರವು ಅಧಿಕಾರವನ್ನು ಚಲಾಯಿಸುವುದು ಅಧಿಕಾರವನ್ನು ಕಿತ್ತುಕೊಳ್ಳುವ ಮತ್ತು ಅಧಿಕಾರದ ದುರುಪಯೋಗದ ನಿದರ್ಶನವಾಗಿದೆ” ಎಂದು ನ್ಯಾಯಾಲಯ ಹೇಳಿತ್ತು. “ಅಪರಾಧಿಗಳು ಮೋಸದ ಮಾರ್ಗಗಳ ಮೂಲಕ ಸರ್ಕಾರದ ಆದೇಶವನ್ನು ಪಡೆದಿದ್ದಾರೆ” ಎಂದು ನ್ಯಾಯಾಲಯ ಹೇಳಿದ್ದು, ಗುಜರಾತ್ ಸರ್ಕಾರವು 2022 ರ ಆದೇಶವನ್ನು ಮರುಪರಿಶೀಲಿಸಬೇಕು ಎಂದು ತಿಳಿಸಿತ್ತು.

ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ ಅಪರಾಧಿಗಳಿಗೆ ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಿದ ನಂತರ ಅವರನ್ನು ಜೈಲಿನ ಆವರಣದಲ್ಲಿ ಮಹಿಳೆಯರು ಸೇರಿದಂತೆ ಬಿಜೆಪಿ ಬೆಂಬಲಿಗರ ಗುಂಪು ಆರತಿ ಬೆಳಗಿ, ಹೂವುನ ಹಾರ ಹಾಕಿ ಮತ್ತು ಸಿಹಿ ತಿಂಡಿಗಳು ನೀಡಿ ಸ್ವಾಗತಿಸಿದ್ದರು. ಅಲ್ಲದೆ ನಂತರದ ದಿನಗಳಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರೊಂದಿಗೆ ಅವರು ವೇದಿಕೆ ಹಂಚಿಕೊಂಡಿದ್ದು ಕೂಡಾ ವರದಿಯಾಗಿತ್ತು. ಜೊತೆಗೆ ಚುನಾವಣಾ ಪ್ರಚಾರದಲ್ಲೂ ಭಾಗವಹಿಸಿದ್ದರು. ಕಂಡುಬಂದಿತು.

ಗುಜರಾತ್ ಗಲಭೆ ವೇಳೆ 21 ವರ್ಷದ ಬಿಲ್ಕಿಸ್ ಬಾನೊ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ತಮ್ಮ ಮನೆ ಕಳೆದುಕೊಂಡು ಪರಾರಿಯಾಗುತ್ತಿದ್ದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ದುಷ್ಕರ್ಮಿಗಳು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ, ಅವರ ಮೂರು ವರ್ಷದ ಮಗಳನ್ನು ನೆಲಕ್ಕೆ ಬಡಿದುಕೊಳ್ಳಲಾಗಿತ್ತು. ನಂತರ ಅವರ ಕುಟುಂಬದ ಇತರ 6 ಜನರನ್ನು ಕೊಲೆ ಮಾಡಲಾಗಿತ್ತು. ಬಿಲ್ಕೀಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ದುಷ್ಕರ್ಮಿಗಳು ಅವರು ಕೂಡಾ ಸಾವಿಗೀಡಾಗಿದ್ದಾರೆ ಎಂದು ಭಾವಿಸಿ ಅಲ್ಲಿಂದ ತೆರಳಿದ್ದರು.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...