Homeಮುಖಪುಟಯೂಟ್ಯೂಬರ್ ಫೆಲಿಕ್ಸ್ ಚಾನೆಲ್ ಮುಚ್ಚುವಂತೆ ಕೇಳಿದ್ದ ಮದ್ರಾಸ್ ಹೈಕೋರ್ಟ್ ಆದೇಶ ರದ್ದು!

ಯೂಟ್ಯೂಬರ್ ಫೆಲಿಕ್ಸ್ ಚಾನೆಲ್ ಮುಚ್ಚುವಂತೆ ಕೇಳಿದ್ದ ಮದ್ರಾಸ್ ಹೈಕೋರ್ಟ್ ಆದೇಶ ರದ್ದು!

- Advertisement -
- Advertisement -

ಜಾಮೀನಿಗೆ ಪೂರ್ವ ಷರತ್ತಾಗಿ ಯೂಟ್ಯೂಬರ್ ಫೆಲಿಕ್ಸ್ ಜೆರಾಲ್ಡ್ ಅವರ ಯೂಟ್ಯೂಬ್ ಚಾನೆಲ್ ಅನ್ನು ಮುಚ್ಚುವಂತೆ ಮದ್ರಾಸ್ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಅವರ ನೇತೃತ್ವದ ತ್ರಿಸದಸ್ಯ ಪೀಠವು ಫೆಲಿಕ್ಸ್‌ ಅವರ ಯೂಟ್ಯೂಬ್ ಚಾನೆಲ್ ‘ರೆಡ್‌ಪಿಕ್ಸ್ 24 × 7’ ಅನ್ನು ತೆಗೆದುಹಾಕುವಂತೆ ಕೇಳಿಕೊಂಡು ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸೆಪ್ಟೆಂಬರ್ 6 ತಡೆಹಿಡಿಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುಪ್ರೀಂ ಕೋರ್ಟ್ ಪೀಠವು ಸೆಪ್ಟೆಂಬರ್ 6 ರಂದು ನೀಡಿದ್ದ ತನ್ನ ಆದೇಶವನ್ನು ಶುಕ್ರವಾರ ದೃಢಪಡಿಸಿದ್ದು, “ಅಂತಹ ಷರತ್ತನ್ನು ಹೇರುವುದು ಅನಗತ್ಯ ಮತ್ತು ಜಾಮೀನು ಅರ್ಜಿಯ ನಿರ್ಧಾರಕ್ಕಿಂತ ಹೊರಗಿನದ್ದಾಗಿದೆ” ಎಂದು ಹೇಳಿದೆ.

ಇದನ್ನೂಓದಿ: ಸಿಬಿಐಗೆ ನೀಡಿದ್ದ ‘ಸಾಮಾನ್ಯ ಒಪ್ಪಿಗೆ’ ಹಿಂಪಡೆದ ಕರ್ನಾಟಕ : ಇದೇ ರೀತಿಯ ನಿರ್ಧಾರ ಕೈಗೊಂಡ ಇತರ ರಾಜ್ಯಗಳು ಯಾವುವು?

“ತಮಿಳುನಾಡು ಮಹಿಳೆಯರ ಕಿರುಕುಳ ನಿಷೇಧ ಕಾಯಿದೆ-2002 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ-2000 ರ ಶಿಕ್ಷಾರ್ಹ ಅಪರಾಧಗಳ ಅಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಅರ್ಜಿದಾರರು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದಾಗ್ಯೂ, YouTube ಚಾನಲ್ ಅನ್ನು ಮುಚ್ಚಿ ಎಂದು ಅವರಿಗೆ ಜಾಮೀನು ನೀಡುವಾಗ ಹೈಕೋರ್ಟ್ ನಿರ್ದೇಶಿಸಿದೆ. ಇಂತಹ ಷರತ್ತನ್ನು ಹೇರುವುದು ಅನಗತ್ಯ ಮತ್ತು ಜಾಮೀನು ಅರ್ಜಿಯ ನಿರ್ಧಾರಕ್ಕೆ ಹೊರಗಿನದ್ದಾಗಿದೆ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ” ಎಂದು ಪೀಠವು ಹೇಳಿದೆ.

“ಹೈಕೋರ್ಟ್ ವಿಧಿಸಿರುವ ಷರತ್ತಿನಿಂದ ಸ್ವತಂತ್ರವಾಗಿ ಅರ್ಜಿದಾರರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನಾವು ಭಾವಿಸುತ್ತೇವೆ. ಪ್ರತಿವಾದಿಯು ತನ್ನ ಯೂಟ್ಯೂಬ್ ಚಾನೆಲ್ ಅನ್ನು ಮುಚ್ಚಬೇಕು ಎಂಬ ಹೈಕೋರ್ಟಿನ ಷರತ್ತುಗಳನ್ನು ನಾವು ತಳ್ಳಿ ಹಾಕಿದ್ದೇವೆ. ಈ ನ್ಯಾಯಾಲಯವು ನೀಡಿದ ಸೆಪ್ಟೆಂಬರ್ 6, 2024 ರ ಆದೇಶವು ಮೇಲಿನ ಸ್ಪಷ್ಟೀಕರಣದೊಂದಿಗೆ ದೃಢೀಕರಿಸಲ್ಪಡುತ್ತದೆ” ಎಂದು ಸುಪ್ರೀಂಕೋರ್ಟ್ ಪೀಠವು ಆದೇಶಿಸಿದೆ.

ಯೂಟ್ಯೂಬರ್ ಫೆಲಿಕ್ಸ್ ಅವರು ಹೋರಾಟಗಾರ ಸವುಕ್ಕು ಶಂಕರ್ ಅವರೊಂದಿಗೆ ಚಾನೆಲ್‌ನಲ್ಲಿ “ಆಕ್ಷೇಪಾರ್ಹ” ಸಂದರ್ಶನವನ್ನು ಆಯೋಜಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು. ಈ ಸಂದರ್ಶನದಲ್ಲಿ ಶಂಕರ್ ಅವರು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರು ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯ ವಿರುದ್ಧ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಜುಲೈ 31 ರಂದು ಫೆಲಿಕ್ಸ್‌ಗೆ ಜಾಮೀನು ನೀಡಿದ್ದ ಹೈಕೋರ್ಟ್, ಆದಾಗ್ಯೂ ಅವರ ಚಾನೆಲ್ ಅನ್ನು ಮುಚ್ಚುವಂತೆ ಸೂಚಿಸಿತ್ತು.

ವಿಡಿಯೊ ನೋಡಿ: ಅಟ್ರಾಸಿಟಿ’ ಕಾದಂಬರಿ; ಮನುಷ್ಯ ಲೋಕದ ರೂಪಾಂತರವನ್ನ ಕಟ್ಟುತಿದೆಯಾ? ಡಾ. ಗೀತಾ ವಸಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...