Homeಮುಖಪುಟತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು

ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು

- Advertisement -
- Advertisement -

ಜಮೀನು ವಿವಾದದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್‌ ಏಜೆಂಟ್‌ಗಳ ಗುಂಪೊಂದು ದಲಿತ ಕುಟುಂಬವನ್ನು ಶವಸಂಸ್ಕಾರ ಮಾಡದಂತೆ ತಡೆದಿರುವ ಘಟನೆ ಮಂಗಳವಾರ ನಡೆದಿದ್ದು, ತಡವಾಗಿ ಗುರುವಾರ ಬೆಳಕಿಗೆ ಬಂದಿದೆ.

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಮಂದಮರ್ರಿ ಮಂಡಲದಲ್ಲಿ ಘಟನೆ ನಡೆದಿದ್ದು, ವಿಷಯ ತಿಳಿದು ಮಂದಮರ್ರಿ ತಹಶೀಲ್ದಾರ್ ಹಾಗೂ ವೃತ್ತ ನಿರೀಕ್ಷಕರು ಸ್ಥಳಕ್ಕೆ ತೆರಳಿ ಅಂತಿಮ ಸಂಸ್ಕಾರಕ್ಕೆ ನೆರವಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯರ ಪ್ರಕಾರ, ಬುರ್ದಗುಡೆಂ ಗ್ರಾಮದ ನಿವಾಸಿಗಳಾದ ನೇತಕಣಿ ಕುಟುಂಬದ ಸದಸ್ಯರು ಅಂತ್ಯಕ್ರಿಯೆಗಾಗಿ ಸಂಬಂಧಿಕರ ಶವವನ್ನು ತಂದರು. ಸುಮಾರು 80 ವರ್ಷಗಳ ಹಿಂದೆ ಕಲ್ವಕುಂತಲ ಮಾಧವ್ ರಾವ್ ಎಂಬುವವರು ದಲಿತ ಸಮುದಾಯಕ್ಕೆ ಸ್ಮಶಾನ ಸ್ಥಾಪಿಸಲು ಭೂಮಿಯನ್ನು ದಾನ ಮಾಡಿದ್ದರು. ಆದರೆ, ಎನ್ ಉಪೇಂದರ್ ಗೌಡ್ ಮತ್ತು ವೆಂಕಟೇಶ್ ಗೌಡ್ ಅವರು ತಮ್ಮ ಸಹಚರರೊಂದಿಗೆ ಸೇರಿ ಜಮೀನು ಖರೀದಿಸಿರುವುದಾಗಿ ಆರೋಪಿಸಿ ದುರ್ಗಂ ಶಂಕರ್ ಮತ್ತು ಅವರ ಪುತ್ರ ಶ್ರೀನಿವಾಸ್ ಅಂತ್ಯಸಂಸ್ಕಾರ ನೆರವೇರಿಸಲು ಅಡ್ಡಿಪಡಿಸಿದ್ದಾರೆ. ನಂತರ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಶವ ಸಂಸ್ಕಾರದ ಮೇಲ್ವಿಚಾರಣೆ ನಡೆಸಿದರು ಎಂದು ವಿವರಿಸಿದ್ದಾರೆ.

ನಮ್ಮ ಪೂರ್ವಜರ ಅಂತ್ಯಸಂಸ್ಕಾರ ಮಾಡಿದ ಭೂಮಿಯನ್ನು ಏಜೆಂಟರು ಅಗೆದಿದ್ದಾರೆ ಎಂದು ದಲಿತ ಕುಟುಂಬ
ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದವರು, ಹಿಂದುಳಿದ ವರ್ಗಗಳ (ಬಿಸಿ) ಸದಸ್ಯರು ತಮ್ಮ ಪೂರ್ವಜರನ್ನು ಸಂಸ್ಕಾರ ಮಾಡಿದ ಭೂಮಿಯನ್ನು ರಿಯಲ್‌ ಎಸ್ಟೇಟ್ ಮಾಫಿಯಾ ನಾಶಪಡಿಸಿ ನಿವೇಶನಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಈ ಪ್ರದೇಶವು ಮಂದಮರ್ರಿಯು ಪ್ರದೇಶದ ಅಧಿಕಾರ ವ್ಯಾಪ್ತಿಗೆ ಒಳಪಡುತ್ತದೆ ಎಂದು ಹೇಳಿದ ಅವರು, ಎಲ್‌ಟಿಆರ್‌ 1/70 ಎಂದೂ ಕರೆಯಲ್ಪಡುವ 1970 ರ ಭೂ ವರ್ಗಾವಣೆ ನಿಯಂತ್ರಣ ಕಾಯಿದೆ 1, ಯಾವುದೇ ಬುಡಕಟ್ಟು ಜನಾಂಗದವರಲ್ಲದವರು ಈ ಪ್ರದೇಶದಲ್ಲಿ ಭೂಮಿಯನ್ನು ಹೊಂದುವುದನ್ನು ತಡೆಯುತ್ತದೆ ಎಂದು ಹೇಳಿದರು. ಈ ಪ್ರದೇಶದಲ್ಲಿ ಬುಡಕಟ್ಟು ಜನಾಂಗದವರಲ್ಲದವರಿಗೆ ನೀಡಲಾದ ಯಾವುದೇ ಭೂಮಿ ಶೂನ್ಯ ಮತ್ತು ಅನೂರ್ಜಿತವಾಗಿದೆ ಎಂದು ಅವರು ಹೇಳಿದರು. ಸ್ಮಶಾನ ಭೂಮಿಯನ್ನು ಮರಳಿ ಪಡೆಯುವಂತೆ ಅವರು ಅಧಿಕಾರಿಗಳನ್ನು ಒತ್ತಾಯಿಸಿದರು.

ಇದನ್ನೂ ಓದಿ; ಅತ್ಯಾಚಾರ ಪ್ರಕರಣ: ಹೈಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ ನಟ ಸಿದ್ದಿಕ್ ವಿರುದ್ಧ ಲುಕ್ ಔಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...